Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ರಚನೆ: ವೇಣುಗೋಪಾಲ್ ಹಿಂದಿನ ಸ್ಪರ್ಧೆಯಲ್ಲಿ ಮುಖಭಂಗವಾಗಿದ್ದ ಮೊಲಕ್ಕೆ ಕಿಚ್ಚು ತನ್ನ ಮನದಲ್ಲಿ ಇನ್ನೂ ಆರಿರಲಿಲ್ಲ, ರಾತ್ರಿ ನಿದ್ರೆ ಬಾರುತ್ತಿರಲಿಲ್ಲ, ಇಡೀ ಜಗತ್ತೇ ಆಮೆಯ ಓಟವನ್ನು ಶ್ಲಾಘಿಸಿ ನನ್ನ ನನ್ನ ಬೇಜವಾಬ್ದಾರಿ ಮತ್ತು ಅತಿ ಆತ್ಮ ವಿಶ್ವಾಸವನ್ನು ವಿಡಂಬಿಸಿ ತೆಗಳಿತ್ತು. ಇನ್ನು ಇವನ್ನೆಲ್ಲಾ ನನ್ನಿಂದ ನೋಡಿ ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಈಗ ಹೋಗಿ ಆಮೆಯನ್ನು ಮತ್ತೊಮ್ಮೆ ನನ್ನ ಜೊತೆ ಓಟದ ಸ್ಪರ್ಧೆಗೆ ಕರೆಯುತ್ತೇನೆ, ಬರಲಿಲ್ಲವೆಂದರೆ ಅದರ ಮಾನ ಮರ್ಯಾದೆಗಳನ್ನು ಜಗದ ಮುಂದೆ ಇವ ಅಸಮರ್ಥನೆಂದು ತೆಗಳುತ್ತೇನೆ, ಒಂದು ವೇಳೆ ಬಂದರೆ ಒಂದೇ ಬಾರಿ ಓಡಿ ಆಮೆಯನ್ನು ಸೋಲಿಸುತ್ತೇನೆ. ನಾನು ಇನ್ನು ಸೋಲಬಾರದೂ ಗೆಲ್ಲಲೇಬೇಕು ಎಂದೆಲ್ಲಾ ಯೋಚಿಸಿಕೊಂಡು ಕಾಡಿನ ಒಂದು ಪೊದೆಯಿಂದ ಆಚೆ ಬಂದು ಒಂದು ಎತ್ತರದ ಕಲ್ಲು ಬಂಡೆಯ ಮೇಲೆ ನಿಂತು ಜೋರಾಗಿ ಕೂಗಿ ಹೇಳಿತು. ಹೇ ವನ ವಾನನರರೇ ಇಲ್ಲಿ ಕೇಳಿ.., ಎನ್ನುತ್ತಲೇ ಎಲ್ಲ ಪ್ರಾಣಿಗಳು ಮೊಲದ ಜೋರಾದ ಕೂಗಿಗೆ ಆಚೆ ಬಂದವು, ನಂತರ ಎಲ್ಲವನ್ನೂ ಉದ್ದೇಶಿಸಿ ಇಲ್ಲಿಯವರೆಗೂ ಮೊಲವೇ ಆಮೆಯ…
1996ರಲ್ಲಿ ಗುಡಿಸಲಿನಿಂದ ಪ್ರಾರಂಭವಾದ ಶಾಲೆಯಿಂದ ಪಾಠವನ್ನು ಕಲಿತ ವಿದ್ಯಾರ್ಥಿಗಳು ಈ ದಿನ ಶಿಕ್ಷಣ ಇಲಾಖೆ, ಪತ್ರಿಕೋದ್ಯಮ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಇಂಜಿನಿಯರಿಂಗ್ ಮತ್ತು ವಿವಿಧ ಕ್ಷೇತ್ರಗಳಲ್ಲ್ಲಿ ಕೆಲಸ ನಿರ್ವಹಿಸುತ್ತಿರುವುದು ಈ ಶಾಲೆಯ ಉತ್ತಮ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ. ಬಾಚೇನಹಳ್ಳಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭದ್ರ ಭವಿಷ್ಯಕ್ಕೆ ಸುಭದ್ರ ಬುನಾದಿ ಹಾಕುವಲ್ಲಿ ಶಿಕ್ಷಕರ ಪಾತ್ರ ಅತಿಮುಖ್ಯವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಹಂತದಲ್ಲಿ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಶಿಕ್ಷಕರ ಪಾತ್ರ ಅನನ್ಯವಾಗಿದೆ. ಭವಿಷ್ಯ ರೂಪಿಸುವ ಶಿಕ್ಷಕರನ್ನು ನೆನಪಿಸಿಕೊಂಡು ಗೌರವಿಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಆದ್ಯ ಕರ್ತವ್ಯವಾಗಿದೆ ಎಂದರು. ಗುರು–ಶಿಷ್ಯರ ಸಂಬಂಧ ಕಟ್ಟಿಕೊಡುವ ಪ್ರತಿಯೊಬ್ಬ ಗುರುವೂ, ತನ್ನ ಶಿಷ್ಯತನಗಿಂತ ಪಾಂಡಿತ್ಯಪೂರ್ಣ ವಿದ್ಯಾಂಸರಾಗಬೇಕೆಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ ಈ ಗುರುವಂದನಾ ಕಾರ್ಯಕ್ರಮವು ಅತ್ಯಂತ ಔಚಿತ್ಯಪೂರ್ಣವಾಗಿದೆ. ಗುರು–ಶಿಷ್ಯರ ಸಂಬಂಧವನ್ನು ಗಟ್ಟಿಗೊಳಿಸುವ ಈ ಕಾರ್ಯಕ್ರಮ ಯುವ ಪೀಳಿಗೆಗೂ ಸ್ಪೂರ್ತಿದಾಯಕವಾಗಲಿದೆ ಎಂದು ಶಾಲೆಯ…
ಕೊರಟಗೆರೆ: ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಕೊರಟಗೆರೆಯಲ್ಲಿ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಗಡಿನಾಡು ಪತ್ರಿಕೆ ಮತ್ತು ಗಡಿನಾಡು ನ್ಯೂಸ್ ಸಂಪಾದಕರ ಮೇಲೆ ನಡೆದ ಹಲ್ಲೆ ಖಂಡಿಸಿ ತಹಶೀಲ್ದಾರ್ ಮಂಜುನಾಥ್ ಕೆ ಮೂಲಕ ಸರ್ಕಾರಕ್ಕೆ ಪತ್ರಕರ್ತರು ಮನವಿ ಸಲ್ಲಿಸಿದರು. ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪರವರ ಮೇಲೆ ಮಹಿಳೆಯರು ಮಾರಕ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ರಿಯಲ್ ಎಸ್ಟೇಟ್ ದಂಧೆಕೋರ ನಾರಾಯಣ ರೆಡ್ಡಿ ಮತ್ತು 3 ಜನ ಮಹಿಳೆಯರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪತ್ರಕರ್ತರ ಸಂರಕ್ಷಣಾ ಕಾಯಿದೆ ಜಾರಿಗೆ ತರುವಂತೆ ಒತ್ತಾಯಿಸಿದ ಕೊರಟಗೆರೆ ಪತ್ರಕರ್ತರು, ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ರವರ ಕುಟುಂಬಕ್ಕೆ ಸೂಕ್ತ ಭದ್ರತೆ ಮತ್ತು ಪರಿಹಾರ ನೀಡಬೇಕೆಂದು ಮನವಿ ಮಾಡಿದರು. ಕೊರಟಗೆರೆ ಕೆಯುಡಬ್ಲ್ಯೂ ಜೆ ಅಧ್ಯಕ್ಷರಾದ ಪುರುಷೋತ್ತಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಇದೇ ಸಂದರ್ಭದಲ್ಲಿ ಕೊರಟಗೆರೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ ಸಂಘದ…
ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆಯೊಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಬಳ್ಳಾರಿ ಮೂಲದ ನಿರ್ಮಲಾ (50) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ,ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್ ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್ ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹೊರಗೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಆಂಧ್ರಪ್ರದೇಶ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಟೋಕನ್ ಗಳ ವಿತರಣೆಯ ಸಮಯದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆರು ಜನ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ತಿರುಪತಿಯ ವಿಷ್ಣು ನಿವಾಸದಲ್ಲಿ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಗಳ ವಿತರಣೆಯ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಭಕ್ತರು ಸಾವನ್ನಪ್ಪಿದ್ದಾರೆ. ಶುಕ್ರವಾರದಿಂದ ಪ್ರಾರಂಭವಾಗಿ 10 ದಿನಗಳ ಅವಧಿಗೆ ಭಕ್ತರಿಗೆ ವಿಶೇಷ ‘ದರ್ಶನ’ಟಿಕೆಟ್ ಗಳಿಗಾಗಿ ದೇಶಾದ್ಯಂತ ಸಾವಿರಾರು ಮಂದಿ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾಲ್ತುಳಿತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ ಬಂಧಿತ ಶಿಕ್ಷಕನಾಗಿದ್ದಾನೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಆರೋಪಿಯು 25 ವರ್ಷ ವಯಸ್ಸಿನವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಅಪಹರಣ ಮತ್ತು ಅತ್ಯಾಚಾರದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಕೊರೆಯುವ ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಮುಷ್ಕರವನ್ನು ಮುಂದುವರಿಸಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಮುಷ್ಕರ ಮುಂದುವರಿದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು. ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುತ್ತದೆ. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ.ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸರ್ಕಾರ ಸಿದ್ಧವಿದೆ. ಆದರೆ, ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ…
ಬಾಹ್ಯಾಕಾಶದಲ್ಲಿ ತಂಗಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ಮಲಿಯಮ್ಸ್ ಹಾಗೂ ಬುಚ್ ವಿಲೋರ್ ಅವರು ಮಾರ್ಚ್ ತಿಂಗಳಲ್ಲಿ ವಾಪಸ್ಸಾಗಲಿದ್ದಾರೆ ಎಂದು ಹೇಳಲಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಿಂಗಳುಗಳ ಕಾಲ ಸಿಲುಕಿರುವ ಈ ಇಬ್ಬರು ಗಗನಯಾತ್ರಿಗಳು ತಮ್ಮ ಬಳಿ ಸಾಕಷ್ಟು ಆಹಾರವಿದೆ, ಲಾಂಡ್ರಿ ಬಿಕ್ಕಟ್ಟನ್ನು ಎದುರಿಸುತ್ತಿಲ್ಲ ನಾವು ಇಲ್ಲಿ ಅರಾಮಗಿದ್ದೇವೆ ಎಂದು ತಿಳಿಸಿದ್ದಾರೆ. ಕಳೆದ ಜೂನ್ನಲ್ಲಿ ಬೋಯಿಂಗ್ ನ ಸ್ಟಾರ್ ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶ ನಿಲ್ದಾಣದಲ್ಲಿ ತಂಗಿರುವ ಅವರು ಕಕ್ಷೆಯ ಪ್ರಯೋಗಾಲಯದಲ್ಲಿ ಕೇವಲ ಎಂಟು ದಿನಗಳನ್ನು ಕಳೆಯಬೇಕಾಗಿತ್ತು. ಆದರೆ ಸ್ಟಾರ್ ಲೈನರ್ ನ ಪೊಪಲ್ಷನ್ ಸಿಸ್ಟಮ್ ನೊಂದಿಗಿನ ಸಮಸ್ಯೆಗಳಿಂದಾಗಿ ಅವರು ಇನ್ನು ಅಲ್ಲೆ ನೆಲೆಸಿದ್ದು, ಈಗ ಮಾರ್ಚ್ ಅಂತ್ಯದಲ್ಲಿ ಹಿಂದಿರುಗುವ ಬಾಹ್ಯಾಕಾಶ ನೌಕೆಯನ್ನು ಸಿದ್ದಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೀದರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ, ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಸಮಿತಿ ಗುರುವಾರ ಕರೆ ನೀಡಿದ್ದರು. ಈ ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕು ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನೌಶಾದ್ ಬಸವೇಶ್ವರ ವೃತ್ತದ ಬಳಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ತುಮುಲ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 10 ತಾಲ್ಲೂಕು ಸೇರಿದ್ದಂತೆ 10 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ತುಮುಲ್ ಎಲೆಕ್ಷನ್ ಗೆ ನವೆಂಬರ್ 10 ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ 21ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 1,119 ಮತಗಳ ಪೈಕಿ 1,188 ಮತಗಳು ಚಲಾವಣೆ ಗೊಂಡಿದ್ದವು. ಫಲಿತಾಂಶದ ವಿವರ: ಚಿಕ್ಕನಾಯಕನಹಳ್ಳಿಯಲ್ಲಿ ಮಾಧುಸ್ವಾಮಿ ಬೆಂಬಲಿಗ ಅಭ್ಯರ್ಥಿಗೆ ಭರ್ಜರಿ ಜಯಗಳಿಸಿದ್ದಾರೆ. 82 ಮತ ಪಡೆದು ಬುಳ್ಳೇನಹಳ್ಳಿ ಪ್ರಕಾಶ್ ಜಯಗಳಿಸಿದ್ದಾರೆ. ಗುಬ್ಬಿ ಕ್ಷೇತ್ರದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಪತ್ನಿ ಭಾರತಿ ಶ್ರೀನಿವಾಸ್ ಜಯಗಳಿಸಿದ್ದಾರೆ. 68 ಮತಗಳನ್ನ ಪಡೆದು ಭಾರತೀ ಶ್ರೀನಿವಾಸ್ ಗೆಲುವು ದಾಖಲಿಸಿದ್ದಾರೆ. ತಿಪಟೂರಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಪ್ರಕಾಶ್ ಜಯಗಳಿಸಿದ್ದಾರೆ. ತುಮಕೂರು ತಾಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಂಜೇಗೌಡ ಜಯಗಳಿಸಿದ್ದಾರೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿ . ಸಿದ್ದಗಂಗಯ್ಯ ಗೆಲುವು ದಾಖಲಿಸಿದ್ದಾರೆ. ತುರುವೇಕೆರೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಮಹಾಲಿಂಗಯ್ಯ ಭರ್ಜರಿ ಗೆಲುವು. ಮಧುಗಿರಿಯಲ್ಲಿ ಕೊನೆಗೂ ಕೆ.…