Author: admin

ತುಮಕೂರು: ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಿಲ್ಲೆಯ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಠ ಸ್ಪಟಿಕಪುರಿ ಮಹಾ ಸಂಸ್ಥಾನದಲ್ಲಿ ಜನವರಿ 20ರಂದು ಬೆಳಿಗ್ಗೆ 9 ಗಂಟೆಗೆ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ವಾನ ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು, ಆಸಕ್ತ ಶ್ವಾನಪಾಲಕರು ಜನವರಿ 18ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ಮೊ.ಸಂ. 9448769650/ 8494830759/ 968678797/ 7559912315/ 9880561094, ತುರುವೇಕೆರೆ-9945533787, ಕೊರಟಗೆರೆ-9964677451, ಚಿಕ್ಕನಾಯಕನಹಳ್ಳಿ-9945510509, ಶಿರಾ-9880313812, ಮಧುಗಿರಿ-9535966048, ಪಾವಗಡ-9742876225, ಗುಬ್ಬಿ-9449173655, ತಿಪಟೂರು-9448431987ನ್ನು ಸಂಪರ್ಕಿಸಬೇಕೆAದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ವಾನ ಪ್ರದರ್ಶನದ ಪ್ರಯುಕ್ತ ಸಾಕು ನಾಯಿಗಳ ಆರೋಗ್ಯ ರಕ್ಷಣೆ, ಸಾಕಾಣಿಕೆ ಬಗ್ಗೆ ಪ್ರಾಣಿ ತಜ್ಞರಿಂದ ವಿಚಾರ ವಿನಿಮಯವನ್ನು ನಡೆಸಲಾಗುವುದು. ಈ ಪ್ರದರ್ಶನದಲ್ಲಿ 25ಕ್ಕೂ ಅಧಿಕ ವಿವಿಧ ತಳಿಗಳ ಶ್ವಾನಗಳು ರಾಜ್ಯದ ವಿವಿಧೆಡೆಯಿಂದ ಭಾಗವಹಿಸಲಿವೆ. ಪ್ರದರ್ಶನಕ್ಕೆ ಸಾಕು ನಾಯಿಗಳನ್ನು ಕರೆತರುವವರು ಮುಂಜಾಗ್ರತೆಯಾಗಿ ತಮ್ಮ ಶ್ವಾನಗಳಿಗೆ ಎಲ್ಲಾ ರೋಗಗಳ ವಿರುದ್ಧ ಲಸಿಕೆ ಹಾಕಿಸಿರಬೇಕು.…

Read More

ತುಮಕೂರು:  ಜಿಲ್ಲಾ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26ರಿಂದ 28ರವರೆಗೆ 3 ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ತುಮಕೂರು ನಗರದ ಹವ್ಯಾಸಿ ನಾಗರಿಕರು ತಾವು ಬೆಳೆದಿರುವ ಆಕರ್ಷಕ ಆರ್ಕಿಡ್, ಬೋನ್ಸಾಯ್ ಗಿಡ, ಕ್ಯಾಕ್ಟಸ್ ಮತ್ತು ಸಕ್ಯೂಲೆಂಟ್ಸ್ ಗಿಡಗಳನ್ನು ಪ್ರತ್ಯೇಕವಾಗಿ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ. ಗಿಡಗಳ ಸುರಕ್ಷತೆ ತೋಟಗಾರಿಕೆ ಇಲಾಖೆಯ ಹೊಣೆಯಾಗಿದ್ದು, ಆಸಕ್ತಿಯುಳ್ಳವರು ಜನವರಿ 23ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9741928966ನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಲಿದ್ದು, ನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ವಿಶ್ಲೇಷಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು, ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ನ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದರು. ವರದಿಯ ಮುಚ್ಚಿದ ಲಕೋಟೆಯನ್ನು ಸಂಪುಟದ ಮುಂದೆ ತೆರೆಯಲು ನಿರ್ಧರಿಸಲಾಗಿದೆ, ಇಲ್ಲದಿದ್ದರೆ ಅದು ಮಾಹಿತಿ ಸೋರಿಕೆಗೆ ಕಾರಣವಾಗಬಹುದು ಎಂದಿದ್ದಾರೆ. ಸಭೆಯಲ್ಲಿ ಇದರ ಬಗ್ಗೆ ಚರ್ಚೆ ನಡೆಯುತ್ತದೆಯೋ ಇಲ್ಲವೋ, ನಾನು ಈಗ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ, ಒಮ್ಮೆ ಮುಚ್ಚಿದ ಲಕೋಟೆ ತೆರೆದ ನಂತರ ಕನಿಷ್ಠ ಮಾಹಿತಿ ನಮಗೆ ತಿಳಿಯುತ್ತದೆ…

Read More

ಬೆಂಗಳೂರು: ಶೀಘ್ರವೇ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಬೇಡಿಕೆಯಿಟ್ಟಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ ಎಂದರು. ಸದ್ಯ ಡಿ.ಕೆ.ಶಿವಕಮಾರ್ ಅವರು ಅಧ್ಯಕ್ಷರಾಗಿದ್ದು, ಇವರನ್ನೇ ಮುಂದುವರಿಸುವುದಾದರೆ ಅದನ್ನು ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದ ಸ್ಥಿತಿಯಲ್ಲಿರುವ ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸಿವಂತೆ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ. ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಿಂದ ಮೇಗಳಪಾಳ್ಯ ಲಂಬಾಣಿಹಟ್ಟಿ ಬಲ್ಲೇನಹಳ್ಳಿ ತಿಪ್ಪಯ್ಯನದುರ್ಗ ಕ್ಕೆ ಹೋಗುವ ಮುಖ್ಯ ರಸ್ತೆಯ ದುಸ್ಥಿತಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ರಸ್ತೆ ಬಹಳ ಕುಣಿಗಳಿಂದ ಆವರಿಸಿದ್ದು, ಸವಾರರಿಗೆ ಆತಂಕವನ್ನು ಉಂಟು ಮಾಡುತ್ತಿದೆ. ಹಲವಾರು ಜನ ಅಪಘಾತಗಳಿಗೆ ಗುರಿಯಾಗುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಮಾತ್ರ ಬರುವ ಜನಪ್ರತಿನಿಧಿಗಳು ತದನಂತರ ಈ ಕಡೆ ತಿರುಗುತ್ತಿಲ್ಲ. ಇದರಿಂದ ಗ್ರಾಮೀಣ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಂತ್ರಸ್ತ ಕುಟುಂಬಕ್ಕೆ ಮೂರು ಹಸುಗಳನ್ನು ನೀಡಿದ್ದಾರೆ. ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಟ್ಟ ಮಾತಿನಂತೆಯೇ ಜಮೀರ್ ಖಾನ್ ನಡೆದುಕೊಂಡಿದ್ದು, 3 ಲಕ್ಷ ಮೌಲ್ಯದ ಮೂರು ಹಸುಗಳನ್ನು ಸಂತ್ರಸ್ತರ ಕುಟುಂಬಕ್ಕೆ ನೀಡಿದ್ದಾರೆ. ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ಇಂದು ಹಸ್ತಾಂತರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ತುಮಕೂರು ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಪರಮೇಶ್ವರ ಅವರ ಮನೆಯ ಸುತ್ತಲೂ ಪೊಲೀಸರು ಬ್ಯಾರಿಕೇಡ್ ನಿರ್ಮಿಸಿ ಬಿಜೆಪಿ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತಲೆಮರೆಸಿಕೊಂಡು ಬಂದಿದ್ದ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಅವರ ಕೆಲ ಕಾರ್ಯಕರ್ತರೊಂದಿಗೆ ಪ್ರಯತ್ನಿಸಿದರು. ತಲೆಗೆ ಕೇಸರಿ ಟವಲ್ ಸುತ್ತಿಕೊಂಡು, ಕೈಯಲ್ಲಿ ಸಗಣಿ ಹಿಡಿದುಕೊಂಡು ಬಂದಿದ್ದ ಶಾಸಕ ಸುರೇಶ್ ಗೌಡ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಸಲ ಸಾವಯವ ಬೆಲ್ಲದ ಜಿಲೇಬಿ ಎಲ್ಲರನ್ನೂ ಸೆಳೆಯುತ್ತಿದೆ. 500ಕ್ಕೂ ಹೆಚ್ಚು ಜನರು ಸೇರಿ ಕನಿಷ್ಠ 12 ಲಕ್ಷಕ್ಕೂ ಹೆಚ್ಚು ಜಿಲೇಬಿ ತಯಾರಿಸುವ ಗುರಿಯನ್ನು ಹೊಂದಿದ್ದಾರೆ. ಬರುವಂತಹ ಭಕ್ತರಿಗೆ ದಾಸೋಹದಲ್ಲಿ ಈ ಜಿಲೇಬಿಗಳನ್ನು ಹಂಚಲಾಗುತ್ತಿದೆ. ಪ್ರತಿ ವರ್ಷ ವಿಶೇಷ ತಿನಿಸುಗಳನ್ನು ಹಂಚುವ ಮೂಲಕ ಗವಿಮಠದ ಜಾತ್ರೆಯ ದಾಸೋಹ ಖ್ಯಾತಿಯನ್ನು ಪಡೆದುಕೊಂಡಿದೆ. ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು, ಈ ಸಲ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಗುಣಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ 5 ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಂಬೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿ ದಾಸೋಹಕ್ಕೆ ನೀಡುತ್ತಿದ್ದರು. ಈ ಸಲ ಗವಿಮಠದ ಆವರಣದಲ್ಲಿಯೇ ಜಿಲೇಬಿಗಳನ್ನು ತಯಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕನಿಷ್ಠ 12ರಿಂದ 15 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದ್ದು, ಇದಕ್ಕಾಗಿ 50 ಕ್ವಿಂಟಲ್ ಮೈದ ಇಟ್ಟು 125 ಕ್ವಿಂಟಲ್ ಸಾವಯವ ಬೆಲ್ಲ ಎರಡು…

Read More

ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವಿಜಿ ಅವರ ಸಂಪೂರ್ಣ ಹೆಸರು ವಿಜಯ್ ಕುಮಾರ್ ಆಗಿತ್ತು. 1965ರಿಂದ 2024ರ ವರೆಗೆ ಆ್ಯಕ್ಟೀವ್ ಆಗಿದ್ದ ಸರಿಗಮ ವಿಜಿ 250ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 75ಕ್ಕೂ ಅಧಿಕ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ವಿಜಿ ಕೆಲಸ ಮಾಡಿದ್ದರು, ಬೆಳವಳದ ಮಡಿಲಲ್ಲಿ ಚಿತ್ರದಲ್ಲಿ ವಿಜಿ ಮೊದಲ ಬಾರಿಬಣ್ಣ ಹಚ್ಚಿದ್ದರು. ವಿಜಿ ನಟಿಸುತ್ತಿದ್ದ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಜನಪ್ರಿಯವಾಗಿತ್ತು. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ 500ಕ್ಕೂ ಅಧಿಕ ಪ್ರದರ್ಶನ ಕಂಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾಕಿಸ್ತಾನದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ಪತ್ತೆಯಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಜಿ ಗಣಿಗಾರಿಕೆ ಸಚಿವ ಇಬ್ರಾಹಿಂ ಹಜಲ್ ಮುರಾದ್ ಅವರು, ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಸುಮಾರು 800 ಬಿಲಿಯನ್ ಪಾಕಿಸ್ತಾನಿ ರೂಪಾಯಿ(80 ಸಾವಿರ ಕೋಟಿ) ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಟ್ಟಾಕ್ ನಿಂದ ತರ್ಬೆಲಾ ಮತ್ತು ಮಿಯಾನ್ ಕಣಿವೆವರೆಗಿನ 32 ಕಿ.ಮೀ. ಪ್ರದೇಶದಲ್ಲಿ ಈ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಪಾಕಿಸ್ತಾನದ ಭೂವೈಜ್ಞಾನಿಕ ಸಮೀಕ್ಷಾ ಇಲಾಖೆ ನಡೆಸಿದ ಸಂಶೋಧನೆಯಲ್ಲಿ ಚಿನ್ನದ ನಿಕ್ಷೇಪ ಇರುವುದು ದೃಢಪಟ್ಟಿದೆ. ಈ ಚಿನ್ನದ ನಿಕ್ಷೇಪ ಪಾಕಿಸ್ತಾನದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಬಳಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More