Author: admin

ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ದರೋಡೆ ನಡೆದಿದ್ದು, ಕಾರೊಂದರಲ್ಲಿ ಬಂದ ದರೋಡೆಕೋರರು ಸಿಬ್ಬಂದಿಯನ್ನು ಬಂದೂಕು, ತಲವಾರು ತೋರಿಸಿ ಬೆದರಿಸಿ ನಗ-—ನಗದು ದೋಚಿ ಪರಾರಿಯಾಗಿದ್ದಾರೆ. ಕಾರೊಂದರಲ್ಲಿ ಬಂದ ಐವರು ದರೋಡೆಕೋರರ ತಂಡ ಈ ಕೃತ್ಯ ಎಸಗಿದೆ. ದರೋಡೆಕೋರರು ಎಲ್ಲರೂ ಮುಸುಕುಧಾರಿಗಳಾಗಿದ್ದರು. ಘಟನೆ ವೇಳೆ ಬ್ಯಾಂಕ್ ನಲ್ಲಿ ಮೂವರು ಮಹಿಳಾ ಸಿಬ್ಬಂದಿ ಹಾಗೂ ಒಬ್ಬ ಪುರುಷ ಸಿಬ್ಬಂದಿ ಹಾಗೂ ಒಬ್ಬ ಸಿಸಿ ಟಿವಿ ಟೆಕ್ನೀಷಿಯನ್  ಇದ್ದರು ಎಂದು ತಿಳಿದು ಬಂದಿದೆ. ಬ್ಯಾಂಕ್ ನಲ್ಲಿದ್ದ ಸಿಬ್ಬಂದಿಗೆ ಬಂದೂಕು  ಹಾಗೂ ತಲವಾರು ತೋರಿಸಿ ಬೆದರಿಸಿ, ಲಾಕರ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಲಕ್ಷಾಂತರ ರೂ. ನಗದು ದೋಚಿದ ದರೋರೆಕೋರರು ಕಾರಿನಲ್ಲಿ ಪರಾರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬಳ್ಳಾರಿ:  ಇಂದಿನ ಮಕ್ಕಳು ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಪಕರು, ಆದ್ದರಿಂದ ಅವರ ಶಿಕ್ಷಣ ಮತ್ತು ಕಲ್ಯಾಣ ಮತ್ತು ಅವರಲ್ಲಿ ನೈತಿಕ ಗುಣಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬಳ್ಳಾರಿ ಜಿಲ್ಲೆಯ ಎಸ್‌ಬಿ ಗ್ರೂಪ್ ಆಫ್ ಇನ್‌ ಸ್ಟಿಟ್ಯೂಷನ್ ನಲ್ಲಿ ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬೃಂದಾ ಪಿಯು ಕಾಲೇಜು, ಬೃಂದಾ ಪದವಿ ಕಾಲೇಜು ಮತ್ತು ಸ್ಕಂದ ಇನ್‌ಸ್ಟಿಟ್ಯೂಷನ್ ಆಫ್ ನರ್ಸಿಂಗ್ ಅನ್ನು ಉದ್ಘಾಟಿಸಿ, ಅಂಕುರಂ–2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೀವನದ ಯಶಸ್ಸಿನಲ್ಲಿ ಶಿಕ್ಷಣವು ದೊಡ್ಡ ಪಾತ್ರವನ್ನು ವಹಿಸುತ್ತದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ, ಒಬ್ಬ ವ್ಯಕ್ತಿಯು ಶಿಕ್ಷಣ ಪಡೆದಾಗ ಅವನ ಅಭಿವೃದ್ಧಿಯು ಉತ್ತಮವಾಗಿರುತ್ತದೆ. ಶಿಕ್ಷಣವು ನಮಗೆ ಆಲೋಚನೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ. ಶಿಕ್ಷಣವನ್ನು ಎಂದಿಗೂ ಕದಿಯಲಾಗುವುದಿಲ್ಲ, ಶಿಕ್ಷಣವು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಹೇಳಿದರು. ಸ್ವಾಮಿ ವಿವೇಕಾನಂದರು ‘ನಮಗೆ ಅಂತಹ ಶಿಕ್ಷಣ ಬೇಕು, ಅದು ಚಾರಿತ್ರ‍್ಯವನ್ನು…

Read More

ಮಧುಗಿರಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ  ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಕಾಳಜಿ ಫೌಂಡೇಶನ್ (ರಿ) ತುಮಕೂರು ತಂಡ ಮನವಿ ಮಾಡಿದೆ. ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ, ವಿಶೇಷವಾಗಿ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನವರಿ 16ರಂದು ಸಂಜೆ ಎಸ್.ಎಂ. ಕೃಷ್ಣ ಬಡಾವಣೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ ತೆರಳುವಾಗ, ಶಾಲೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಎರಡು ನಾಯಿಗಳು ಆಕೆಯ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾಳಜಿ ಪೌಂಡೇಶನ್ (ರಿ) ತುಮಕೂರು ಇದರ ಸಂಘಟನಾ ಕಾರ್ಯದರ್ಶಿ  ಮಧುಗಿರಿ ಮಹೇಶ್ ವಿದ್ಯಾರ್ಥಿನಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ತಕ್ಷಣ ಪುರಸಭೆ ಆರೋಗ್ಯ ನಿರೀಕ್ಷಕರಿಗೆ ಮಾಹಿತಿ ನೀಡಿದಾಗ, ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು, ನಾಯಿಗಳನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಕೆಲವರು ನಾಯಿಯನ್ನು ಹಿಡಿಯದಂತೆ ಜಗಳ ಮಾಡಿದ್ದರಿಂದ  ಸಿಬ್ಬಂದಿ ಹಿಂಜರಿಯುವಂತಾಯಿತು. ಹೀಗಾಗಿ  ನಾಯಿಗಳನ್ನು ಸುರಕ್ಷಿತವಾಗಿ ಹಿಡಿಯಲು ಪುರಸಭಾ ಸಿಬ್ಬಂದಿಗೆ ಪೊಲೀಸ್ ರಕ್ಷಣೆ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ರೆಡ್ಡಿ ಜನಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಮಹಾಯೋಗಿ ವೇಮನ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು.  ನಗರದ ಚಿಕ್ಕಪೇಟೆ ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲೆಯ ರೆಡ್ಡಿ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಬೆವಿಕಂ ನಗರ ಉಪವಿಭಾಗ–1ರಲ್ಲಿ ಜನವರಿ 18ರಂದು ಮಧ್ಯಾಹ್ನ 3:30 ಗಂಟೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ತಿಳಿಸಿದ್ದಾರೆ. ನಗರ ಉಪವಿಭಾಗ-1ರ ಉತ್ತರ/ಕೇಂದ್ರ/ಪಶ್ಚಿಮ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಅರಳೇಪೇಟೆ ಹಾಗೂ ಕೆ.ಆರ್.ಬಡಾವಣೆ, ಕುವೆಂಪು ನಗರ, ಆದರ್ಶನಗರ, ಹನುಮಂತಪುರ, ಕೋತಿತೋಪು, ಶಾರದಾದೇವಿ ನಗರ, ಸಿರಾಗೇಟ್, ಅರಕೆರೆ, ಊರುಕೆರೆ, ರಂಗಾಪುರ, ಯಲ್ಲಾಪುರ, ಅಣ್ಣೇನಹಳ್ಳಿ, ಅಂತರಸನಹಳ್ಳಿ, ಕುಪ್ಪೂರು, ದಿಬ್ಬೂರು, ಎಸ್.ಎನ್.ಪಾಳ್ಯ, ಪಿ.ಎಸ್.ಪಾಳ್ಯ, ಹೆಬ್ಬಾಕಾ, ಸಂತೇಪೇಟೆ, ಮಂಡಿಪೇಟೆ, ಗಾರ್ಡನ್ ರಸ್ತೆ,  ಜೈಪುರ, ಪಿ.ಹೆಚ್.ಕಾಲೋನಿ ಹೆಚ್.ಟಿ. ಮತ್ತು ಎಲ್.ಟಿ. ಗ್ರಾಹಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ, ದೂರುಗಳಿದ್ದಲ್ಲಿ ಪರಿಹರಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ವಸತಿಯುತ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ.ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ /ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2025–26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡ ವ್ಯವಸ್ಥೆಯೊಂದಿಗೆ ನುರಿತ ಶಿಕ್ಷಕರಿಂದ ಶಿಕ್ಷಣ ಸೌಲಭ್ಯ ನೀಡಲಾಗುವುದು. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಥಿಯ STS ನಂಬರ್, ವಿದ್ಯಾರ್ಥಿಯ ಆಧಾರ್ ಕಾರ್ಡ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ವಿಶೇಷ ವರ್ಗವಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಲಗತ್ತಿಸಿ ಜನವರಿ 25ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಸಲ್ಲಿಸಬಹುದಾಗಿದೆ. ಪ್ರವೇಶಾತಿಗೆ ಫೆಬ್ರವರಿ 15ರಂದು ಪರೀಕ್ಷೆ ನಡೆಯಲಿದ್ದು,  ಸಫಾಯಿ ಕರ್ಮಚಾರಿ / ಪೌರಕಾರ್ಮಿಕರ ಮಕ್ಕಳಿಗೆ…

Read More

ತುಮಕೂರು:  ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ; ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜಟ್ಕರ್, ಅನುಷಾ ರಾಯ್ ಹಾಗೂ ದೀಪಿಕಾ ದಾಸ್‍ ಉತ್ಸವದ ಮೆರುಗನ್ನು ಹೆಚ್ಚಿಸಿದರು. ಕಲಾತಂಡಗಳ ಮೆರವಣಿಗೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ವಿವಿಧ ಕಲಾಪ್ರಕಾರಗಳನ್ನು ಪ್ರತಿನಿಧಿಸಿದರು. ವೀರಗಾಸೆ, ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಹೀಗೆ 20ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾತಂಡಗಳು ಭಾಗವಹಿಸಿದವು. ಮೆರವಣಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಆರಂಭವಾಗಿ ಶಿವಕುಮಾರ ಸ್ವಾಮೀಜಿ ವೃತದ ಮೂಲಕ ಸಾಗಿತು. ಚಿತ್ರನಟ ಅನಿರುದ್ಧ ಜಟ್ಕರ್ ಮಾತನಾಡಿ, ನಮ್ಮ ಚಿಂತನೆಗಳು ಯಾವಾಗಲೂ ಸಕಾರಾತ್ಮಕವಾಗಿರಬೇಕು. ವಿದ್ಯೆ ಎಂಬುದು ಶಕ್ತಿಯುತವಾದ ಆಯುಧ. ವಿದ್ಯೆಯನ್ನು ಸಕಾರಾತ್ಮಕವಾದ ಕಾರ್ಯಗಳಿಗೆ ಬಳಸಿಕೊಂಡರೆ ಸಮಾಜದಲ್ಲಿರುವ ಕೊಳಕನ್ನು ತೊಳೆಯಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗಬಾರದು. ಸಾಮಾಜಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದರು. ನಟಿ ಅನುಷಾ ರಾಯ್ ಮಾತನಾಡಿ, ಯಾರೂ ಕದಿಯಲು ಸಾಧ್ಯವಾಗದ ಎರಡು ವಿಷಯಗಳೆಂದರೆ ವಿದ್ಯೆ ಮತ್ತು ಕಲೆ. ಶಿಕ್ಷಣ ಬದುಕಿಗೆ…

Read More

ಕೋಲ್ಕತ್ತಾ: ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ನಾಳೆ ಪ್ರಕಟಗೊಳ್ಳಲಿದೆ. ನಗರ ಪೊಲೀಸ್‌‍ ನಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ಸಂಜಯ್‌ ರಾಯ್‌,  ಕಳೆದ ವರ್ಷ ಆಗಸ್ಟ್‌ 9 ರಂದು ಉತ್ತರ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿದಾರರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಆರೋಪದ ಮೇಲೆ ಬಂಧಿತನಾಗಿದ್ದ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸೀಲ್ದಾ ನ್ಯಾಯಾಲಯದ ಅನಿರ್ಬನ್‌ ದಾಸ್‌‍ ಅವರ ಮುಂದೆ ವಿಚಾರಣೆ ಪ್ರಾರಂಭವಾದ 57 ದಿನಗಳ ನಂತರ ನಾಳೆ ತೀರ್ಪು ನೀಡಲಾಗುವುದು. ಪ್ರಕರಣದ ತನಿಖೆ ನಡೆಸುತ್ತಿದ್ದ ಕೋಲ್ಕತ್ತಾ ಪೊಲೀಸರು ಆರಂಭದಲ್ಲಿ ಆಗಸ್ಟ್‌‍ 10 ರಂದು ರಾಯ್‌ ಅವರನ್ನು ಬಂಧಿಸಿದರು, ಆಸ್ಪತ್ರೆಯ ಸೆಮಿನಾರ್‌ ಕೊಠಡಿಯಿಂದ ವೈದ್ಯರ ದೇಹವನ್ನು ವಶಪಡಿಸಿಕೊಂಡ ಒಂದು ದಿನದ ನಂತರ ಕಲ್ಕತ್ತಾ ಹೈಕೋರ್ಟ್‌ ನಂತರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತು ಮತ್ತು ಸಂಸ್ಥೆಯು ಆರೋಪಿಗಳಿಗೆ ಮರಣದಂಡನೆಯನ್ನು ಕೋರಿದೆ. ನಮ್ಮತುಮಕೂರಿನ ಕ್ಷಣ…

Read More

ಬೆಳಗಾವಿ:  ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ, ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಅರಿವು ನಮಗೂ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ, ಎಲ್ಲೂ ಸಹ ನಾವು ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನೈಜ ಸ್ಥಿತಿ ಹೇಳಲು ಹೋದಾಗ ಅದು ಬೇರೆ ಇರುತ್ತದೆ. ಅದನ್ನೆ ಬಿಂಬಿಸಲು ಹೋದರೆ ನಮಗೆ ಮತ್ತು ಪಕ್ಷಕ್ಕೂ ಕಷ್ಟ ಆಗುತ್ತದೆ. ಅಧ್ಯಕ್ಷರ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧ್ಯಕ್ಷನಾಗಿ ಮುಂದುವರಿದಿದ್ದೆ ಎಂಬ ಡಾ.ಜಿ.ಪರಮೇಶ್ವರ್ ಹೇಳಿಕೆ‌ ಬಗ್ಗೆ, ಆ ರೀತಿ ನಾವು ಏನೂ ಹೇಳಿಯೇ ಇಲ್ಲ. ನಾವೇನಿದ್ದರೂ ಹೈಕಮಾಂಡ್ ಅಂತಾನೇ ಹೇಳಿದ್ದೇವೆ. ಆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಾವು ಏನೋ ಹೇಳುವುದರಿಂದ ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ಪಷ್ಟೀಕರಣ ಕೊಟ್ಟಿದ್ದೇವೆ ಎಂದು ಪುನರುಚ್ಚರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಳಗಾವಿ:   ಸತೀಶ್ ಜಾರಕಿಹೊಳಿಗೆ ನೋಟಿಸ್ ನೀಡಲಾಗಿದೆ ಎನ್ನುವುದು ವದಂತಿ, ಅವರಿಗೆ ನೋಟಿಸ್ ನೀಡಲು ಯಾವುದೇ ಕಾರಣಗಳಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ‌ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ, ಯಾವ ಸಚಿವರಿಗೂ ನೋಟಿಸ್ ನೀಡಲು ಕಾರಣವಿಲ್ಲ. ಇವೆಲ್ಲ ಕೇವಲ ವದಂತಿ ಎಂದು ಸಷ್ಪಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ದರೆ, ಅವರು ಇಲ್ಲಿ ಯಾಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸುವ ಮೂಲಕ ಅದಕ್ಕೂ ಸುರ್ಜೇವಾಲ ತೆರೆ ಎಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More