Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಹೊರವಲಯದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಆಯೋಜಿಸಲಾದ ಐಪಿಎಲ್ ಮಾದರಿಯ ಎರಡನೇ ಆವೃತ್ತಿಯ ತೊಗಟವೀರ ಪ್ರೀಮಿಯರ್ ಲೀಗ್ (TPL) ಟೂರ್ನಮೆಂಟ್ ಗೆ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಂಗ್ರೆಸ್ ಮುಖಂಡ ಹಾಗೂ ಸಮಾಜಸೇವಕ ಉಮೇಶ್ ಟಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ರಘು ಟೇಪ್ ಕಟ್ ಮಾಡುವ ಮೂಲಕ ಲೀಗ್ ಗಾಗಿ ಚಾಲನೆ ನೀಡಿದರು. ಟೂರ್ನಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಮೇಶ್ ಟಿ, “ನಗರಗಳಿಗೆ ಸ್ಥಳಾಂತರಗೊಂಡಿರುವ ನಮ್ಮ ಯುವಕರು ಹಬ್ಬ–ಹರಿದಿನಗಳಲ್ಲಿ ತಮ್ಮ ಊರಿಗೆ ಬಂದು ಹತ್ತಿರದವರೊಂದಿಗೆ ಸಂತಸವಾಗಿ ದಿನವನ್ನು ಆಚರಿಸಬೇಕೆಂದು ಈ ಟೂರ್ನಮೆಂಟ್ ಆಯೋಜಿಸಲಾಗಿದೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಆಧ್ಯಾತ್ಮ, ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೌಲ್ಯಗಳನ್ನು ಈ ಟೂರ್ನಮೆಂಟ್ ಗಳಲ್ಲಿ ಕಲಿಯಬಹುದು,” ಎಂದು ಹೇಳಿದರು. ಗ್ರಾಮದಲ್ಲಿ ಈ ರೀತಿಯ ಇನ್ನಷ್ಟು ಕ್ರೀಡಾ ಚಟುವಟಿಕೆಗಳಿಗೆ ತಮ್ಮ ಬೆಂಬಲ ಮತ್ತು ಸಹಕಾರವನ್ನು ನೀಡಲು ಅವರು…
ಹೆಚ್.ಡಿ.ಕೋಟೆ: ತಾಲೂಕಿನ ಚಿಕ್ಕಕೆರೆಯೂರು ಗ್ರಾಮದ ಗಣೇಶ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮವನ್ನು ಶುದ್ಧಗಂಗಾ ವಿಭಾಗದ ಯೋಜನಾ ಅಧಿಕಾರಿ ಯುವರಾಜ್ ಜೈನ್ ಕಸ ಗುಡಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಕ್ರಮ ಕುರಿತು ಮಾತನಾಡಿದ ಯುವರಾಜ್, ನಮಗೆ ಉತ್ತಮ ಆರೋಗ್ಯ ಲಭಿಸಬೇಕಾದರೆ ನಮ್ಮ ಸುತ್ತಲಿನ ಪರಿಸರವನ್ನು ನಾವು ಶುಚಿಯಾಗಿ ನೋಡಿಕೊಳ್ಳಬೇಕು, ಅದು ನಮ್ಮೆಲ್ಲರ ಹೊಣೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶುದ್ಧಗಂಗಾ ವಿಭಾಗದ ಯೋಜನಾಧಿಕಾರಿ ಯುವರಾಜ್ ಜೈನ್, ತಾಲೂಕು ಯೋಜನಾಧಿಕಾರಿ ಭಾಸ್ಕರ್, ಮೇಲ್ವಿಚಾರಕಿ ಪವಿತ್ರ, ಸುನಿಲ್, ಸೇವಾ ಪ್ರತಿನಿಧಿ ರೇಖಾ, ಸಂಘದ ಮಹಿಳಾ ಸದಸ್ಯರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸಮಾಜದಲ್ಲಿ ಬೆಳೆಯುತ್ತಿರುವ ಧರ್ಮ ದ್ವೇಷ, ಜಾತಿಪದ್ದತಿ, ಲಿಂಗ ಅಸಮಾನತೆ ಮತ್ತು ಅಸ್ಪೃಶ್ಯತೆಗಳನ್ನು ತೊಡೆದುಹಾಕಲು ಮಾನಸಿಕ ಮಾಲಿನ್ಯವನ್ನು ನಿವಾರಣೆ ಮಾಡಬೇಕೆಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ತುಮಕೂರು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ‘ಈ ದಿನ ಡಾಟ್ ಕಾಮ್’ ಆಯೋಜಿಸಿದ್ದ ‘ನಮ್ಮ ಕರ್ನಾಟಕ ನಡೆದು 50 ಹೆಜ್ಜೆ, ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಹಾಗೂ ನ್ಯೂಸ್ ಆಪ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬೀದಿಗಳು ಸ್ವಚ್ಛವಾಗುವುದು ಮಾತ್ರವಲ್ಲದೆ, ಭಾವ ಭಾರತೀಯತ್ವವೂ ಸ್ವಚ್ಛವಾಗಬೇಕಾಗಿದೆ. ಜನರ ಮನಸ್ಸಿನಲ್ಲಿ ಆಳವಾಗಿ ಬೇರುಬಿಟ್ಟಿರುವ ಮನುಸ್ಮೃತಿ ಮತ್ತು ಬಂಡವಾಳಶಾಹಿಯ ಮಾಲಿನ್ಯವನ್ನು ನಿವಾರಿಸಬೇಕಾಗಿದೆ” ಎಂದು ಅವರು ಹೇಳಿದರು. ಹಿರಿಯ ಸಾಮಾಜಿಕ ಚಿಂತಕ ಕೆ.ದೊರೈರಾಜ್ ಆಪ್ ಬಿಡುಗಡೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ ವಹಿಸಿದ್ದರು. ಪರಿಸರವಾದಿ ಸಿ.ಯತಿರಾಜು, ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು, ಸಾಮಾಜಿಕ ಹೋರಾಟಗಾರ ಎ.ನರಸಿಂಹಮೂರ್ತಿ, ಎಐಟಿಯುಸಿ ಮುಖಂಡ ಗಿರೀಶ್ ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ, ಅಕ್ಕಿರಾಮಪುರದ ಇತಿಹಾಸ ಪ್ರಸಿದ್ಧ ಶ್ರೀ ಅನಂತನಾಥ ಸ್ವಾಮಿ ದೇವರ ಧರ್ಮ ಸಂಸ್ಥೆ ವತಿಯಿಂದ ನಡೆದ ಶ್ರೀ ಅನಂತನಾಥ ಹಾಗೂ ಬ್ರಹ್ಮ ಯಕ್ಷರ ವಾರ್ಷಿಕ ಪೂಜೆ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನ ಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿ ಶ್ರೀ ಲಕ್ಷ್ಮಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಹಾಗೂ ಶ್ರೀ ಕ್ಷೇತ್ರ ಆರತಿಪುರ ಜೈನಮಠದ ಸ್ವಸ್ತಿ ಶ್ರೀ ಸಿದ್ದಂತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಶುಭ ಆಶೀರ್ವಾದದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಆಗ್ರೋದಕ ಉತ್ಸವ ಧ್ವಜಾರೋಹಣ ,ನಿತ್ಯ ಪೂಜೆ, ಕಳಸ ಮಹಾಭಿಷೇಕ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಷೋಡಷೋಪಚಾರ ಪೂಜೆ, ಮಹಾ ಮಂಗಳಾರತಿ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀ ಅನಂತ ನಾಥ ತೀರ್ಥಂಕರ , ಕ್ಷೇತ್ರಪಾಲ , ಬ್ರಹ್ಮ ದೇವರಿಗೆ, ಜಿನ ಶಾಸನ ದೇವಿಯರಿಗೆ ಪೂಜೆ, ಮಹಾ ಮಂಗಳಾರತಿಗಳು ನಡೆದವು. ಪುರೋಹಿತರದ ಬಸ್ತಿ ಪಾರ್ಶ್ವನಾಥ ಹಾಗೂ ಬಸ್ತಿ ಮಹಾವೀರ…
ನವದೆಹಲಿ: ಮುಂಬರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ. ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯನ್ನು ಭಾರತ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭೇಟಿಯ ವೇಳೆ ಸುಬಿಯಾಂಟೋ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ. ಪ್ರತಿ ವರ್ಷ ಭಾರತವು ವಿಶ್ವ ನಾಯಕರನ್ನು ಗಣರಾಜ್ಯೋತ್ಸವಕ್ಕೆ ಆಹ್ವಾನಿಸುತ್ತದೆ. ಕಳೆದ ವರ್ಷ ಫ್ರೆಂಚ್ ಅಧ್ಯಕ್ಷ ಇವ್ಯಾನುಯೆಲ್ ವ್ಯಾಕ್ರನ್ ಮುಖ್ಯ ಅತಿಥಿಯಾಗಿದ್ದರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್–ಸಿಸಿ ಅವರು 2023 ರಲ್ಲಿ ಈ ಸಂದರ್ಭವನ್ನು ಅಲಂಕರಿಸಿದರು. ಕೋವಿಡ್–19 ಸಾಂಕ್ರಾಮಿಕದ ದಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಯಾರು ಬಂದಿರಲಿಲ್ಲ. 2020 ರಲ್ಲಿ, ಆಗಿನ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮುಂಬೈ: ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಕಾಲಿಗೆ ಗಾಯವಾದ ಪರಿಣಾಮ ಪುಷ್ಪಾ ಶ್ರೀವಲ್ಲಿ, ರಶ್ಮಿಕಾ ಮಂದಣ್ಣ ಬೆಡ್ ರೆಸ್ಟ್ ಮಾಡುತ್ತಿದ್ದಾರೆ. ಇದೀಗ ಇನ್ ಸ್ಟಾದಲ್ಲಿ ಕಾಲಿನ ಗಾಯದ ಬಗ್ಗೆ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಜಿಮ್ ನಲ್ಲಿ ಗಾಯಗೊಂಡಿದ್ದೇನೆ. ಕೆಲ ವಾರ ಅಥವಾ ತಿಂಗಳು ವಿಶ್ರಾಂತಿಯಲ್ಲಿರುವುದಾಗಿ ರಶ್ಮಿಕಾ ತಿಳೀಸಿದ್ದಾರೆ. ಕಾಲಿನ ನೋವು ಗುಣವಾದ ತಕ್ಷಣ ಥಾಮ, ಸಿಕಂದರ್ ಮತ್ತು ಕುಬೇರ ಸೆಟ್ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆಕೋರುತ್ತೇನೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮುಂದಿನ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಎ.ಆರ್. ಮುರುಗದಾಸ್ ನಿರ್ದೇಶನದ ಮತ್ತು ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಸಿಕಂದರ್ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾಜಲ್ ಅಗರ್ವಾಲ್, ರಶ್ಮಿಕಾ, ಸತ್ಯರಾಜ್, ಶರ್ಮಾನ್ ಜೋಶಿ ಮತ್ತು ಪ್ರತೀಕ್ ಬಬ್ಬರ್ ನಟಿಸುತ್ತಿದ್ದು 2025 ರ ಈದ್ ಹಬ್ಬಕ್ಕೆ ಬಿಡುಗಡೆಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ವಿಜಯಪುರ: ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು, ಹೀಗಾಗಿ ಕಲಬುರಗಿ ಪ್ರತಿಭಟನೆಗೆ ವಿಜಯೇಂದ್ರ ಹೋಗಿಲ್ಲ ಎಂದು ಶನಿವಾರ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ದೊಡ್ಡ ಮಟ್ಟದ ಹೋರಾಟ ಆಯೋಜನೆ ಮಾಡಿದ್ದರು. ಆದರೂ, ವಿಜಯೇಂದ್ರ ಈ ಹೋರಾಟಕ್ಕೆ ಯಾಕೆ ಹೋಗಲಿಲ್ಲ? ಗೈರಾಗಿದ್ದು ಯಾಕೆ? ಸುರಕ್ಷತೆಯ ಭಯವೇ? ಇದಕ್ಕೆ ವಿಜಯೇಂದ್ರನೇ ಉತ್ತರಿಸಬೇಕು. ವಿಜಯೇಂದ್ರಗೆ ನಿಮ್ಮ ತಂದೆಯ ಎಲ್ಲ ವಿಷಯಗಳನ್ನು ಹೊರ ತೆಗೆಯುತ್ತೇನೆಂದು ಪ್ರಿಯಾಂಕ್ ಖರ್ಗೆಯವರು ಧಮ್ಕಿ ಹಾಕಿದ್ದರು. ಕಲಬುರಗಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು. ಈ ಭಯದ ಕಾರಣಕ್ಕೆ ವಿಜಯೇಂದ್ರ ಹೋಗಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್’ಗೆ ಒಳಗಾಗದ ನಾಲ್ವರನ್ನು ಗುರಿ ಮಾಡಲಾಗಿದೆ ಎಂದ ಅವರು, ನಾನು, ಸಿಟಿ.ರವಿ, ಚಕ್ರವರ್ತಿ ಸೂಲಿಬೆಲೆ, ಪ್ರಮೋದ್ ಮುತಾಲಿಕ್, ಪ್ರತಾಪ್…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿ ಮೀರಿ ಹೋಗಿದೆ ಇಷ್ಟು ದಿನ ಕಾಡಾನೆ, ಕಾಡುಕೋಣ, ಹುಲಿ ದಾಳಿ ಅಂತ ಬೇಸತ್ತಿದ ಜನ ಇದೀಗ ಚಿರತೆಗೆ ಭಯಪಡುವಂತಾಗಿದೆ. ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು, ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದ್ದು ಕಲ್ಪತರು ನಾಡಿನಲ್ಲಿ ನಡೆಯುವರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿ ನಡೆಯಬೇಕಿದೆ ಎಂದುಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ನಗರದಎಸ್ ಎಸ್ ಐಟಿಕಾಲೇಜುಕ್ಯಾಂಪಸ್ ಆವರಣದ ಸ್ಟೇಪ್ ಬಿಲ್ಡಿಂಗ್ ಸಭಾಂಗಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಕುರಿತಾಗಿತುಮಕೂರು ಜಿಲ್ಲಾ ಘಟಕದ ವಿವಿಧ ಉಪ ಸಮಿತಿಗಳ ಸಿದ್ಧತೆ ಮತ್ತು ಕಾರ್ಯವೈಕರಿಗಳ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ಶ್ರೇಷ್ಠತೆಗಳಲ್ಲಿ ವಿಶೇಷತೆ ಎನಿಸಿರುವ ತುಮಕೂರು ಜಿಲ್ಲೆಯು ಶೈಕ್ಷಣಿಕ, ಕಲೆ, ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಅದೇ ನಿಟ್ಟಿನಲ್ಲಿ ಈ ಬಾರಿ ಇಲ್ಲಿ ನಡೆಯುವ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವೂ ಕೂಡ ಇತಿಹಾಸದ ಮೈಲಿಗಲ್ಲು ಆಗಲಿದ್ದು ಅದಕ್ಕೆ ತಕ್ಕಂತಹ ಸಿದ್ಧತೆಗಳನ್ನು…
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹವೊಂದು ದಿಢೀರ್ ಆಗಿ ಸ್ಥಗಿತಗೊಂಡಿರುವ ಘಟನೆ ನಡೆದಿದ್ದು, ತಾಳಿ ಕಟ್ಟುವ ವೇಳೆ ವಧುವೇ ವಿವಾಹವನ್ನು ನಿಲ್ಲಿಸಿರುವ ವಿಡಿಯೋ ವೈರಲ್ ಆಗಿದೆ. ಮದುವೆ ಮನೆಗೆ ಮದುಮಗ ಕಂಠಪೂರ್ತಿ ಕುಡಿದು ಬಂದಿದ್ದು, ಆರತಿ ತಟ್ಟೆಯನ್ನು ಎಸೆದು ರಂಪಾಟ ಮಾಡಿದ್ದ. ತನ್ನ ಸ್ನೇಹಿತರೊಂದಿಗೆ ಜಗಳವಾಡಿ ರಂಪಾಟ ಮಾಡಿದ್ದ. ಈತನ ಜೊತೆಗೆ ಜೀವನ ಪೂರ್ತಿ ಬದುಕಬೇಕೇ? ಎನ್ನುವ ಪ್ರಶ್ನೆ ಎದ್ದಾಗಲೇ, ವಧು ತನ್ನ ಮದುವೆಯ ನಿರ್ಧಾರವನ್ನು ಬದಲಿಸಿಕೊಂಡಳು, ಮದುವೆಯನ್ನೇ ರದ್ದು ಮಾಡಿದ್ದಾಳೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮದುವೆಗೆ ನಿರಾಕರಿಸಿದ ವಧು ಬಂಧುಮಿತ್ರರಲ್ಲಿ ನನ್ನನ್ನು ಕ್ಷಮಿಸಿ ಎಂದು ಕ್ಷಮೆ ಕೋರಿದ್ದಾಳೆ. ವರನ ಕಡೆಯವರು ಕ್ಷಮೆ ಕೇಳಿ ಸಂಧಾನಕ್ಕೆ ಯತ್ನಿಸಿದರು. ಆದರೆ ತನ್ನ ಭವಿಷ್ಯದ ದೃಷ್ಟಿಯಿಂದ ವಧು ಗಟ್ಟಿ ನಿರ್ಧಾರ ತೆಗೆದುಕೊಂಡಳು. ಆಕೆಯ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…