Author: admin

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಜಿಲ್ಲೆಯ ಭಾಗದಲ್ಲಿನ ಕಾಲುವೆ ನಿರ್ಮಾಣ ಕಾಮಗಾರಿಗೆ ಬುಕ್ಕಾಪಟ್ಟಣದಿಂದ ಚಿಂಕಾರದವರೆಗಿನ ವನ್ಯ ಜೀವಿ ಸಂರಕ್ಷಣಾ ಕ್ಷೇತ್ರದ 51.32 ಹೆಕ್ಟೇರ್ ಪ್ರದೇಶವನ್ನು ಬಳಸಿಕೊಳ್ಳಲು ಭಾರತ ಸರ್ಕಾರದ ಅರಣ್ಯ ಇಲಾಖೆ ಅನುಮೋದನೆಯನ್ನು ನೀಡಿ ಆದೇಶ ಹೊರಡಿಸಿದೆಯೆಂದು ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣನವರು ತಿಳಿಸಿದ್ದಾರೆ. ಭಾರತ ಸರ್ಕಾರದ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿ ದಿನಾಂಕ ಡಿ.21ರಂದು ನಡೆದ ಸಭೆಯಲ್ಲಿ ಈ ಬಗ್ಗೆ ಶಿಪಾರಸ್ಸು ಮಾಡಿತ್ತು. ಇದಕ್ಕನುಗುಣವಾಗಿ ಭಾರತ ಸರ್ಕಾರದ ಅರಣ್ಯ ಇಲಾಖೆ ಇಂದು ದಿನಾಂಕ ಜ.13ರಂದು ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಗೆ ಪತ್ರ ಮುಖೇನ ತಿಳಿಸಿ, ತುಮಕೂರು ಜಿಲ್ಲೆಯಲ್ಲಿನ ಬುಕ್ಕಾಪಟ್ಟಣದಿಂದ ಚಿಂಕಾರದವರೆಗಿನ ವನ್ಯ ಜೀವಿ ಸರಂಕ್ಷಣಾ ಕ್ಷೇತ್ರದ 51.32 ಹೆಕ್ಕೆರ್ ಪ್ರದೇಶವನ್ನು ಬಳಸಿಕೊಳ್ಳಲು ಅನುಮತಿ ನೀಡಿದೆಯೆಂದು ಕೇಂದ್ರ ಸಚಿವ ಸೋಮಣ್ಣನವರು ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ನೀರಾವರಿ ಅಭಿವೃದ್ಧಿಯ ದಿಶೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ…

Read More

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇದೇ ತಿಂಗಳು 18 ಮತ್ತು 19ರಂದು ಕುಣಿಗಲ್‌ ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿಎಸ್‌ ಎಸ್ ಐ ಟಿ ಆವರಣದ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಇಂದು ಪೂಜೆ ಸಲ್ಲಿಸಲಾಯಿತು. ಇದೇ ತಿಂಗಳ ಜನವರಿ18ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಆಶಯದಂತೆ ಕಾರ್ಯಕ್ರಮ ಮೂಡಿ ಬರಲಿದೆ, ಇದೇ ದಿನ ಬೆಳಗ್ಗೆ 8 ರಿಂದ ಟೌನ್ ಹಾಲ್ ವೃತ್ತದಿಂದ ನಡೆಯಲಿರುವ ಪತ್ರಕರ್ತರ ಬೃಹತ್ ಮೆರವಣಿಗೆ ಐತಿಹಾಸಿಕವಾಗಲಿದ್ದು, ಎಲ್ಲಾ ಪತ್ರಕರ್ತರು ಶಿಸ್ತು ಸಂಯಮದಿಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರ್‌ ಅವರು ತಿಳಿಸಿದ್ದಾರೆ. ಕಾ.ನಿ.ಪ. ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್‌ ಅವರು ಮಾತನಾಡಿ, ಕಲ್ಪತರು ನಾಡಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಇತಿಹಾಸ ನಿರ್ಮಾಣ…

Read More

ತುಮಕೂರು: ಗ್ರಾಮಾಂತರ ತಾಲ್ಲೂಕು ವ್ಯಾಪ್ತಿ ಬೆಳಗುಂಬ ಗ್ರಾಮದಲ್ಲಿ ಜನವರಿ 14 ರಿಂದ 16ರವರೆಗೆ ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಯಂತಿ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಕೆಲವು ಕಿಡಿಗೇಡಿಗಳು ಭಂಗತರುವಂತಹ ಸಾಧ್ಯತೆ ಇರುವುದರಿಂದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಜನವರಿ 14ರ ಬೆಳಿಗ್ಗೆ 6 ರಿಂದ 16ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾವಧಿಯಲ್ಲಿ ಬೆಳಗುಂಬ ಗ್ರಾಮದಲ್ಲಿರುವ ಲಿಕ್ಕರ್ ಮಾರ್ಟ್, ಸಿಎಲ್–2 ಸನ್ನದನ್ನು ಮುಚ್ಚಲು ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಜನವರಿ 17 ಮತ್ತು 18ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರ(ಅಧ್ಯಯನ ಕೇಂದ್ರ)ಗಳನ್ನು ತೆರೆಯಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಜನವರಿ 18ರೊಳಗೆ ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ https://ksouportal.com/reg_sc/StudyCentreRegistration.aspx ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಡೀನ್(ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು–06 ಇವರಿಗೆ ಸಲ್ಲಿಸಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ, ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ಅಥವಾ ದೂ.ವಾ.ಸಂಖ್ಯೆ-0816-2955580, ಮೊ.ಸಂ.9844506629ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ: ಲೋಕೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ…

Read More

ತುಮಕೂರು: ತೋಟಗಾರಿಕೆ ಇಲಾಖೆಯು ಜನವರಿ 26 ರಿಂದ 28ರವರೆಗೆ 3 ದಿನಗಳ ಕಾಲ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ ತೋಟಗಾರಿಕೆ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ತೋಟ, ಸಂಸ್ಥೆಯ ತೋಟ, ಆಸ್ಪತ್ರೆ ತೋಟ, ಶಿಕ್ಷಣ ಸಂಸ್ಥೆಯ ತೋಟ, ಆಡಳಿತ ಕಚೇರಿ ತೋಟ, ಹೋಟೆಲ್ ತೋಟ, ಸಿನಿಮಾ ಥಿಯೇಟರ್ಗಳ ತೋಟ, ನರ್ಸಿಂಗ್ ಹೋಮ್ ತೋಟ, ಗುಲಾಬಿ ತೋಟ, ಔದ್ಯೋಗಿಕ ತೋಟ, ಅಥಿತಿ ಗೃಹಗಳ ತೋಟ, ಕ್ವಾಟ್ರಸ್ ತೋಟ, ಸಾರ್ವಜನಿಕ ಉದ್ಯಾನವನ, ಖಾಸಗಿ ತೋಟ, ಖಾಸಗಿ-ಸರ್ಕಾರಿ ಸಂಸ್ಥೆಗಳ/ ಮನೆಗಳ ಮುಂಭಾಗದ ಕೈತೋಟ, ಅಲಂಕಾರಿಕ ಉದ್ಯಾನವನಗಳ ತೋಟ, ಛಾವಣಿ ತೋಟ, ಮನೆಗಳ ಒಳಾಂಗಣ ಅಲಂಕಾರ ತೋಟ, ಕುಂಡದಲ್ಲಿ ಬೆಳೆಸಿದ ಅಲಂಕಾರಿಕ ಗಿಡಗಳು, ತರಕಾರಿಗಳು, ಹಣ್ಣುಗಳ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಾಗೂ ಖಾಸಗಿ ಸಂಸ್ಥೆಗಳಿಗೆ 50 ರೂ.ಗಳ ಅರ್ಜಿ ಶುಲ್ಕವನ್ನು ನಿಗಧಿಪಡಿಸಲಾಗಿದೆ. ಸರ್ಕಾರಿ ಸಂಸ್ಥೆಯವರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು…

Read More

ತುಮಕೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಇಲಾಖೆಯು ಖಾಸಗಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2024–25ನೇ ಸಾಲಿನ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅವಕಾಶ ಕಲ್ಪಿಸಿದ್ದು, ತುಮಕೂರು ತಾಲ್ಲೂಕಿನ ಖಾಸಗಿ ಶಾಲಾ ಆಡಳಿತ ಮಂಡಳಿಯವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 14ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಸಿರಿಧಾನ್ಯ ಕುರಿತು ಜನಾಂದೋಲನ ರೂಪದಲ್ಲಿ ಪ್ರಚಾರ ಕೈಗೊಂಡು ರಾಜ್ಯವನ್ನು ಸಿರಿಧಾನ್ಯಗಳಿಗೆ ಜಾಗತಿಕ ಕೇಂದ್ರವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2 ದಿನಗಳ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಒನಕೆಯಲ್ಲಿ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳು ಹೆಚ್ಚಿನ ರೋಗ ನಿರೋಧಕ ಶಕ್ತಿಯೊಂದಿಗೆ ಹೇರಳವಾದ ಪೋಷಕಾಂಶಗಳನ್ನು ಹೊಂದಿವೆ. ಸಿರಿಧಾನ್ಯ ಸೇವನೆಯಿಂದ ಆರೋಗ್ಯವರ್ಧನೆಯಾಗುವುದಲ್ಲದೆ ರೋಗ ಮುಕ್ತರಾಗಿ ಆಸ್ಪತ್ರೆಯಿಂದ ದೂರವಿರಬಹುದು ಎಂದು ತಿಳಿಸಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಿರಿಧಾನ್ಯ ಪದಾರ್ಥಗಳ ಸೇವನೆಯ ಅಭ್ಯಾಸ ಮಾಡಿಸಬೇಕು. ನಿಧಾನವಾಗಿ ಜೀರ್ಣವಾಗಿ ದೇಹಕ್ಕೆ ಶಕ್ತಿವರ್ಧಕವಾಗಿ ಕೆಲಸ ಮಾಡುವ ಗುಣಧರ್ಮವನ್ನು ಹೊಂದಿರುವ ಸಿರಿಧಾನ್ಯಗಳನ್ನು ಜನರು ಹೆಚ್ಚಾಗಿ ಬಳಸಬೇಕು ಎಂದರಲ್ಲದೆ, ಜಿಲ್ಲೆಯು ಸಿರಿಧಾನ್ಯಗಳ ತವರೂರು ಎಂದೆನೆಸಿಕೊಂಡಿದೆ. ಜಿಲ್ಲೆಯ ಸುಮಾರು…

Read More

ತುಮಕೂರು:ತುಮಕೂರು ರನ್ನರ್ಸ್ ಅಸೋಸಿಯೇಶನ್ ವತಿಯಿಂದ ರಾಷ್ಟ್ರೀಯ ಯುವದಿನದ ಅಂಗವಾಗಿ ತುಮಕೂರು ಮ್ಯಾರಥಾನ್–2025ಅನ್ನು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಒಟ್ಟು 720 ಸ್ಪರ್ಧಾಳುಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ತುಮಕೂರು ಅರ್ಬನ್ ರೆಸಾರ್ಟ್ ಮಾಲೀಕರಾದ ಶ್ರೀಕಂಠಸ್ವಾಮಿ ಹಾಗೂ ಚನ್ನಬಸವ ಪ್ರಸಾದ್, ಸಿದ್ದಿ ಬಯೋ ಮಾಲೀಕರಾದ ರುದ್ರಪ್ರಕಾಶ್ ಹಾಗೂ ಆದರ್ಶ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮ್ಯಾರಥಾನ್ ಗೆ ಚಾಲನೆ ನೀಡಿದರು. 5,000 ಮೀ.ಓಟದ ಪುರುಷರ ವಿಭಾಗದಲ್ಲಿ ರಾಜೇಂದ್ರ ಪ್ರಸಾದ್ ಎಸ್. ಜವಳಿ, ವಿವೇಕ್ ಎನ್. ಹಾಗೂ ದೇವರಾಜ್ ಸಿಂಗ್ ಮೊದಲನೆಯ ಮೂರು ಬಹುಮಾನ ಪಡೆದರು. ಮಹಿಳೆಯರ ವಿಭಾಗದಲ್ಲಿ ಪೃಥ್ವಿ, ನವ್ಯಶ್ರೀ ಹಾಗೂ ಬೃಷ್ಟಿ ಪರಾಶರ್ ಮೊದಲ ಮೂರು ಬಹುಮಾನ ಪಡೆದರು. 10 ಸಾವಿರ ಮೀಟರ್ ಓಟದ ಪುರುಷರ ವಿಭಾಗದಲ್ಲಿ ಎಂ.ವೈ.ಸಂದೀಪ್ಕುಮಾರ್, ತೈಚಿಜಕಿಮಿ ಮತ್ತು ಸಾಯಿ ಮನೋಹರ್ ಮೊದಲ ಮೂರು ಬಹುಮಾನ ಪಡೆದರು. ಮಹಿಳೆಯರ ವಿಭಾಗದಲ್ಲಿಆಲಿಯಾ ಶೇಕ್, ರಮ್ಯಾ ಎಸ್. ಹಾಗೂ ಕೆ.ಸಿ.ಮಧುರ ಮೊದಲ ಮೂರು ಬಹುಮಾನ ಪಡೆದರು. 21 ಸಾವಿರ ಮೀಟರ್ ಓಟದ ಪುರುಷರ ವಿಭಾಗದಲ್ಲಿಅವಧೇಶ್…

Read More