Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹಳ್ಳಿ ಹೈದ ಹನುಮಂತ ಬಿಗ್ ಬಾಸ್ ಟ್ರೋಫಿ ವಿಜೇತರಾಗಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು. ಬರಬರುತ್ತಾ ಅವರ ಆಟ ಮಂಕಾಯಿತು. ಇನ್ನು ಟಾಪ್ ನಾಲ್ಕರಲ್ಲಿ ಹನುಮಂತ, ರಜತ್, ತ್ರಿವಿಕ್ರಮ್ ಮತ್ತು ಮೋಕ್ಷಿತ ಇದ್ದರು. ಈ ಪೈಕಿ ಮೋಕ್ಷಿತ ಹೊರಬಂದರು. ಇನ್ನು ಟಾಪ್ ಮೂವರಲ್ಲಿ ಘಟಾನುಘಟಿಗಳೇ ಇದ್ದರು. ಆದರೆ ರಜತ್ 2ನೇ ರನ್ನರ್ ಅಪ್ ಆಗಿ ಹೊರಬಂದರು. ಅಂತಿಮವಾಗಿ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಅವರು ಹನುಮಂತ ಮತ್ತು ತ್ರಿವಿಕ್ರಮ್ ಅವರ ಕೈಗಳನ್ನು ಹಿಡಿದು ಹನುಮಂತನ ಕೈ ಅನ್ನು ಎತ್ತುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರನ್ನು…
ತುಮಕೂರು: ಮೈಕ್ರೋ ಫೈನಾನ್ಸ್ ಗಳಿಂದ ಜನರಿಗೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರೂಪಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂತಹ ಕಿರುಕುಳ ಬೆಳಕಿಗೆ ಬಂದ ಸಂದರ್ಭದಲ್ಲಿ ಪೊಲೀಸರಿಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳುವ ಕುರಿತಂತೆ ಅಧಿಕಾರವನ್ನು ನೀಡುವ ಅವಶ್ಯಕತೆ ಇದ್ದು, ಈ ಬಗ್ಗೆ ಕೂಡ ಹೆಚ್ಚಿನ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಸಿಎಂ ನಾವು ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಇರುವ ಕಾನೂನನ್ನ ಭದ್ರ ಮಾಡುವಂತದ್ದು, ಮತ್ತೊಂದು ರಿಕವರಿ ಮಾಡುವವರು ಸಂಜೆ ನಂತರ ದಾಳಿ ಮಾಡೋದು, ಅವಾಚ್ಯ ಶಬ್ದ ಬಳಕೆಯಿಂದ ಕಿರುಕುಳಕ್ಕೆ ಕಡಿವಾಣ ಹಾಕಬೇಕಿದೆ ಎಂದರು. ಪೊಲೀಸರಿಗೆ ಎಕ್ಟ್ರಾ ಪವರ್ ಕೊಡೋಕೆ ರೆಡಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಕಾನೂನನ್ನ ತರಬೇಕು ಅಂತಾ ಒತ್ತಾಯ ಮಾಡ್ತೇವೆ. ಮುಖ್ಯಮಂತ್ರಿಗಳು ಸಹ ಪ್ರಧಾನಿಗಳಿಗೆ ಪತ್ರ ಬರೆಯುತ್ತೀನಿ ಅಂದಿದ್ದಾರೆ…
ತುಮಕೂರು: ತುಮಕೂರಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ ಮಾಡಿದ್ದೇವೆ. ಜಿಲ್ಲಾಡಳಿತ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ರಾಜ್ಯದಲ್ಲಿ ಪ್ರತಿಷ್ಟಿತವಾದ ಜಿಲ್ಲೆ. ವಿಸ್ತೀರ್ಣದಲ್ಲಿ ತುಮಕೂರು ಮೂರನೇ ಸ್ಥಾನ ಪಡೆದುಕೊಂಡಿದೆ. 11 ವಿಧಾನಸಭಾ ಕ್ಷೇತ್ರಗಳು ತುಮಕೂರಿಗೆ ಬರುತ್ತೆ. 3 ಕ್ಷೇತ್ರಗಳಲ್ಲಿ ಸಂಸತ್ತು ಪ್ರಾತಿನಿಧ್ಯ ಪಡೆದುಕೊಂಡಿದೆ. ಬೆಂಗಳೂರಿಗೆ ಹತ್ತಿರವಿರುವ ವೇಗವಾಗಿ ಬೆಳೆಯುವ ಪಟ್ಟಣ ತುಮಕೂರು. ಮುಂದಿನ 10 ವರ್ಷದಲ್ಲಿ ಬೆಂಗಳೂರು ತುಮಕೂರಿಗೆ ಯಾವುದೇ ವ್ಯತ್ಯಾಸವಿರೋಲ್ಲ ಎಂದರು. ನಾವು ಸರ್ಕಾರಲದಲ್ಲಿ ಆ ಕೆಲಸ ಮಾಡ್ತಾ ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ 100 ಕಿಮೀ ಅಂತರದ ಪರಿಮಿತಿ ಇಟ್ಟುಕೊಂಡಿದ್ದಾವೆ. ವಿಮಾನ ನಿಲ್ದಾಣಗಳು 70 ಕಿಮೀ ಅಂತರದಲ್ಲಿ ಪರಿಮಿತಿ ಇರುತ್ತೆ. ತುಮಕೂರು ಸಹ ಬೆಂಗಳೂರಿಗೆ ಹೊಂದುಕೊಂಡಂತೆ ಬೆಳವಣೆಗೆ ಆಗುತ್ತೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡ್ತಾ ಇದೆ. ಈಗಾಗಲೇ ನಾನು ಮನವಿ ಮಾಡಿದ್ದೇನೆ ವಿಮಾನ ನಿಲ್ದಾಣವನ್ನ ತುಮಕೂರಿನ ಆಸುಪಾಸಿನಲ್ಲಿ ಮಂಜೂರು ಮಾಡಲು ಕೇಳಿದ್ದೇನೆ.…
ಮಧುಗಿರಿ: ಇಂದು ಸಂವಿಧಾನ ಜಾರಿಗೆ ಬಂದ ದಿನ, ಸಂವಿಧಾನದಿಂದ ಸಾಮಾನ್ಯ ಜನತೆಗೆ ಮೂಲಭೂತ ಹಕ್ಕುಗಳನ್ನು ಮೀಸಲಾತಿಯ ಮೂಲಕ, ಸಾಮಾಜಿಕ ನ್ಯಾಯವನ್ನು ಡಾ.ಬಿ.ಆರ್. ಅಂಬೇಡ್ಕರ್ ನೀಡಿದರು ಎಂದು ಮಧುಗಿರಿ ತಾಲ್ಲೂಕ್ ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ್ ಹೇಳಿದರು. ಗಣರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಬರಹಗಾರರಾದ ಎನ್.ಎಸ್.ಈಶ್ವರ್ ಪ್ರಸಾದ್ ಮಾತನಾಡಿ, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಲ್ಲಿ ಸಮಾನತೆ ನೀಡಿದರು. ಶಿಕ್ಷಣ ವ್ಯವಸ್ಥೆಯಲ್ಲಿ ಅಸಮಾನತೆ ಕಂಡುಬರುತ್ತದೆ. ಉಳ್ಳವರಿಗೆ ಖಾಸಗಿ ಆಂಗ್ಲ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿದರೆ, ಸರ್ಕಾರಿ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ವ್ಯಾಸಂಗ ಮಾಡುವ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಗ್ರಾಮಗಳ ಗಣ್ಯ ವ್ಯಕ್ತಿಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುವುದರಿಂದ ಸರ್ಕಾರಿ ಶಾಲೆಗಳ ಕಡೆ ಗಮನ ಹರಿಸದೆ ಇರುವುದು, ಸರ್ಕಾರಿ ಶಾಲೆಗಳು ಹಿಂದುಳಿಯನ್ನು ಕಾರಣವಾಗಿದೆ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತೆ ಆಗಿದೆ. ಶಿಕ್ಷಣದಲ್ಲಿ ಸಮಾನತೆ ಶಿಕ್ಷಣ ನೀಡಲು…
ಬೆಳಕೋಣಿ (ಚೌಧರಿ): ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. 76ನೇ ಗಣರಾಜ್ಯೋತ್ಸವ ಹಿನ್ನೆಲೆ 10 ನೇ ತರಗತಿ ವಿದ್ಯಾರ್ಥಿಗಳು ‘ತಾಯಿ ಮಹತ್ವ ಏನು?’ ಎಂದು ನಾಟಕರೂಪದಿಂದ ತಿಳಿಸಿಕೊಟ್ಟರು. ಪ್ರಾಂಶುಪಾಲರಾದ ಉಮಾಕಾಂತ ಚೋಪಡೇ ಮಾತನಾಡಿ, 26ನೇ ಜನವರಿ 1950 ಸಂವಿಧಾನವನ್ನು ಅಂಗೀಕರಿಸಿ, ಶಾಸನವನ್ನಾಗಿ ಒಪ್ಪಿಕೊಂಡ ದಿನ. ನಮ್ಮ ಸಂವಿಧಾನವನ್ನು ಗೌರವಿಸುವುದು, ಆಶಯಗಳನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಎಂದರು. ಭಾರತದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲ ಮಹನೀಯರನ್ನು ಹಾಗೂ ವಿಶ್ವಕ್ಕೆ ಮಾದರಿ ಸ್ವರೂಪದ ಸಂವಿಧಾನವನ್ನು ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸಿದರು. ಶಾಲೆಯ ಹಿರಿಯ ಶಿಕ್ಷಕರಾದ ನವನಾಥ ವಡಗಾವೇ, ಶಿಕ್ಷಕರಾದ ಸಂಜೀವ ಕುಮಾರ್ ಬಿರಾದಾರ, ರವೀಂದ್ರ ರೆಡ್ಡಿ, ಅಶೋಕ್ ಜಾಧವ, ಜೀವನ ಬೆಂದ್ರೇ. ರಂಜನಾ ಗೈಕ್ವಾಡ, ಮಮತಾ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಎಂ.ಡಿ.ನಯೂಮ್ , ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಶ್ರಾಫೋದಿನ ಸೌದಾಗಾರ, ಮನೋಜ ರೆಡ್ಡಿ, ಮೋಹಮ್ಮದ ಷಾ, ಪತ್ರಕರ್ತರಾದ ಅರವಿಂದ ಮಲ್ಲಿಗೆ ಮುಖ್ಯ…
ಪಾವಗಡ: ವಾರದ ಎರಡು ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದರ ಜೊತೆಗೆ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಸೂಚಿಸಿದ್ದಾರೆ. ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ ಅವರು ದೀನ ದಲಿತರು ಇಂದು ಉನ್ನತ ಸ್ಥಾನಗಳಲ್ಲಿ ಇರಲು ಸಂವಿಧಾನ ಅಡಿಪಾಯವಾಗಿರುತ್ತದೆ, ಇಂತಹ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಜಾಗೃತಿಯನ್ನು ಹೊಂದಿರಬೇಕು, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿವಾರ ಎರಡು ದಿನಗಳ ಕಾಲ ಅರಿವು ಮೂಡಿಸುವಂತಹ ಕಾರ್ಯಕ್ರಮಕ್ಕೆ ಮುಂದಾಗ ಬೇಕೆಂದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದ ತಹಶೀಲ್ದಾರ್ ಡಿ.ಎನ್.ವರದರಾಜು , ಭಾರತ ದೇಶ ಅನೇಕ ವರ್ಷಗಳ ಕಾಲ ಬೇರೆಯವರ ಕಪಿಮುಷ್ಠಿಯಲ್ಲಿದ್ದು ಸ್ವಾತಂತ್ರ್ಯ ಪಡೆದುಕೊಂಡ ಬಳಿಕ, ದೇಶದ ಜನರ ರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದು ನಮ್ಮೆಲ್ಲರ ಏಳಿಗೆ ಕಾರಣವಾಗಿದೆ, ಸದ್ಯ ಪಾವಗಡ ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು ಮುಂದಿನ…
ಬೆಂಗಳೂರು: ನ್ಯಾಯಾಂಗ ಬಡಾವಣೆ, ಯಲಹಂಕ ಬೆಂಗಳೂರು , ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಬಿವೃದ್ದಿ ಸಂಘ ಇವರು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿ ಅವರ ಭಾವಚಿತ್ರವನ್ನು ಇಡದೆ ನ್ಯಾಯಮೂರ್ತಿ ಮತ್ತು ನ್ಯಾಯಾಧೀಶರನ್ನೊಳಗೊಡಂತೆ ಸಭೇಯಲ್ಲಿ ಭಾಗವಹಿಸಿದ ಎಲ್ಲರೂ ಡಾ.ಅಂಬೇಡ್ಕರ್ ರವರ ಹೆಸರನ್ನು ಪ್ರಸ್ಥಾಪಿಸದೆ ಅವಮಾನಿಸಿರುವ ಆರೋಪ ಕೇಳಿ ಬಂದಿದೆ. ಘಟನೆಯನ್ನು ಖಂಡಿಸಿದ ನಿವೃತ್ತ ಜಂಟಿ ನಿರ್ದೇಶಕರು, ಭೂದಾಖಲೆ ಇಲಾಖೆ ಮತ್ತು ಕರ್ನಾಟಕದ ಉಚ್ಚ ನ್ಯಾಯಾಲಯದ ವಕೀಲರು ಮುದ್ದುರಂಗಪ್ಪ, ನಿವೃತ್ತ ಸಹಾಯಕ ನಿಯಂತ್ರಕರು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಜಿ.ಎನ್.ನರಸಿಂಹಮೂರ್ತಿ, ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ರವರು ಭಾರತಕ್ಕೆ ನೀಡಿದ ಸಂವಿಧಾನದ ಭಿಕ್ಷೆಯಿಂದ ನ್ಯಾಯಾಂಗದ ಉನ್ನತ ಹುದ್ದೆಯನ್ನು ಅಲಂಕರಿಸಿದ ನ್ಯಾಯಾಮೂರ್ತಿ, ನ್ಯಾಯಾದೀಶರುಗಳಿಂದಲೇ ಡಾ.ಅಂಬೇಡ್ಕರ್ ರವರಿಗೆ ಅವಮಾನವಾಗಿರುವುದು ಹಾಗೂ ಸಭೆಯಲ್ಲಿ ಜೈ ಶ್ರೀ ರಾಮ್ ಘೋಷಣೆಯನ್ನು ಮೊಳಗಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಘಟನೆಯನ್ನು ತೀವ್ರವಾಗಿ ನಾವು ಖಂಡಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮಧುಗಿರಿ: ತಾಲೂಕಿನ ಮಾಡ್ಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ಹೆಸರಾಂತ ಇಂಡಿಗೋ ಪೇಂಟ್ಸ್ ಲಿಮಿಟೆಡ್ ಹಾಗೂ ಸುರಭಿ ಪೇಂಟ್ಸ್ ಹಾರ್ಡ್ವೇರ್ಸ್ ನ ವತಿಯಿಂದ ಇಂಡಿಗೋ ಸೇವಾ ಉತ್ಸವ ಎಂಬ ಕಾರ್ಯಕ್ರಮದಡಿ ಸರ್ಕಾರಿ ಶಾಲೆಯ ಕೊಠಡಿಗಳಿಗೆ ಉಚಿತವಾಗಿ ಸುಮಾರು 30 ರಿಂದ 40 ಸಾವಿರದ ವೆಚ್ಚದಲ್ಲಿ ಉಚಿತವಾಗಿ ಪೇಂಟ್ಸ್ ನೀಡಿ ಶಾಲಾ ಕೊಠಡಿಗಳಿಗೆ ಕಲರ್ ಫುಲ್ ಪೇಂಟ್ಸ್ ಮಾಡಿಸಲಾಗಿದೆ. ಶಾಲೆಯ ಮಕ್ಕಳಲ್ಲಿ ಉತ್ಸಾಹ ತುಂಬಲು ಕ್ರೀಡೆಗಳನ್ನು ಆಯೋಜಿಸಿ ಬಹುಮಾನವನ್ನು ಸಹ ವಿತರಿಸುವುದರ ಜೊತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಸರ್ಕಾರಿ ಶಾಲಾ ಕೊಠಡಿಗಳಿಗೆ ಪೇಂಟ್ಸ್ ಮಾಡಿಸುವ ಕಾರ್ಯಕ್ರಮಕ್ಕೆ ಸುರಭಿ ಪೇಂಟ್ಸ್ ಶಾಪ್ ಸತೀಶ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀರಂಗಪ್ಪ, ಅಲ್ಲಿನ ಮುಖ್ಯೋಪಾಧ್ಯಾಯಣಿ ರಾಧಾ ಸಹ ಶಿಕ್ಷಕಿ ಮಂಜುಳಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಇಂಡಿಗೋ ಪೇಂಟ್ಸ್ ಲಿಮಿಟೆಡ್ ಬ್ರಾಂಚ್ ಮ್ಯಾನೇಜರ್ ಸಜ್ಜೀವ್ ಏನ್ ನಾಯರ ಹಾಗೂ ಚಿನಕವಜ್ರ ಕ್ಲಸ್ಟರ್ CRP ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ…
ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ. ಎಲ್ಲ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬ್ರಿಟೀಷರ ಆಳ್ವಿಕೆಗೆ ಒಳಪಟ್ಟಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನೇಕ ಮಹನೀಯರುಗಳು, ಮಹಾತ್ಮ ಗಾಂಧೀಜಿ, ಬಾಲಗಂಗಾಧರನಾಥ ತಿಲಕ್, ಗೋಪಾಲಕೃಷ್ಣ ಗೋಖಲೆ, ಲಾಲ ಲಜಪತರಾಯ್, ಜವಹಾರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಮುಂತಾದವರ ನೇತೃತ್ವದಲ್ಲಿ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ, ತ್ಯಾಗ–ಬಲಿದಾನ ಫಲವಾಗಿ 1947 ಆಗಸ್ಟ್ 15 ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂದರು. ಸ್ವಾತಂತ್ರ್ಯಗೊಂಡ ನಂತರ, ಇಡೀ ದೇಶವನ್ನು ಭೌಗೋಳಿಕವಾಗಿ, ಭಾಷಿಕವಾಗಿ ಒಗ್ಗೂಡಿಸುವ ಅನಿವಾರ್ಯತೆ ಉದ್ಭವಿಸಿತು. ಜೊತೆಗೆ ಏಕರೂಪದ ಕಾನೂನು ಹಾಗೂ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ದೇಶದ ಏಕತೆಯನ್ನು ಬಲಪಡಿಸಲು ಡಾ. ಬಾಬಾ…
ಮುಂಬೈ: ನಟ ಸೈಫ್ ಅಲಿಖಾನ್ ಅವರ ಮೇಲೆ ಚಾಕು ದಾಳಿ ಹಾಗೂ ಕಳ್ಳತನ ಯತ್ನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸೈಫ್ ನಿವಾಸದಿಂದ ಸಂಗ್ರಹಿಸಲಾದ 19 ಸೆಟ್ ಬೆರಳಚ್ಚುಗಳು ಆರೋಪಿ ಶರೀಫುಲ್ ಇಸ್ಲಾಂನ ಬೆರಳಚ್ಚುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಮುಂಬೈ ಪೊಲೀಸರು ಖಾನ್ ಅವರ ಮನೆಯಲ್ಲಿ ಪತ್ತೆಯಾದ ಬೆರಳಚ್ಚುಗಳನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಫಿಂಗರ್ಪ್ರಿಂಟ್ ಬ್ಯೂರೋಗೆ ಕಳುಹಿಸಿದ್ದಾರೆ. ಸಿಸ್ಟಮ್–ರಚಿಸಿದ ವರದಿಯು ಷರೀಫುಲ್ ಅವರ ಮುದ್ರಣಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ತಿಳಿದುಬಂದಿದೆ. ಪರೀಕ್ಷೆಯ ಫಲಿತಾಂಶ ನೆಗೆಟಿವ್ ಎಂದು ಮುಂಬೈ ಪೊಲೀಸರಿಗೆ ಸಿಐಡಿ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮುಂಬೈ ಪೊಲೀಸರು ಹೆಚ್ಚಿನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx