Subscribe to Updates
Get the latest creative news from FooBar about art, design and business.
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
- ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
Author: admin
ತುಮಕೂರು: ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಮಾನಿಕೆರೆ ಮುಖ್ಯರಸ್ತೆಯಲ್ಲಿರುವ ಕನ್ನಡ ಭವನದಲ್ಲಿ “ಮೇದ ಜನಾಂಗದ ತುಮಕೂರು ಜಿಲ್ಲಾ ಸಮಾವೇಶ, ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ವಧು–ವರರ ಸಮಾವೇಶ” ವನ್ನು ಏರ್ಪಡಿಸಲಾಗಿದೆ. ಚಿತ್ರದುರ್ಗ ಸೀಬಾರ ಮೇದರ ಗುರುಪೀಠ ಶ್ರೀ ಕೇತೇಶ್ವರ ಮಹಾಮಠದ ಶ್ರೀ ಇಮ್ಮಡಿ ಬಸವ ಮೇದರ ಕೇತೇಶ್ವರ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಮಠದ ಅಧ್ಯಕ್ಷರು ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಅಧೀಕ್ಷಕ ಅಭಿಯಂತರ ಸಿ.ಪಿ.ಪಾಟೀಲ್ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ತುಮಕೂರು ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಜಿ. ಅಧ್ಯಕ್ಷತೆ ವಹಿಸುವರು. ಸಚಿವರಾದ ಕೆ.ಎನ್.ರಾಜಣ್ಣ, ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್. ಶ್ರೀನಿವಾಸ್, ಡಾ.ರಂಗನಾಥ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ…
ತಿಪಟೂರು: ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಎರಡು ವರ್ಷದ ಹೆಣ್ಣು ಮಗು ಕಾರ್ಖಾನೆಯ ಸಮೀಪದ ಗುಂಡಿಗೆ ಬಿದ್ದು ಮೃತಪಟ್ಟಿದೆ. ಬಿಹಾರ ಮೂಲದ ತಂದೆ ಹರೀಂದ್ರ ಕುಮಾರ್ ಮತ್ತು ತಾಯಿ ರೀನಾದೇವಿ ದಂಪತಿ ಪುತ್ರಿ ಕುಸುಮಕುಮಾರಿ (2) ಸಾವನ್ನಪ್ಪಿರುವ ದುರ್ದೈವಿ. ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದಾಗ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಇರಬೇಕಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು, ಅವರು ಹೇಳಿರುವುದರಲ್ಲಿ ತಪ್ಪು ಹುಡುಕಬಾರದು. ಸತೀಶ್ ಜಾರಕಿಹೋಳಿ ಅಭಿಪ್ರಾಯಕ್ಕೆ ನನ್ನ ಸಂಪೂರ್ಣ ಸಹಮತ ಇದೆ ಎಂದು ರಾಜಣ್ಣ ಹೇಳಿದರು. ಪ್ರದೇಶ್ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆಂದು ಪಕ್ಷದ ಹೈಕಮಾಂಡ್ ಹೇಳಿದರೆ ಒಪ್ಪುತ್ತೇವೆ ಎಂದು ಕೆ.ಎನ್.ರಾಜಣ್ಣ ಹೇಳಿದರು. ಯಾರಿಗಾದರೂ ಅಧ್ಯಕ್ಷ ಸ್ಥಾನ ಕೊಡಲಿ ನಮ ಅಭ್ಯಂತರವಿಲ್ಲ. ಪೂರ್ಣ ಪ್ರಮಾಣದ ಅಧ್ಯಕ್ಷರಾದರೆ ಸರಿ ಆಗುತ್ತದೆ. ಲೋಕಸಭಾ ಚುನಾವಣೆ ನಡೆದು 6 ತಿಂಗಳು ಆಗಿದೆ. ಹೈಕಮಾಂಡ್ ನಾಯಕರೇ ಗೊಂದಲ ಮಾಡಿದ್ದು, ಅವರೇ ನಿವಾರಣೆ ಮಾಡಬೇಕು ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಮನೆಯ ಕಿಟಕಿಯಲ್ಲಿಟ್ಟಿದ್ದ ಕೀ ಮೂಲಕ ಬಾಗಿಲು ತೆಗೆದು ಹಣ—ಆಭರಣ ಕಳವು ಮಾಡಿಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 8 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, ಹಣ ವಶಪಡಿಸಿಕೊಳ್ಳಲಾಗಿದೆ. ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿ ಬ್ಯಾಟರಾಯನದೊಡ್ಡಿ ಗ್ರಾಮದ ಕಾರ್ತಿಕ್ ಕುಮಾರ್ ಅಲಿಯಾಸ್ ಟ್ಯಾಟು ಕಾರ್ತಿಕ್(25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವೃಷಭಾವತಿ ನಗರದ 12ನೇ ಮುಖ್ಯರಸ್ತೆ ನಿವಾಸಿ ಪ್ರೇಮನಾಥ ಎಂಬುವರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಹೋಗಲು ಆಟೋ ಬುಕ್ ಮಾಡಿದ್ದು, ಮನೆ ಬಳಿ ಬಂದ ಆಟೋದಲ್ಲಿ ಡ್ರಾಪ್ ಪಡೆಯುವ ವೇಳೆ ಮನೆಗೆ ಬೀಗ ಹಾಕಿ ಕೀಯನ್ನು ಕಿಟಕಿ ಬಳಿ ಇಡುವುದನ್ನು ಆಟೋ ಚಾಲಕ ಗಮನಿಸಿದ್ದಾನೆ. ನಂತರ ಇವರನ್ನು ಸ್ಯಾಟ್ಲೈಟ್ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದಾನೆ. ಬಳಿಕ ವಾಪಸ್ ಇವರ ಮನೆ ಬಳಿ ಬಂದು ಕಿಟಕಿಯಲ್ಲಿದ್ದ ಕೀ ಬಳಸಿ ಮನೆ ಬೀಗ ತೆಗೆದು ಬೀರುವಿನಲ್ಲಿದ್ದ 138 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿಯ ಸಾಮಾಗ್ರಿ…
ಬೆಂಗಳೂರು: ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೆಪಿಸಿಸಿಯಿಂದ ನೋಟೀಸ್ ನೀಡಿದಾಕ್ಷಣ ದೊಡ್ಡ ಅನಾಹುತವೇನೂ ಆಗುವುದಿಲ್ಲ, ಪಕ್ಷದ ಅಧ್ಯಕ್ಷರಿಗೆ ಸ್ಪಷ್ಟ ಉತ್ತರ ನೀಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಹೇಳಿದ್ದನ್ನು ಬೇರೆ ರೀತಿ ಬಿಂಬಿಸಿ ಪಕ್ಷದ ಅಧ್ಯಕ್ಷರ ಮುಂದೆ ಪ್ರಶ್ನೆ ಕೇಳಲಾಗುತ್ತದೆ. ಅದಕ್ಕೆ ಅವರು ನಾಲ್ಕು ಮಾತನಾಡುತ್ತಾರೆ. ತಿರುಗಿ ಅದೇ ರೀತಿಯ ಪ್ರಶ್ನೆಗಳನ್ನು ನನ್ನ ಬಳಿ ಕೇಳಲಾಗುತ್ತದೆ. ಈ ರೀತಿ ಪರಸ್ಪರ ಚರ್ಚೆಗಳು ವೈಯಕ್ತಿಕವಾಗಿ ಹಾಗೂ ಪಕ್ಷಕ್ಕೆ ಹಾನಿಯಾಗುತ್ತದೆ ಎಂದರು. ಏನು ಬಹಳ ದೊಡ್ಡ ನೋಟಿಸ್ ಕೊಟ್ಟರೆ, ಅದರಿಂದ ಅನಾಹುತವೇನೂ ಆಗುವುದಿಲ್ಲ, ನೋಟಿಸ್ ಕೊಡುವ ಅಧಿಕಾರ ಅವರಿಗಿದೆ, ನಾನು ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ, ನಾನು ಅರ್ಧಗಂಟೆ ಮಾಧ್ಯಮದವರ ಜೊತೆ ಮಾತನಾಡಿರುವ ವಿಡಿಯೋ ಸಾಕ್ಷ್ಯ ಕೂಡ ನನ್ನ ಬಳಿ ಇದೆ. ಅದನ್ನೇ ಆಧಾರವಾಗಿಟ್ಟುಕೊಂಡು ಉತ್ತರ ನೀಡುತ್ತೇನೆ ಎಂದರು. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೆಂದು ಹೇಳಿಯೇ…
ಮಧುಗಿರಿ: ಪಟ್ಟಣದಲ್ಲಿ ಸಂತೆ ದಿನವಾದ ಬುಧವಾರದಂದು ಬೆಳಿಗ್ಗೆ ಪೊಲೀಸರ ದಿಢೀರ್ ಪಥಸಂಚಲನ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿತು. ಯಾವುದೇ ಚುನಾವಣೆ ಇಲ್ಲ, ಯಾವುದೇ ಗಲಭೆಗಳು ಆಗಿಲ್ಲ, ಕೋಮು ಸೌಹಾರ್ತೆಗೆ ಧಕ್ಕೆ ಆಗುವಂತ ಯಾವುದೇ ಪ್ರಕರಣಗಳ ನಡೆಯದಿದ್ದರೂ ಕೂಡ ಡಿವೈಎಸ್ಪಿ ನೇತೃತ್ವದಲ್ಲಿ ನಡೆದ ಪಥ ಸಂಚಲನಕ್ಕೆ ಕಾರಣ. ಇತ್ತೀಚೆಗೆ ಡಿವೈಎಸ್ಪಿ ಕಚೇರಿಯಲ್ಲಿ ಡಿವೈಎಸ್ಪಿ ನಡೆಸಿದ ರಾಸಲೀಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದನ್ನು ಸಾರ್ವಜನಿಕರಲ್ಲಿ ಪೊಲೀಸರ ಮೇಲೆ ಉಂಟಾದ ಕೆಟ್ಟ ಅಭಿಪ್ರಾಯ ಹೋಗಲಾಡಿಸುವ ಸಲುವಾಗಿ ಮತ್ತು ಕಾನೂನು ಅರಿವು ಜಾಗೃತ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಿವೈಎಸ್ಪಿ ಮಂಜುನಾಥ್, ಪಿಎಸ್ ಐ ಗಳಾದಂತಹ ವಿಜಯಕುಮಾರ್, ಮುತ್ತುರಾಜ್, ಅಮ್ಮಣ್ಣಗಿ ಮತ್ತು ಮಧುಗಿರಿ ಪೊಲೀಸರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮಧುಗಿರಿಯ ಡಿವೈಎಸ್ ಪಿ ಕಚೇರಿಯಿಂದ ಹೊರಟ ಜಾತ ದಂಡೋರ ಬಾಗಿಲು ರಸ್ತೆ, ದೊಡ್ಡಪೇಟೆ, ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ ,ಡೂಂಲೈಟ್ ವೃತ್ತ,, ಹೈ ಸ್ಕೂಲ್ ರಸ್ತೆ, ತಾಲೂಕು ಆಫೀಸ್ ರಸ್ತೆ, ನೃಪತುಂಗ ವೃತ್ತ, ಟಿವಿವಿ…
ಬೀದರ್: ಇಂದು ಬೀದರ್ ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ದರೋಡೆಕೋರರು ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ. ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ. ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೇಶದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರನ್ನು ಚದುರಿಸಿದರು. ಸಂಸ್ಥೆಯ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ…
ಬೀದರ್: ಅರಣ್ಯ ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ರವರ 62ನೇ ಹುಟ್ಟು ಹಬ್ಬದ ಹಿನ್ನೆಲೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಠಾಣಾ ಕುಶನೂರನಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಭದ್ರ್ಯಯ ಸ್ವಾಮಿ ಕಾಂಗ್ರೆಸ್ ಯುವ ಮುಖಂಡರು, ಸಂಗಮೇಶ್ ಪಾಟೀಲ್ ಪಿಕೆಪಿಎಸ್ ಉಪಾಧ್ಯಕ್ಷರು ನೀಡೋದ, ಎಂ.ಡಿ.ಸಿಕಂದರ್ ಎಸ್ ಡಿಎಂಸಿ ಸದಸ್ಯರು, ಖಮರ ಮುಲ್ಲಾ ಕಾಂಗ್ರೆಸ್ ಯುವ ಮುಖಂಡರೂ ಠಾಣಾ ಕುಶನೂರ , ಪ್ರಸಾದ್ ಮಾಳ್ಳಗೆ ಅಧ್ಯಕ್ಷರು ಗ್ಲೋರಿ ಸ್ಟಾರ್ ಯೂತ್ ಕ್ಲಬ್ ಹಾಗೂ ಕಾಂಗ್ರೆಸ್ ಯುವ ಮುಖಂಡರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ನಡೆದ ದಾಳಿ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ ವಿರುದ್ಧ ಈ ಘಟನೆಯನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸಿದೆ. ‘ಎಕ್ಸ್’ ಅಕೌಂಟ್ ನಲ್ಲಿ ಟ್ವೀಟ್ ಮಾಡಿರುವ ಶಿವಸೇನೆ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಸೆಲೆಬ್ರೆಟಿಗಳು ಸುರಕ್ಷತೆಯ ಕೊರತೆ ಎದುರಿಸುತ್ತಿದ್ದಾರೆ, ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ. ಮುಂಬೈನಲ್ಲಿ ಮತ್ತೋರ್ವ ಸೆಲೆಬ್ರಿಟಿ ಮೇಲೆ ಹಲ್ಲೆ ನಡೆದಿದೆ. ಈ ದಾಳಿ ಮುಂಬೈ ಪೊಲೀಸರು ಮತ್ತು ಗೃಹ ಸಚಿವರ ಕಾರ್ಯವೈಖರಿ ಮೇಲೆ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ ಎಂದು ಟೀಕಿಸಿದ್ದಾರೆ. ಬಾಬಾ ಸಿದ್ದಿಕಿ ಹತ್ಯೆ, ನಟ ಸಲ್ಮಾನ್ ಖಾನ್ ಗೆ ಬರುತ್ತಿರುವ ಕೊಲೆ ಬೆದರಿಕೆಗಳು ಮತ್ತು ಈಗ ಸೈಫ್ ಅಲಿ ಖಾನ್ ಮೇಲಿನ ದಾಳಿಯಿಂದಾಗಿ, ದೇಶ ವಾಸಿಗಳಲ್ಲಿ ಮುಂಬೈ ನಗರ ಸುರಕ್ಷಿತವಲ್ಲ ಎಂಬ ಭಾವನೆ ಮೂಡುವಂತಾಗಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕು ಎಂದು ಬುಧವಾರ ಆಗ್ರಹಿಸಿದ್ದ ಸತೀಶ್ ಜಾರಕಿಹೊಳಿ ಇದೀಗ ಹೈಕಮಾಂಡ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ಹೊಡೆದಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿ.ಕೆ. ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದಿದ್ದಾರೆ. ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx