Author: admin

ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಧಾರುಣ ಘಟನೆ ಸಂಭವಿಸಿದೆ. ಮೃತಪಟ್ಟ ಬಾಲಕಿಯನ್ನು ಲೇಖನಾ (10) ಎಂದು ಗುರುತಿಸಲಾಗಿದೆ. ಈಕೆ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಮನೆಯಲ್ಲಿ ಕಟ್ಟಲಾಗಿದ್ದ ಸೀರೆಯ ಜೋಕಾಲಿಯಲ್ಲಿ ಲೇಖನಾ ಆಟವಾಡುತ್ತಿದ್ದಳು. ಆಟವಾಡುತ್ತಿದ್ದಾಗ ಅನಿರೀಕ್ಷಿತವಾಗಿ ಜೋಕಾಲಿ ತಿರುಗಿ ಬಾಲಕಿಯ ಕಾಲಿಗೆ ಸಿಲುಕಿಕೊಂಡಿದೆ. ಇದನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಸೀರೆಯ ಪಟ್ಟಿ ಕುತ್ತಿಗೆಗೆ ಬಿಗಿದುಕೊಂಡಿದೆ ಎನ್ನಲಾಗಿದೆ. ಇದರಿಂದಾಗಿ ಬಾಲಕಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾಳೆ. ಕೆಲಸ ಮುಗಿಸಿ ಮನೆಗೆ ಮರಳಿದ ಪೋಷಕರು ಮಗಳ ಸ್ಥಿತಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ…

Read More

ತುಮಕೂರು: ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡುತ್ತಿರುವ ರಾಜ್ಯ ಒಕ್ಕಲಿಗರ ಸಂಘವು ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಸಮುದಾಯಕ್ಕೆ ಶಕ್ತಿ ತುಂಬ ಬೇಕು. ತುಮಕೂರಿನಲ್ಲಿ ಸಂಘದಿಂದ ಆಸ್ಪತ್ರೆ ಸ್ಥಾಪನೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದರು. ನಗರದ ಮೇಲಕೋಟೆಯ ರಾಜ್ಯ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ 2 ಮತ್ತು 3ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಈ ಹಾಸ್ಟೆಲ್ ಪಕ್ಕದಲ್ಲಿ ಸಂಘದ ನಿವೇಶನವಿದೆ, ಸಾರ್ವಜನಿಕರ ಉಪಯೋಗಕ್ಕಾಗಿ ಆಸ್ಪತ್ರೆ ಸ್ಥಾಪನೆ ಮಾಡಬೇಕು. ಈ ಕಾರ್ಯ ಶೀಘ್ರವಾಗಿ ಆರಂಭಗೊಳ್ಳಲು ಒಕ್ಕಲಿಗರ ಸಂಘದ ಪದಾಧಿಕಾರಿಗಳು ನಿರ್ಧಾರ ಮಾಡಬೇಕು ಎಂದರು. ಕುಣಿಗಲ್ ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ ಮಾತನಾಡಿ, ಸಾಂಘಿಕ ಶಕ್ತಿ ನಿಜವಾದ ಸಮುದಾಯದ ಶಕ್ತಿ. ರಾಜಕೀಯ, ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಆಗಿಂದಾಗ್ಗೆ ಸಮುದಾಯದ ಸಮಾವೇಶಗಳನ್ನು ಮಾಡಿ ಜಾಗೃತಿ ಮೂಡಿಸಬೇಕು.…

Read More

ಗುಬ್ಬಿ: ತಾಲೂಕಿನಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆದ ಕಾಮಗಾರಿಗಳಿಂದ ಕಂಡು ಬರುತ್ತಿದೆ. ಎಲ್ಲೂ ಪೂರ್ಣವಾಗಿ ಕೆಲಸ ಮಾಡಿಲ್ಲ, ಪಂಚಾಯಿತಿಗೆ ಹಸ್ತಾಂತರ ಆಗಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತ ಬಗ್ಗೆ ದೂರುಗಳು ಹೆಚ್ಚಾಗಿವೆ. ಬೆಸ್ಕಾಂ ಇಲಾಖೆಯ ವಿಳಂಬ ನೀತಿ ನೀರಿನ ಸಮಸ್ಯೆಗೆ ಕಾರಣವಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಹಸ್ತಾಂತರಕ್ಕೆ ಪಡೆಯುವ ಮುನ್ನ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಬೇಕು. ಹಾಗೆಯೇ ವಿಜಿನಿ ಗಡುವು ಮುಗಿದಿದೆಯೇ ಗಮನಿಸಿ ಮುಂದಿನ ಕ್ರಮ ಕೈಗೊಳ್ಳಿ. ಸರ್ಕಾರಿ ಜಾಗ ವಶಕ್ಕೆ ಪಡೆದು ನೀರಿನ ಟ್ಯಾಂಕ್ ನಿರ್ಮಿಸಲು ಅನುವು ಮಾಡಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಕೊಳವೆಬಾವಿ ಅವಶ್ಯವಿದ್ದಲ್ಲಿ ಕೊರೆಯಲಾಗುವುದು. ವಿದ್ಯುತ್ ಸಂಪರ್ಕ ಎಲ್ಲಿಯೂ ವಿಳಂಬವಾಗದಂತೆ ಬೆಸ್ಕಾಂ ಅಧಿಕಾರಿಗಳು ನಿಗಾ…

Read More

ಪಾವಗಡ: ತಾಲ್ಲೂಕಿನ ಪ್ರಮುಖ ಆರೋಗ್ಯ ಕೇಂದ್ರವಾಗಿರುವ ಪಾವಗಡ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಮತ್ತು ಮೂಲಸೌಕರ್ಯಗಳ ಕೊರತೆ ಎದುರಾಗಿದ್ದು, ಚಿಕಿತ್ಸೆಗಾಗಿ ಬರುವ ನೂರಾರು ಬಡ ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಸ್ಪತ್ರೆಯಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಗಳು ಲಭ್ಯವಿಲ್ಲ. ವೈದ್ಯರು ಬರೆದುಕೊಡುವ ಚೀಟಿಯಲ್ಲಿನ ಬಹುತೇಕ ಔಷಧಿಗಳನ್ನು ರೋಗಿಗಳು ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ಸಾವಿರಾರು ರೂಪಾಯಿ ನೀಡಿ ಖರೀದಿಸಬೇಕಾದ ಅನಿವಾರ್ಯತೆ ಇದೆ ಎನ್ನುವ ಆರೋಪ ಸದ್ಯ ಕೇಳಿ ಬಂದಿದೆ. ವಾಂತಿ, ಭೇದಿಯಂತಹ ತುರ್ತು ಸಂದರ್ಭಗಳಲ್ಲಿಯೂ ಅಗತ್ಯ ಇಂಜೆಕ್ಷನ್ ಮತ್ತು ಔಷಧಗಳು ಸಿಗುತ್ತಿಲ್ಲ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಔಷಧ ಲಭ್ಯವಿಲ್ಲದ ಕಾರಣ ರೋಗಿಗಳು ಚಿಕಿತ್ಸೆ ಪಡೆಯಲಾಗದೆ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸ್ವಲ್ಪ ಮಟ್ಟಿಗೆ ನೀಗಿದ್ದರೂ, ಶಸ್ತ್ರಚಿಕಿತ್ಸೆ ಮತ್ತು ಹೆರಿಗೆ ಪ್ರಕರಣಗಳಿಗೆ ಅಗತ್ಯವಿರುವ ಸವಲತ್ತುಗಳು ಇಲ್ಲದ ಕಾರಣ ತಜ್ಞ ವೈದ್ಯರ ಸೇವೆ ರೋಗಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾತ್ರ ಉಚಿತವಾಗಿ ದೊರೆಯುತ್ತಿದ್ದು, ಔಷಧಕ್ಕಾಗಿ ಹಣ…

Read More

ಸೋಶಿಯಲ್ ಮೀಡಿಯಾ ಸ್ಟಾರ್ ಹಾಗೂ ಬಿಗ್ ಬಾಸ್ ಕನ್ನಡ ಒಟಿಟಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರು ತಮ್ಮ ಜೀವನದ ನೋವಿನ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋನು ಗೌಡ ಅವರ ಬ್ರೇಕಪ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿತ್ತು. ಈ ಕುರಿತು ವಿಡಿಯೋ ಮಾಡಿರುವ ಅವರು ಸತ್ಯಾಂಶವನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಬ್ರೇಕಪ್ ವದಂತಿಗಳಿಗೆ ತೆರೆ ಎಳೆದಿರುವ ಸೋನು, “ನನಗೆ ಈಗ ಯಾವುದೇ ಬ್ರೇಕಪ್ ಆಗಿಲ್ಲ. ಆದರೆ ನಾಲ್ಕು ವರ್ಷಗಳ ಹಿಂದೆ ನಾನು ಯಾರನ್ನು ಪ್ರೀತಿಸುತ್ತಿದ್ದೆನೋ ಆ ವ್ಯಕ್ತಿ ಈಗ ಈ ಲೋಕದಲ್ಲಿ ಇಲ್ಲ. ಅನಾರೋಗ್ಯದ ಕಾರಣದಿಂದ ಅವರು ನಿಧನರಾಗಿದ್ದಾರೆ” ಎಂದು ಹೇಳುತ್ತಾ ಭಾವುಕರಾಗಿದ್ದಾರೆ. ತೀರಿಕೊಂಡ ವ್ಯಕ್ತಿ ಮಾರ್ಚ್ 24ರಂದು ಸೋನು ಅವರಿಗೆ ಇಮೇಲ್ ಕಳುಹಿಸಿದ್ದರು ಎನ್ನಲಾಗಿದೆ. ಅದರಲ್ಲಿ “ನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲ, ನಿನಗೆ ಕರೆ ಮಾಡಿ ಮಾತನಾಡಲು ಆಗುತ್ತಿಲ್ಲ. ನನಗೆ ಏನಾದರೂ ಆದರೆ ನೀನು ನೋಡಲು ಬರಬೇಡ, ಬೇಸರ ಮಾಡಿಕೊಳ್ಳಬೇಡ. ಮುಂದಿನ ಜನ್ಮವಿದ್ದರೆ ಮತ್ತೆ ಸಿಗು,…

Read More

ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ ದೆಹಲಿಗೆ ಪ್ರಯಾಣ ಬೆಳೆಸಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಈ ಶಾಸಕರು ನಿರ್ಧರಿಸಿದ್ದಾರೆ. ಸಚಿವ ಸಂಪುಟದಲ್ಲಿರುವ ಸುಮಾರು 20 ಹಿರಿಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಮತ್ತು ಸತತವಾಗಿ ಗೆಲ್ಲುತ್ತಿರುವ ಶಾಸಕರಿಗೆ ಅವಕಾಶ ನೀಡಬೇಕು ಎಂಬುದು ದೆಹಲಿಗೆ ತೆರಳಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಶಾಸಕರು ದೆಹಲಿಗೆ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ಶಾಸಕರು ಸಮಯ ಕೇಳಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಕ್ಕೆ ಚುರುಕು ಮುಟ್ಟಿಸಲು ಸಂಪುಟ ಪುನರ್‌ ರಚನೆ ಅನಿವಾರ್ಯ ಎಂಬುದು ಅತೃಪ್ತ ಶಾಸಕರ…

Read More

ಬೆಂಗಳೂರು: ಮಹಿಳೆಯರಿಗೆ ಮೀಸಲಾದ ‘ಶಕ್ತಿ ಯೋಜನೆ’ಯನ್ನು ದುರುಪಯೋಗಪಡಿಸಿಕೊಂಡು ಸಂಸ್ಥೆಗೆ ವಂಚಿಸುತ್ತಿದ್ದ ಬಿಎಂಟಿಸಿಯ ಐವರು ಕಂಡಕ್ಟರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪುರುಷ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡಿ, ಅವರಿಂದ ಹಣ ಪಡೆದು ವೈಯಕ್ತಿಕವಾಗಿ ಜೇಬಿಗಿಳಿಸಿಕೊಳ್ಳುತ್ತಿದ್ದ ಗಂಭೀರ ಆರೋಪ ಇವರ ಮೇಲೆ ಸಾಬೀತಾಗಿದೆ. ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ ಭಾರಿ ದಂಧೆ ಬಯಲಿಗೆ ಬಂದಿದೆ.  ನಿಗಮಕ್ಕೆ ಸಲ್ಲಬೇಕಿದ್ದ ಟಿಕೆಟ್ ಹಣವನ್ನು ಪ್ರಯಾಣಿಕರಿಂದ ಪಡೆಯಲು ಕಂಡಕ್ಟರ್‌ ಗಳು ತಮ್ಮ ವೈಯಕ್ತಿಕ ಯುಪಿಐ (UPI) ಕ್ಯೂಆರ್ ಕೋಡ್‌ ಗಳನ್ನು ಬಳಸುತ್ತಿದ್ದರು. ಈ ಹಣ ನೇರವಾಗಿ ಅವರ ವೈಯಕ್ತಿಕ ಖಾತೆಗೆ ಜಮೆಯಾಗುತ್ತಿತ್ತು. ಕನ್ನಡ ಓದಲು ಬಾರದ ಅಥವಾ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಪ್ರಯಾಣಿಕರನ್ನೇ ಈ ತಂಡ ಗುರಿಯಾಗಿಸಿಕೊಂಡಿತ್ತು. ಪುರುಷರಿಗೆ ಶಕ್ತಿ ಯೋಜನೆಯ ‘ಶೂನ್ಯ ದರದ’ ಟಿಕೆಟ್ ನೀಡಿ, ಅವರಿಂದ ಪೂರ್ಣ ಪ್ರಮಾಣದ ಹಣ ವಸೂಲಿ ಮಾಡುತ್ತಿದ್ದರು. ಅಧಿಕಾರಿಗಳ ತನಿಖೆಯ ವೇಳೆ ಆರೋಪಿಗಳ ಖಾತೆಯಲ್ಲಿ ಸಾವಿರಾರು ರೂಪಾಯಿ ಪತ್ತೆಯಾಗಿದ್ದು, ಒಟ್ಟು 1,82,568 ರೂಪಾಯಿ ಬಿಎಂಟಿಸಿಗೆ…

Read More

ಗುಬ್ಬಿ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಕ್ಷಣದ ತುರ್ತು ಕ್ರಮಗಳ ಜೊತೆಗೆ ಬೇಸಿಗೆಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಚಿಕ್ಕಹಳ್ಳಿ, ವಿರೂಪಾಕ್ಷಪುರ, ಎಂ.ಎನ್.ಕೋಟೆ ಹಾಗೂ ಅಲ್ಲುಘಟ್ಟ ಗ್ರಾಮಗಳಲ್ಲಿ ಒಟ್ಟು 5.30 ಕೋಟಿ ರೂ. ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಡಲಗೆರೆ ಗೊಲ್ಲರಹಟ್ಟಿ ಹಾಗೂ ಕೊಂಡ್ಲಿ ಕ್ರಾಸ್‌ನಲ್ಲಿ ಎದುರಾಗಿದ್ದ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲು ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಗ್ರಾಮ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿ, ಬೇಸಿಗೆಯಲ್ಲಿ ನೀರು ಮತ್ತು ವಿದ್ಯುತ್ ಅಭಾವ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು. ಬೋಗಸಂದ್ರ, ಎಂಬಿಬಿ ಕಾವಲ್, ತೊರೆಹಳ್ಳಿ ಸೇರಿದಂತೆ ಹಲವೆಡೆ ಹೊಸ ವಿದ್ಯುತ್ ಸರಬರಾಜು ಉಪಘಟಕಗಳ ಕಾಮಗಾರಿ ನಡೆಯುತ್ತಿದೆ. ಗುಬ್ಬಿಯಲ್ಲಿ 130 ಕೋಟಿ ರೂ. ವೆಚ್ಚದ 220 ಕೆವಿ ಸ್ಟೇಷನ್ ಕೆಲಸ ಪ್ರಗತಿಯಲ್ಲಿದೆ ಎಂದರು. ಇನ್ನೂ,  ಜಲ…

Read More

ಕೊರಟಗೆರೆ (ತುಮಕೂರು): ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಭಾನುವಾರ ತಾಲೂಕಿನ ಥರಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ನಿರ್ಮಿಸಲಾಗುತ್ತಿರುವ ‘ಶುದ್ಧ ಕುಡಿಯುವ ನೀರಿನ ಘಟಕ’ಕ್ಕೆ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಸಚಿವರು ಹೊಸಪಾಳ್ಯ ಮತ್ತು ದುರ್ಗದ ನಾಗೇನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಬಿಚ್ಚಿಟ್ಟರು. ಜನರ ಅಹವಾಲುಗಳನ್ನು ಆಲಿಸಿದ ಸೋಮಣ್ಣ, ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ನಂತರ ತುಂಬಾಡಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕಟ್ಟಡದ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು. ಶಿಕ್ಷಣಕ್ಕೆ ಪೂರಕವಾದ ಮೂಲಸೌಕರ್ಯಗಳನ್ನು ಒದಗಿಸಲು ತಾವು…

Read More

ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಒಂದು ‘ನಿರ್ಲಿಪ್ತ ಸರ್ಕಾರ’ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಭಾನುವಾರ ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದರು. ಸಚಿವ ಸಂಪುಟ ಪುನರ್‌ ರಚನೆಗಾಗಿ ಕಾಂಗ್ರೆಸ್‌ನ ಹಿರಿಯ ಶಾಸಕರು ನವದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮತ್ತೊಂದು ಗೊಂಬೆ ಆಟ’ ಎಂದು ಬಣ್ಣಿಸಿದರು. ಪ್ರಸ್ತುತ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಜನ ಸಾಮಾನ್ಯರು ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಸಮಸ್ಯೆಗಳನ್ನು ಕೇಳುವ ಬದಲು, ಶಾಸಕರು ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುತ್ತಿರುವುದು ಅಸಹ್ಯದ ಸಂಗತಿ.  ಸುಮಾರು 35 ಶಾಸಕರು ದೆಹಲಿಗೆ ಹೋಗುತ್ತಿರುವುದು ರಾಜ್ಯದ ಜನರನ್ನು ಕತ್ತಲೆಯಲ್ಲಿ ಇಡುವ ಪ್ರಯತ್ನವಾಗಿದೆ. ಇಂತಹ…

Read More