Author: admin

ರಾಘವೇಂದ್ರ ಅಡಿಗ ಎಚ್ಚೆನ್. ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ. ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ ವಿಭಿನ್ನ ಸಂಸ್ಕೃತಿ ಮತ್ತು ಕಥೆಗಳಿಗೆ ಸೂಕ್ತ ಮನ್ನಣೆ ಸಿಗುವಂತೆ ಮಾಡುವುದಾಗಿದೆ. ಸ್ಪರ್ಧೆಯು ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕರನ್ನೊಳಗೊಂಡ ಜ್ಯೂರಿ ಸಮಿತಿಯು ವಿಜೇತರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಸಮಿತಿಯಲ್ಲಿ ಅನುರಾಗ್ ಕಶ್ಯಪ್ (ಹಿಂದಿ), ರವಿ ಜಾಧವ್ (ಮರಾಠಿ), ನಾಗ್ ಅಶ್ವಿನ್ (ತೆಲುಗು), ಸೃಜಿತ್ ಮುಖರ್ಜಿ (ಬೆಂಗಾಲಿ), ಪಿ.…

Read More

ಸರಗೂರು: “ನಮ್ಮ ಭಾರತ ಸಂವಿಧಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರು ಪ್ರತಿಯೊಬ್ಬ ಮಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣವನ್ನು ನೀಡಬೇಕೆಂದು ಶಿಕ್ಷಣದ ಹಕ್ಕಿನಲ್ಲಿ ಸೇರಿಸಿದ್ದರಿಂದಲೇ, ಇಂದು ನಮಗೆಲ್ಲರಿಗೂ ಉತ್ತಮ ಶಿಕ್ಷಣ ಕಲಿಯಲು ಅನುಕೂಲವಾಗಿದೆ” ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಎಸ್.ಡಿ. ಸಣ್ಣಸ್ವಾಮಿ ಸರಗೂರು ತಿಳಿಸಿದರು. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆ, ಸರಗೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ” ಕಾರ್ಯಕ್ರಮದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವತಿಯಿಂದ ಸಿಗುವ ಹಲವು ಉಚಿತ ಸೌಲಭ್ಯಗಳು ಹಾಗೂ ಪ್ರೋತ್ಸಾಹಕಗಳ ಕುರಿತು ಅವರು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ  ಅವರು  ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ‘ಕ್ಷೀರಭಾಗ್ಯ’ ಯೋಜನೆಯಡಿ ಪ್ರತಿದಿನ ಹಾಲು ಹಾಗೂ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ.…

Read More

ಸರಗೂರು:  ಅರಣ್ಯನಾಶದಿಂದ ಪರಿಸರ ಮಾಲಿನ್ಯ ಉಂಟಾಗಿ ವಿದೇಶಗಳಲ್ಲಿ ಶುದ್ಧ ಆಮ್ಲಜನಕವನ್ನು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನಮ್ಮಲ್ಲೂ ಸಹ ಪ್ರಕೃತಿದತ್ತವಾಗಿ ಸಿಗುವುದೆಲ್ಲವನ್ನು ಕೊಂಡುಕೊಳ್ಳಬಹುದಾದ ಪರಿಸ್ಥಿತಿ ಎದುರಾಗುವ ಕಾಲ ದೂರವಿಲ್ಲ ಎಂದು ಸರಗೂರು ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್.ಎಲ್. ಎಚ್ಚರಿಕೆ ನೀಡಿದರು. ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆ ಹಾಗೂ ಕಾಲೇಜು ರಾಜಮ್ಮ ಲಿಂಗಯ್ಯ ಫೌಂಡೇಷನ್‌ ಮತ್ತು ಶಾಲೆಯ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರ ಮಾಲಿನ್ಯಕ್ಕೆ ಪ್ರಮುಖ ಕಾರಣ ಮಿತಿ ಮೀರಿದ ಜನಸಂಖ್ಯೆ. ಅತಿಯಾದ ಜನಸಂಖ್ಯೆಯಿಂದಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಪಾರ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಈಗಾಗಲೇ ನೀರು, ಆಹಾರವನ್ನು ಮಾರಿಕೊಂಡಿದ್ದೆವೆ. ಪರಿಸರ ನಾಶದಿಂದ ಉತ್ತಮವಾದ ಆಮ್ಲಜನಕ ಸಿಗುತ್ತಿಲ್ಲ. ಇದರಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು. ಇಂದಿನ ವಿದ್ಯಾರ್ಥಿಗಳು ಮುಂದಿನ ದಿನಗಳಿಗೆ ಭೂಮಿಯನ್ನು ಉಳಿಸಿ ಕೊಳ್ಳಬೇಕಾದರೆ ಸಾಧ್ಯವಾದಷ್ಟು ಗಿಡಗಳನ್ನು ನೆಡಬೇಕು. ನಿಮ್ಮ…

Read More

ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಲೀಫ್ ಆರ್ಟ್ ಮತ್ತು ಭಿತ್ತಿಪತ್ರ ರಚನೆ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಮುಖ್ಯಶಿಕ್ಷಕರಾದ ನರಸಿಂಹಪ್ಪ ಎಸ್ ಅವರ ನೇತೃತ್ವದಲ್ಲಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಿನೀಶ್ ಎಂ, ಲೀಲಾವತಿ ಸಿ, ನಾಗೇಂದ್ರ ಹಾಗೂ ವಿಜ್ಞಾನ ಶಿಕ್ಷಕರಾದ ಮರಿಯಾ, ಜೋಬಿನ್, ಹೇಮಲತಾ ಉಪಸ್ಥಿತರಿದ್ದರು. ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಈ ಮೂಲಕ ಪ್ರಾಯೋಗಿಕ ಅರಿವು ಮೂಡಿಸಿದಂತಾಯಿತು ಎಂದು ಶಾಲಾ ಮುಖ್ಯಶಿಕ್ಷಕರು ತಿಳಿಸಿದರು. ವರದಿ:  ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕುಣಿಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷರಾದ ಡಾ.ವಿ.ನಾಗಭೂಷಣ ರೆಡ್ಡಿ ಅವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಾದ್ಯಂತ ಅತಿಯಾಗಿ ಮರಗಳನ್ನು ಕಡಿದು ಹಾಕುವುದು ಹಾಗೂ ಪ್ರಕೃತಿಯ ಸಮತೋಲನವನ್ನು ಹಾಳು ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಇದರ ಪರಿಣಾಮವಾಗಿ ಋತುಚಕ್ರದಲ್ಲಿ ವ್ಯತ್ಯಾಸ ಉಂಟಾಗಿ ಮಳೆಯ ಪ್ರಮಾಣ ಮತ್ತು ಸಮಯದಲ್ಲಿ ಅನಿಶ್ಚಿತತೆ ಕಂಡುಬರುತ್ತಿದ್ದು, ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುವ ಕೋಟ್ಯಾಂತರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಶ್ವ ಗ್ರಾಮೋದಯ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳು…

Read More

ತುಮಕೂರು/ಮಧುಗಿರಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನದ ಕುರಿತು  ಕೆ.ಎನ್. ರಾಜಣ್ಣ ಅವರು ಮಾಧ್ಯಮಗಳಿಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರ ನಿರ್ಧಾರದ ಬಗ್ಗೆ ಮಾತನಾಡಿದ ಅವರು, “ಇದೇನು ಹೊಸ ಸುದ್ದಿಯಲ್ಲ, ಹಳೇ ಸುದ್ದಿ. ಸರ್ಕಾರದ ವಿಕೆಟ್ ಪತನವಾಗುವ ಪ್ರಶ್ನೆಯೇ ಇಲ್ಲ. ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ಸ್ಪಷ್ಟಪಡಿಸಿದರು. ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನ ತೊರೆದರೂ ಪಕ್ಷ ಬಿಡುವುದಿಲ್ಲ ಎಂಬುದನ್ನು ರಾಜಣ್ಣ ನೆನಪಿಸಿದರು. “ತಾವು ಶಾಸಕರಾಗಿ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವುದಾಗಿ ಮತ್ತು ನಿಷ್ಠಾವಂತ ಕಾರ್ಯಕರ್ತನಾಗಿ ಜವಾಬ್ದಾರಿ ನಿರ್ವಹಿಸುವುದಾಗಿ ಅವರೇ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹಾಗಾಗಿ ಇದರಲ್ಲಿ ಬೇರೆ ವಿಶೇಷತೆ ಏನೂ ಇಲ್ಲ” ಎಂದರು. ಡಿಕೆಶಿ ‘ಟ್ರಬಲ್ ಶೂಟರ್’ ಪದಕ್ಕೆ ರಾಜಣ್ಣ ವ್ಯಂಗ್ಯ ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ‘ಟ್ರಬಲ್ ಶೂಟರ್’ ಇಮೇಜ್ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ…

Read More

ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತಿಪಟೂರು ಗ್ರಾಮಾಂತರ ಹಾಗೂ ಬೆಳಗರಹಳ್ಳಿಯ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯ ಜಂಟಿ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಜಾಗೃತಿ, ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನೊಣವಿನಕೆರೆ ವಲಯದ ಹೆಡಗರಹಳ್ಳಿ ಕಾರ್ಯಕ್ಷೇತ್ರಕ್ಕೆ ಒಳಪಡುವ ಬೆಳಗರಹಳ್ಳಿಯ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಗಿಡನಾಟಿ ಮಾಡುವ ಮೂಲಕ ಚಾಲನೆ ನೀಡಲಾಯಿತು. 2026ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯವಾದ “ಪ್ರಕೃತಿಯಿಂದ ಪ್ರೇರಿತ ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಯುವರಾಜ್ ಅವರು, “ಆಡು ಮುಟ್ಟದ ಸೊಪ್ಪಿಲ್ಲ, ಪೂಜ್ಯ ಖಾವಂದರು ಯೋಜಿಸದ ಕಾರ್ಯಕ್ರಮವಿಲ್ಲ” ಎಂದು ಧರ್ಮಸ್ಥಳದ ಪೂಜ್ಯ ಹೆಗ್ಗಡೆಯವರ ಪರಿಸರ ಕಾಳಜಿಯನ್ನು ಶ್ಲಾಘಿಸಿದರು. ಮುಂದುವರಿದು ಮಾತನಾಡಿದ ಅವರು, “ಪಳೆಯುಳಿಕೆ ಇಂಧನ ಮುಕ್ತ ವಾಹನಗಳ ಬಳಕೆ, ರಾಸಾಯನಿಕ ಮುಕ್ತ ಕೃಷಿ ಪದ್ಧತಿ,…

Read More

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ ತಟ್ಟಿದೆ. ತಮಗೆ ಹಂಚಿಕೆ ಮಾಡಲಾದ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಹಾಗೂ 9 ಬಾರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮಾಧ್ಯಮಗಳ ಮುಂಭಾಗದಲ್ಲಿ ರಾಜೀನಾಮೆ ಪತ್ರ ಸಿದ್ಧಪಡಿಸಿದ ರಾಮಲಿಂಗಾರೆಡ್ಡಿ, ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಬೇಸರ ಹೊರಹಾಕಿದ್ದಾರೆ. “ನನಗೆ ಜಲಸಂಪನ್ಮೂಲ ಖಾತೆಗೆ ಹೋಗಲು ಮನಸ್ಸು ಒಪ್ಪುತ್ತಿಲ್ಲ. ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಆದರೆ ಖಾತೆ ಕೊಡುವಾಗ ಮಾತ್ರ ಹೀಗೇಕೆ?” ಎಂದು ಪ್ರಶ್ನಿಸಿದ್ದಾರೆ. 2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ ಸಾರಿಗೆ ಖಾತೆ ನೀಡಲಾಯಿತು. ಆ ಸಂದರ್ಭದಲ್ಲಿ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ಅವರು…

Read More

ಬೆಂಗಳೂರು: ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೂನ್ 3, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ನಿರ್ಧಾರದಿಂದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ದೂರದ ಶಾಲೆ ಹಾಗೂ ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿಗಳ ಮೇಲಿನ ಸಾರಿಗೆ ವೆಚ್ಚದ ಹೊರೆ ಕಡಿಮೆಯಾಗಲಿದೆ. ಸರ್ಕಾರದ ಈ ಕ್ರಮವು ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಜೊತೆಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಉಚಿತ ಬಸ್ ಪಾಸ್ ಯೋಜನೆಯ ಅನುಷ್ಠಾನ, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾರ್ಗಸೂಚಿಗಳನ್ನು…

Read More

ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸಗಳಿಗೆ ಭೇಟಿ ನೀಡಿದರು. ಹೊಸದಾಗಿ ಜವಾಬ್ದಾರಿ ವಹಿಸಿಕೊಂಡಿರುವ ಉಭಯ ನಾಯಕರಿಗೆ ಶ್ರೀಗಳು ವಿಶೇಷ ಆಶೀರ್ವಾದ ಹಾಗೂ ಮಾರ್ಗದರ್ಶನ ನೀಡಿರುವುದು ರಾಜ್ಯದ ರಾಜಕೀಯ ಮತ್ತು ಆಧ್ಯಾತ್ಮಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಮಹತ್ವ ಪಡೆದುಕೊಂಡಿದೆ. ಮೊದಲು ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಪೂಜ್ಯ ಶ್ರೀಗಳನ್ನು ಮುಖ್ಯಮಂತ್ರಿಯವರು ಭಕ್ತಿಪೂರ್ವಕವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು. ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ಬಳಿಕ ಕೆಲಕಾಲ ಪ್ರಸ್ತುತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು, “ಆಡಳಿತದಲ್ಲಿ ನೈತಿಕತೆ, ಪಾರದರ್ಶಕತೆ ಮತ್ತು ಮಾನವೀಯ ಮೌಲ್ಯಗಳ ಪಾಲನೆ ಮುಖ್ಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಸೇವಾ ಮನೋಭಾವದಿಂದ ಮುನ್ನಡೆಯಬೇಕು ಹಾಗೂ ನಾಡಿನ ಧಾರ್ಮಿಕ-ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು”…

Read More