Author: admin

ಪಾವಗಡ: ತಾಲ್ಲೂಕಿನ ಸೇವಾ ಟ್ರಸ್ಟ್ ಮತ್ತು ಹೆಲ್ಪ್ ಸೊಸೈಟಿ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು. ಈ  ಸ್ಪರ್ಧೆಯಲ್ಲಿ ಮೊದಲನೇ ಬಹುಮಾನ  ಪವಿತ್ರ, ಎರಡನೇ ಬಹುಮಾನ, ಭಾರ್ಗವಿ ರಾಮ್, ಮೂರನೇ ಬಹುಮಾನ, ಮೋನಿಕಾ ನಾಲ್ಕನೇ ಬಹುಮಾನ, ಚಾಮುಂಡಿ, ಐದನೇ ಬಹುಮಾನ, ಶ್ರೀದೇವಿ, ಮತ್ತು ಸಮಾಧಾನಕರ ಬಹುಮಾನ, ಗಾಯತ್ರಿ, ಮತ್ತು ವಿಶೇಷವಾಗಿ ಗಂಡು ಮಕ್ಕಳಿಂದ ರಂಗೋಲಿ ಬಿಡಿಸಿದ ಕಾರ್ತಿಕ್ ರವರಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ವಿಜೇತರಿಗೆ ಮಾಜಿ ಪುರಸಭಾ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ ವಿಜೇತರಿಗೆ ಶುಭ ಹಾರೈಸಿ ಬಹುಮಾನ ನೀಡಿದರು. ಈ  ಕಾರ್ಯಕ್ರಮಕ್ಕೆ ಸಹಕಾರ ನೀಡಿದ ರಂಗರಾವ್ ವೈಸ್ ಪ್ರೆಸಿಡೆಂಟ್ ಕಮ್ಮವಾರಿ ಸಂಘ ಹೊಸದುರ್ಗ, ಕಮಲ್ ಬಾಬು ಸ್ಕೌಟ್ಸ್ ಮತ್ತು ಗೈಡ್ಸ್  ಅಧ್ಯಕ್ಷರು, ರೋಟರಿ ಅಧ್ಯಕ್ಷರಾದ ರಾಮಾಂಜಿ, ಶಶಿಕುಮಾರ್, ಸಂದೀಪ್, ವೆಂಕಟೇಶ್, ಪಾಂಡು, ಚಂದ್ರ ಮೌಳಿ, ರಾಮಚಂದ್ರ ದಾನ ಫೌಂಡೇಶನ್, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕಾಣಿಕೆ ನೀಡಲಾಯಿತು, ಈ ಸ್ಪರ್ಧೆಯಲ್ಲಿ 37 ಮಹಿಳೆಯರು ಪಾಲ್ಗೊಂಡಿದ್ದರು, ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ  ನಾಗರಾಜ್,…

Read More

ಲಕ್ನೋ:  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಕರ ಸಂಕ್ರಾಂತಿ ಮತ್ತು ಖಿಚಡಿ ಹಬ್ಬದಂದು ರಾಜ್ಯದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದು ಇಲ್ಲಿ ಬಿಡುಗಡೆ ಮಾಡಿದ ಶುಭಾಶಯ ಸಂದೇಶದಲ್ಲಿ, ಮಕರ ಸಂಕ್ರಾಂತಿಯ ವಿಶೇಷ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೂಪದಲ್ಲಿ ಆಚರಿಸಲಾಗುತ್ತದೆ.  ಈ ಹಬ್ಬವು ನಮ್ಮ ದೇಶದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ಏಕತೆಯ ಸಂಕೇತವಾಗಿದೆ.  ಈ ವರ್ಷದ ಮಕರ ಸಂಕ್ರಾಂತಿ ಕೂಡ ಬಹಳ ಮಹತ್ವದ್ದಾಗಿದೆ ಏಕೆಂದರೆ ಮಹಾಕುಂಭ ಪ್ರಯಾಗರಾಜ್–2025 ರ ಮೊದಲ ಅಮೃತ ಸ್ನಾನವು ಈ ಹಬ್ಬದಂದು ಪೂರ್ಣಗೊಳ್ಳಲಿದೆ ಎಂದಿದ್ದಾರೆ. ಮಕರ ಸಂಕ್ರಾಂತಿಯನ್ನು ಭಾರತದಾದ್ಯಂತ ವಿವಿಧ ರೂಪಗಳಲ್ಲಿ ಆಚರಿಸಲಾಗುತ್ತದೆ ಎಂದು ತಿಳಿದಿದೆ.  ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇದನ್ನು ಖಿಚಡಿ ಹಬ್ಬವಾಗಿ ಆಚರಿಸಲಾಗುತ್ತದೆ.  ಈ ದಿನ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿ ಉತ್ತರಾಯಣನಾಗುತ್ತಾನೆ.  ಉತ್ತರಾಯಣವನ್ನು ಸಕಾರಾತ್ಮಕತೆಯ ಸಂಕೇತವೆಂದು ಪರಿಗಣಿಸಲಾಗಿದೆ ಎಂದರು. ಮಕರ ಸಂಕ್ರಾಂತಿಯಂದು ಸೂರ್ಯದೇವನ ರಾಶಿಚಕ್ರದ…

Read More

ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸ್ಪಷ್ಟವಾಗಿ ಹೇಳುತ್ತೇನೆ, ಯಾವುದೇ ರೀತಿಯ ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ ಅದರ ಅಗತ್ಯವೂ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕೆಲವರು ಅನವಶ್ಯಕವಾಗಿ ಮಾಧ್ಯಮಗಳಲ್ಲಿ ಚರ್ಚೆ ಹುಟ್ಟುಹಾಕುತ್ತಿದ್ದಾರೆ. ಅದು ಸತ್ಯಕ್ಕೆ ದೂರವಾದ ಮಾತು. ಯಾವ್ದೆ ರೀತಿಯ ಚರ್ಚೆ ನಡೆಯುತ್ತಿಲ್ಲ ಎಂದರು. ಸಿಎಲ್ ಪಿ ಅಧಿವೇಶನದ ಸಂದರ್ಭದಲ್ಲಿ ನಡೆಯಲಿದೆ. ಕೆಲವು ಸಂದರ್ಭದಲ್ಲಿ ಸಿಎಲ್ ಪಿ ಸಭೆಯನ್ನು ಕೂಡ ಮಾಡುತ್ತೇವೆ. ಪಕ್ಷದ ನಾಯಕರು ಕರೆಯುತ್ತಾರೆ. ಈ ಬಾರಿ ಕರೆದಿರುವುದು ನನಗೆ ತಿಳಿದಿರುವ ಹಾಗೆ, ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದು, ಅದನ್ನು ಚರ್ಚೆ ಮಾಡಲು ಕರೆದಿದ್ದಾರೆ ಎಂದರು. ಜಾತಿ ಜನಗಣತಿ ವರದಿಯು ಬಂದಿದ್ದು ಅದನ್ನು ಮಂಡಿಸುವ ಬಗ್ಗೆ ಚರ್ಚಿಸಲು ಸಭೆ ಕರೆದಿರಬಹುದು. ಆದ್ರೆ ಇನ್ನೂ ಸಭೆಯ ಅಜೆಂಡಾ ಬಂದಿಲ್ಲ ಎಂದರು. ಸುರ್ಜೆವಾಲಾ ಬಂದಿದ್ದಾರೆ. ಸಿಎಲ್ ಪಿ ಸಭೆ ಹೋಗುತ್ತೇನೆ. ಎಲ್ಲಾ ಶಾಸಕರು ಸಭೆಗೆ ಬರುತ್ತಾರೆ ಎಂದರು. ಡಿನ್ನರ್ ಸಭೆ ಮುಂದೂಡಿದ್ದೇವೆ.…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದಿದ್ದಾರೆ. ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತ್ವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್ ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಬಿಜೆಪಿ ತನ್ನ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಒಗ್ಗಟ್ಟಾಗಿದೆ. ಸಿದ್ದರಾಮಯ್ಯ ಸಿಎಂ. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಅದನ್ನು ಪಕ್ಷದ ನಾಯಕತ್ವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುತ್ತಾರೆಂದು ಹೇಳಿದರು.…

Read More

ತಿಪಟೂರು:  ನಗರ ಹಾಗೂ ತಾಲೂಕಿನ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸಲು ನಾನು ಬದ್ಧನಾಗಿದ್ದೇನೆ ಎಂದು ತಿಪಟೂರು ಶಾಸಕ ಕೆ. ಷಡಕ್ಷರಿ ತಿಳಿಸಿದರು. ಇದರ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ ನಗರದ ಜನಸಂಖ್ಯೆ ಈಗಾಗಲೇ ಒಂದು ಲಕ್ಷ ಮೀರುತ್ತಿದ್ದು,  ನೀರಿನ ಅವಶ್ಯಕತೆ ಹೆಚ್ಚಾಗುತ್ತದೆ. ಭವಿಷ್ಯದ ದೂರದೃಷ್ಟಿ ಇಟ್ಟುಕೊಂಡು ಯೋಜನೆ ರೂಪಿಸಬೇಕಿದೆ ಎಂದರು. ಈಚನೂರು ಕೆರೆ ಸಂಗ್ರಹಗಾರಿಕೆ ಪರ್ಯಾಯ ಮೊಲಗಳಿಂದ ಕುಡಿಯುವ ನೀರು ಒದಗಿಸಲು ಸಮೀಕ್ಷೆ ಮಾಡಿದ್ದು ನೀಲ ನಕ್ಷೆ ತಯಾರಿಸಲಾಗಿದೆ ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಚಿವರ ಜೊತೆ ಚರ್ಚಿಸಲಾಗಿದ್ದು, ಕೆರೆಯ ನೀರು ಯಾರ ಸ್ವತ್ತು ಅಲ್ಲ, ಕುಡಿಯುವ ನೀರಿಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಕೇಳಿದೆ. ನೀರಿನ ಮೂಲ ಗುರುತಿಸಿ ನಗರದ ಜನತೆಗೆ ನಿರಂತರ ಕುಡಿಯುವನೀರು ಪೂರೈಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಅವಶ್ಯಕತೆ ಇರುವ ಕಡೆ ನೂತನ ಪೈಪ್ ಲೈನ್ ಅಳವಡಿಕೆ,  ಅವಶ್ಯಕತೆ ಇರುವ ಕಡೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು. ನಾನು…

Read More

ಪಾವಗಡ: ತಾಲೂಕಿನ ಜ್ಞಾನ ಬೋಧನಿ ಶಾಲೆಯ ವಾರ್ಷಿಕೋತ್ಸವ “ಸಂಭ್ರಮ 2025” ಭಾನುವಾರ ಸಂಜೆ ಭವ್ಯವಾಗಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಪಾವಗಡ ಘಟಕದ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  “ಕಲಿಕೆ ಎನ್ನುವುದು ಮಾನವ ಜೀವನದ ಬಹುಮುಖ್ಯ ಭಾಗ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು, ಉತ್ಸಾಹವನ್ನು ನಿಂದಿರುವ ಜ್ವಾಲೆಯಂತೆ ಪ್ರಜ್ವಲಿಸುತ್ತ ಕೊಂಡೊಯ್ಯಬೇಕು. ಈ ರೀತಿಯ ಕಾರ್ಯಕ್ರಮಗಳು ಅವರ ಪ್ರತಿಭೆಗಳನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು. ಪೋಷಕರ ಪಾತ್ರವನ್ನು ಮುಖ್ಯಗೊಳಿಸಿದ ಉದ್ದೇಶಪೂರ್ಣ ಸಂದೇಶ: ಶಾಲೆಯ ಕಾರ್ಯದರ್ಶಿ ಡಾ. ಕೆ.ಎಸ್. ಅನಿಲ್ ಕುಮಾರ್, ಪೋಷಕರ ಪಾತ್ರವನ್ನು ಪ್ರಸ್ತಾಪಿಸಿ, “ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೋಷಕರಿಂದ ದೊರೆಯುವ ಸಮಯ ಅತಿ ಮುಖ್ಯ. ಇದು ಮಕ್ಕಳಿಗೆ ನಂಬಿಕೆ ಹಾಗೂ ಶ್ರದ್ಧೆ ಮೂಡಿಸುವುದರೊಂದಿಗೆ, ಒತ್ತಡವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ಅವರು ಉತ್ತಮ ಪ್ರಗತಿಯನ್ನು ಸಾಧಿಸಬಹುದು” ಎಂದು ಹೇಳಿದರು. ಅಭಿಮಾನವನ್ನು ಹೆಚ್ಚಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು: ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ, ವಿದ್ಯಾರ್ಥಿಗಳು ತಮ್ಮ…

Read More

ತುಮಕೂರು:  ನಗರದಲ್ಲಿ ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು. ಚಾಲನೆ ನೀಡಲು ಎತ್ತಿನಗಾಡಿಯಲ್ಲಿ ಬಂದ ಸಚಿವ ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶುಭಾಕಲ್ಯಾಣ ಹಾಜರಿದ್ದರು. ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರಿಗೆ ಈ ಕಲಾ ಹಾಗೂ ಆಕರ ಆಹಾರದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 2 ದಿನಗಳ ಕಾಲ ನಡೆಯಲಿರುವ ಸಿರಿಧಾನ್ಯ ಹಬ್ಬದಲ್ಲಿ ಸಾಮೆ, ಬರಗು, ನವಣೆ, ಹಾರಕ, ಕೊರಲೆ ಸೇರಿದಂತೆ ಅನೇಕ ಸಿರಿಧಾನ್ಯಗಳನ್ನು ಪ್ರದರ್ಶಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

2025–26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀ6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ ಲೈನ್ ಕೌನ್ಸಿಲಿಂಗ್ಕ್ಷೆ ಮತ್ತು ಆನ್‌ ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 5 x 4.00 0๐๘ 25-01-2025 53, 11.590 1 ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15–02–2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು: ಯುವಜನತೆ ಸ್ವಾಮಿ ವಿವೇಕಾನಂದರಆದರ್ಶ ಮತ್ತು ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿಯಶಸ್ಸು ಸಾಧ್ಯವಿದೆ. ನಮ್ಮದೇಶದ ಮಹತ್ತರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವದಿ ಇದನ್ನು ಅರಿತು ಕಾರ್ಯೋಮುಖರಾಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಶೇಖರ್ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸಂಕ್ರಾಂತಿ ಸಂಭ್ರಮಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಕರಿಯಣ್ಣ, ಸಂಕ್ರಾಂತಿಯು ನಮ್ಮ ಧಾನ್ಯಗಳನ್ನು ಪೂಜಿಸಿ ಸಂಭ್ರಮಿಸುವ ಸಡಗರದ ಹಬ್ಬವಾಗಿದೆ. ಈಗಿನ ಯುವಜನತೆ ನಮ್ಮ ನೆಲದ ಸಂಸ್ಕೃತಿಯನ್ನು ಮರೆಯುತ್ತಿರುವ ಈ ಸಂದರ್ಭದಲ್ಲಿ ಈ ಸಂಕ್ರಾಂತಿ ಸಂಭ್ರಮದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ತುಂಬಿಸಲು ಸಾಧ್ಯವಾಗುತ್ತಿದೆ ಎಂದರು. ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ್ ಮೂರ್ತಿ, ಉಪನ್ಯಾಸಕರಾದ ಮಂಜುಳಾದೇವಿ, ರಾಜೇಶ್‌ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಪಾವಗಡ:  ಭೂಮಿಯ ಮೇಲೆ ಜನಿಸಿದ ಮೇಲೆ ಒಂದು ಸಾಧನೆಯನ್ನು ಮಾಡಿ ತಾನು ಏನೆಂದು ಸಮಾಜಕ್ಕೆ ತೋರಿಸಬೇಕು ಮತ್ತು ಪ್ರತಿಯೊಬ್ಬರು ಜಾಗೃತವಾಗುವುದರ ಜೊತೆಗೆ ಜಾಗೃತರನ್ನಾಗಿ ಮಾಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಹಿರಿಯ ಲೇಖಕರಾದ ಪ್ರೊಫೆಸರ್ ಚಿತ್ತಯ್ಯ ಪೂಜಾರ್  ತಿಳಿಸಿದ್ದಾರೆ. ಪಾವಗಡ ತಾಲೂಕಿನ ಕಿಲಾರ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ  2 ಗಂಟೆಯಲ್ಲಿ ಪತ್ರಕರ್ತ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ ಅವರು ಬರೆದಿರುವಂತಹ “ಮೌಲ್ಯಗಳು ಮರೆಯಾಗದಿರಲಿ ಇದು ಹೆತ್ತವರ ಹೊಡಲಿನ ಕೂಗು” ಎನ್ನುವ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಮಾಜದ ಸೂತ್ರಗಳನ್ನು ನಿಗಾದಿಂದ ಗಮನಿಸಿದವರು ಮಾತ್ರ ಸಮಾಜವನ್ನು ತಿದ್ದಿ ತೀಡಲು ಮುಂದಾಗುತ್ತಾರೆ, ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸೋಂಬೇರಿಗಳ ಸಂಖ್ಯೆ ಹೆಚ್ಚುತ್ತಿದೆ ಇಂತಹವರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ ಹದಿನೈದು ಸಾವಿರಕ್ಕೆ ಬೆಂಗಳೂರಿನ ತೆರಳಿ ಕೆಲಸ ಮಾಡುವುದರ ಜೊತೆಗೆ ಅನೇಕ ದುಶ್ಚಟಗಳಿಗೆ  ಬಲಿಯಾಗುತ್ತಿರುವುದು ದುಃಖಕರ ಸಂಗತಿ, ಕಲಾವಿದ ನವೀನ್ ಕಿಲಾರ್ಲಹಳ್ಳಿ ಯುವ ಸಮೂಹಕ್ಕೆ ಸಂದೇಶವೊಂದನ್ನು ನೀಡುತ್ತಾ ಗುರು ಹಿರಿಯರು ಹೆತ್ತ ತಂದೆ ತಾಯಿಯನ್ನು…

Read More