Author: admin

ಮೈಸೂರು: SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ದೀಪಿಕಾ (15) ಮೃತ ವಿದ್ಯಾರ್ಥಿನಿಯಾಗಿದ್ದು, ಈಕೆ ನಾಗರಾಜ್, ವಸಂತ ದಂಪತಿ ಪುತ್ರಿಯಾಗಿದ್ದಾರೆ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಅನಾರೋಗ್ಯ ನಿಮಿತ್ತ ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಭೇಟಿ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ. ಅಭಿಮಾನಿಗಳ ಹರಕೆ — ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಶಿವರಾಜ್ ಕುಮಾರ್ ಅವರ ಮುಂದಿನ ಜೀವನ ಸುಖ — ಶಾಂತಿಯಿಂದ ಕೂಡಿರಲಿ‌ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬಿಗ್ ಬಾಸ್ ತೊರೆಯುವ ಬಗ್ಗೆ ಕಿಚ್ಚ ಸುದೀಪ್ ಎರಡು ಬಾರಿ ಟ್ವೀಟ್ ಮಾಡಿದ್ದರು. ಹೀಗಾಗಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಗ್ರ್ಯಾಂಡ್ ಫಿನಾಲೆ ವೇದಿಕೆಯ ಮೇಲೆ ತಮ್ಮ ವಿದಾಯವನ್ನು ಅವರು ಹೇಳುತ್ತಾರೆ ಎಂದು ಜನ ನಿರೀಕ್ಷಿಸಿದ್ದರು. ಆದರೆ ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ, ಆದರೆ, ಕಲರ್ಸ್ ಕನ್ನಡಕ್ಕೆ ಹಾಗೂ ಮುಂದೆ ಬರುವ ಬಿಗ್ ಬಾಸ್ ಸೀಸನ್ ಗಳನ್ನು ಬೆಂಬಲಿಸುವಂತೆ ಕಿಚ್ಚ ಸುದೀಪ್ ಕೋರಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ಪೂರ್ಣಗೊಳ್ಳುವಾಗ ಎಲ್ಲರಿಗೂ ಧನ್ಯಾವಾದ ಹೇಳಿದ್ದಾರೆ. ತಮ್ಮ ಸಹಾಯಕ್ಕೆ ನಿಂತವರಿಗೆ ಹಾಗೂ ಶೋನ ಉತ್ತಮವಾಗಿ ಮೂಡಿ ಬರಲು ಕಾರಣ ಆದವರಿಗೆ ಸುದೀಪ್ ಧನ್ಯವಾದ ಹೇಳಿದರು. 119 ದಿನಗಳ ಜರ್ನಿಗೆ ಪೂರ್ಣ ವಿರಾಮ ಹಾಕುವ ಸಮಯ. ನನ್ನ ಸ್ಟಾಫ್ ಗೆ ಧನ್ಯವಾದ. ಡಿಸೈನರ್ ಸಾಗರ್ ಗೆ ಥ್ಯಾಂಕ್ಸ್ ಎಂದು ಕಿಚ್ಚ ಹೇಳಿದರು. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಬಿಟ್ಟರೆ ಬೇರೆ ಯಾರೂ ಸೂಕ್ತವಾಗಲು…

Read More

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕೌಟುಂಬಿಕ ಗಲಾಟೆ ಹಿನ್ನೆಲೆ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ತಾಲೂಕಿನ ಜಕ್ಕೆನಹಳ್ಳಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ದುರ್ಗದಹಳ್ಳಿ ಗ್ರಾಮದ ತಿಮ್ಮರಾಜು ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಜಕ್ಕೆನಹಳ್ಳಿ ಗ್ರಾಮದ ಹೆಂಡತಿ ಮನೆಗೆ ತಿಮ್ಮರಾಜು ಬಂದಿದ್ದರು. ಮೊನ್ನೆ ರಾತ್ರಿ ಗಂಡ ಹೆಂಡತಿ ಗಲಾಟೆಯಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹೆಚ್.ಡಿ.ಕೋಟೆ: ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಭತ್ತದ ಹುಲ್ಲಿನ ಮೆದೆಗೆ ಭಸ್ಮವಾದ ಘಟನೆ ತಾಲೂಕಿನ ಹೆಚ್.ಮಟಕೆರೆಯಲ್ಲಿ ನಡೆದಿದೆ. ಜನವರಿ 26ರಂದು ಈ ಘಟನೆ ನಡೆದಿದೆ. ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಹೆಚ್. ಮಟಕೆರೆ ಗ್ರಾಮದ ರಾಮನಾಯಕ್ ಕೋಂ ಲೇಟ್ ಮರಿ ನಾಯಕ್ ರವರಿಗೆ ಸೇರಿದ ಎರಡು ದೊಡ್ಡದಾದ ಭತ್ತದ ಹುಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾಗಿ ಹೋಗಿರುತ್ತದೆ. ಜೆಸಿಬಿ ವಾಹನವನ್ನು ಕರೆಸಿ ಸತತ ಆರು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಹುಲ್ಲಿನ ಮೆದೆ ಕಳೆದುಕೊಂಡ ರೈತನ ಕಣ್ಣೀರು ಕೋಡಿಯಾಗಿ ಹರಿಯುವುದನ್ನು ಕಂಡು ಜನರೂ ಸಂಕಟ ಪಟ್ಟರು. ಹುಲ್ಲನ್ನು ಕಳೆದುಕೊಂಡ ರೈತನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಆತ ಚೇತರಿಸಿಕೊಳ್ಳಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಚರಣೆಯಲ್ಲಿ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾದ ಎಂ.ಜಿ.ಸೋಮಣ್ಣ, ಸಿಬ್ಬಂದಿಯವರಾದ ಅಶೋಕ್, ರವಿಪ್ರಸಾದ್, ಮುನಿಸಿದ್ದ ನಾಯಕ, ಸಂಗಮೇಶ್ ಭಾಗಿಯಾಗಿದ್ದರು. ವರದಿ: ಮಲಾರ…

Read More

ನೈಜೀರಿಯಾ: ತೈಲ ಟ್ಯಾಂಕರ್ ಸ್ಫೋಟಗೊಂಡು 18 ಮಂದಿ ಸಾವನ್ನಪ್ಪಿರುವ ಆಫ್ರಿಕನ್ ದೇಶ ನೈಜೀರಿಯಾದಲ್ಲಿ ನಡೆದಿದೆ.  ಘಟನೆಯ ಪರಿಣಾಮ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ಯಾಂಕರ್‌ ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು–ಒನಿತ್ಶಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಅಂಗುಲ್: ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ವೇಳೆ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 50 ರಿಂದ 60 ಮಂದಿಯ ಪೈಕಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಜಂಟಿ ಕಾರ್ಯಾಚರಣೆ ನಡೆಸಿ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪುಣೆ: ಗುಯಿಲಿನ್‌–ಬಾರೆ ಸಿಂಡ್ರೋಮ್‌ (ಜಿಬಿಎಸ್‌‍) ಸೋಂಕಿಗೆ ಒಳಗಾದ ಶಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ಈ ಸೋಂಕಿಗೆ ಬಹುಶಃ ಮೊದಲ ಸಾವು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.  ಈ ನಡುವೆ ಪುಣೆಯಲ್ಲಿ ನರ ಅಸ್ವಸ್ಥತೆ ರೋಗಿಗಳ ಸಂಖ್ಯೆ 100 ದಾಟಿದೆ. ಸೋಲಾಪುರದ ಮೂಲದ ವ್ಯಕ್ತಿ ಪುಣೆಗೆ ಬಂದಿದ್ದರು. ಅಲ್ಲಿ ಅವರಿಗೆ ಈ ಕಾಯಿಲೆ ತಗುಲಿದೆ ಎಂದು ಶಂಕಿಸಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚಿನ ವಿವರಗಳನ್ನುನೀಡಿಲ್ಲ ಪುಣೆಯಲ್ಲಿ ಪ್ರಸ್ತುತ ಜಿಬಿಎಸ್‌‍ ಪ್ರಕರಣಗಳ ಸಂಖ್ಯೆ 101 ಕ್ಕೆ ಏರಿದೆ, ಇದರಲ್ಲಿ 68 ಪುರುಷರು ಮತ್ತು 33 ಮಹಿಳೆಯರು ಇದ್ದಾರೆ. ಈ ಪೈಕಿ 16 ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಹೆಬ್ಬೂರು: ವಿಶ್ವಜ್ಞಾನಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ & ಶ್ರೇಷ್ಟ ದಾರ್ಶನಿಕರಾದ ಮಹರ್ಷಿ ವಾಲ್ಮೀಕಿ ರವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮ ಹೆಬ್ಬೂರಿನಲ್ಲಿ ನಡೆಯಿತು. ಭೂಮಿ ಪೂಜೆ ಕಾರ್ಯಕ್ರಮಕ್ಕೆ   ವಾಲ್ಮೀಕಿ ಮಹಾಸಂಸ್ಥಾನ ಮಠ ಸುಕ್ಷೇತ್ರ ಶಿಡ್ಲೆಕೋಣದ ಪೀಠಾಧ್ಯಕ್ಷರಾದ ಪರಮ ಪೂಜ್ಯ  ಶ್ರೀ ಸಂಜಯಕುಮಾರನಂದ ಸ್ವಾಮೀಜಿ, ಇಸ್ಲಾಂ ಸಮುದಾಯದ ಧರ್ಮಗುರುಗಳು ಹಾಗೂ ವೆಂಕಟಹನುಮಯ್ಯ ನವರು ಹಾಗೂ ಇನ್ನು ಹಲವಾರು ಗಣ್ಯರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ  ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹರ್ಷಿ ವಾಲ್ಮೀಕಿ ರವರ ಪುತ್ಥಳಿಯ ಗುದ್ದಲಿ ಪೂಜೆಯನ್ನು ಮಾಡಬಾರದು ಎಂದು ತುಮಕೂರು ತಾಲೂಕಿನ EO ಹರ್ಷರವರು  ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ  ಸುಮಾರು 3/4 ಗಂಟೆಗಳ ಕಾಲ ಅಡಚಣೆ ಮಾಡಿರುತ್ತಾರೆ, ಆದರೂ ಸಹ ಇಂತಹ ಬೆದರಿಕೆಗಳಿಗೆಲ್ಲ ಬೆದರುವುದಿಲ್ಲ ಎಂದ ಹೋರಾಟಗಾರರು ಗುದ್ದಲಿ ಪೂಜೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More