Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲ್ಲೂಕಿನ ಪಿ ಎಲ್ ಡಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ದಿವಂಗತ ಚನ್ನಿಗಪ್ಪನವರ ಆಪ್ತ ಶಿಷ್ಯರಾದ ಎನ್.ಚಿಕ್ಕರಂಗಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿ.ಡಿ.ನಾಗರಾಜಯ್ಯ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ಒಟ್ಟು 14 ಸದಸ್ಯರಿದ್ದು ಒಬ್ಬರು ಸರ್ಕಾರದ ನಾಮ ನಿರ್ದೇಶನ ಸದಸ್ಯರಿರುತ್ತಾರೆ. ಜನವರಿ 22 ಬುಧವಾರದಂದು ಪಟ್ಟಣದ ಪಿಎಲ್ ಡಿ ಬ್ಯಾಂಕ್ ಕಛೇರಿಯಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್.ಡಿ.ಎ. ಪಕ್ಷದ ಬೆಂಬಲಿತ ಅಭ್ಯರ್ಥಿ ಚಿಕ್ಕರಂಗಯ್ಯ 8 ಮತಗಳನ್ನು ಪಡೆದು ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಲ್.ಆನಂದ್ ರವರನ್ನು 1 ಮತಗಳ ಅಂತರದಿಂದ ಸೋಲಿಸಿದರು. ಅದೇ ರೀತಿ ಉಪಾದ್ಯಕ್ಷ ಸ್ಥಾನಕ್ಕೆ ಎನ್.ಡಿ.ಎ. ಬೆಂಬಲಿತ ಅಭ್ಯರ್ಥಿ ಬಿ.ಡಿ.ನಾಗರಾಜಯ್ಯ 8 ಮತಗಳನ್ನು ಪಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆಂಚಮ್ಮ ರವರನ್ನು 1 ಮತಗಳ ಅಂತರದಿಂದ ಸೋಲಿಸಿದರು. ಕೊರಟಗೆರೆ ಕಾಂಗ್ರೆಸ್ ಗೆ ಆಘಾತ : ಪಿ ಎಲ್ ಡಿ…
ತುಮಕೂರು: ತಾಲೂಕಿನ ಇತಿಹಾಸ ಪ್ರಸಿದ್ಧ ಮಂದರಗಿರಿ ಜೈನ ಕ್ಷೇತ್ರಕ್ಕೆ ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಭೇಟಿ ನೀಡಿ ಶ್ರೀ ಚಂದ್ರನಾಥ ತೀರ್ಥಂಕರು, ಶ್ರೀ ಶಾಂತಿಸಾಗರ ಮಹಾರಾಜರ ಪಿಂಚಿ ಮಂದಿರ ಇನ್ನಿತರ ಬಸದಿಗಳ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ವಾಸ್ತವ್ಯವಿರುವ ಜೈನ ಮುನಿ ಶ್ರೀ ಅಮಿತ ಸಾಗರ್ ಮಹಾರಾಜ್ ಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸೊಗಡು ಶಿವಣ್ಣ ,ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಜಿನಮoದಿರ ಸಮಿತಿಯ ಅಧ್ಯಕ್ಷ ಟಿ.ಡಿ .ಬಾಹುಬಲಿ, ಖಜಾಂಚಿ ಸುಭೋಧ ಕುಮಾರ್ ಜೈನ್, ಕಾರ್ಯದರ್ಶಿ ಟಿ.ಜೆ .ನಾಗರಾಜ್, ಉಪಾಧ್ಯಕ್ಷ ತೋವಿನಕೆರೆ ಶೀತಲ್, ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜೈನ್ ಅಸೋಸಿಯೇಷನ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಜೆ.ನಾಗರಾಜು, ಎಸ್ .ವಿ.ಜಿನೇಶ್, ಸುನಿಲ್ ಕುಮಾರ್, ಬಿ.ಎಲ್.ಚಂದ್ರ ಕೀರ್ತಿ, ಮೋಹನ್ ಕುಮಾರ್ ಸೇರಿದಂತೆ ಇನ್ನಿತರ ಜೈನ ಮುಖಂಡರುಗಳು ಭಾಗವಹಿಸಿದ್ದರು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಹೂವಿನ ಹಡಗಲಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸತತ ಐದನೇ ಬಾರಿಗೆ ಮಾಗಳದ ಹಿರಿಯ ಜೈನ ಶ್ರಾವಕ ಶ್ರೀ ಯಶೋಧರ ಗೌಡ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾವೀರ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸನ್ಮಾನ ಸಭೆಯಲ್ಲಿ ಶ್ರೀ ಪಾರ್ಶ್ವನಾಥ ಟ್ರಸ್ಟ್ ಅಧ್ಯಕ್ಷರಾದ ಎಚ್.ಎಸ್ ಪ್ರಶಾಂತ್ ರವರು ಶ್ರೀಯಶೋಧರ ಗೌಡರವರನ್ನು ಸನ್ಮಾನಿಸಿದರು. ಶ್ರೀ ಪಾರ್ಶ್ವನಾಥ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಮಾತನಾಡಿ, ಬ್ಯಾಂಕ್ ನಲ್ಲಿ ಜೈನ ಬಾಂಧವರು ಹೆಚ್ಚು ಹೆಚ್ಚು ಶೇರ್ ಗಳನ್ನು ಪಡೆದು ಸಂಘದಿಂದ ದೊರೆಯುವ ಸವಲತ್ತುಗಳ ಲಾಭ ಪಡೆಯಬೇಕೆಂದರು. ಸನ್ಮಾನ ಸ್ವೀಕರಿಸಿದ್ದ ಯಶೋಧರ ಗೌಡ ಸಂತಸ ವ್ಯಕ್ತಪಡಿಸಿ ,ಸಮಾಜಕ್ಕೆ ಕೃತಜ್ಞತೆ ಸಲ್ಲಿಸಿದರು. ಮಹಾವೀರ ಸೊಸೈಟಿಯ ಜೆ.ಮಂಜುನಾಥ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ಪದ್ಮರಾಜುಜೈನ್, ಖಜಾಂಚಿ ಬಾಗೇಶ್ ಜೈನರ್ ಉಪಸ್ಥಿತರಿದ್ದರು. ವರದಿ: ಜೆ.ರಂಗನಾಥ– ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಉತ್ತರ ಪ್ರದೇಶ: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ–ಸಾಂಸ್ಕೃತಿಕ ಸಂಗಮವಾದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿಂದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣನವರು ಪಾಲ್ಗೊಂಡು, ಧರ್ಮಪತ್ನಿ ಶೈಲಜಾ ಸೋಮಣ್ಣ ಅವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತಿರುವುದೇ ನಮ್ಮ ಜೀವಿತಾವಧಿಯ ಪುಣ್ಯ ಎನ್ನಲು ಹೆಮ್ಮೆಯೆನಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕವಾಗಿ ಜಗದ್ವಿಖ್ಯಾತವಾದ ಈ ಆಚರಣೆಯ ಪುಣ್ಯದಿಂದ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25′ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ ಪುಸ್ತಕದಲ್ಲಿ ಕಾಣಬಹುದು ಎಂದರು. ಪತ್ರಕರ್ತ ರಘುನಾಥ್ ಚ.ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ ಯಶಸ್ವಿಯಾಗಿದೆ…
ತುಮಕೂರು: ಸಂಸ್ಕಾರ ಪಠ್ಯಪುಸ್ತಕಗಳನ್ನು ಓದುವುದರಿಂದ ಬರುವುದಲ್ಲ. ಮನೆತನದಿಂದ ಸಂಸ್ಕಾರ ಬೆಳೆಯಬೇಕು. ಸಂಸ್ಕಾರಯುತ ವ್ಯಕ್ತಿಗಳಿಂದ ಮಾತ್ರ ಸ್ವಸ್ಥಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿದ ಅವರು, ವ್ಯಕ್ತಿಗಳು ಕಾನೂನನ್ನು ಓದಿ ಅದನ್ನು ಪಾಲಿಸುವುದು ಬೇರೆ, ಹಿರಿಯರಿಗೆ, ತಂದೆ ತಾಯಿಯರಿಗೆ ಗೌರವ ಕೊಡುವುದೇ ಬೇರೆ ಎಂದರು. ವಿದ್ಯಾರ್ಥಿಗಳು ಬರೀ ತರಗತಿ, ಮೊಬೈಲ್ ಗಳಿಗೆ ಸೀಮಿತವಾಗದೆ ಸ್ಪರ್ಧೆ, ಕ್ರೀಡೆ, ಸಂಗೀತ, ಮನರಂಜನೆ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ತುಮಕೂರಿನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಎಲ್ಲರಿಗೂ ಮೂರು ಮುಖವಿದೆ. ಅದರಲ್ಲಿಒಂದು ಜಗತ್ತಿಗೆ ತೋರಿಸುವ ಮುಖ, ಎರಡನೆಯದ್ದು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ತೋರಿಸುವ ಮುಖ, ಮೂರನೆಯದ್ದು ಯಾರಿಗೂ ತೋರಿಸದೆ…
ತುಮಕೂರು: ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ 13 ದಿನಗಳ ಜೂಟ್ ಉತ್ಪನ್ನಗಳ ತಯಾರಿಕೆ(JUTE PRODUCTS UTPADAK) ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ–ಊಟದ ವ್ಯವಸ್ಥೆ ಮಾಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ– ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಜನವರಿ 28ರೊಳಗಾಗಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2243386, ಮೊ.ಸಂ. 9738351048, 9663680001ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ಕೆ.ಎನ್. ವಾದಿರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯ ನೀಡಲು ಅರ್ಹರಿಂದ ಆನ್’ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 5ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 26 ರಿಂದ 28ರವರೆಗೆ ನಗರದ ಎಸ್.ಎಸ್.ಪುರಂನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ “ಫಲಪುಷ್ಪ ಪ್ರದರ್ಶನ”ವನ್ನು ಏರ್ಪಡಿಸಲಾಗಿದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರು ಜನವರಿ 26ರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಳಿಗೆಗಳ ಉದ್ಘಾಟನೆ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ತಾಂತ್ರಿಕ ಕರಪತ್ರ ಬಿಡುಗಡೆ ನೆರವೇರಿಸಲಿದ್ದು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಜನವರಿ 26ರ ಸಂಜೆ 5 ಗಂಟೆ ಹಾಗೂ 27ರ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ರೈತಬಾಂಧವರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಪಟ್ಟನಾಯಕನಹಳ್ಳಿ ಜಾತ್ರೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಟ್ಟನಾಯಕನಹಳ್ಳಿ ಶ್ರೀ ಓಂಕಾರೇಶ್ವರ ಸ್ವಾಮಿ ಜಾತ್ರಾ ಸಮಿತಿ ಸಹಯೋಗದಲ್ಲಿ ಜನವರಿ 25ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಶ್ರೀ ಗುರುಗುಂಡೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಕಬಡ್ಡಿ ಪಂದ್ಯಾವಳಿ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಪ್ರಥಮ–10000, ದ್ವಿತೀಯ–8000, ತೃತೀಯ–5000ರೂ.ಗಳ ನಗದು ಬಹುಮಾನವನ್ನು ನೀಡಲಾಗುವುದು. ಜಾನಪದ ಗೀತೆ(ವೈಯಕ್ತಿಕ), ಭಾವಗೀತೆ(ವೈಯಕ್ತಿಕ), ಏಕಪಾತ್ರಾಭಿನಯ(ವೈಯಕ್ತಿಕ) ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ತಲಾ 1000 ರೂ.ಗಳ ಪ್ರಥಮ ಹಾಗೂ 500 ರೂ.ಗಳ ದ್ವಿತೀಯ ಬಹುಮಾನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಹಾಗೂ ಕಲಾವಿದರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9742894304/ 9980588415ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…