Subscribe to Updates
Get the latest creative news from FooBar about art, design and business.
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
Author: admin
ಶಿರಾ: ನಗರದ ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರವು ಅತ್ಯಂತ ಸರಳೀಕರಿಸಿದ್ದು, ಇನ್ನು ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಇ–ಖಾತೆ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತ ಕೆ.ರುದ್ರೇಶ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣದ ಭಾಗವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ನಗರಸಭೆಯಿಂದ ಸುಮಾರು 10,198 ಇ–ಖಾತೆಗಳನ್ನು ವಿತರಿಸಲಾಗಿದ್ದು, ಆನ್ ಲೈನ್ ಅರ್ಜಿ ಸಲ್ಲಿಕೆಯಿಂದ ಪ್ರಕ್ರಿಯೆ ಮತ್ತಷ್ಟು ತ್ವರಿತಗೊಳ್ಳಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಅಗತ್ಯವಿರುವ ದಾಖಲೆಗಳು: ಇ-ಖಾತೆಗೆ ಅರ್ಜಿ ಸಲ್ಲಿಸಲು ಮಾಲೀಕರ ಭಾವಚಿತ್ರ, ಸ್ವಚ್ಛಗೊಳಿಸಿದ ಕಟ್ಟಡ ಅಥವಾ ನಿವೇಶನದ ಜಿಪಿಎಸ್ ಭಾವಚಿತ್ರ, ಗುರುತಿನ ಚೀಟಿ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಚಲನ್, ನೀರು ಮತ್ತು ಒಳಚರಂಡಿ ಶುಲ್ಕದ ಪಾವತಿ ರಶೀದಿ, ಕ್ರಯಪತ್ರ, ಇ.ಸಿ (EC), ವಿದ್ಯುತ್ ಆರ್ ಆರ್ ಸಂಖ್ಯೆ ಮತ್ತು ಕಟ್ಟಡ ಪರವಾನಗಿ ಪತ್ರಗಳನ್ನು ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ. ದಾಖಲೆಗಳು ಸರಿಯಾಗಿದ್ದರೆ ಪರಿಶೀಲನೆಯ ನಂತರ…
ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ನೌಕಾ ಅಕಾಡೆಮಿ (NA-I) ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಬಯಸುವ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯ ಮೂಲಕ ಒಟ್ಟು 394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಭೂಸೇನೆಯ 208, ನೌಕಾಪಡೆಯ 42, ವಾಯುಪಡೆಯ 120 ಮತ್ತು ನೌಕಾ ಅಕಾಡೆಮಿಯ 24 ಹುದ್ದೆಗಳು ಸೇರಿವೆ. ಈ ಬಾರಿ ಪುರುಷರ ಜೊತೆಗೆ ಮಹಿಳಾ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಭೂಸೇನೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ (ಪಿಯುಸಿ) ಉತ್ತೀರ್ಣರಾಗಿರಬೇಕು. ನೌಕಾಪಡೆ ಮತ್ತು ವಾಯುಪಡೆಗೆ ವಿಜ್ಞಾನ ವಿಭಾಗದಲ್ಲಿ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) 12ನೇ ತರಗತಿ ಪೂರೈಸಿರುವುದು ಕಡ್ಡಾಯ. ಪ್ರಸ್ತುತ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಶುಲ್ಕ ಮತ್ತು ವೇತನ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ.…
ಗದಗ: ಕರ್ನಾಟಕದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಗದಗದ ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ. ರೋಣ ತಾಲೂಕಿನ ಸೂಡಿ ಗ್ರಾಮದ ನಿವಾಸಿ ವೀರಣ್ಣ ಬೀಳಗಿ ಬಂಧಿತ ವ್ಯಕ್ತಿ. ಈತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, “ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು” ಎಂದು ಬರೆದುಕೊಂಡಿದ್ದ ಎನ್ನಲಾಗಿದೆ. ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಬಿ.ಬಿ. ಅಸೂಟಿ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಡಿಸೆಂಬರ್ 14ರಂದು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಕಲಬುರಗಿ: ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿಯಾದ ಜ್ಯೋತಿ, ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಎಂಬುವವರ ಮನೆಯ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಆತಂಕಗೊಂಡ ಮಲ್ಲಿನಾಥ್ ಕುಟುಂಬಸ್ಥರು ಸದ್ಯ ಮನೆಗೆ ಬೀಗ ಹಾಕಿ ಸ್ಥಳಾಂತರಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಫರಹತಾಬಾದ್ ಪೊಲೀಸರು ಮಲ್ಲಿನಾಥ್ ಬಿರಾದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಮೃತಳ ಪತಿ ಚಿದಾನಂದ ಅವರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿನ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಳಗಾವಿ: ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ‘ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘ’ದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸಿ.ಡಿ. ಹಾಗೂ ರಾಜ್ಯ ಉಪಾಧ್ಯಕ್ಷ ನಟರಾಜು ಜಿ.ಎಲ್. ಅವರು ಕಾರ್ಮಿಕ ಇಲಾಖೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ, ಐಟಿ–ಬಿಟಿ ಇಲಾಖೆ ಸಂಬಂಧಿಸಿದಂತೆ ಐಟಿ–ಬಿಟಿ ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್…
ಪಾವಗಡ: ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಪೆನುಕೊಂಡ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾವಗಡದಿಂದ ಪೆನುಕೊಂಡದ ಕಡೆಗೆ ಸಾಗುತ್ತಿದ್ದ ಇನೋವಾ ಕಾರು ಹಾಗೂ ಪೆನುಕೊಂಡದಿಂದ ಪಾವಗಡದ ಕಡೆ ಬರುತ್ತಿದ್ದ ಎಪಿಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ್ದು ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಇನೋವಾ ಕಾರಿನ ಚಾಲಕ, ಐವಾರ್ಲಹಳ್ಳಿ ಗ್ರಾಮದ ನಿವಾಸಿ ರಾಜಶೇಖರ್ ರೆಡ್ಡಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಪಾವಗಡ ಪೊಲೀಸ್ ಠಾಣೆಯ ಸಿಐ ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಕೊರಟಗೆರೆ : ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಪಠ್ಯಾಧಾರಿತ ಶಿಕ್ಷಣವಷ್ಟೇ ಸಾಕಾಗುವುದಿಲ್ಲ; ಅದರ ಜೊತೆಗೆ ನೈತಿಕತೆ, ಮೌಲ್ಯಧಾರಿತ ಬದುಕು ಮತ್ತು ಮಾನವೀಯ ಗುಣಗಳನ್ನು ರೂಪಿಸುವ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ಅವರು ಅಭಿಪ್ರಾಯಪಟ್ಟರು. ತಾಲೂಕಿನ ಎಲೆರಾಂಪುರ ಗ್ರಾಮದಲ್ಲಿರುವ ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಶ್ರೀಗಳ ಆಶೀರ್ವಾದ ಪಡೆದು, ನಂತರ ಮಠದ ಸದ್ವಿದ್ಯಾ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರಿಗೆ ಬಾಲ್ಯದಲ್ಲೇ ಸತ್ಯನಿಷ್ಠೆ, ಶಿಸ್ತು, ಸಮಾಜಪರ ಜವಾಬ್ದಾರಿ ಹಾಗೂ ಮೌಲ್ಯಾಧಾರಿತ ಚಿಂತನೆಗಳನ್ನು ಬೆಳೆಸಬೇಕಿದೆ ಎಂದು ಹೇಳಿದರು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಮೂಲ ಅಸ್ತ್ರವಾಗಿದ್ದು, ಯುವಜನತೆ, ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾದ ವಾತಾವರಣವನ್ನು…
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆಯ ಸಮಸ್ಯೆಯಿದ್ದು ಅಧಿಕಾರಿಗಳು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿದರು. ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ ಮಾತನಾಡಿ, ತಿಮ್ಮಮ್ಮನಹಳ್ಳಿಯಲ್ಲಿ ರೈತನೊಬ್ಬ ತನ್ನ ಜಮೀನಿನ ಮೂಲಕ ಹೋಗಲು ಇತರೇ ರೈತರಿಗೆ ರಸ್ತೆ ಬಿಡದೆ ತೊಂದರೆ ನೀಡುತ್ತಿದ್ದು, ರೈತರ ಜಮೀನಿಗೆ ಹೋಗಲು ನಕಾಶೆ ರಸ್ತೆಯನ್ನು ಗುರುತಿಸಿ ರಸ್ತೆಯ ಸಮಸ್ಯೆಯನ್ನು ಅಧಿಕಾರಿಗಳು ಶೀಘ್ರ ಬಗೆಹರಿಸಬೇಕೆಂದು ಒತ್ತಾಯ ಮಾಡಿದರು. ಈ ಕೂಡಲೇ ಸರ್ವೇ ಅಧಿಕಾರಿಗಳು, ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ರೈತರ ರಸ್ತೆ ಸಮಸ್ಯೆ ಯನ್ನು ಬಗೆ ಹರಿಸಿ ಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಗೋಪಾಲಪ್ಪ, ಗುಡಿಪಲ್ಲಪ್ಪ, ನಾಗರಾಜು, ರಾಮಣ್ಣ, ಲಕ್ಷ್ಮೀದೇವಿ, ಹನುಮಂತರಾಯ, ನಾಗಪ್ಪ ಮುಂತಾದವರು ಹಾಜರಿದ್ದರು. ವರದಿ : ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಲೂಕಿನಾದ್ಯಂತ ಡಿ. 21ರಿಂದ 24 ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ನಮ್ಮ ತಾಲ್ಲೂಕಿನಲ್ಲಿ ಪಟ್ಟಣದ ಒಟ್ಟು ಜಸಂಖ್ಯೆ: 8,313 ಗ್ರಾಮೀಣ ಒಟ್ಟು ಜನ ಸಂಖ್ಯೆ: 81,820 ಒಟ್ಟು ಜನಸಂಖ್ಯೆ: 90,133 0-5 ವರ್ಷದೊಳಗಿನ ಒಟ್ಟು ಮಕ್ಕಳ ಸಂಖ್ಯೆ: 5,804 ಒಟ್ಟು ಪಲ್ಸ್ ಪೋಲಿಯೋ ಬೂತ್ ಗಳ ಸಂಖ್ಯೆ– 66 ಟ್ರಾನ್ಸ್ಲೇಷನ್ ಬೂತ್ ಗಳ ಸಂಖ್ಯೆ- -01 ಮೊಬೈಲ್ ಟೀಮ್–01 ನಿಯೋಜನೆ ಮಾಡುವ ಒಟ್ಟು ಸಿಬ್ಬಂದಿಗಳ ಸಂಖ್ಯೆ 272 ಮೇಲ್ವಿಚಾರಕರು 14 ಈ ಕಾರ್ಯಕ್ರಮವು ನಾಲ್ಕು ದಿನ ನಡೆಯುತ್ತದೆ ಆದುದರಿಂದ ಇತರೆ ಇಲಾಖೆ ಅಧಿಕಾರಿಗಳು, ಎಲ್ಲ ಸಂಘ-ಸಂಸ್ಥೆಯವರು, ಎನ್ ಜಿ ಓ ಸಂಸ್ಥೆ ರವರು ಸಹಕಾರ ನೀಡಬೇಕು ಎಂದು ತಿಳಿಸಿದರು. ಮತ್ತು ಸಾರ್ವಜನಿಕರು ದಿನಾಂಕ: 21–12–2025 ರಂದು ನಿಮ್ಮ 0–5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಈ ಹಿಂದೆ ಎಷ್ಟು ಬಾರಿ ಪೋಲಿಯೋ ಹಾಕಿಸಿದರೂ ಸಹ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ ಎಂದು…
ಸರಗೂರು: ಸಂಗೀತ, ಕಲೆ, ನೃತ್ಯ ಸೇರಿದಂತೆ ನಾನಾ ಪ್ರಕಾರಗಳನ್ನು ಒಳಗೊಂಡಿರುವ ನಾಟಕ, ಬದುಕನ್ನು ಕಟ್ಟಿಕೊಡುವ ಜತೆಗೆ ಸಾಮರಸ್ಯ ಬೆಳೆಸುತ್ತದೆ ಎಂದು ರಂಗಭೂಮಿ ಕಲಾವಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈ.ಎಂ.ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು. ಪಟ್ಟಣದ ಜೆಎಸ್ ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಜೆಎಸ್ ಎಸ್ ಕಲಾಮಂಟಪದಿಂದ ಶುಕ್ರವಾರದಂದು ನಡೆದ ಜೆಎಸ್ ಎಸ್ ರಂಗೋತ್ಸವ ಸಮಾರೋಪ ಸಮಾರಂಭದಲ್ಲಿ ಶ್ರೀ ಗಳ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ನಾಟಕ ಒಂದು ಸಂಕೀರ್ಣ ಕಲೆಯಾಗಿದ್ದು, ಅದಕ್ಕೆ ಜಾತಿಭೇದದ ಅಡ್ಡಗೋಡೆಗಳಿಲ್ಲ. ಅದು ನಮ್ಮ ಬದುಕನ್ನು ಕಟ್ಟಿಕೊಡುವುದರ ಜತೆಗೆ ದೂರವಾಗಿರುವ ಮನಸ್ಸುಗಳನ್ನು ಒಂದು ಗೂಡಿಸಲಿದೆ. ನಾವು ಹೇಗೆ ಮಾತನಾಡಬೇಕು ಎಂಬ ಭಾಷೆ ಕಲಿಸಿಕೊಡುತ್ತದೆ. ನೀವು ಪ್ರಸ್ತುತ ಗಳಿಸುತ್ತಿರುವ ಶಿಕ್ಷ ಣ ಅಂಕಗಳಿಕೆಗೆ ಮಾತ್ರ ಸೀಮಿತವಾಗಿದ್ದು, ಅದು ಪೂರ್ಣ ಸಾಧನೆಯಲ್ಲ. ನಾಟಕ, ನೃತ್ಯ ಸೇರಿದಂತೆ ಸುಮಾರು 64 ಕಲೆಗಳಲ್ಲಿ ಯಾವುದಾದರೂ ಒಂದು ಅಥವಾ ಎರಡರಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಬೇಕು. ಹಾಗಾದಾಗ ಜೀವನದಲ್ಲಿ ಪರಿಪೂರ್ಣತೆ ದೊರೆಯುತ್ತದೆ ಎಂದರು. ನಾಟಕಾಭಿನಯ…