Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ಪ್ರಯಾಗ್ ರಾಜ್: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಶುಕ್ರವಾರ ಕುಂಭ ಮೇಳಕ್ಕೆ ಭೇಟಿ ನೀಡಿದ್ದು, ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಚರ್ಚೆ ನಡೆಸಿದರು. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಯು.ಟಿ.ಖಾದರ್ ಸಾಧುಗಳೊಂದಿಗೆ ಬೆರೆತರು. ದಕ್ಷಿಣ ಕನ್ನಡದ ಆಪ್ತ ಸ್ನೇಹಿತರ ಜೊತೆಗೂಡಿ ಕುಂಭಮೇಳದ ಮಹಾನುಭವವನ್ನು ಪಡೆದರು. ಎಲ್ಲರಲ್ಲೂ ಬೆರೆಯುವ ಮತ್ತು ಪರಸ್ಪರ ಧರ್ಮಗಳನ್ನು ಗೌರವಿಸುವ ಖಾದರ್ ಅವರ ನಿದರ್ಶನ ಇದೇ ಮೊದಲಲ್ಲ. ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬಳ್ಳಾರಿ : ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯರೊಬ್ಬರನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅಪಹರಣಕ್ಕೊಳಗಾದವರಾಗಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಅಪಹರಿಸಿದ್ದಾರೆ. ಈ ಘಟನೆ ನಗರದ ಸತ್ಯನಾರಾಯಣ ಪೇಟೆ ಬಳಿ ನಡೆದಿದೆ. ಅಪಹರಣದ ಬಳಿಕ ಸುನೀಲ್ ಮೊಬೈಲ್ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ವಿಜಯಪುರ: ನಗರದ ಹೊರವಲಯದಲ್ಲಿರುವ ಇಟ್ಟಿಗೆ ಭಟ್ಟಿಯ ಮಾಲೀಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೋಷಿತ ಸಮುದಾಯದ ಕೂಲಿ ಕಾರ್ಮಿಕರನ್ನು ಮಾಜಿ ಸಚಿವ, ಶೋಷಿತರ ಗಟ್ಟಿ ಧ್ವನಿ ಹೆಚ್.ಆಂಜನೇಯ ಅವರು ಇಂದು ಭೇಟಿಯಾಗಿ, ವೈಯಕ್ತಿಕ ಧನಸಹಾಯ ಮಾಡಿ, ಸಾಂತ್ವನ ಹೇಳಿದರು. ಇತ್ತೀಚೆಗೆ ನಡೆದ ಈ ಅಮಾನವೀಯ ಘಟನೆಯ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ಈ ಘಟನೆಯಿಂದ ಇಡೀ ಮನುಕುಲವೇ ಬೆಚ್ಚಿಬೀಳುವ ಜೊತೆಗೆ ಮಮ್ಮಲ ಮರುಗಿ ಹಲ್ಲೆ ನಡೆಸಿದವರ ಮೇಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರು ಹಬ್ಬಕ್ಕೆ ಊರಿಗೆ ಹೋದವರು ತಡವಾಗಿ ಬಂದರು ಎಂಬ ಕಾರಣಕ್ಕೆ ಇಟ್ಟಿಗೆ ಭಟ್ಟಿಯ ಮಾಲೀಕ ಮತ್ತು ಅವನ ಮಗ ಹಾಗೂ ಸಹಚರರು ಈ ಮೂವರು ಕೂಲಿಕಾರ್ಮಿಕರ ಪಾದ ಮತ್ತು ಕೈಗಳಿಗೆ ಪೈಪುಗಳಿಂದ ಮನಸೋ ಇಚ್ಛೆ ಥಳಿಸಿ, ಕಣ್ಣಿಗೆ ಖಾರದಪುಡಿ ಎರಚಿದ್ದರು. ಮೂರು ದಿನಗಳಿಂದ ನಿರಂತರವಾಗಿ…
ಬೆಂಗಳೂರು: ಶಸ್ತ್ರ ಚಿಕಿತ್ಸೆ ಬಳಿಕ ವಿಶ್ರಾಂತಿಯಲ್ಲಿರುವ ನಟ ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಜನವರಿ 26ಕ್ಕೆ ವಾಪಸ್ ಆಗಲಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ. ವಿಡಿಯೋ ಮೂಲಕ ಫ್ಯಾನ್ಸ್ ಗೆ ಮಾಹಿತಿ ನೀಡಿರುವ ಶಿವರಾಜ್ ಕುಮಾರ್ ಅವರು, ನಿಮ್ಮೆಲ್ಲರನ್ನೂ ನೋಡುವುದಕ್ಕೆ ನಾನು ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಯುಎಸ್ ನ ಮಿಯಾಮಿ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವರಾಜ್ ಕುಮಾರ್ ಅವರು ಬಳಿಕ ಕೆಲವು ದಿನಗಳ ಕಾಲ ಅಲ್ಲೇ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಲು ಸಿದ್ಧತೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ ಹೆಚ್ಚು ಹಣ ಮೀಸಲಿಡಿ: ನಿರ್ಮಲಾ ಸೀತಾರಾಮನ್ ಗೆ ಡಿ.ಕೆ.ಶಿವಕುಮಾರ್ ಮನವಿ
ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ. 1.5 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದ್ದು, ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಆದಾಗ್ಯೂ, ನಗರದಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳು ಅದರ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಹೆಣಗಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವರ ಗಮನಸೆಳೆದಿದ್ದಾರೆ. ಬೆಂಗಳೂರು ಉತ್ತರ– ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ.…
ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ–ಫೈನಾನ್ಸ್ ಕಂಪನಿಗಳಿಂದ ಸಾಲಗಾರರ ಮೇಲೆ ನಡೆಯುತ್ತಿರುವ ಕಿರುಕುಳ ಹಿನ್ನೆಲೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಮೈಕ್ರೋಫೈನಾನ್ಸ್ ಕಂಪನಿಗಳ ಸಂಘದ ಪ್ರತಿನಿಧಿಗಳು, ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಅಧಿಕಾರಿಗಳು ಮತ್ತು ನಬಾರ್ಡ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು. ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸಾಲ ವಸೂಲಾತಿ ವೇಳೆ ಆರ್ ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಈ ಕಾನೂನು ಪಾಲಿಸಬೇಕು. ಕಾನೂನು ಬಾಹಿರವಾಗಿ ಸಾಲ ವಸೂಲಾತಿಗೆ…
ಬೆಳಗಾವಿ: ಸಾಲ ಮರುಪಾವತಿಸದ ಹಿನ್ನೆಲೆ ಬಾಣಂತಿ ಸಹಿತ ಕುಟುಂಬದವರನ್ನು ಹೊರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ ಬೀಗ ತೆರವುಗೊಳಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಹಣಕಾಸು ಸಂಸ್ಥೆ, ಮನೆಯನ್ನು ಸೀಝ್ ಮಾಡಿತ್ತು. ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸುದ್ದಿ ತಿಳಿದು, ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು. ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪ್ರಜಾಪ್ರಭುತ್ವದ ನೆಲೆಗಟ್ಟುವ ಅವಶ್ಯಕ ಅಂಶವೇ ಮತದಾನ. ಭಾರತದ ಚುನಾವಣಾ ಆಯೋಗ (ECI) ಸ್ಥಾಪನೆಯ ದಿನವಾದ ಜನವರಿ 25ರ ರಾಷ್ಟ್ರೀಯ ಮತದಾರರ ದಿನಾಚರಣೆ, ಪ್ರತಿ ವರ್ಷ ಈ ದಿನವನ್ನು ತದಾರರ ಜಾಗೃತಿಯ ಕಾರ್ಯಕ್ರಮಗಳ ಮೂಲಕ ರಾಷ್ಟ್ರದ ಪ್ರಜಾಸತ್ತಾತ್ಮಕ ಮೂಲವನ್ನು ಬಲಪಡಿಸುವ ಹೆಜ್ಜೆಯಾಗಿ ಆಚರಿಸಲಾಗುತ್ತದೆ. ಈ ಬಾರಿ 15ನೇ ರಾಷ್ಟ್ರೀಯ ಮತದಾರರ ದಿನವು ECIಯ 75 ವರ್ಷಗಳ ಸಾಧನೆಗಳನ್ನೂ, 2024ರ ಯಶಸ್ವಿ ಲೋಕಸಭಾ ಚುನಾವಣೆಯೂ ಚರ್ಚೆಗೆ ಒಳಪಡಿಸಿತು. ಈ ಸಂದರ್ಭದಲ್ಲಿ, 100 ಕೋಟಿ ಮತದಾರರ ಗುರಿಯತ್ತ ಸಾಗುತ್ತಿರುವ ಭಾರತ, ಜಾಗೃತ ಮತದಾರರ ಮಹತ್ವವನ್ನು ಮತ್ತೊಮ್ಮೆ ಧ್ವನಿಸಿತು. ಮತದಾನದ ಮಹತ್ವ: ಪ್ರತಿಯೊಬ್ಬರ ಮತವು ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಇದು ಕೇವಲ ಹಕ್ಕಾಗಿಯೇ ಉಳಿಯದೇ, ಪ್ರಜಾಪ್ರಭುತ್ವದ ಪ್ರಾಣಶಕ್ತಿಯಾಗಿದೆ. ಯುವಜನಾಂಗವು ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಬದ್ಧತೆಯಿಂದ ಪಾಲ್ಗೊಳ್ಳುವ ಮೂಲಕ ದೇಶದ ಅಭಿವೃದ್ಧಿಯ ಚಕ್ರವನ್ನು ತಿರುಗಿಸಬಲ್ಲದು. 18-29 ವರ್ಷದ ವಯೋಮಾನದ 21.7 ಕೋಟಿ ಯುವ ಮತದಾರರ ಸಂಖ್ಯೆಯು ಭಾರತಕ್ಕೆ ಭವಿಷ್ಯ ಕಟ್ಟುವ ಮಹತ್ವದ ಪೂರಕವಾಗಿದೆ. ಪ್ರಜಾಪ್ರಭುತ್ವದ ಜಾಗೃತಿಗೆ ಅನಿವಾರ್ಯತೆ:…
ತುಮಕೂರು: ಸರ್ಕಾರಿ ಫೈನ್ ಆರ್ಟ್ಸ್ ಪದವಿ ಕಾಲೇಜಿನಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 2025ರ ಈ ದಿನವು ಭಾರತದ ಚುನಾವಣಾ ಆಯೋಗದ (ECI) 75ನೇ ವರ್ಷದ ಮಹೋತ್ಸವವನ್ನು ಗುರುತಿಸಿತು ಮತ್ತು 2024ರ ಯಶಸ್ವಿ ಲೋಕಸಭಾ ಚುನಾವಣೆಗಳನ್ನು ಸ್ಮರಿಸಿತು. ಕಾರ್ಯಕ್ರಮದಲ್ಲಿ ಡಾ.ಮಂಜುನಾಥ ಆರ್., ತುಮಕೂರು ಜಿಲ್ಲಾ ಚುನಾವಣಾ ಸಾಹಿತ್ಯ ಸಮಿತಿಯ (ELC) ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು, ಮತದಾನದ ಮಹತ್ವವನ್ನು ವಿವರಣೆ ಮಾಡಿದರೆ, 21.7 ಕೋಟಿ ಯುವ ಮತದಾರರು ಸೇರಿದಂತೆ 99.1 ಕೋಟಿ ನೋಂದಾಯಿತ ಮತದಾರರು ಭಾರತದಲ್ಲಿ ಗಣನೆಗೆ ಬಂದಿರುವುದು ಹೈಲೈಟ್ ಮಾಡಿದರು. ಇದೇ ವೇಳೆ ಹಾಜರಿದ್ದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ರವರು ಅಧ್ಯಕ್ಷತೆ ವಹಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರದ ಬಗ್ಗೆ ಗಮನಾರ್ಹ ಅಂಶಗಳನ್ನು ಚರ್ಚಿಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಹೇಗೆ ಜಾಗೃತ ಮತದಾರರ ಮೇಲೆ…
ಬೀದರ್: ಎಟಿಎಂ ದರೋಡೆ ಪ್ರಕರಣದಲ್ಲಿ ಇಬ್ಬರು ದರೋಡೆಕೋರರು ಗುಂಡು ಹಾರಿಸಿದ ಪರಿಣಾಮ ಗಿರಿ ವೆಂಕಟೇಶ ಎಂಬವರು ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಗುಂಡಿನ ದಾಳಿಗೊಳಗಾಗಿದ್ದ ಮತ್ತೊಬ್ಬ ಸಿಬ್ಬಂದಿ ಶಿವ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಇವರಿಗೆ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈದ್ರಾಬಾದಿನ ಕೇರ್ ಆಸ್ಪತ್ರೆಯಲ್ಲಿ 4 ಗಂಟೆ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಶಿವ ಅಪಾಯದಿಂದ ಪಾರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಈವರೆಗೆ ಒಟ್ಟು 11 ಲಕ್ಷ ರೂಪಾಯಿ ವೆಚ್ಚವಾಗಿದೆ. ಈ ಪೈಕಿ 9 ಲಕ್ಷ ರೂ. ನೀಡಲಾಗಿದೆ ಎಂದು ಬೀದರ್ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಳಿದ ಬಾಕಿ ವೆಚ್ಚ 2 ಲಕ್ಷ ರೂ.ಗಳನ್ನು ಸಿ.ಎಮ್.ಎಸ್. ಕಂಪನಿ ವತಿಯಿಂದ ಪಾವತಿಸಲಾಗುವುದಾಗಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4