Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಬೆಂಗಳೂರು: ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೆ. ಆದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಸಿ.ಟಿ.ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು ಮಾರ್ಜಾಲ ನ್ಯಾಯದಂತಾಗುತ್ತದೆ…
ಬೆಳಗಾವಿ: ಗಾಂಜಾ ವಿಚಾರಕ್ಕೆ ಸಹೋದರಿಬ್ಬರ ನಡುವೆ ನಡೆದ ಗಲಾಟೆ ತಮ್ಮನ ಸಾವಿನಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸುಶಾಂತ ಸುಭಾಷ್ ಪಾಟೀಲ (20) ಮೃತಪಟ್ಟ ಯುವಕನಾಗಿದ್ದು, ಈತನ ಅಣ್ಣ ಓಂಕಾರ ಸುಭಾಷ ಪಾಟೀಲ (23) ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ. ಸಹೋದರರಿಬ್ಬರೂ ಕೆಲ ವರ್ಷಗಳಿಂದ ಗಾಂಜಾ ಸೇವನೆ ಚಟ ಬೆಳೆಸಿಕೊಂಡಿದ್ದು, ಮತ್ತಿತನಲ್ಲಿ ಪೋಷಕರೊಂದಿಗೆ ಹಾಗೂ ಪರಸ್ಪರ ಜಗಳವಾಡುತ್ತಿದ್ದರು, ಶುಕ್ರವಾರ ಮನೆಕೆಲಸದ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ನೂಕಾಟ–- ತಳ್ಳಾಟದಲ್ಲಿ ಮನೆಯ ಎರಡನೇ ಮಹಡಿಯಿಂದ ಇಬ್ಬರೂ ಕೆಳಕ್ಕೆ ಬಿದ್ದಿದ್ದು, ಸುಶಾಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಓಂಕಾರ್ ಪಾಟೀಲ್ ಅವರ ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ರೋಣ: ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಮಹೇಶಕುಮಾರ ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಈ ಸಮಾರಂಭದಲ್ಲಿ ಹಲವಾರು ಪತ್ರಕರ್ತರು ಹಾಗೂ ಸ್ಥಳೀಯ ವರದಿಗಾರರು ಭಾಗವಹಿಸಿದ್ದರು. ಸಂಘದ ಚಟುವಟಿಕೆಗಳನ್ನು ಬಲಪಡಿಸಲು ಹಾಗೂ ಅದರ ವಿಸ್ತರಣೆಗೆ ಅನುಕೂಲವಾಗುವಂತೆ ಹೊಸ ಪದಾಧಿಕಾರಿಗಳ ಆಯ್ಕೆ ಮಾಡಿದಾಗ, ಭಾಗವಹಿಸಿದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು ಮತ್ತು ಮುಂದಿನ ಹಂತಗಳನ್ನು ತಲುಪಲು ಹೆಚ್ಚಿನ ಸಹಕಾರವನ್ನು ಅವಶ್ಯಕತೆ ಎಂದು ಅಭಿಪ್ರಾಯಪಟ್ಟರು. ನೂತನ ಪದಾಧಿಕಾರಿಗಳು: ತಾಲೂಕು ಅಧ್ಯಕ್ಷ: ಅಂದಪ್ಪ ಮಾದರ ಉಪಾಧ್ಯಕ್ಷ: ಎಸ್.ವಿ. ಸಂಕನಗೌಡ ಪ್ರಧಾನ ಕಾರ್ಯದರ್ಶಿ: ಮಂಜುನಾಥ್ ಹೂವಿನಹಾಳ ಸಂಘಟನಾ ಕಾರ್ಯದರ್ಶಿ: ಕನಕಪ್ಪ ಕೊತಬಾಳ ಖಜಾಂಚಿ: ಶಿವರಾಜ್ ಹುಲ್ಲೂರು ಕಾರ್ಯಕಾರಿ ಸದಸ್ಯರು: ಲಿಂಗರಾಜ ತಳ್ಳಿಹಾಳ, ರಮೇಶ ನಂದಿ, ಅಭಿಷೇಕ ಕೊಪ್ಪದ, ಶರಣಪ್ಪ ಸಂಗನಾಳ, ಶಿವಯೋಗಪ್ಪ ಬಾವಿ, ಶರಣಪ್ಪಗೌಡ ಸಕ್ಕರಗೌಡ ಆಯ್ಕೆಯಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಜೈನ ಧರ್ಮ ಪುರಾತನವಾದ ಧರ್ಮವಾಗಿದ್ದು, ಇದು ಕಡಿಮೆ ಜನಸಂಖ್ಯೆಯ ಧರ್ಮವಾಗಿದೆ, ಇದು ಸಂಸ್ಕೃತಿ , ಸಂಸ್ಕಾರ, ಶಾಂತಿ ಹಾಗೂ ಅಹಿಂಸಾ ಧರ್ಮವಾಗಿದ್ದು, ಇದರ ಮೌಲ್ಯಗಳು ಅಪಾರವಾಗಿವೆ, ಇದನ್ನು ಉಳಿಸಿ ,ಬೆಳೆಸಿ, ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕಾರ್ಯವಾಗ ಬೇಕಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕರ್ನಾಟಕ ಜೈನ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ತಿಳಿಸಿದರು. ಅವರಿಂದು ಇಲ್ಲಿನ ಕರ್ನಾಟಕ ಜೈನ ಅಸೋಸಿಯೇಷನ್ ಭವನದಲ್ಲಿ 2024– 29 ರ ಅವಧಿಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಇದು ಚಾರಿತ್ರಿಕ ದಿನವಾಗಿದ್ದು ಚುನಾವಣಾಧಿಕಾರಿಗಳು ಯಾವುದೇ ಲೋಪವಾಗದೆ ಯಶಸ್ವಿಯಾಗಿ ಚುನಾವಣೆ ನಡೆಸಿದ್ದು ಸಂತಸ ತಂದಿದೆ ಎಂದರು. ಕರ್ನಾಟಕ ಜೈನ್ ಅಸೋಸಿಯೇಷನ್ ಹಿಂದಿನ ಘಟನೆಗಳನ್ನು ಮೆಲುಕು ಹಾಕಿದ ಆವರು, 1918ರಲ್ಲಿ ಮೈಸೂರಿನಲ್ಲಿ ಆರಂಭವಾದ ಸಂಸ್ಥೆ ಹಲವು ಏಳು -ಬೀಳುಗಳ ನಡುವೆ ಹಂತ – ಹಂತವಾಗಿ ಯಶಸ್ಸು ಕಾಣುತ್ತಿದೆ, 1918 ರಲ್ಲಿ…
ತುಮಕೂರು: ನಮ್ಮ ಜೀವನ ಕ್ರಮವನ್ನು ಮುಂದಿನ ಪೀಳಿಗೆಗೆ ಸಾಗಿಸುವ ಸಂಪರ್ಕ ಸೇತುವೆಯೇ ಜಾನಪದ. ಜಾನಪದ ನಿಂತ ನೀರಲ್ಲ, ಕಾಲಕ್ಕೆ ತಕ್ಕಂತೆ ಬದಲಾಗುವ ತೊರೆಯಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೆಚ್.ಎಲ್. ಪುಷ್ಪಅಭಿಪ್ರಾಯಪಟ್ಟರು. ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ವತಿಯಿಂದ ಶನಿವಾರ ಆಯೋಜಿಸಿದ್ದ ‘ಜಾನಪದ ನಡೆ ವಿದ್ಯಾರ್ಥಿಗಳ ಕಡೆ ಎಂಬ ವಿಚಾರ ಸಂಕಿರಣ ಮತ್ತು ಜಾಣಜಾಣೆಯರ ಜಾನಪದ ಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವದ ಬೇರೆಲ್ಲಾ ಕಲೆಗಳಿಗಿಂತ ಜಾನಪದ ಕಲೆ ವಿಭಿನ್ನವಾದದ್ದು, ಪ್ರಸ್ತುತ ಜಾನಪದ ಕಲೆಯ ಅನಿವಾರ್ಯತೆ ಮತ್ತು ಅವಶ್ಯಕತೆಗಳನ್ನು ಯುವ ಪೀಳಿಗೆ ಅರಿಯಬೇಕು. ಜಾನಪದ ಹಾಡುಗಳು ನಮ್ಮ ಬದುಕಿನ ಎಲ್ಲಾ ಆಯಾಮಗಳನ್ನು ಕಟ್ಟಿಕೊಡುತ್ತವೆ. ಜಾನಪದವನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಕೆಲಸ ನಡೆಯಬೇಕಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಭು.ಜಿ. ಮಾತನಾಡಿ, ಕವಿವಾಣಿ ಹೂ, ಜನವಾಣಿ ಬೇರು, ಇವೆರಡೂ ನಮ್ಮ ಸಂಸ್ಕೃತಿಯ ಮೂಲ. ಜ್ಞಾನ ಸಂಪಾದನೆ ಸಿದ್ದಿಸುವುದು ಜಾನಪದದಿಂದ ಮಾತ್ರ. ನಮ್ಮ ವ್ಯಕ್ತಿತ್ವವನ್ನುರೂಪಿಸುವಲ್ಲಿ ಇವುಗಳ ಪಾತ್ರದೊಡ್ಡದು ಎಂದರು.…
ತುಮಕೂರು: ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಇಂಗ್ಲಿಷ್ ವಿಭಾಗವು ಪ್ರಸಿದ್ಧ ನಾಟಕಕಾರ ವಿಲಿಯಂ ಶೇಕ್ಸ್’ಫಿಯರ್ ಅವರ ಹ್ಯಾಮ್ಲೆಟ್ ಹಾಗೂ ಜೂಲಿಯಸ್ ಸೀಸರ್ ನಾಟಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿತ್ತು. ಶಿರಾ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಪ್ರಭಾಸ್ ಪಂಡಿತ್ಟಿ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಹ್ಯಾಮ್ಲೆಟ್ ನಾಟಕವನ್ನು ಮಹಾಭಾರತ ಮತ್ತು ರಾಮಾಯಣಗಳ ಸನ್ನಿವೇಶಗಳಿಗೆ ಹೋಲಿಕೆ ಮಾಡುವ ಮೂಲಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶೇಠ್ ಪ್ರಕಾಶ್ ಎಂ., ನಮ್ಮಆಲೋಚನೆಯನ್ನು ನಾಟಕಗಳು ಮತ್ತಷ್ಟು ಸುಧಾರಿಸುತ್ತವೆ, ಕಲ್ಪನಾ ಶಕ್ತಿಯನ್ನು ಹೆಚ್ಚಿಸುವುದರಜೊತೆಗೆ ಹೊಸ ರೀತಿಯ ಆಲೋಚನೆಗಳಿಗೆ ಕಾರಣವಾಗುತ್ತವೆ. ಹ್ಯಾಮ್ಲೆಟ್ ನಾಟಕವು ಬಿಎಸ್ಸಿ ಮೂರನೆಯ ಸೆಮಿಸ್ಟರ್ ನ ಭಾಗವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂದರ್ಭದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಜ್ಯೋತಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಮಕ್ಕಳನ್ನು, ಹದಿಹರೆಯದ ಯುವಜನರನ್ನು ಮೊಬೈಲ್ ನಿಂದ ಹೊರತರಲು ತುಮಕೂರಿನ ಶ್ರೀಸಿದ್ದವನ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಜನವರಿ 12ರಿಂದ 16ರವರೆಗೆ ಹೆರಿಟೇಜ್ ಸ್ಟೋರ್ಟ್ಸ್ ಕಾರ್ನಿವೆಲ್ ಹೆಸರಿನಲ್ಲಿ ದೇಶಿಯ ಪಾರಂಪರಿಕ ಕ್ರೀಡೆಗಳ ಆಯೋಜನೆ ಮಾಡಿದೆ ಎಂದು ಶ್ರೀಸಿದ್ದವನ ಪ್ರೆಂಡ್ಸ್ ಆಸೋಸಿಯೇಷನ್ ನ ಧರ್ಮರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕರೋನ ನಂತರದಲ್ಲಿ ಮಕ್ಕಳು, ಯುವಜನರು ಮೊಬೈಲ್ ಗೆ ದಾಸರಾಗಿರುವ ಪರಿಣಾಮ ಅವರ ಮಾನಸಿಕ ಆರೋಗ್ಯ ದಿನದಿಂದ ದಿನಕ್ಕೆ ಕೆಡುತ್ತಿದೆ. ಸ್ವತಹಃ ಶಿಕ್ಷಕರಾಗಿ ನಾವು ಇದನ್ನು ಗಮನಿಸಿದ್ದೇವೆ. ಹೇಗಾದರೂ ಮಾಡಿ ಮೊಬೈಲ್ ಗೀಳಿನಿಂದ ಮಕ್ಕಳು ಮತ್ತು ಯುವಜನರನ್ನು ಹೊರತರಬೇಕೆಂಬ ಉದ್ದೇಶದಿಂದ ಮೆದುಳಿಗೆ ಕೆಲಸ ನೀಡುವ, ನಲಿಯುತ್ತಲೇ ಕಲಿಯಬಹುದಾದ ಕರ್ನಾಟಕದ 8 ದೇಶಿಯ ಪಾರಂಪರಿಕ ಆಟಗಳು ಸೇರಿದಂತೆ ವಿಶ್ವದ 50 ಆಟಗಳನ್ನು ಆಡಿಸಲು ಒಂದು ವೇದಿಕೆ ಸಿದ್ದಗೊಳಿಸಲಾಗಿದೆ. ಉಪ್ಪಾರಹಳ್ಳಿ ರೈಲ್ವೆ ಅಂಡರ್ ಪಾಸ್ ಸಮೀಪವಿರುವ ಶೈವಿ ನಿವಾಸದಲ್ಲಿ ಪಾರಂಪರಿಕ ಕ್ರೀಡೆಗಳನ್ನು ಆಡಲು ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಚಟುವಟಿಕೆಯನ್ನು ಉದ್ದೀಪನಗೊಳಿಸಲು ಹೊಸ ಪ್ರಯತ್ನ…
ತುಮಕೂರು: ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಸೂಚನಾ ಫಲಕಗಳ ಅರಿವಿನ ಕಾರ್ಯಕ್ರಮ ನಡೆಯಿತು. ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಸಿದ್ದಲಿಂಗಸ್ವಾಮೀಜಿಗಳು, ಹೆಲ್ಮೆಟ್ ಧರಿಸಿಯೇ ವಾಹನ ಚಲಾಯಿಸಬೇಕು, ಅಪಘಾತಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಎಲ್ಲರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು, ಪೋಷಕರು ಚಿಕ್ಕ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ನೀಡಬಾರದು, 18ವರ್ಷಆದ ನಂತರ ಅವರಿಗೆ ಲೈಸೆನ್ಸ್ ಕೊಡಿಸಿಯೇ ವಾಹನಗಳನ್ನು ನೀಡಬೇಕು, ಮಕ್ಕಳ ಜೀವ ಮುಖ್ಯ ವಾಹನ ಚಲಾಯಿಸುವಾಗ ನಿಧಾನವಾಗಿ, ಅಂತರ ಕಾಯ್ದುಕೊಂಡು, ರಸ್ತೆ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸಬೇಕು, ಮಕ್ಕಳಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ಪೋಷಕರ ಆಕ್ರಂದನ ನೋಡಲು ಆಗುವುದಿಲ್ಲ, ಆಟೋ, ಬಸ್, ಇತ್ಯಾದಿ ವಾಹನಗಳಲ್ಲಿ ಎಷ್ಟು ಸೀಟು ಇದೆಯೋ ಅಷ್ಟೇ ಜನರನ್ನು ಹಾಕಬೇಕು, ಚಾಲಕರು ದುಡ್ಡಿನ ಆಸೆಗಾಗಿ ಹೆಚ್ಚು ಜನರನ್ನು ಕುಳ್ಳಿರಿಸಿ ಅಪಘಾತವಾದರೆ ಆ ಸಂಸಾರಕ್ಕೆ ಹೊಣೆ ಯಾರು…
ಮಂಗಳೂರು: ನಕ್ಸಲರ ಶರಣಾಗತಿ ಪ್ರಕ್ರಿಯೆ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅನುಮಾನ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಎನ್ ಕೌಂಟರ್ ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಅವರಿಗೆ ಸೇರಿದ್ದು ಎನ್ನಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸರ್ಕಾರದ ಬಳಿ ಉತ್ತರವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ನಕ್ಸಲೀಯರು ಶರಣಾಗುವುದು ಎಂದರೆ ಅದು ನಂಬಿದ ತತ್ವ ಮತ್ತು ಸಿದ್ದಾಂತಕ್ಕೆ ಮಾಡಿದ ಮೋಸ. ದುಡಿಯುವ ಜನರಿಗೆ ದ್ರೋಹ ಮಾಡಿದಂತೆ. ದುಡ್ಡು ಮಾಡಲು ಹೋಗುತ್ತಾರೆ ಎಂದು ಜನರು ಆಡಿಕೊಳ್ಳುತ್ತಾರೆ. ನಮ ಜೊತೆ ಮಾತುಕತೆಗೆ ಬನ್ನಿ ಎಂದು ಸರ್ಕಾರ ಆಹ್ವಾನಿಸುತ್ತಿದೆ. ಲಕ್ಷಗಟ್ಟಲೇ ಹಣ ಕೊಡುತ್ತೇವೆ ಎನ್ನುತ್ತಾರೆ. ನಾವು ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವುದೆಂದರೆ ನಮನ್ನು ನಾವು ಮಾರಿಕೊಂಡಂತೆ ಎಂದು ವಿಕ್ರಮ್ ಗೌಡ ಹೇಳಿರುವ ಆಡಿಯೋ ಬಹಿರಂಗಗೊಂಡಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆಯೂ…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳ ಮಾಂಸ ನೀಡಲು ಬೇಟೆಯಾಡುತ್ತಿದ್ದ ಶಾರ್ಪ್ ಶೂಟರ್ ಸೇರಿದಂತೆ ಮೂವರನ್ನು ಸಂಚಾರಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನಗರದ ತೋಟದಗುಡ್ಡದಹಳ್ಳಿ ನಿವಾಸಿ ಶಾರ್ಪ್ ಶೂಟರ್ ಶ್ರೀನಿವಾಸ್(46), ನೆಲಮಂಗಲದ ಹನುಮಂತರಾಜು(44) ಮತ್ತು ರಾಮನಗರದ ಮುನಿರಾಜು(38) ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ 2 ತಿಂಗಳುಗಳಿಂದ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದರು. ಥಾರ್ ಜೀಪ್ ನಲ್ಲಿ ಪರಾರಿಯಾಗುತ್ತಿದ್ದ ಮಾಹಿತಿಯಂತೆ ಸಿನಿಮೀಯ ಶೈಯಲ್ಲಿ ಸುಮಾರು 6 ಕಿ.ಮೀ. ಅಟ್ಟಾಡಿಸಿ ರಾಮನಗರ ಜಿಲ್ಲೆಯ ಚಿಕ್ಕಕುಂಟನಹಳ್ಳಿ ಕ್ರಾಸ್ ಬಳಿ ಜೀಪ್ನ್ನು ತಡೆದು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಜಿಂಕೆ, 2 ಕಾಡು ಹಂದಿ, 1 ಗನ್, 1 ಏರ್ ಗನ್, 11 ಜೀವಂತ ಗುಂಡು, 2 ಚಾಕು, 1ಕೊಡಲಿ, 1 ಮಚ್ಚು, 3 ಮೊಬೈಲ್, ಥಾರ್ ಜೀಪ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಹೈ ಫ್ಲ್ಯಾಶ್ ಲೈಟ್ಗಳನ್ನ ಬಳಸಿ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಮಾಂಸವನ್ನು ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಸರಬರಾಜು ಮಾಡುತ್ತಿದ್ದರು ಎಂಬುದು…