Subscribe to Updates
Get the latest creative news from FooBar about art, design and business.
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
- ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
Author: admin
ಬೆಂಗಳೂರು: ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಹಿರಿಯ ವಿಜ್ಞಾನಿ ಡಾ.ನಾರಾಯಣನ್ ಅವರು ಇಸ್ರೋದ ಲಿಕ್ವಿಡ್ ಪ್ರೊಪಲ್ಶನ್ ಸಿಸ್ಟಮ್ಸ್ ಸೆಂಟರ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ನಾರಾಯಣನ್ ಅವರು ಸ್ಪೇಸ್ ಕ್ರಾಫ್ಟ್ ಮತ್ತು ಲಾಂಚ್ ವೆಹಿಕಲ್ಸ್ ನ ಪ್ರೊಪಲ್ಶನ್ ಸಿಸ್ಟಮ್ಸ್ ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಘಟನೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು, ಕ್ಯಾಂಟರ್ ವೊಂದು ಕಾರಿಗೆ ಡಿಕ್ಕಿ ಹೊಡೆದಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಹೆಬ್ಬಾಳ್ಕರ್, ಅವರ ಸಹೋದರ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಗನ್ಮ್ಯಾನ್ ಮತ್ತು ಚಾಲಕನಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ. ಅಪಘಾತ ಸಂಭವಿಸಿದೆ. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂದಿದೆ. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ,…
ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾದ ಘಟನೆ ನಡೆದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿರುವ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 2.30ರ ಸುಮಾರಿಗೆ ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿ, ಮನೆಯವರು ಎಚ್ಚರಗೊಂಡಿರುವುದು ತಿಳಿದು ಪರಾರಿಯಾಗಲು ಯತ್ನಿಸಿದ್ದಾನೆ. ತಡೆಯಲು ಯತ್ನಿಸಿದ ವೇಳೆ ಚೂರಿಯಿಂದ ಇರಿಯಲಾಗಿದೆ. ಹಲ್ಲೆಗೊಳಗಾಗಿದ್ದ ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ಚಿಕಿತ್ಸೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಜಾಮೀಯಾ ಮಸೀದಿ ಮತ್ತು ವಕ್ಫ್ ಆಸ್ತಿಯನ್ನು ಗ್ರಾಮದ ಚಾಂದ್ ಬಾಷಾ ಎನ್ನುವರು ತನ್ನ ಹೆಸರಿಗೆ ಖಾತೆ ಮಾಡಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ, ವೈ.ಎನ್.ಹೊಸಕೋಟೆ ಗ್ರಾಮದ ಜಾಮೀಯಾ ಮಸೀದಿಯ ಪದಾಧಿಕಾರಿಗಳು ಬುಧವಾರ ಪಾವಗಡ ಪಟ್ಣಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ವೇಳೆ ಜಾಮೀಯಾ ಮಸೀದಿಯ ಮುತುವಲ್ಲಿಯಾದ ಸಾಧಿಕ್ ಸಾಭ್ ಮಾತನಾಡಿ, ವೈ.ಎನ್.ಹೊಸಕೋಟೆ ಗ್ರಾಮದ ಸರ್ವೆ ನಂ 234 ರಲ್ಲಿ 17–15 ಗುಂಟೆ ಜಮೀನಿದ್ದು, ಈ ಜಮೀನು ಸುಮಾರು 300 ವರ್ಷಗಳ ಹಳೆಯ ಕಾಲದ್ದಾಗಿದ್ದು, ಮುಸಲ್ಮಾನ್ ಬಾಂಧವರು ಮರಣ ಹೊಂದಿದರೆ ಶವ ಸಂಸ್ಕಾರ ಮಾಡುತ್ತಿದ್ದು, ಈ ಸ್ಥಳ ಬಿಟ್ಟರೆ ನಮ್ಮ ಊರಿಗೂ ಮತ್ತು ಸುತ್ತಮುತ್ತಲಿನ 7 ಊರು ಗಳಿಗೂ ಯಾವುದೆ ಖಬರ್ಸ್ಥಾನ್ ಇರುವುದಿಲ್ಲಾ, ಆದರೆ ಚಾಂದ್ ಬಾಷಾ ಎನ್ನುವರು ಈ ಜಮೀನು ತನ್ನದೆ ಎಂದು ಪಾವಗಡ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಈ ಮೊಕದ್ದಮೆಯನ್ನು ನ್ಯಾಯಾಲಯ ವಜಾ ಮಾಡಿ, ಈ ಸ್ಥಳ ಜಾಮೀಯಾ ಮಸೀದಿಗೆ ಸೇರಿದೆ ಎಂದು ಆದೇಶ ನೀಡಿದೆ,…
ತುಮಕೂರು: ಕಲ್ಪತರು ನಗರಿಯಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ತುಮಕೂರು ಜಿಲ್ಲಾಘಟಕ ಆತಿಥ್ಯ ವಹಿಸಿಕೊಂಡು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಮಹಿಳಾ ಪಡೆಯು ಕೂಡ ಯಶಸ್ವಿಗೊಳಿಸಲು ಸಣ್ಣದ್ಧವಾಗಿದೆ. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮೂಲಕ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮುಂದಾಗಿದೆ. ನಗರದ ಪತ್ರಿಕಾ ಭವನದಲ್ಲಿ ಈ ಕುರಿತಾಗಿ ಮಹಿಳಾ ಸಮಿತಿಯಿಂದ ಹಿಂದೂ ಸಭೆ ನಡೆಸಲಾಯಿತು. ಮಹಿಳಾ ಸಮಿತಿಯ ಗೌರವ ಅಧ್ಯಕ್ಷರಾದ ಕಮಲ ಗಂಗನಮಯ್ಯ ಬಾಹಾರಮಾಕುಮಾರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾಕ್ಟರ್ ಲೀಲಾವತಿಯವರು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಸಾಧನೆಯನ್ನು ಮಾಡಿರುವುದು ಎಲ್ಲರಿಗೂ ತಿಳಿದ ವಿಚಾರ ಅದೇ ರೀತಿಯಾಗಿ ಪತ್ರಿಕಾರಂಗದಲ್ಲೂ ಮಹಿಳೆ ತನ್ನಚಾಪನ್ನ ಮೂಡಿಸಿದ್ದು ತನ್ನದೇ ಆದ ಬರಹ ವಿಚಾರವಂತಿಕೆಯನ್ನು ಮೈಗೂಡಿಸಿಕೊಂಡು ಪತ್ರಿಕಾರಂಗದಲ್ಲೂ ಬೆಳೆಯುತ್ತಿರುವುದು ಶ್ಲಾಘನೀಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಿಳೆಯರಿಗೂ 39ನೇ ಸಮ್ಮೇಳನದಲ್ಲಿ…
ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ.ಬಿ.ಪಾಟೀಲ
ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ–ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್–ಕಾನ್ ಸಂಸ್ಥೆಯ ಸಮೀಪದಲ್ಲೇ ಇದು…
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 16ರ ತನಕ ಮೋಡದ ವಾತಾವರಣ ಇರಲಿದ್ದು, 17ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಮಲೆನಾಡು : ಕೊಡಗು ಒಂದೆರಡು ಕಡೆ, ಹಾಸನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ. ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 17ರ ತನಕ…
ತುಮಕೂರು: ಯುವಕರು ತರಗತಿಗಳಲ್ಲಿ ಹಾಗೂ ಬಿಡುವಿನ ವೇಳೆಯಲ್ಲೆಲ್ಲ ಮೊಬೈಲ್ ಗಳನ್ನು ಬಳಸುತ್ತಾರೆ. ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಕುರುಡು ಮತ್ತು ಕಿವುಡುತನ ಚಿಕ್ಕ ವಯಸ್ಸಿನಲ್ಲಿಯೇ ಕಾಡುತ್ತದೆ ಎಂದು ಡಫ್ ಚಿಲ್ಡ್ರನ್ ಫೌಂಡೇಶನ್ ನ ಕಾರ್ಯಕ್ರಮ ವ್ಯವಸ್ಥಾಪಕವೀರೇಶ್ ವೈ.ಎಸ್. ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿಯುವ ರೆಡ್ ಕ್ರಾಸ್ ಮತ್ತುರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಉಚಿತ ಕಣ್ಣು ಮತ್ತು ಕಿವಿ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಎಪ್ಪತ್ತು, ಎಂಬತ್ತು ವಯಸ್ಸಿನವರಿಗೆ ಕಾಡುತ್ತಿದ್ದ ಕಿವುಡುತನ ಮತ್ತುಅಂಧತ್ವಇಂದು10–15ನೇ ವಯಸ್ಸಿನ ಮಕ್ಕಳಲ್ಲಿ ಕಾಡುತ್ತಿದೆ. ಇದಕ್ಕೆಕಾರಣ ಹೆಚ್ಚಿನ ಶಬ್ದಮಾಲಿನ್ಯ ಮತ್ತು ಧ್ವನಿ ಉಪಕರಣಗಳ ಅತಿಯಾದ ಬಳಕೆ. ನವಜಾತ ಶಿಶುಗಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ ಎಂದರು. ಮಕ್ಕಳಿಗೆ ಐದು ವರ್ಷದ ಒಳಗೆ ಕಿವಿ ಕೇಳದಿದ್ದರೆ ಅವರು ಮಾತನಾಡುವುದನ್ನು ಕಲಿಯುವುದಿಲ್ಲ. ಹಾಗಾಗಿ ಮಕ್ಕಳ ಶ್ರವಣ ನ್ಯೂನತೆಯನ್ನು ಸೂಕ್ತ ಸಂದರ್ಭದಲ್ಲಿ ವೈದ್ಯರಿಗೆ ತೋರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಪಂಚೇಂದ್ರಿಯಗಳಲ್ಲಿ…
ತುಮಕೂರು: ಕಲ್ಪತರು ನಗರಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ರಾಜ್ಯ ಮಟ್ಟದ 39ನೇ ಸಮ್ಮೇಳನ ಗರಿಗೆದರಿದ್ದು, ತುಮಕೂರು ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಜನವರಿ 18 ಮತ್ತು 19ರಂದು ನಗರದಎಸ್ಎಸ್ ಐ ಟಿ ಕಾಲೇಜು ಕ್ಯಾಂಪಸ್ ಆವರಣದಲ್ಲಿ ನಡೆಯಲಿದ್ದು, ಹತ್ತು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿರುವ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸುದ್ದಿ ಮನೆಯಲ್ಲಿ ಕೆಲಸ ಮಾಡುವ ವಿವಿಧ ಪತ್ರಿಕಾ ಚೇತನಗಳಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಈ ಪ್ರಶಸ್ತಿಗಳನ್ನ ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ಅಭಿನಂದನೆ ಸಲ್ಲಿಸಿದೆ. ಜಿಲ್ಲಾಧ್ಯಕ್ಷ ಚಿನಿ. ಪುರುಷೋತ್ತಮ್ ಅವರು ಮಾತನಾಡಿ, ತುಮಕೂರು ಜಿಲ್ಲೆ ಸಾಂಸ್ಕೃತಿಕ ಶೈಕ್ಷಣಿಕ ಕಲೆ ಸಾಹಿತ್ಯ ಸೇರಿದಂತೆ ಹಲವು ರಂಗಗಳಲ್ಲಿ ತನ್ನದೇ ಆದಛಾಪು ಮೂಡಿಸಿದೆ, ಅದೇ ರೀತಿಯಾಗಿ ಪತ್ರಿಕಾರಂಗ ಮತ್ತು ಪತ್ರಿಕೋದ್ಯಮದ ಹುಟ್ಟಿಗೂ ಕಾರಣವಾಗಿದ್ದು ಡಿ.ವಿ.ಗುಂಡಪ್ಪರಂತಹ ಮಹಾನ್ ಚೇತನಗಳು ಇಲ್ಲಿ ಬದುಕಿ…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 18 ಮತ್ತು 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜನವರಿ 18ರಂದು ನಿಟ್ಟೂರು, ಗುಬ್ಬಿ, ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜಿ.ಟೆಂಪಲ್, ಉಂಗ್ರಾ, ಸೋಮಲಾಪುರ ಹಾಗೂ ಜನವರಿ 19ರಂದು ಅಂತರಸನಹಳ್ಳಿ, ಟಿ.ಎಂ.ಟಿ.ಪಿ, ವಸಂತನರಸಾಪುರ, ತೋವಿನಕೆರೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ/ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx