Author: admin

ಕಾಂಚಿಪುರಂ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಆದರೆ ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡಿನಲ್ಲಿ ಹೇಳಿಕೆ ನೀಡಿದ್ದಾರೆ. ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ  ಮಾತನಾಡಿದರು. 400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿ.ಕೆ.ಶಿವಕುಮಾರ್  ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು:  ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ ಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಕಾರಣದಿಂದಾಗಿ ಬಹುತೇಕ ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನದ ಕೋರ್ಸುಗಳಿಗೆ ಸೇರಲು ಹಿಂದೇಟು ಹಾಕುವಂತಾಗಿದೆ. ಇದನ್ನು ಹೋಗಲಾಡಿಸಲು ಜಿಲ್ಲೆಯಾದ್ಯಂತ ವಿಜ್ಞಾನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೇ ಸಿಕ್ಕ ಶೈಕ್ಷಣಿಕ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಅವಕಾಶ ಇದ್ದವರು ಉನ್ನತ ಶಿಕ್ಷಣ ಗಳಿಸುವುದು ಮುಖ್ಯವಲ್ಲ. ಬದಲಾಗಿ ಅವಕಾಶ ವಂಚಿತರು ಛಲದಿಂದ ಉನ್ನತ ಶಿಕ್ಷಣ ಗಳಿಸುವುದು ಮುಖ್ಯ ಎಂದರಲ್ಲದೆ, ಬರುವ ಫೆಬ್ರವರಿ ತಿಂಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ 10 ದಿನಗಳ…

Read More

ತುಮಕೂರು:  ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸುಮಾರು 1,500 ಉದ್ಯೋಗಾರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಶ್ವವಿದ್ಯಾನಿಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ.ಸದಾನಂದಮಯ್ಯ ಬ್ಲಾಕ್‌ ನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ–2025ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಜಿಲ್ಲೆಯ ಸುಮಾರು 1,500 ಉದ್ಯೋಗಾಕಾಂಕ್ಷಿಗಳಿಗೆ ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವರು ನೇಮಕಾತಿ ಆದೇಶ ನೀಡಲಿದ್ದಾರೆ ಎಂದು ತಿಳಿಸಿದರು. ಇತ್ತೀಚೆಗಷ್ಟೆ ಕಾರ್ಯ ನಿಮಿತ್ತ ಮಧುಗಿರಿ ತಾಲ್ಲೂಕಿನ ಗ್ರಾಮವೊಂದಕ್ಕೆ ಭೇಟಿ ನೀಡಿದಾಗ ಯುವಕರ ತಂಡವೊಂದು ಮೊಬೈಲ್ ವೀಕ್ಷಿಸುತ್ತಾ, ಕಾಲ ಕಳೆಯುತ್ತಿದ್ದುದನ್ನು ಕಂಡು ವಿಚಾರಿಸಿದಾಗ ಯುವಕರೆಲ್ಲರೂ ಪದವಿ ಹೊಂದಿರುವ ವಿಚಾರ ತಿಳಿದು ಬಂದಿತು. ಪದವೀಧರರಾಗಿದ್ದರೂ ನಿರುದ್ಯೋಗಿಗಳಾಗಿರುವುದನ್ನು ಮನಗಂಡು ಶಿಕ್ಷಣ ಪೂರ್ಣಗೊಳಿಸಿರುವ ಯುವಕರಿಗಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಿರುದ್ಯೋಗಿಗಳಿಗೆ…

Read More

ಬೀದರ್:  ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರೆ ನೀಡಿದ ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರಕಿತು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ ಗುರುವಾರ ಕರೆ ನೀಡಿರುವ ಬೀದರ್ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ನಗರದಲ್ಲಿ ವಾಣಿಜ್ಯ ಚಟುವಟಿಕೆ ಸ್ಥಗಿತಗೊಂಡಿದ್ದವು. ಹೊಟೇಲ್ , ರೆಸ್ಟೋರೆಂಟ್, ಶಾಲೆ—ಕಾಲೇಜುಗಳು,  ಬ್ಯಾಂಕ್ ಗಳು ಬಾಗಿಲು ಮುಚ್ಚಿದ್ದವು. ಕೆಎಸ್ಆರ್ ಟಿಸಿ ಸಂಚಾರವೂ ಇರಲಿಲ್ಲ.  ಬೆಳಿಗ್ಗೆ  ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ಬೆಂಬಲಿಸಿದರು. ನಗರದಲ್ಲಿ ಆಟೊ ದ್ವಿಚಕ್ರ ವಾಹನ ಕಾರು ಓಡಾಟ ವಿರಳವಾಗಿತ್ತು. ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ ವಿವಿಧ ಸಂಘಟನೆಗಳ ಹೋರಾಟಗಾರರು ಬೈಕ್ ಗಳಿಗೆ ನೀಲಿ ಧ್ವಜ ಕಟ್ಟಿಕೊಂಡು ನಗರದಲ್ಲಿ ಪ್ರಮುಖ ರಸ್ತೆ‌ಗಳಲ್ಲಿ ರಾಲಿ ನಡೆಸಿ ಬಂದ್ ಗೆ ಬೆಂಬಲಿಸಲು ಕೋರಿದರು. ನೌಬಾದ್ ಬಸವೇಶ್ವರ ವೃತ್ತದಲ್ಲಿ ಅಮಿತ್ ಶಾ ಅವರ ಅಣುಕು ಶವಯಾತ್ರೆ ಮೆರವಣಿಗೆ ನಡೆಸಿ…

Read More

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು, ಬಣಗಳ ನಡುವಿನ ಸಭೆಗಳು ನಡೆಯುತ್ತಿರುವುದರ ನಡುವೆಯೇ ಇದೀಗ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಯಾಪಿಟಲ್ ಹೋಟೆಲ್ ನಲ್ಲಿ ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ವಿಜಯೇಂದ್ರ ಔತಣಕೂಟ ಏರ್ಪಡಿಸಿದ್ದು, ಸಭೆಗೆ ಕಡ್ಡಾಯವಾಗಿ ಆಗಮಿಸುವಂತೆ ಸೂಚನೆ ನೀಡಿದ್ದಾರೆ. ಮೇಲ್ನೋಟಕ್ಕೆ ಇದು ಪಕ್ಷ ಸಂಘಟನೆಯ ಸಭೆಯಂತೆ ಕಂಡು ಬಂದಿದೆ. ಆದರೂ ಬಿಜೆಪಿಯೊಳಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್, ಅಣ್ಣಾ ಸಾಹೇಬ್ ಜೊಲ್ಲೆ ಮತ್ತಿತರರು ನಡೆಸುತ್ತಿರುವ ಪ್ರತ್ಯೇಕ ಸಭೆಗೆ ಪರ್ಯಾಯವಾಗಿ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ವಿಜಯೇಂದ್ರ ಬಣದವರು ಇದೊಂದು ಮುಂದುವರೆದ ಸಭೆಯಷ್ಟೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ, ಬಿಬಿಎಂಪಿ ಸೇರಿದಂತೆ ಪಕ್ಷ ಸಂಘಟನೆ ಕುರಿತಾಗಿ ಚರ್ಚಿಸಲು ಸಭೆ ಕರೆಯಲಾಗಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ…

Read More

ಛತ್ತೀಸ್ ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಸುಕಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ಸುಕಾದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದರು. ಇಲ್ಲಿಯವರೆಗೆ, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ರಾಯ್ ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಕಳೆದ ಜ.6 ರಂದು ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಎಂಟು ಭದ್ರತಾ ಸಿಬ್ಬಂದಿ ಮತ್ತು ವಾಹನ ಚಾಲಕ ಸಾವನ್ನಪ್ಪಿದ ಘಟನೆಯನ್ನು ಉಲ್ಲೇಖಿಸಿ,ಅವರು ನಕ್ಸಲರು ಮಾಡಿದ ಕೃತ್ಯದ ನಂತರ ಭದ್ರತಾ ಪಡೆಗಳಲ್ಲಿ ಭಾರಿ ಕೋಪವಿದೆ ಎಂದು ಹೇಳಿದರು. ನಿಗದಿತ ಸಮಯದೊಳಗೆ ನಕ್ಸಲ್ ಬೆದರಿಕೆಯನ್ನು ನಿರ್ಮೂಲನೆ ಮಾಡಲಾಗುವುದು ಎಂದು ನಾನು ಪುನರುಚ್ಚರಿಸುತ್ತೇನೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತಿರುಪತಿ: ತಿರುಪತಿಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯಲ್ಲಿ ಒಟ್ಟು 40 ಮಂದಿ ಭಕ್ತರು ಗಾಯಗೊಂಡಿದ್ದು, ಗಂಭೀರವಾಗಿರುವವರನ್ನು ಹೆಲಿಕಾಫ್ಟರ್ ಮೂಲಕ ಹೈದ್ರಾಬಾದ್ ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. . ಗಾಯಾಳುಗಳಿಗೆ ಉಚಿತವಾಗಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದ 7 ಮಂದಿಯಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಿರ್ಮಲಾ (50) ಸೇರಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಟಿಟಿಡಿ ನಿರಾಕರಿಸಿದೆ. ಮೃತರು ವಿಶಾಖಪಟ್ಟಣದ ರಜನಿ(47), ಲಾವಣ್ಯ(40), ಶಾಂತಿ, ತಮಿಳುನಾಡಿನ ಸೇಲಂನ ಮಲ್ಲಿಕಾ (49), ನರಸೀಪಟ್ಟಣದ ನಾಯ್ಡುಬಾಬು (59) ಎಂದು ಗುರುತಿಸಲಾಗಿದೆ. ಈ ನಡುವೆ ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯ ರಿಗೆ ಚುನಾವಣೆಗೂ ಮುನ್ನ ಸುಳ್ಳು ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ ಕುರುಡಾಗಿದೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ . ಇದೇ ವಿಷಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ .ವಿಜಯೇಂದ್ರ ಅವರು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡನೇ ದಿನವೂ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ…

Read More

ಕೊರಟಗೆರೆ: ತುಮುಲ್ ಎಲೆಕ್ಷನ್ ರಿಸಲ್ಟ್ ಪ್ರಕಟಗೊಂಡಿದ್ದು, ಎನ್ ಡಿ ಎ ಪಕ್ಷದ ಅಭ್ಯರ್ಥಿ ಮಾಸ್ಟರ್ ಸಿದ್ದಗಂಗಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. 78 ಮತಗಳನ್ನು ಪಡೆದು ಎನ್ ಡಿ ಎ ಪಕ್ಷದ ಅಭ್ಯರ್ಥಿ ಸಿದ್ದಗಂಗಯ್ಯ ಭರ್ಜರಿ ಗೆಲುವು ದಾಖಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮಾಜಿ ತುಮಲ್ ನಿರ್ದೇಶಕ ಈಶ್ವರಯ್ಯ 38 ಮತ ಪಡೆದು ಸೋಲನುಭವಿಸಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಸಿದ್ದಗಂಗಯ್ಯ, ಇದು ನನ್ನ ಗೆಲುವಲ್ಲ, ತಾಲೂಕಿನ ಪ್ರತಿಯೊಬ್ಬ ರೈತರ ಗೆಲುವು ಎಂದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ರಾಜ್ಯ ಸರ್ಕಾರದ ಶೂನ್ಯ ಸಾಧನೆಗೆ ತುಮುಲ್ ಚುನಾವಣೆ ಉದಾಹರಣೆ, ಮುಂದೆ ಬರುವ ಜಿಲ್ಲಾ ಪಂಚಾಯತ್ ತಾಲೂಕು ಚುನಾವಣೆಯಲ್ಲಿ ಇದೇ ಉತ್ತರ ಸಿಗಲಿದೆ ಎಂದರು. ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಎನ್ ಡಿ ಎ ಪಕ್ಷದ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ ನಡೆಯಿತು. ಎಸ್ ಎಸ್ ಆರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ…

Read More

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಗ್ಯಾರಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಗ್ಯಾರಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊರಿನ ಮುಖಂಡರು ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರಿಂದ ಗ್ರಾಮದ ಬೀದಿ,ಬೀದಿಗಳಲ್ಲಿ ಶುದ್ದಜಲದ ಜಾಥಾವನ್ನು ನಡೆಸಿ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರಿನ ಬಗ್ಗೆ ಅರಿವು ಮೂಡಿಸಲಾಯಿತು. ನಂತರ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಇಲಾಖೆಯ ಅಧಿಕಾರಿಯಾದ ಶ್ರೀನಿವಾಸ್, ನಮ್ಮ ದೇಶದ ಸುಮಾರು ಗ್ರಾಮಗಳಲ್ಲಿ ಶುದ್ದ ನೀರಿನ ಬಗ್ಗೆ ಅರಿವಿಲ್ಲದೆ ಮೂಢನಂಬಿಕೆಗಳಿಂದ ಶುದ್ದೀಕರಿಸದ ಕೆರೆ ಕಟ್ಟೆ ಹಾಗೂ ಪ್ಲೋರೈಡ್ ಯುಕ್ತ ನೀರನ್ನು ಕುಡಿದು ಕಾಲಾರ, ಅತಿಸಾರ ಹಾಗೂ ಮಾರಾಣಾಂತಿಕ ವಿವಿಧ ಬಗೆಯ ಜ್ವರಗಳಿಗೆ ತುತ್ತಾಗಿ ಜನರು ತಮ್ಮ ಜೀವವನ್ನು ಚೆಲ್ಲುತ್ತಿದ್ದಾರೆ. ಆದ್ದರಿಂದ ದಯವಿಟ್ಟು ಸರ್ಕಾರದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಿದ್ದು, ಸದರಿ ಘಟಕಗಳಿಂದ ಶುದ್ದೀಕರಿಸಿದ…

Read More