Author: admin

ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಕಾರ್ಯಕರ್ತರು ನಡೆದುಕೊಂಡ ರೀತಿಗೆ ಜಿಲ್ಲಾ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕ್ಷುಲ್ಲಕ ವಿಚಾರಗಳಿಗಾಗಿ ಗಲಾಟೆ ಮಾಡುತ್ತಿರುವ ಕೆಆರ್‌ ಎಸ್ ಮುಖಂಡರ ವರ್ತನೆ ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲೇ ಕೆಆರ್‌ ಎಸ್ ಪದಾಧಿಕಾರಿಗಳು ಗಲಾಟೆ ನಡೆಸಿ ಅಹಿತಕರ ವಾತಾವರಣ ಸೃಷ್ಟಿಸಿದ್ದಾರೆ. ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರೂ, ವಿಡಿಯೋ ಮಾಡುವ ಉದ್ದೇಶದಿಂದ ಕೆಆರ್‌ ಎಸ್ ಕಾರ್ಯಕರ್ತರು ಗೊಂದಲ ಉಂಟುಮಾಡಿದ್ದಾರೆ ಎಂದು ಚಂದ್ರಶೇಖರಗೌಡ ಆರೋಪಿಸಿದರು. ಕೆಆರ್‌ ಎಸ್ ಪಕ್ಷದವರು ಇದೇ ರೀತಿ ವರ್ತನೆಯನ್ನು ಮುಂದುವರಿಸಿದರೆ, ಭವಿಷ್ಯದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವರಿಗೆ ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಬಂಧನಕ್ಕೊಳಗಾದ ಕೆಆರ್‌ಎಸ್ ಮುಖಂಡ ಮೈಸೂರಿನವರಾಗಿದ್ದು, ಅವರಿಗೂ ತುಮಕೂರು ಜಿಲ್ಲೆಗೂ ಯಾವುದೇ ಸಂಬಂಧವಿಲ್ಲ. ಕೇವಲ ಗೊಂದಲ ಸೃಷ್ಟಿಸುವ…

Read More

ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆ’ ಎಂಬ ಮ್ಯಾರಥಾನ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಂವಿಧಾನವು ಭಾರತದ ಅಡಿಪಾಯವಾಗಿದೆ. ಸಂವಿಧಾನವಿಲ್ಲದಿದ್ದರೆ ಇಂದು ನಾವು ಭಾರತ ಎಂದು ಕರೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮನಸ್ಥಿತಿಯ ಜನರು ಇದನ್ನು ಅಳಿಸಿಹಾಕಲು ಸಂಚು ರೂಪಿಸುತ್ತಿದ್ದಾರೆ ಎಂದು ರಾಹುಲ್ ಹೇಳಿದರು. ಭಾರತದ ಪ್ರತಿಯೊಬ್ಬ ಪ್ರಜೆ ಸಮಾನವಾಗಿ ಬದುಕುವುದು ಬಿಜೆಪಿಗೆ ಇಷ್ಟವಿಲ್ಲ. ಅವರ ಒಳಸಂಚು ಸಂವಿಧಾನವನ್ನು ನಾಶಪಡಿಸುವುದೇ ಆಗಿದೆ. ಅವರು ಅಂಬೇಡ್ಕರ್ ಪ್ರತಿಮೆ ಮುಂದೆ ತಲೆಬಾಗಿದರೂ, ಅವರ ಮನಸ್ಸಿನಲ್ಲಿ ಸಂವಿಧಾನದ ವಿರೋಧಿ ನೀತಿಗಳಿವೆ ಎಂದು ಟೀಕಿಸಿದರು. ಸಂವಿಧಾನವನ್ನು ರಕ್ಷಿಸುವುದು ಮತ್ತು ಬಲಪಡಿಸುವುದು ನಮ್ಮ ಗುರಿಯಾಗಿದೆ. ಸಾಂವಿಧಾನಿಕ ಮೌಲ್ಯಗಳ ಮೇಲೆ ದಾಳಿ ನಡೆಯುತ್ತಿರುವ…

Read More

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಸಹ ಕಲಾವಿದ ಹರೀಶ್ (40) ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ಸಂಭವಿಸಿದೆ. ಹರೀಶ್ ಅವರು ತಮ್ಮ ಕೆಲಸ ಮುಗಿಸಿಕೊಂಡು ತಡರಾತ್ರಿ ಕುಶಾಲನಗರದಿಂದ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ ಗೆ ಇವರ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಹರೀಶ್ ಅವರು ಕನ್ನಡದ ಹಲವು ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಮನೆಮಾತಾಗಿದ್ದರು. ಇವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ…

Read More

ಬೆಳಗಾವಿ: ಜಿಲ್ಲೆಯ ಅನಗೋಳದ ಬಾಬಲೇ ಗಲ್ಲಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಆಗಿದ್ದ ಅವಿನಾಶ್ ಸೂಪ್ಪಣ್ಣವರ (40) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಪತ್ನಿ ಲಕ್ಷ್ಮೀ ಸೂಪ್ಪಣ್ಣವರ ಮತ್ತು ಆಕೆಯ ಪ್ರಿಯಕರ ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಲಕ್ಷ್ಮೀ ಮತ್ತು ಕೈಲಾಶ್ ನಡುವೆ ಅನೈತಿಕ ಸಂಬಂಧವಿತ್ತು. ಈ ವಿಚಾರ ತಿಳಿದ ಪತಿ ಅವಿನಾಶ್ ಅವರು ಪತ್ನಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಲಕ್ಷ್ಮೀ, ಪತಿಯನ್ನು ಹತ್ಯೆ ಮಾಡಲು ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ್ದಳು. ಮಾರ್ಚ್ 6ರಂದು ಅವಿನಾಶ್ ಅವರು ಕ್ಲಿನಿಕ್‌ಗೆ ಹೋದಾಗ, ಕೈಲಾಶ್ ಅಲ್ಲಿಗೆ ತೆರಳಿ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿದ್ದ. ಅವಿನಾಶ್ ಅರೆಪ್ರಜ್ಞಾವಸ್ಥೆಗೆ ತಲುಪುತ್ತಿದ್ದಂತೆ, ಕೈಲಾಶ್ ಅಲ್ಲೇ ಇದ್ದ ಗ್ಯಾಸ್ ಸಿಲಿಂಡರ್‌ನಿಂದ ಅವರ ತಲೆ ಮತ್ತು ಎದೆಗೆ ಬಲವಾಗಿ ಹೊಡೆದು…

Read More

ಭಾರತೀಯ ಚಿತ್ರರಂಗದ ದಂತಕಥೆ, ಸುಮಧುರ ಧ್ವನಿಯ ಗಾಯಕಿ ಆಶಾ ಭೋಂಸ್ಲೆ (92) ಅವರು ಭಾನುವಾರ (ಏಪ್ರಿಲ್ 12, 2026) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆ ಮತ್ತು ಎದೆಯ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಆಶಾ ಭೋಂಸ್ಲೆ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಆನಂದ್ ಭೋಂಸ್ಲೆ ಖಚಿತಪಡಿಸಿದ್ದಾರೆ. ಈ ಸುದ್ದಿಯು ಸಂಗೀತ ಲೋಕದಲ್ಲಿ ಕಾರ್ಮೋಡ ಕವಿಯುವಂತೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಸೋಮವಾರ ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1933ರಲ್ಲಿ ಜನಿಸಿದ ಆಶಾ ಅವರು ತಮ್ಮ 9ನೇ ವಯಸ್ಸಿನಲ್ಲೇ ಗಾಯನ ವೃತ್ತಿ ಆರಂಭಿಸಿದ್ದರು. ಸಪ್ತ ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ಕನ್ನಡ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ…

Read More

ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ನಗರ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ಮಿಗಿಲಾದ ಸಾಧನೆ ಮಾಡಬಲ್ಲರು ಎಂಬುದನ್ನು ತಿಪಟೂರಿನ ಟೈಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ರಶ್ಮಿ ಸಾಬೀತುಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 595 ಅಂಕಗಳನ್ನು ಪಡೆಯುವ ಮೂಲಕ ರಶ್ಮಿ ಜಿಲ್ಲೆಗೆ ಟಾಪರ್ ಆಗಿರುವುದಲ್ಲದೆ, ರಾಜ್ಯಕ್ಕೆ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಈ ಅಪೂರ್ವ ಸಾಧನೆಯನ್ನು ಮೆಚ್ಚಿ ಸಂಸ್ಥೆಯ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಟೈಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಅವರು ಘೋಷಿಸಿದ್ದಾರೆ. ಕಾಲೇಜಿನಲ್ಲಿ ಪರೀಕ್ಷೆ ಬರೆದ ಒಟ್ಟು 100 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಶೇ. 100ರಷ್ಟು ಫಲಿತಾಂಶ ತಂದುಕೊಟ್ಟಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಅತ್ಯುತ್ತಮ ಅಂಕ (Distinction) ಶ್ರೇಣಿಯಲ್ಲಿ ಹಾಗೂ 34 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಫಲಿತಾಂಶಕ್ಕಾಗಿ ಈ ಹಿಂದೆ ಈ ಸಂಸ್ಥೆಯು ಸರ್ಕಾರದಿಂದ ಪ್ರಶಸ್ತಿಯನ್ನೂ…

Read More

ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು.  ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.  ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು. ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ…

Read More

ಕೊರಟಗೆರೆ: ಮನೆಯ ಮುಂದಿನ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಒಂದು ಕಾರು ಮತ್ತು ಎರಡು ಬೈಕ್‌ಗಳಿಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಕೊರಟಗೆರೆಯ ಕೋಳಾಲ ಗ್ರಾಮದಲ್ಲಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕೋಳಾಲ ಕೆ.ಸಿ.ಎನ್.ಭಾರತ್ ಗ್ಯಾಸ್ ಏಜೆನ್ಸಿಯ ಮಾಲೀಕರಾದ ವಿರೂಪಾಕ್ಷಯ್ಯ ಅವರಿಗೆ ಸೇರಿದ ಮಹೇಂದ್ರ ಕಂಪನಿಯ ಕಾರು, ರಾಯಲ್ ಎನ್ ಫೀಲ್ಡ್ ಬೈಕ್, ಓಲಾ ಎಲೆಕ್ಟ್ರಿಕ್ ಬೈಕ್‌ ಗಳನ್ನು ಎಂದಿನಂತೆ ತಮ್ಮ ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಲಾಗಿತ್ತು, ತಡರಾತ್ರಿ ಸುಮಾರು 12–40ರ ಸಮಯದಲ್ಲಿ ಮುಸುಕುಧಾರಿ ಕಿಡಿಗೆಡಿಯೊಬ್ಬ ಕಾಂಪೌಂಡ್ ಪಕ್ಕದಲ್ಲಿ ನಿಂತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬಳಿಕ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿಯಾದ ಘಟನೆ ಸಿಸಿ ಕ್ಯಾಮೆರಾದಲ್ಲಿ ಕಿಡಿಗೇಡಿ ಕೃತ್ಯ ಸೆರೆಯಾಗಿ ಕಂಡು ಬಂದಿದೆ, ಕಿಡಿಗೇಡಿ ಹಚ್ಚಿನ ಬೆಂಕಿಯ ಕೆನ್ನಾಲಿಗೆಗೆ ಕಾರು ಹಾಗೂ ಎರಡು ಬೈಕ್‌ ಗಳು ಸುಟ್ಟು ಕರಕಲಾಗಿದೆ, ಈ ವೇಳೆ ಮನೆಯ ಅಕ್ಕಪಕ್ಕ ಸುತ್ತ ಹೊಗೆ ಅವರಿಸಿದ್ದು ಅಕ್ಕ ಪಕ್ಕದ ಮನೆಯವರು ಕೂಡಲೇ ನೀರು ಸುರಿದು ಡೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.…

Read More

ಕೊರಟಗೆರೆ : ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವವನ್ನು ಹೊಂದಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪ ನಾಯಕ ತಿಳಿಸಿದರು. ತಾಲ್ಲೂಕಿನ ಜೆಟ್ಟಿ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ 2025–26ನೇ ಸಾಲಿನ ಎನ್‌ ಎಸ್‌ ಎಸ್ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಗ್ರಹಾರ ಗ್ರಾ.ಪಂ ಪಿಡಿಓ ರಂಗನರಸಯ್ಯ ಮಾತನಾಡಿ, ಆರು ದಿನಗಳ ಕಾಲ ನಡೆಯಲಿರುವ ಶಿಬಿರಕ್ಕೆ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗ್ರಾಮಾಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಐಕ್ಯೂ ಎಸಿ ಸಂಚಾಲಕಿ ಡಾ.ದೀಪಾ ಡಿ.ಎಸ್. ಮಾತನಾಡಿ, ಸಮೃದ್ಧ ಭಾರತ ನಿರ್ಮಾಣಕ್ಕೆ ಆರೋಗ್ಯಕರ ಯುವಕರು ಅವಶ್ಯಕ. ಎನ್‌ ಎಸ್‌ ಎಸ್ ಶಿಬಿರಗಳು ಯುವಕರಲ್ಲಿ ಶಾರೀರಿಕ, ಮಾನಸಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅಭಿಪ್ರಾಯ ಪಟ್ಟರು. ಗ್ರಾಮದ ಮಹಿಳೆ ಮಂಜುಳ ಆರಾಧ್ಯ…

Read More

ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಏಪ್ರಿಲ್ 15 ರಿಂದ ಮೇ 4ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಆನ್‌ ಲೈನ್ ಅರ್ಜಿ ಹಾಗೂ ವಿದ್ಯಾರ್ಥಿಯ ಆಧಾರ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ, ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರವನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯನ್ನು ಮೇ 12ರಂದು ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಬ್ಯಾಂಕ್ ರಸ್ತೆ, ಡಿಸಿಸಿ ಬ್ಯಾಂಕ್ ಎದುರು)ಯಲ್ಲಿ ನಡೆಸಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More