Author: admin

ನಾಡಿನ ಸಮಸ್ತ ಜನತೆಗೆ ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಬೀದರ್ ಕ.ರಾ.ಆ.ನೀ.ಸಂಘ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೈಜನಾಥ ಚನ್ನಶೆಟ್ಟಿ ಶುಭ ಹಾರೈಸಿದ್ದಾರೆ. ಮಕರ ಸಂಕ್ರಾಂತಿ ಸೂರ್ಯನ ಬೆಂಕಿಯಲ್ಲಿ ನಿಮ್ಮ ಕಷ್ಟಗಳೆಲ್ಲ ಸುಟ್ಟು ಭಸ್ಮವಾಗಿ, ಸುಖ ಸಂಪತ್ತು ಸಂತೋಷದ ಬೆಳಕು ನಿಮ್ಮ ಮನೆಮನವನ್ನು ಬೆಳಗಲಿ , ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಅವರು ಶುಭ ಹಾರೈಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕಾರ್ಯ ನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ ಕಾಂಬಳೆ ಅವರು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿ ಮಾಯವಾಗುತಿರಲು, ತನು ಮನದಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ. ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ. ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಸಂಕ್ರಾಂತಿಯ ಬೆಂಕಿಯ ಕಿಡಿ ನಿಮ್ಮ ಬದುಕಿನ ಎಲ್ಲಾ ಕಹಿ ಘಟನೆಗಳನ್ನು ಸುಟ್ಟು, ನಿಮ್ಮ ಬಾಳಿನಲ್ಲಿ ಸಂತೋಷ ಮತ್ತು ಸುಖವನ್ನು ನೀಡಲಿ ಎಂದು ಶುಭ ಹಾರೈಸಿದ್ದಾರೆ. ಕಬ್ಬಿನ ಸಿಹಿ ಎಳ್ಳು ಬೆಲ್ಲದ ರುಚಿ ಗೆಣಸು ಕಡಲೆಯ ಸಾರ ದಂತ ಸಮೃದ್ಧ ಜೀವನ ನಿಮ್ಮದಾಗಲಿ. ಇಡೀ ವರ್ಷ ನೀವು…

Read More

ಬೆಂಗಳೂರು: ಜೈ ಬಾಪು– ಜೈ ಭೀಮ್– ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸೋಣ. ಜನವರಿ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಎಲ್ಲರೂ ಜೊತೆಯಾಗಿ ಮುನ್ನಡೆಯೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು– ಜೈ ಭೀಮ್ — ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಶಕ್ಕೆ ಸ್ವಾಗತ. ಆರ್ ಎಸ್ ಎಸ್‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಹೊಂದಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್…

Read More

ಜೋಧ್ಪುರ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2013ರ ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು ಗಮನಿಸಿದ ಸುಪ್ರೀಂ ಕೋರ್ಟ್ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಮಾರ್ಚ್ 31ರವರೆಗೆ ಅಸಾರಾಂ ಅವರಿಗೆ ಜನವರಿ 7ರಂದು ಮಧ್ಯಂತರ ಜಾಮೀನು ನೀಡಿತ್ತು. ಅದಾದ ವಾರದ ನಂತರ ಮತ್ತೊಮ್ಮೆ ಮಧ್ಯಂತರ ಜಾಮೀನು ಸಿಕ್ಕಿದೆ. ವೈದ್ಯಕೀಯ ಕಾರಣಗಳಿಗಾಗಿ ಸರ್ವೋಚ್ಚ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದ ಕೂಡಲೇ, ಅಸಾರಾಂ ಪರ ವಕೀಲರು ಹೈಕೋರ್ಟ್ನಲ್ಲಿ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದರು. ಅರ್ಜಿಯ ಸ್ವರೂಪವು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದಂತೆಯೇ ಇದೆ ಎಂದು ಪರಿಗಣಿಸಿದ ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೀತ್ ಕುಮಾರ್ ಮಾಥುರ್ ಅವರಿದ್ದ ವಿಭಾಗೀಯ ಪೀಠವು, ಆಸಾರಾಂಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಏಕಲಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ನೇಮಕ ಮಾಡಲಾಗಿದೆ. ಏಕಲಾರ ಗ್ರಾಮದ ಬಾಬುರಾವ್ ತಂದೆ ಮಾಧುರಾವ್ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಕೊಳ್ಳುರ ಗ್ರಾಮದ ಪ್ರಕಾಶ್ ತಂದೆ ಶರಣಪ್ಪ ದೆಗಲವಾಡೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನೂತನ ನಿರ್ದೇಶಕರುಗಳಾದ ಚಂದ್ರಕಾಂತ್, ಪ್ರಕಾಶ್ ಶಿವರಾಜ್, ಸುಭಾಷ್, ಶರಣಪ್ಪ, ದೇವಿದಾಸ್, ಎಂ.ಡಿ.ಮುಲ್ತಾನಿ, ನಾಗಭೂಷಣ್, ಸುಲೋಚನಾ, ಮಂಗಳಾದೇವಿ, ಮುಖಂಡರಾದ ಶಿವಶಂಕರ ಮಣಿಗೆಪೂರೆ, ಸುಧಾಕರ ಕೊಳ್ಳುರ, ಸೂರ್ಯಕಾಂತ್ ಮಗ್ಗೆ, ಕಾಶಿನಾಥ ದಾಬಡೆ, ಗಣಪತಿ ರಾವ್, ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ಮಧ್ಯಪ್ರದೇಶದ ಬುರ್ಹಾನ್ ಪುರ್ ದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ , ಎ.ಪಿ.ಜೆ ಅಬ್ದುಲ್ ಕಲಾಂ ನ್ಯಾಷನಲ್ ಕೌನ್ಸಿಲ್ ಆಫ್ ಯಂಗ್ ಸೈಂಟಿಸ್ಟ್ , ರಾಮನ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮತ್ತು ಮ್ಯಾಕ್ರೋ ವಿಷನ್ ಅಕಾಡೆಮಿ ಬುರ್ಹಾನ್ ಪುರ ರವರ ಸಂಯುಕ್ತ ಆಶ್ರಯದಲ್ಲಿ ನಡೆದ 5 ನೇ ಭಾರತೀಯ ಸೈನ್ಸ್ ಟೆಕ್ನೋ ಫೆಸ್ಟಿವಲ್ ( BSTF )– 2025ನಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ವೈಯಕ್ತಿಕ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ ಹತ್ತನೇ ತರಗತಿಯ ವಿಧ್ಯಾರ್ಥಿಯಾದ ಭರತ್.ಎಂ ತೃತೀಯ ಸ್ಥಾನವನ್ನು ಗಳಿಸಿದ್ದಾನೆ. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾರತದ ಪ್ರಖ್ಯಾತ ವಿಜ್ಞಾನಿಗಳಾದ ಡಾ.ಜೆ.ಜೆ.ರಾವಲ್, ಡಾ.ಬಿ.ಕೆ.ತ್ಯಾಗಿ, ಡಾ.ದಿಲೀಪ್ ಬಟ್ , ಡಾ.ಡಿ.ಕೆ.ಪಾಂಡೆ, ಡಾ.ಪುಲಕೇಷಿ ಪ್ರಜಾಪತಿ, ಡಾ.ಚಂದ್ರಮೌಳಿ ಜೋಷಿ, ಹಾಗೆಯೇ ಏಷ್ಯಾ ಖಂಡದ ಪ್ರತಿಷ್ಟಿತ ಕಾಲೇಜ್ ಆದ ಮ್ಯಾಕ್ರೋ ವಿಷನ್ ಅಕಾಡೆಮಿಯ ಸಂಸ್ಥಾಪಕರಾದ ಆನಂದ್ ಪ್ರಕಾಶ್ ಚೌಕ್ಷೆ, NCTS ನ ರಾಷ್ಟೀಯ ಕಾರ್ಯದರ್ಶಿ ಸಂದೀಪ್ ಪಾಟೀಲ್ ಮತ್ತು NCTS ನ…

Read More

ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೊರಟಿದ್ದ ಮೆಮು ಪ್ಯಾಸೆಂಜರ್ ರೈಲು ಹಳಿ ತಪ್ಪಿದ ಘಟನೆ ನಡೆದಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇಂದು ಬೆಳಿಗ್ಗೆ 5.25ರ ಸುಮಾರಿಗೆ ವಿಲ್ಲುಪುರಂ-ಪುದುಚೇರಿ ಮೆಮು ಪ್ಯಾಸೆಂಜರ್ ರೈಲು ಸುಮಾರು 500 ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ನಿಲ್ದಾಣದಿಂದ ಹೊರಟ ಕೆಲ ಸಮಯದ ನಂತರ ವಕ್ರರೇಖೆ ದಾಟುತ್ತಿದ್ದ ಸಂದರ್ಭ ರೈಲಿನ ಒಂದು ಭೋಗಿ ಹಳಿತಪ್ಪಿದೆ. ಇದನ್ನು ಗಮನಿಸಿದ ಲೊಕೊ ಪೈಲಟ್ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಹೀಗಾಗಿ ಅನಾಹುತ ತಪ್ಪಿದೆ. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆಗೆ ಕಾರಣ ಏನೆಂಬುದು ತನಿಖೆ ಪೂರ್ಣಗೊಂಡ ಬಳಿಕವಷ್ಟೇ ತಿಳಿದು ಬರಬೇಕಿದೆ. ರೈಲು ಹಳಿ ತಪ್ಪಿದ ಕಾರಣ ವಿಲ್ಲುಪುರಂ ಮಾರ್ಗದಲ್ಲಿ ಬೆಳಿಗ್ಗೆ 8.30ರವರೆಗೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಎಲ್ಲಾ ಪಕ್ಷಗಳ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಮಕರ ಸಂಕ್ರಾಂತಿ ಗಿಫ್ಟ್ ನೀಡಿದ್ದು, ಶಾಸಕರಿಗೆ ತಲಾ 10 ಕೋಟಿ ಅನುದಾನ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡುತ್ತಿರುವುದಾಗಿ ಘೋಷಿಸಿದರು. ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಕೊರತೆ ಬಗ್ಗೆ ಪ್ರಸ್ತಾಪಮಾಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ‘ಭಾನುವಾರವಷ್ಟೇ ಕಡತಕ್ಕೆ ಸಹಿ ಹಾಕಿದ್ದೇನೆ. ಕಾಂಗ್ರೆಸ್ ಶಾಸಕರು ಮಾತ್ರವಲ್ಲ ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ಶಾಸಕರು, 10 ಕೋಟಿ…

Read More

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಂಬಡಗಟ್ಟಿಯ ಸಮೀಪ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಕಾರು ಅಪಘಾತವಾಗಿದೆ. ಘಟನೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೂ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಎಲ್ ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ…

Read More

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್– ಬಿಇಎಲ್ ಭಾರತದಾದ್ಯಂತ ತನ್ನ ಘಟಕಗಳಲ್ಲಿ ನೇಮಕ ಮಾಡಲು ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತರು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ನೇಮಕಾತಿ ಪ್ರಾಧಿಕಾರ: ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಹುದ್ದೆಯ ಹೆಸರು: ಪ್ರೊಬೇಷನರಿ ಇಂಜಿನಿಯರ್ ಗಳು (ಇಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್) ಒಟ್ಟು ಹುದ್ದೆಗಳ ಸಂಖ್ಯೆ: 350 ವೇತನ: 40,000- 1,40,000. (ಬೇಸಿಕ್ ಪೇ ಜತೆಗೆ ಡಿಎ, ಹೆಚ್ ಆರ್ ಎ, ಪ್ರಯಾಣ ಭತ್ಯೆ, ಕಾರ್ಯದಕ್ಷತೆ ಭತ್ಯೆ, ಮೆಡಿಕಲ್ ಪೇ, ಇತರೆ ಭತ್ಯೆ ನೀಡಲಾಗುತ್ತದೆ. ಹುದ್ದೆಗಳು ಮತ್ತು ಸಂಖ್ಯೆ: ಪ್ರೊಬೇಷನರಿ ಇಂಜಿನಿಯರ್ (ಇಲೆಕ್ಟ್ರಾನಿಕ್ಸ್) ಇನ್ ಇ–II ಗ್ರೇಡ್ ಹುದ್ದೆಗಳು: 200 ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) ಇನ್ ಇ–II ಗ್ರೇಡ್ : 150 ಒಟ್ಟು 350 ಹುದ್ದೆಗಳ ಪೈಕಿ ಸಾಮಾನ್ಯ ಅರ್ಹತೆಯವರಿಗೆ 143, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 35, ಒಬಿಸಿ ಎನ್ಸಿಎಲ್ ಅಭ್ಯರ್ಥಿಗಳಿಗೆ 94, ಎಸ್ಸಿ ಅಭ್ಯರ್ಥಿಗಳಿಗೆ 52, ಎಸ್ಟಿ ಅಭ್ಯರ್ಥಿಗಳಿಗೆ 26 ಹುದ್ದೆಗಳು ಮೀಸಲಿಡಲಾಗಿದೆ. ಅರ್ಹತೆಗಳು: *…

Read More