Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಸೇವಾನುಭವದ ಆಧಾರದಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದವರಿಗೆ ಮಾಸಿಕ 30,000 ರೂ.ಗಳ ಗೌರವಧನ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 18ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ಪದವಿ/ ಸ್ನಾತಕ ಪದವಿ, ಅಪ್ಲಿಕೇಶನ್ ನಿರ್ವಹಣೆ ಕನಿಷ್ಟ 2 ವರ್ಷಗಳ ಸೇವಾನುಭವ, ಸ್ಥಳೀಯ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 24ರಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಗೋಪಾಲದೇವರಹಳ್ಳಿ, ಕಳ್ಳಂಬೆಳ್ಳ, ಚಿಕ್ಕನಹಳ್ಳಿ, ದೊಡ್ಡಅಗ್ರಹಾರ, ಭೂಪಸಂದ್ರ, ಹಾಲೇನಹಳ್ಳಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು/ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಚೇಳೂರು–ತುಮಕೂರು ಮಾರ್ಗದ ಮುಖ್ಯ ರಸ್ತೆ ಅವ್ಯವಸ್ಥೆ ಬಗ್ಗೆ ನಮ್ಮ ತುಮಕೂರು ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಇದೀಗ ರಸ್ತೆ ದುರಸ್ತಿ ಕೆಲಸ ಆರಂಭಿಸಿದ್ದು, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯವನ್ನ ಒದಗಿಸುವಲ್ಲಿ ಮತ್ತೊಮ್ಮೆ ನಮ್ಮತುಮಕೂರು ವರದಿಯು ಸಹಕಾರಿಯಾಗಿದೆ. ಚೇಳೂರು—ತುಮಕೂರು ರಸ್ತೆ ಅವ್ಯವಸ್ಥೆ ಬಗ್ಗೆ ನಮ್ಮತುಮಕೂರು “ರಸ್ತೆ ಗುಂಡಿಯೊಳಗೋ, ಗುಂಡಿಯೇ ರಸ್ತೆಯೋ? | ಚೇಳೂರು–ತುಮಕೂರು ಮುಖ್ಯ ರಸ್ತೆ ಅವ್ಯವಸ್ಥೆ” ಶೀರ್ಷಿಕೆಯಡಿ ಸವಿವರವಾದ ವರದಿ ಪ್ರಕಟಿಸಿ, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯನ್ನು ಎಚ್ಚರಿಸಿತ್ತು. ಈ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಗೆ ಟಾರು ಹಾಕುವ ಮೂಲಕ ರಸ್ತೆ ದುರಸ್ತಿ ಮಾಡಿದ್ದು, ಸಾರ್ವಜನಿಕರು ನೆಮ್ಮದಿಯಿಂದ ವಾಹನ ಚಲಾಯಿಸಿಕೊಂಡು ಪ್ರಯಾಣಿಸಲು ಸಹಕಾರಿಯಾಗಿದೆ. ಚೇಳೂರು-ತುಮಕೂರು ಮಾರ್ಗದ ಮುಖ್ಯ ರಸ್ತೆಯ ಅವ್ಯವಸ್ಥೆಗೆ ತಾತ್ಕಾಲಿಕ ಮುಕ್ತಿದೊರಕಿದೆ. ರಸ್ತೆ ಹಾನಿಗೀಡಾದ ಪ್ರದೇಶಗಳಲ್ಲಿ ರಸ್ತೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ರಸ್ತೆಯನ್ನು ದೊರಕಿಸಿಕೊಡುವಲ್ಲಿ ನಮ್ಮ ತುಮಕೂರು ವರದಿಯು ಸಹಕಾರಿಯಾಗಿದೆ. ವರದಿ: ಗಣೇಶ್, ಮಾರನಹಳ್ಳಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರಿಂದ ಮೊದಲ ಬಾರಿಗೆ ನಾಮನಿರ್ದೇಶಕರಿಗೆ ಶಾಸಕರೊಬ್ಬರು ತುಮುಲ್ ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತುಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ನಂತರ ಮತದಾನ ನಡೆದು ಶಾಸಕ ಹೆಚ್.ವಿ.ವೆಂಕಟೇಶ್ ಅವರು 9 ಮತಗಳನ್ನು ಪಡೆದರೆ, ಎಸ್.ಆರ್.ಗೌಡ 5 ಮತಗಳನ್ನು ಪಡೆದ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿ…
ತುಮಕೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಜನವರಿ 23ರಂದು ಬೆಳಿಗ್ಗೆ 10:30 ಗಂಟೆಗೆ ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಅಸಾಂಕ್ರಾಮಿಕ ಕಾಯಿಲೆಗಳ ತಪಾಸಣೆ ಮತ್ತು ಋತುಬಂಧ ಕುರಿತು ಜನಜಾಗೃತಿ ಕಾರ್ಯಕ್ರಮ”ವನ್ನು ಏರ್ಪಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಬಿ.ಎಮ್. ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಳ್ಳಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ, ಮಧುಮೇಹ, ರಕ್ತದೊತ್ತಡ, ಋತುಬಂಧ ಕುರಿತು ಮಾಹಿತಿ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಹೆಚ್.ಡಿ.ಕೋಟೆ: ತಾಲ್ಲೂಕಿನ ನೆಮ್ಮನ ಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಿ.ಮಟಕೆರೆ ಸಹಯೋಗದೊಂದಿಗೆ, ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ , ದಂತ ತಜ್ಞ ವೈದ್ಯರಾದ ಸಮೀವುಲ್ಲಾ ಷರೀಫ್ ರವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಚಂದ್ರ ಶೇಖರ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞ ರಾದ ಡಾ.ಸಮೀ ವುಲ್ಲಾ ಶರೀಫ್ ರವರು ಮಾತನಾಡಿ, ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು ಎಂದರು. ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ,…
ತುಮಕೂರು: ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿ ಪಾವಗಡ ಶಾಸಕ ವೆಂಕಟೇಶ್ ತುಮೂಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾಸಕ ವೆಂಕಟೇಶ್ 9 ಮತಗಳ ಭರ್ಜರಿಗೆ ಗೆಲುವು ದಾಖಲಿಸಿದ್ದಾರೆ. ಪ್ರತಿಸ್ಪರ್ಧಿ ಎಸ್.ಆರ್. ಗೌಡ 5 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ. 14 ನಿರ್ದೇಶಕರನ್ನು ಹೊಂದಿರುವ ತುಮೂಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪೆರ್ನಾಜೆ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ಪ್ರಥಮ ರಾಂಕ್ ಗಳಿಸಿದ್ದಾರೆ. ಚೈತನ್ಯ ಕೋಟೆ ಅವರು ಜನವರಿ 18ರಂದು ವಿಶ್ವವಿದ್ಯಾಲಯದಲ್ಲಿ ನಡೆದ 7, 8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು ಕುಕ್ಕೆ ಸುಬ್ರಹ್ಮಣ್ಯ ಸಮೀಪದ, ಬೂದಿಪಳ್ಳದ ಭಾಸ್ಕರ ಕೋಟೆ ಮತ್ತು ವೀಣಾ ಕೋಟೆ ಇವರ ಪುತ್ರಿ ಹಾಗೂ ಶ್ರೀ ತಿರುಮಲ ಭಟ್ ಇವರ ಪತ್ನಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪೆರ್ನಾಜೆ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ಮೈಸೂರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಜೂನಿಯರ್ ವಿಭಾಗದಲ್ಲಿ ಸ್ವರ ಸಿಂಚನ ಸಂಗೀತ ಶಾಲೆಯ ಆರು ಮಂದಿ ಹಾಗೂ ಸೀನಿಯರ್ ವಿಭಾಗದಲ್ಲಿ ಐದು ಮಂದಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶೇಕಡ 100% ಫಲಿತಾಂಶ ದಾಖಲಿಸಿದೆ ಎಂದು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರು ತಿಳಿಸಿದ್ದಾರೆ. ಜೂನಿಯರ್ ವಿಭಾಗದಲ್ಲಿ : ಅಶ್ವಿನಿ, ಸಾತ್ವಿಕ, ರಿತ್ವಿಕ ಇಂಚರ , ಪುಷ್ಪ ಬಲ್ಲಾಳ್ ಹಾಗೂ ವಾಣಿ ಸೀನಿಯರ್ ವಿಭಾಗದಲ್ಲಿ : ಪ್ರತಿಭಾ, ಪಲ್ಲವಿ ,ಭಾಗ್ಯಶ್ರೀ , ಕಿರಣ್ ಶ್ರೀ, ಮನೋಜ್ಞ. ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಜ.16 ಸ್ವರ ಸಿಂಚನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಮಧುರ ಗಾನ ವೈಭವ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಧ್ಯಾನ ಮಂದಿರದಲ್ಲಿ ಕೆಲಕಾಲ ಕುಳಿತು ಪ್ರಾರ್ಥನೆ ಸಲ್ಲಿಸಿದರು. ನಂತರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀವಾದ ಪಡೆದರು. ಇದೇ ಸಂದಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx