Author: admin

ಬೀದರ್​​: ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್​ನಲ್ಲಿ ಪತ್ತೆಯಾಗಿದ್ದಾರೆ. ಬೀದರ್​ ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್​ ಮೂಲಕ ಛತ್ತೀಸ್​ಗಢದ ರಾಯಪುರಕ್ಕೆ ಪರಾರಿಯಾಗಲು ಪ್ಲಾನ್ ಮಾಡಿದ್ದರು. ಖಾಸಗಿ ಬಸ್​ ಟ್ರಾವೆಲ್​ ನಲ್ಲಿ ಟಿಕೆಟ್​ ಬುಕ್ ಮಾಡಿದ್ದ ಆರೋಪಿಗಳ ಲಗೇಜ್​ ಅನ್ನು ಬಸ್​ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್ ​ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡು ಬಂದಿದ್ದು, ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ.  ಈ ವೇಳೆ ಅಲ್ಲೇ ಇದ್ದ ಕರ್ನಾಟಕ ಪೊಲೀಸರು ಗಮನಿಸಿದ್ದಾರೆ. ಪೊಲೀಸರನ್ನು ಕಂಡ ತಕ್ಷಣ ಎಚ್ಚೆತ್ತುಕೊಂಡ ದರೋಡೆಕೋರರು, ಟ್ರಾವೆಲ್​ ಏಜೆನ್ಸಿ ಮ್ಯಾನೇಜರ್​ ಹೊಟ್ಟೆಗೆ ಫೈರ್ ಮಾಡಿದ್ದಾರೆ. ಸ್ಥಳದಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ. ಗುಂಡಿನ ಶಬ್ದ ಕೇಳಿ ಜನರು ಓಡಲು ಆರಂಭಿಸಿದಾಗ ಜನರ ಗುಂಪಿನಲ್ಲಿ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ.  ಈ ವೇಳೆ ಹರಸಾಹಸಪಟ್ಟು ಒಬ್ಬ ದರೋರೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮೈಸೂರು : ಹರಕೆಗೆ ಬಿಟ್ಟ ಹೋರಿಯ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿಯ ಹಳ್ಳದಕೆರೆಯಲ್ಲಿ ಈ ಘಟನೆ ನಡೆದಿದ್ದು,  ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಕೆ ಹೋರಿಯ ಕೂಗು ಕೇಳಿ ಸ್ಥಳೀಯರು ಪಶುವೈದ್ಯರಿಗೆ ಮಾಹಿತಿ ನೀಡಿದಾಗ, ದುಷ್ಕರ್ಮಿಗಳು ಅದರ ಬಾಲವನ್ನು ಕತ್ತರಿಸಿ ಗಾಯಗೊಳಿಸಿರುವುದನ್ನು ಕಂಡುಬಂದಿದೆ. ಹೋರಿ ಅಪಾಯದಿಂದ ಪಾರಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ. ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್​ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ…

Read More

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣ ಇಂಡಸ್ಟ್ರಿಯನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ. ಚೂರಿ ಇರಿತದಿಂದಾಗಿ ಸೈಫ್ ಅಲಿಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯವಾಗಿದೆ. ಚಿಕಿತ್ಸೆ ಪಡೆಯುತ್ತಿರುವ ನಟ ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಆರೋಪಿ ಮೊದಲಿಗೆ ಸೈಫ್ ಎರಡನೇ ಪುತ್ರ ಜೆಹ್ ರೂಮಿನ ಒಳಗೆ ನುಗ್ಗಿದ್ದಾನೆ. ಮಗುವಿನ ಹತ್ತಿರ ಹೋಗುತ್ತಿದ್ದಂತೆ ರೂಮಿನ ನೆಲದ ಮೇಲೆ ಮಲಗಿದ್ದ ಕೆಲಸದಾಕೆ ಕೂಗಲು ಶುರು ಮಾಡಿದ್ದಾರೆ. ಈ ವೇಳೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಆರೋಪಿ, ಶಬ್ದ ಮಾಡದಂತೆ ಬೆದರಿಸಿದ್ದಾನೆ. ನಿನಗೇನು ಬೇಕೆಂದು ಕೇಳಿದಾಗ ರೂ.1 ಕೋಟಿ ಕೇಳಿದ್ದ. ಇದೇ ವೇಳೆ ಸೈಫ್ ಹಾಗೂ ಕರೀನಾ ಅವರು ಕೂಡ ಸ್ಥಳಕ್ಕೆ ಬಂದು ರಕ್ಷಣೆಗೆ ಧಾವಿಸಿದರು. ಈ ವೇಳೆ ಸೈಫ್ ಅವರ ಮೇಲೆ ಹಲ್ಲೆ ನಡೆಸಿದ. ಬಳಿಕ ಮನೆಯ ಇತರರು ಎಚ್ಚರಗೊಳ್ಳಲು ಆರಂಭವಾದಾಗ ಸ್ಥಳದಿಂದ ಪರಾರಿಯಾದ ಎಂದು ಕೆಲಸದಾಕೆ ಪೊಲೀಸರ…

Read More

ರಾಯಚೂರು: ರಾತ್ರಿ ವೇಳೆ ರಸ್ತೆಗಳಲ್ಲಿ ಸುತ್ತಾಡುವ ಬೀಡಾಡಿ ದನಗಳಿಂದ ವಾಹನ ಅಪಘಾತ ತಡೆಯುವ ಉದ್ದೇಶದಿಂದ, ದನಗಳ ಕುತ್ತಿಗೆಗೆ ಹೊಳೆಯುವ ರೇಡಿಯಂ ಬೆಲ್ಟ್‌ ಧಾರಣೆ ಮಾಡಲು ರಾಷ್ಟ್ರೀಯ ಗೋ ರಕ್ಷಾ ವಾಹಿನಿ ಮತ್ತು ಗೋ ಸೇವಾ ಸಂಘದ ತಂಡ ಮುಂದಾಗಿದೆ. ನಗರದಲ್ಲಿ ಸಂಚರಿಸುವ ಹಸು ಮತ್ತು ಕರುಗಳಿಗೆ ರೇಡಿಯಂ ಬೆಲ್ಟ್‌ ಅಳವಡಿಸುತ್ತಿದ್ದು, ರಾತ್ರಿ ವೇಳೆ ಅನೇಕ ಕಡೆಗಳಲ್ಲಿ ಗೋವುಗಳು ವಾಹನ ಅಪಘಾತ ಸಂಭವಿಸಿ ಶಾಶ್ವತ ಅಂಗವೈಕಲ್ಯ ಅಥವಾ ಮೃತಪಡುವುದನ್ನು ಮನಗೊಂಡು ಗೋವುಗಳಿಗೆ ಬೆಲ್ಟ್‌ ಅಳವಡಿಸುತ್ತಿರುವುದು ಗಮನ ಸೆಳೆದಿದೆ. ಸಂಕ್ರಾಂತಿಯ ಸುಗ್ಗಿ ಸಂದರ್ಭದಲ್ಲಿ ಬೆಲ್ಟ್‌ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ವಾಸವಿ ನಗರದಲ್ಲಿ ಗೋವುಗಳಿಗೆ ಬೆಲ್ಟ್‌ ಅಳವಡಿಸುವ ಕಾರ್ಯಕ್ಕೆ ಯುವಕರು ಮುಂದಾಗಿದ್ದಾರೆ. ಇವರಿಗೆ ರಾಷ್ಟ್ರೀಯ ಗೋರಕ್ಷಾ ವಾಹಿನಿ, ಜೈ ಕಲ್ಯಾಣ ಕರ್ನಾಟಕ ಜನ ಜಾಗೃತಿ ಸೇವಾ ಸಂಘದ ಸದಸ್ಯರು ಸಾಥ್‌ ನೀಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಳಗಾವಿ:  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಗೊಂದಲಗಳಿಗೆ  ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು. ವೋಟುತರುವವರನ್ನು ನೇಮಕ ಮಾಡಬೇಕು. ಇಲ್ಲವೇ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಅದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆ ಆರಂಭವಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಧ್ಯಕ್ಷರ ಬದಲಾವಣೆ ಮಾಡಬೇಕು ಎನ್ನುವುದಾದರೆ ಅವರು ಸಭೆಗೆ ಯಾಕೆ ಬರುತ್ತಿದ್ದರು? ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ತಿಳಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ…

Read More

ಧಾರವಾಡ: ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲಬು, ರೈತರ ತಲಾ ಆದಾಯವನ್ನೂ ಇನ್ನು ಎಂಟುಪಟ್ಟು ಹೆಚ್ಚಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಇದಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅನುವಾಗುವಂತೆ ಕೃಷಿಯಲ್ಲಿ ಸಾಂಪ್ರದಾಯಿಕತೆ ಉಳಿಸಿಕೊಂಡು ಆಧುನಿಕತೆ ಅಳವಡಿಸಿಕೊಳ್ಳಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಪರಾಷ್ಟ್ರಪತಿಗಳು ತಿಳಿಸಿದರು. ಕೃಷಿಗೆ ಭಾರತ ಸರಕಾರ ಮೊದಲಿನಿಂದಲೂ ಆದ್ಯತೆ ನೀಡಿದೆ. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ ಜೊತೆಗೆ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಜೈ ಅನುಸಂದಾನ ಸೇರಿಸಿ, ಮಹತ್ವಪೂರ್ಣಗೊಳಿಸಿದ್ದಾರೆ. ರೈತರ ಹೊಲಗಳು…

Read More

ಹುಬ್ಬಳ್ಳಿ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಶಾಲೆಗಳಲ್ಲಿ ಬಸವಣ್ಣನವರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಮಹಾನ ನಾಯಕರ ಕುರಿತಾಗಿ ಭಾಷಣ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮವಾಗಿ ಭಾಷಣ ಮಾಡುವ ಆರು ಜನ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಅಲ್ಲದೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ವಿದ್ಯಾರ್ಥಿಗಳ ತಂಡದಿಂದ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಅವರಿಗೂ ಸಹ ಉತ್ತಮ ವೇದಿಕೆಯನ್ನು ಕಲ್ಪಿಸಿದಂತಾಗುವುದು. ಮೂರು ಕಡೆಗಳಲ್ಲಿ ವೇದಿಕೆ ನಿರ್ಮಾಣ ಮಾಡಿ, ವಿವಿಧ ಕಾರ್ಯಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತಿಹಾಸದ ಘಟನೆಗಳನ್ನು ಮೆಲುಕು ಹಾಕುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನಪದ ಶೈಲಿಯ…

Read More

ತುಮಕೂರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗವೂ ಕೂಡ ನಾಲ್ಕನೇ ಅಂಗವಾಗಿ ಕಾರ್ಯ ನ್ಯಾಯ ಶಾಸನ ವಿಚಾರಗಳಲ್ಲಿ ಮಹತ್ತರವಾದ ಬದಲಾವಣೆ ತರುವಲ್ಲಿ ಬಹು ಮುಖ್ಯವಾಗಿರುವ ಪತ್ರಿಕಾರಂಗ ದೇಶದ ಡೆಮಾಕ್ರಸಿಯನ್ನು ಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಅವರು ತಿಳಿಸಿದರು. ಜನವರಿ 18 ಮತ್ತು 19 ರಂದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಘಟಕ ಇವರ ಆತಿಥ್ಯದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ವೇದಿಕೆ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸೇರಿದಂತೆ ಇತರೆ ಪೂರ್ವ ಸಿದ್ಧತಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಮ್ಮತುಮಕೂರಿನ ಜಿಲ್ಲಾಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರ ಮಾರ್ಗದರ್ಶನದಂತೆ ಶಿಕ್ಷಣ ಭೀಷ್ಮ ಡಾ.ಎಚ್‌.ಎಮ್‌.ಗಂಗಾಧರಯ್ಯ ನವರು ಕಟ್ಟಿ ಬೆಳೆಸಿದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ರಾಜ್ಯದ ಎಲ್ಲಾ ಪತ್ರಕರ್ತರು ಒಂದೆಡೆ ಸೇರಿ ಸಮ ಸಮಾಜದ ನಿರ್ಮಾಣಕ್ಕೆ ಪತ್ರಕರ್ತರು ನೀಡಿರುವ ಕೊಡುಗೆ ಎಂತಹದು ಎಂಬ ವಿಷಯವನ್ನು ಸಮಾಜಕ್ಕೆ…

Read More

ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿಜಪಾನಂದಜೀ ಮಹಾರಾಜ್  ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು. ನನ್ನ ದೇಶಕ್ಕೆ ನಾನು ಏನು ಮಾಡಬಲ್ಲೆ? ನನ್ನ ಸಂಸ್ಕೃತಿಗೆ ನನ್ನಕೊಡುಗೆ ಏನು? ಎಂದು ನೀವೇ ಪ್ರಶ್ನಿಸಿಕೊಳ್ಳಿ. ಮಂಗಳಕ್ಕೆ ಹೋದ ನಾವು ಮನದ ಅಂಗಳಕ್ಕೆ ಹೋಗುವುದಕ್ಕೆ ವಿಫಲ ಆಗುತ್ತಿದ್ದೇವೆ ಎಂದರು. ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು. ಶಿಕ್ಷಣ ತಜ್ಞರಾದ ಕೆ.ಆರ್.ಪದ್ಮಿನಿ ಮಾತನಾಡಿ , ಸ್ವಾಮಿ ವಿವೇಕಾನಂದರು…

Read More