Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಗಳ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಿದೆ. ಈ ಯೋಜನೆಗೆ ವರ್ಷ ಪೂರ್ತಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು ಹಾಗೂ 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಗ್ಗೆ ಸೂಕ್ತ ಮಾಹಿತಿ ಒದಗಿಸಬೇಕು. ಅರ್ಜಿದಾರರು ಸರ್ಕಾರದ ಇತರೆ ಯಾವುದೇ ಯೋಜನೆಗಳಡಿ ಮಾಸಾಶನ ಫಲಾನುಭವಿಗಳಾಗಿರಬಾರದು. ವಾರ್ಷಿಕ ಆದಾಯ 1ಲಕ್ಷ ರೂ. ಮಿತಿಯಲ್ಲಿರಬೇಕು. ಎಲ್ಲಾ ಸಮುದಾಯ, ಎಲ್ಲಾ ಕಲಾಪ್ರಕಾರ ಹಾಗೂ ವಿವಿಧ ಅಲೆಮಾರಿ ಸಮುದಾಯದ ಕಲಾವಿದರೂ ಸಹ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾರಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2275204ನ್ನು ಸಂಪರ್ಕಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕು ಮಿರ್ಜಿ…
ತುಮಕೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಬೆಂಗಳೂರು, ಮಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ 6 ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮಹಾನಗರಪಾಲಿಕೆಯ 35 ವಾರ್ಡ್ ಗಳ ವ್ಯಾಪ್ತಿಯ ಉದ್ದಿಮೆದಾರರು ಕಟ್ಟಡದ ಪಾರ್ಕಿಂಗ್/ಸೆಲ್ಲರ್ ಜಾಗದಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸಿ ಉದ್ದಿಮೆ ನಡೆಸುತ್ತಿದ್ದು, ತಮ್ಮ ಉದ್ದಿಮೆಯನ್ನು ಸ್ಥಳಾಂತರಿಸಲು ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚಿಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಜಿ.ಆರ್. ಸುಧೀಂದ್ರ ಅವರಿಗೆ ದೂರು ಸಲ್ಲಿಸಿರುವ ಮೇರೆಗೆ ದೂರಿನ ಕುರಿತು ಸೂಕ್ತ ಕ್ರಮಕೈಗೊಳ್ಳಲು ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿ ತಮ್ಮ ಉದ್ದಿಮೆಯನ್ನು ಕಟ್ಟಡದ ಪಾರ್ಕಿಂಗ್/ಸೆಲ್ಲರ್ ಜಾಗದಿಂದ ಸ್ಥಳಾಂತರಿಸತಕ್ಕದ್ದು, ತಪ್ಪಿದ್ದಲ್ಲಿ ತಮ್ಮ ಉದ್ದಿಮೆ ಪರವಾನಗಿಯನ್ನು ರದ್ದುಗೊಳಿಸುವ/ಖಾಲಿಗೊಳಿಸುವ ನಿಟ್ಟಿನಲ್ಲಿ ಕೆ.ಎಂ.ಸಿ.ಕಾಯ್ದೆ 1976 ಕಲಂ 377ರಂತೆ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೀದರ್: ಲೋಕ ಸಭೆ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೆಲವು ದಿವಸಗಳ ಹಿಂದೆ ರೈತರ ಸಮಸ್ಯೆ ಬಗ್ಗೆ ಬೀದರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ಜರುಗಿತ್ತು, ಅದರಲ್ಲಿ ವಿಶೇಷವಾಗಿ ಬೀದರ ಜಿಲ್ಲೆಯ ರೈತರ ಹೊಲದ ವಿದ್ಯುತ್ ನ ಅನೇಕ ಸಮಸ್ಯೆ ಕಂಡುಬಂದಿತ್ತು, ಎಲ್ಲ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಗಮನಕ್ಕೆ ಸಂಸದರು ತಂದಿದ್ದಾರೆ. ಈಶ್ವರ್ ಖಂಡ್ರೆ ಅವರು ಎಲ್ಲ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಗಣಿಸಿ ರೈತರ ಹೊಲದ ವಿದ್ಯುತ್ ನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಸಚಿವರಾದ ಕೆ.ಜೆ.ಜಾರ್ಜ್ ಅವರನ್ನು ಜಿಲ್ಲೆಗೆ ಆಹ್ವಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಬೀದರ್ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಇಲಾಖೆಯ ಸಚಿವರಾದ ಕೆ.ಜೆ.ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜೆಸ್ಕಾಂ ಅಧ್ಯಕ್ಷರಾದ ಪಂಕಜ್ ಕುಮಾರ…
ತುಮಕೂರು: ಶಾಸಕ ಎಸ್.ಆರ್. ಶ್ರೀನಿವಾಸ್ ಪತ್ನಿಗೆ ತುಮುಲ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಹಿನ್ನೆಲೆ ಇಬ್ಬರು ಸಚಿವರ ವಿರುದ್ಧ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಸಿಡಿದೆದ್ದಿದ್ದಾರೆ. ಸಚಿವ ಪರಮೇಶ್ವರ್ ಹಾಗೂ ಕೆ.ಎನ್.ರಾಜಣ್ಣ ವಿರುದ್ಧ ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ತೊಘಲಕ್ ಆಡಳಿತ ನಡೆಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರು ಸಚಿವರಿಂದ ತೊಘಲಕ್ ಆಡಳಿತ ನಡೆಯುತ್ತಿದೆ. ಜಿಲ್ಲೆಯಲ್ಲಿ ಏನ್ ನಡಿತಿದೆ ಅನ್ನೋದೆ ಗೊತ್ತಾಗ್ತಿಲ್ಲ. ಇಬ್ಬರು ಮಂತ್ರಿಗಳು ಸೇರಿಕೊಂಡು ಏನ್ ಮಾಡ್ಬೇಕು ಅದನ್ನ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮನ್ನ ಮೀಟಿಂಗ್ ಗೂ ಸಹ ಕರಿತಿಲ್ಲ. ಏನ್ ಮಾಡ್ತಿವಿ ಅಂತ ನಮ್ಮನ್ನ ಕೇಳ್ತಿಲ್ಲ. ತೊಘಲಕ್ ಆಡಳಿತ ಜಿಲ್ಲೆಯಲ್ಲಿ ನಡಿತಿದೆ. ಪರಮೇಶ್ವರ್ ಗೆ ಪೋನ್ ಮಾಡಿ ಏನ್ ಹೇಳ್ಬೇಕು ಅದನ್ನೆಲ್ಲಾ ಹೇಳಿದಿನಿ. ಆ ಇಬ್ಬರು ಸಾಮಾಜಿಕ ನ್ಯಾಯ ಕೊಡೋ ಹರಿಕಾರರು. ಎಡಗೈ ಜನಾಂಗಕ್ಕೆ ಅನ್ಯಾಯ ಆಗಿದೆ. ಇಡೀ ಜಿಲ್ಲೆಯಲ್ಲಿ ಎಸ್ ಟಿ, ಭೋವಿಗಳನ್ನ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಲಗೈ ಸಮುದಾಯದವರು ಮಿನಿಸ್ಟರ್ ಇದ್ದಾರೆ. ಲಿಂಗಾಯತರು,…
ಔರಾದ್ (ಬಿ ) ತಾಲೂಕಿನ ಕೌಠಾ ( ಬಿ ) ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ( ಪಿ ಕೆ ಪಿ ಎಸ್ ) ನ ಅಧ್ಯಕ್ಷರಾಗಿ ಚಂದ್ರಶೇಖರ್ ಕಾಶಪ್ಪ ಬಿರಾದರ, ಉಪಾಧ್ಯಕ್ಷರಾಗಿ ರಾಜಪ್ಪ ಗಣಪತಿ ಎಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯಾದ ಉಮಾಕಾಂತ ಮುಗಟೆ ಘೋಷಿಸಿದರು. ನಿರ್ದೇಶಕರಾಗಿ ಚನ್ನಬಸಪ್ಪ ಮಾಣಿಕಪ್ಪ, ಮಲ್ಲಿಕಾರ್ಜುನ್ ಗುಂಡಪ್ಪ, ಅಶೋಕ್ ಶಿವ ಶೆಟ್ಟಿ, ಚನ್ನಬಸವ ಉಮಾಕಾಂತ, ನರಸಿಂಗ ಶಿವರಾಮ, ಮಾರುತಿ ಹನುಮಂತ, ಸೈಯದ್ ಅನ್ಸರ್ ಮಿಯಾ ಶಬ್ಬೀರ್ ಮಿಯಾ, ಬಸವರಾಜ ಗುರುನಾಥ್, ಇಂದಿರಾಬಾಯಿ ಶರಣಬಸಪ್ಪ, ಕಸ್ತೂರಿಬಾಯಿ, ಬಸವರಾಜ, ಪ್ರಮುಖರಾದ ರವೀಂದ್ರ ಪಾಟೀಲ್, ಬಸವರಾಜ ಬಾಲಾದೆ, ಧನರಾಜ ಬಿರಾದಾರ, ಗುಂಡಪ್ಪ ಬಿರಾದರ, ಸಂಗನಬಸಪ್ಪ ದೇವರೆ, ರವಿ ದೇವರೆ, ನಾಗೂರಾವ ಬಿರಾದಾರ, ಸೋಮಶೇಖರ ಪಾಟೀಲ, ರಮೇಶ ಬಿರಾದಾರ, ಕಲ್ಯಾಣರಾವ್ ಪಾಟೀಲ, ಸುಭಾಷ ಗಾದೆಗೆ, ವಿನೋದ ದೇವರೆ ಅಶೋಕ ಮಾಶೆಟ್ಟಿ ಇತರರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಇಂದಿನಿಂದ ಜನವರಿ 28ರವರೆಗೆ ಬೆಳಿಗ್ಗೆ 11 ರಿಂದ 5 ಗಂಟೆಯವರೆಗೆ ಹೊನ್ನುಡಿಕೆ, ಮಸ್ಕಲ್, ತಮ್ಮಡಿಹಳ್ಳಿ, ಸೋಮಸಾಗರ ಮತ್ತು ಡಿ.ಕೊರಟಗೆರೆ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಳಗಾವಿ: ಕೆಲಸಕ್ಕೆ ಹೋಗುವಾಗ ಮನರೇಗಾ ದಿನಗೂಲಿ ಕಾರ್ಮಿಕರ ಟೆಂಪೋ(ಬಸ್) ಪಲ್ಟಿಯಾಗಿ 35 ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಹಿಡಕಲ್ ಡ್ಯಾಂ ವ್ಯಾಪ್ತಿಯ ಹೊಸೂರ ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಯಮಕನಮರಡಿ ಕ್ಷೇತ್ರದ ಹಿಡಕಲ್ ಡ್ಯಾಂ ವ್ಯಾಪ್ತಿಯ ಕಾಮಗಾರಿಗೆ ಮನರೇಗಾ ಕಾರ್ಮಿಕರು ಟೆಂಪೋನಲ್ಲಿ ಹೋಗುವಾಗ ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ 35 ಕ್ಕೂ ಅಧಿಕ ಜನ ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ. ನಾಲ್ಕೈದು ಜನರ ಕೈ– ಕಾಲು ತೀವ್ರ ಹೊಡೆತ ಬಿದ್ದಿದೆ ಎನ್ನಲಾಗಿದೆ. 29 ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೆ ಓರ್ವ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಯೋಗಕ್ಕೆ ಜೈನ ಸಮಾಜದ ಪ್ರತಿನಿಧಿಗಳು ಇಂದು ಭೇಟಿ ನೀಡಿ ಬಜೆಟ್ ನಲ್ಲಿ ಜೈನರ ಬೇಡಿಕೆಗಳನ್ನು ಈಡೇರಿಸಲು ಚರ್ಚೆ ನಡೆಸಲಾಯಿತು. ಬಸದಿಗಳ ಜೀರ್ಣೋದ್ಧಾರ , ಗುರುಕುಲಗಳು, ಪಾಠಶಾಲೆಗಳಿಗೆ ಹೆಚ್ಚಿನ ಅನುದಾನ, ಬೇರೆ ಬೇರೆ ಶೈಕ್ಷಣಿಕ, ಉದ್ಯೋಗಕ್ಕೆ ಹೆಚ್ಚಿನ ಅನುದಾನ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಬೇಡಿಕೆಗಳ ಈಡೇರಿಕೆ ಸರ್ಕಾರದಿಂದ ಹೆಚ್ಚು ಅನುದಾನ ಕೊಡಿಸುವುದಾಗಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಭರವಸೆ ನೀಡಿದರು. ನಿಯೋಗದಲ್ಲಿ ಕರ್ನಾಟಕ ಜೈನ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಮಾಳ ಹರ್ಷೇಂದ್ರ ಜೈನ್, ಕರ್ನಾಟಕ ಸಾಹಿತ್ಯ ಪರಿಷತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್, ಸಾಮಾಜಿಕ ಹೋರಾಟಗಾರ ಮಹೇಶ್ ಜೈನ್, ಶಾಂತಿಪ್ರಸಾದ್ ಇನ್ನಿತರ ಉಪಸ್ಥಿತರಿದ್ದರು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಕವಿತಾ ರಮೇಶ್ ಮುಂದುವರಿದಿದ್ದಾರೆ. ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ಇದಾಗಿದೆ. ಹಿಂದುಳಿದ “ಬ” ವರ್ಗಕ್ಕೆ ಮೀಸಲಿದ್ದ ಸ್ಥಾನವಾಗಿದ್ದು. ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಮಲ್ಲೇಕಾವು ಕ್ಷೇತ್ರದ ಎಂ.ಎನ್.ಬಸವರಾಜು ಮತ್ತು ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ.ಕೆ. ನಾಮಪತ್ರ ಸಲ್ಲಿಸಿದ್ದರು. ಸರ್ವ ಸದಸ್ಯರ ಒಗ್ಗಟ್ಟಿನ ಚುನಾವಣೆಯನ್ನಾಗಿಸಲು ತೀರ್ಮಾನಿಸಿ ಮಲ್ಲೇಕಾವು ಕ್ಷೇತ್ರದ ಬಸವರಾಜು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರು. ನೂತನ ಉಪಾಧ್ಯಕ್ಷರಾಗಿ ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ ಕೆ ಅವಿರೋಧ ಆಯ್ಕೆಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ. ಲಕ್ಷ್ಮೀಕಾಂತ್ ರವರ ಅಭಿಮಾನಿಗಳು ಗ್ರಾಮಸ್ಥರು ಸದಸ್ಯರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಚುನಾವಣೆ ಅಧಿಕಾರಿಯಾದ ತಹಶೀಲ್ದಾರ್ ಮಂಜುನಾಥ್ ಕೆ.ರವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸನ್ಮಾನಿಸಿ ಧನ್ಯವಾದ ತಿಳಿಸಿದರು. ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಿಕಾಂತ್…