Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂಕೋರ್ಟ್ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು ನಡೆದಿದ್ದು, ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ಸರ್ಕಾರ ಪರ ವಕೀಲರು ತಮ್ಮ ವಾದ ಮಂಡಿಸಿದ್ದು, ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾರೆ. ದರ್ಶನ್ ಅವರು ಸೆಲೆಬ್ರಿಟಿ ಆಗಿದ್ದು, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಪ್ರಭಾವ ಬಳಸಿ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂದೂ ಉಲ್ಲೇಖಿಸಲಾಗಿದೆ. ಹೈಕೋರ್ಟ್ ಪರಿಗಣಿಸದ ಹಲವು…
ಬೆಂಗಳೂರು: ಪಕ್ಷಕ್ಕೆ ಬರುವಂತೆ ಶ್ರೀರಾಮುಲು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ವಿಧಾನಸೌಧದ ಬಳಿ ಸ್ಪಷ್ಟನೆ ನೀಡಿದ ಅವರು, ಆತ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ ಎಂದರು. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ ಎಂದು ಕಿಡಿಕಾರಿದರು. ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು…
ತಿಪಟೂರು: ನಗರದ ನಗರಸಭೆ ಪಕ್ಕದಲ್ಲಿ ಅತ್ಯಾಧುನಿಕ ಉಪಕರಣಗಳನ್ನ ಒಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಪ್ರಾರಂಭೋತ್ಸವ ನಡೆಯಲಿದೆ ಎಂದು ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ಡಾ.ಸೋಮಶೇಖರ್ ತಿಳಿಸಿದ್ದಾರೆ. ನಗರದ ಶೇಖರ್ ಬ್ಲಡ್ ಬ್ಯಾಂಕ್ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದೆ. ಬ್ಲಡ್ ಬ್ಯಾಂಕ್ ಫೆಬ್ರವರಿ 2ರಂದು ಪ್ರಾರಂಭೋತ್ಸವ ನಡೆಯಲಿದೆ. ಅತಿಥಿಗಳಾಗಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಷಡಕ್ಷರಿ, ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆರಗೋಡಿ ರಂಗಾಪುರ ಭೂಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿಗಳು, ನೊಣವಿನಕೆರೆ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಋಷಭ ದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಜಿಗಳು, ತಿಪಟೂರು ಗುರುಕುಲಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಕರಿಬಸವ ದೇಶಿ ಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನಾಡಿನ ರಾಜಕೀಯ…
ತುಮಕೂರು: ತುಮುಲ್ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿ ಪಾವಗಡ ಶಾಸಕ ವೆಂಕಟೇಶ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಪಾವಗಡದವರನ್ನ ನಾಮನಿರ್ದೇಶನ ಮಾಡಿ ಅಧ್ಯಕ್ಷನ ಮಾಡಿ ನಮ್ಮ ಮುಖದ ಮೇಲೆ ಕೆನ್ನೆಗೆ ಒಡೆದಂತಾಗಿದೆ. ಇದಕ್ಕಿಂತ ನಾಚಿಕೆಗೇಡಿನ ಸ್ಥಿತಿ ಒಕ್ಕೂಟ ವ್ಯವಸ್ಥೆಗೆ ಬರಬಾರದು. ಅವರೇನಾದ್ರು ಸಹಕಾರ ಮಂತ್ರಿ ಅನ್ನೋ ಯೋಗ್ಯತೆ ಇದ್ರೆ ಬಂದು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು, ನಾನು ಸಹಕಾರ ಕ್ಷೇತ್ರಕ್ಕೆ ಅಯೋಗ್ಯ ನಾನು, ಈ ಕ್ಷೇತ್ರಕ್ಕೆ ಯೋಗ್ಯನಲ್ಲ ಅಂತಾ ರಾಜೀನಾಮೆ ಕೊಡಬೇಕು ಎಂದು ಮಾಧುಸ್ವಾಮಿ ಕಿಡಿಕಾರಿದರು. ನಾನು ಅಧಿಕಾರದಲ್ಲಿದ್ದಾಗ ನನ್ನದು ನಡೀತಾ ಇತ್ತು, ಒಂದು ದಿನ ಆ ವ್ಯವಸ್ಥೆಗೆ ಬಾಯಾಕಿಲ್ಲ. ನಾವು ನಮ್ಮ ಹಾಗೇ ಗೆದ್ದು ಬಂದಿದ್ದಾರೆ ಅವರ ಆಡಳಿತ ಅವರು ಮಾಡಲಿ ಎಂತಾ ಹೇಳಿದವರು ನಾವು. ರೈತ ಕೆನ್ನೆಮೇಲೆ ಒಡೆದಂಗೆ ಹತ್ತು ಜನರಲ್ಲಿ ಅವರು ಯಾರಿಗಾದ್ರು ಅಧ್ಯಕ್ಷ ಸ್ಥಾನ ಕೊಡಲಿ. ನಾವು ಯಾರಿಗೆ ಓಟ್ ಹಾಕಬೇಕು ಅಂತಾ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ನೇಗಲಾಲ ಗ್ರಾಮದ ಶ್ರೀ ಕಾವಲಮ್ಮ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವ 9 ವರ್ಷಗಳ ನಂತರ 5 ಹಳ್ಳಿ ಗ್ರಾಮಸ್ಥರ ತೀರ್ಮಾನದಂತೆ ಶ್ರೀ ಕಾವಲಮ್ಮ ದೇವರ ದೊಡ್ಡ ಜಾತ್ರೆ ಮಾಡಲು ತೀರ್ಮಾನ ಮಾಡಲಾಗಿದೆ. ದಿನಾಂಕ ಈ ಕೆಳಕಂಡಂತೆ ನಿಗದಿ ಮಾಡಲಾಗಿದೆ: 1) 27–4–2025 ರಂದು ವಿಶೇಷ ಬಂಡಿ ಪೂಜೆ. 2) 5—5–2025 ಬೊಮ್ಮ ದೇವರಿಗೆ ಆರತಿ. 3) 11 ಮತ್ತು 12—5–2025 ಅಮ್ಮನವರ ಜಲಧಿ ಕಾರ್ಯಕ್ರಮ. 4) 19–5–2025 ಮರು ಪೂಜೆ ಕಾರ್ಯಕ್ರಮ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ವಿಜಯಪುರ: ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಈ ದುರ್ಘಟನೆಯಲ್ಲಿ ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂಬವರು ಮೃತಪಟ್ಟಿದ್ದಾರೆ. ಅಲ್ಲದೇ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಸದ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ವಿವಾಹ ವಿಚ್ಛೇದನದ ಅರ್ಜಿ ವಾಪಸ್ ಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಮನೆಯ ಮುಂಭಾಗದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ನಾಗರಭಾವಿ ಬಡಾವಣೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಮೃತರನ್ನು ಕುಣಿಗಲ್ ಪಟ್ಟಣದ ನಿವಾಸಿ 39 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜುನಾಥ್ 2013ರಲ್ಲಿ ವಿವಾಹವಾಗಿದ್ದರು ಮತ್ತು ನಂತರ ಬೆಂಗಳೂರಿನ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದರು. ದಂಪತಿಗೆ 9 ವರ್ಷದ ಗಂಡು ಮಗುವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ಮಂಜುನಾಥ್ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು. ಇಬ್ಬರೂ ವಿಚ್ಛೇದನ ಪಡೆಯಲು ನ್ಯಾಯಾಲಯ ಮೆಟ್ಟಿಲೇರಿದ್ದರು. ಈ ಮಧ್ಯೆ, ವಿಚ್ಛೇದನ ಅರ್ಜಿಯನ್ನು ಹಿಂಪಡೆಯುವಂತೆ ಮಂಜುನಾಥ್ ಪತ್ನಿ ಬಳಿ ಕೇಳಿದ್ದರು. ಅದೇ ವಿಚಾರವಾಗಿ ಮನವೊಲಿಸಲು ಪತ್ನಿಯ ನಿವಾಸಕ್ಕೆ ಬಂದಿದ್ದರು. ಅರ್ಜಿ ಹಿಂಪಡೆಯಲು ಪತ್ನಿ ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರಿನಲ್ಲಿ ಫೆಬ್ರವರಿ 11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಸಿದ್ಧತೆಗಳ ಅಂಗವಾಗಿ ರಾಜ್ಯ ಸರ್ಕಾರವು ದೆಹಲಿಯಲ್ಲಿ ರೋಡ್ ಶೋ ನಡೆಸಿತು. ರಾಜ್ಯದಲ್ಲಿ ಹೂಡಿಕೆಯ ಅವಕಾಶಗಳ ಬಗ್ಗೆ ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟು ಸಮಾವೇಶದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ. ಬಳಿಕ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ₹10 ಲಕ್ಷ ಕೋಟಿ ಹೂಡಿಕೆ ಆಗುವ ವಿಶ್ವಾಸ ಇದೆ. ರಾಜ್ಯದ ಆಹಾರ ಸಂಸ್ಕರಣಾ ವಲಯಕ್ಕೆ ಕೊಡುಗೆ ನೀಡುತ್ತಿರುವ ಐಟಿಸಿ ಲಿಮಿಟೆಡ್, ಈ ಕ್ಷೇತ್ರಗಳಲ್ಲಿ ತನ್ನ ವಹಿವಾಟು ವಿಸ್ತರಿಸುವುದಾಗಿ ವಾಗ್ದಾನ ಮಾಡಿದೆ. ಐಟಿಸಿ ಲಿಮಿಟೆಡ್ನ ಈ ಹೂಡಿಕೆ ಪ್ರಸ್ತಾವಗಳು ರಾಜ್ಯದಲ್ಲಿ ಮೂಲಸೌಲಭ್ಯಗಳಿಗೆ ಉತ್ತೇಜನ ನೀಡಲಿವೆ. ಉದ್ಯೋಗ ಅವಕಾಶಗಳು ಹೆಚ್ಚಿಸಲಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು. ರಾಗಿ ತಿಂದವನು ನಿರೋಗಿ ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬಕ್ಕೆ…
ತುಮಕೂರು: ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಜ್ಞಾನ ಮೂಡಿಸುವಂತಹ ಫಲ–ಪುಷ್ಪ ಪ್ರದರ್ಶನವನ್ನು ಈ ಬಾರಿ ವಿಶೇಷವಾಗಿ ಏರ್ಪಡಿಸಲಾಗಿದೆ. ಆಕರ್ಷಕ ವಿನ್ಯಾಸದ ಫಲ-ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. ಇಂದು ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ‘ಫಲಪುಷ್ಪ ಪ್ರದರ್ಶನ 2024–25’ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಫಲ–ಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26 ರಿಂದ 28 ರವರೆಗೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಫಲಪುಷ್ಪ ಪ್ರದರ್ಶನದಲ್ಲಿ ಮಂಧರಗಿರಿ ಮರು ಸೃಷ್ಠಿ, ಸಿರಿಧಾನ್ಯ ಕಲಾಕೃತಿ, ತರಕಾರಿ ಕೆತ್ತನೆಯಲ್ಲಿ ಇಸ್ರೋಗೆ ನಮನ, ಜಾನುರ್ ಕಲೆಯಲ್ಲಿ ಹೊಮ್ಮುವ ರೈತ ಜೀವನ, ಮರಳು ಕಲಾಕೃತಿ, ಆಕರ್ಷಕ ವಿನ್ಯಾಸದ ಪುಷ್ಪ ಪ್ರದರ್ಶನ ವಿಶೇಷ ಆಕರ್ಷಣೆಯಾಗಿವೆ ಎಂದು ತಿಳಿಸಿದರು. ಕೃಷಿ ಇಲಾಖೆಯಿಂದ ಪಾರಂಪರಿಕ ಹಾಗೂ ಆಧುನಿಕ ಕೃಷಿ ಸಲಕರಣೆಗಳು ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಮೀನುಗಾರಿಕೆ ಇಲಾಖೆಯಿಂದ ಆಕರ್ಷಕ…