Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ತುಮಕೂರು: ಒಳ ಮೀಸಲಾತಿ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ನೀಡಿರುವ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಎಚ್. ಹುಚ್ಚಯ್ಯ ತೀವ್ರವಾಗಿ ಖಂಡಿಸಿದ್ದಾರೆ. ದಾವಣಗೆರೆ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ನಡೆದ ಛಲವಾದಿ ಮಹಾಸಭಾ ಸಮಾವೇಶದಲ್ಲಿ ಪರಮೇಶ್ವರ ಅವರು ನೀಡಿದ್ದ ಹೇಳಿಕೆ ‘ದುರದೃಷ್ಟಕರ’ ಎಂದು ಅವರು ಬಣ್ಣಿಸಿದ್ದಾರೆ. 101 ಪರಿಶಿಷ್ಟ ಜಾತಿಗಳಿಗೆ ಇದ್ದ ಶೇ.24ರಷ್ಟು ಮೀಸಲಾತಿಯನ್ನು ಬಿಜೆಪಿ ಸರ್ಕಾರವು 6–6–5 ಅನುಪಾತದಲ್ಲಿ ಹಂಚಿಕೆ ಮಾಡಿ ಸಮುದಾಯವನ್ನು ಛಿದ್ರಗೊಳಿಸಿದೆ ಎಂದು ಪರಮೇಶ್ವರ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಹುಚ್ಚಯ್ಯ, ಸಚಿವರ ಈ ಮಾತುಗಳು ಅವರ ‘ಮನೋವಿಕಲತೆಗೆ’ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, “ಪಕ್ಷ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡಲಾಗುವುದು” ಎಂದು ಭರವಸೆ ನೀಡಿದ್ದರು. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತಿರುವುದು ಅವರ ಪ್ರಜ್ಞಾಹೀನ ಸ್ಥಿತಿಯನ್ನು ತೋರಿಸುತ್ತದೆ ಎಂದು ಹುಚ್ಚಯ್ಯ…
ಮಧುಗಿರಿ: ತಾಲ್ಲೂಕು ಪಂಚಾಯಿತಿಯಲ್ಲಿ ಸುಮಾರು ₹4.24 ಕೋಟಿ ರೂಪಾಯಿಗಳ ಹಣ ಅಕ್ರಮ ವರ್ಗಾವಣೆ ಮತ್ತು ದುರುಪಯೋಗ ಆಗಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕಿ (SDA) ಸೌಮ್ಯಾ ಅವರು, ನಿವೃತ್ತ ನೌಕರರ ಅಂತಿಮ ಗಳಿಕೆ ರಜೆ ನಗದೀಕರಣ ಬಿಲ್ಗಳನ್ನು ಅಕ್ರಮವಾಗಿ ಸಿದ್ಧಪಡಿಸುತ್ತಿದ್ದರು ಎಂಬ ಆರೋಪವಿದೆ. ಈ ಹಣವನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಬದಲು, ಸೌಮ್ಯಾ ಅವರು ತಮ್ಮ ಕುಟುಂಬದ ಸದಸ್ಯರ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹಣ ದುರುಪಯೋಗದ ವಿಷಯ ಬೆಳಕಿಗೆ ಬರುತ್ತಿದ್ದಂತೆಯೇ, ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ. ಅಶ್ವಿಜಾ ಅವರು ಸೌಮ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಧಿಕಾರಿಗಳು, ಇದೀಗ ಸೌಮ್ಯಾ ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಒಟ್ಟು…
ತುಮಕೂರು: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಮಾತುಗಳನ್ನಾಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಒತ್ತಾಯಿಸಿದೆ. ಸೂಲಿಬೆಲೆ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಮೂಲಕ ಅವರು ಸಮಾಜದಲ್ಲಿ ಧರ್ಮ ದ್ವೇಷ ಬಿತ್ತಲು ಮತ್ತು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಇಂತಹ ವ್ಯಕ್ತಿಗಳ ವಿರುದ್ಧ ತಕ್ಷಣವೇ ಕ್ರಮ ಜರುಗಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್. ಕೆ. ಸುಬ್ರಮಣ್ಯ ಹಾಗೂ ನಗರ ಕಾರ್ಯದರ್ಶಿ ಎ. ಲೋಕೇಶ್ ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ನಗರದ ಹೊರವಲಯದಲ್ಲಿರುವ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯವು ಉದ್ಘಾಟನೆಗೆ ಮುನ್ನವೇ ಹಾಳುಕೊಂಪೆಯಾಗಿ ಮಾರ್ಪಟ್ಟಿದೆ. ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡವು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಈಗ ಬಿರುಕು ಬಿಟ್ಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಎಸ್ಸಿಎಸ್ಪಿ–ಟಿಎಸ್ಪಿ ಅನುದಾನದಡಿ ಈ ಹಾಸ್ಟೆಲ್ ನಿರ್ಮಾಣಕ್ಕೆ 2013-14ರಲ್ಲಿ ಮಂಜೂರಾತಿ ನೀಡಲಾಗಿತ್ತು. 2016ರಲ್ಲಿ ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಲಾಯಿತು. ಸುಮಾರು ಆರು ವರ್ಷಗಳ ಕಾಲ ನಡೆದ ಕಾಮಗಾರಿ 2022ರಲ್ಲಿ ಪೂರ್ಣಗೊಂಡಿತ್ತು. ಆದರೆ, ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಈ ಕಟ್ಟಡಕ್ಕೆ ಉದ್ಘಾಟನೆಯ ಭಾಗ್ಯ ಮಾತ್ರ ದೊರೆತಿಲ್ಲ. ಬಳಕೆಗೆ ಬರುವ ಮುನ್ನವೇ ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಳಪೆ ಕಾಮಗಾರಿಯ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್ ಮುಂಭಾಗದಲ್ಲಿ ಸ್ವಚ್ಛತೆ ಇಲ್ಲದೆ ಗಿಡಗಂಟಿಗಳು ಬೆಳೆದು ನಿಂತಿವೆ. ಕಟ್ಟಡದ ಸುತ್ತಮುತ್ತ ಹಾಳು ಕೊಂಪೆಯಂತಾಗಿದೆ. ಕಟ್ಟಡ ಹಸ್ತಾಂತರದ ವಿಚಾರವಾಗಿ ಸರ್ಕಾರಿ ಪ್ರಥಮ ದರ್ಜೆ…
ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿರುವ ದಿಶಾ ಅವರಿಗೆ ಪರೀಕ್ಷಾ ಸಮಯದಲ್ಲೇ ವಿಧಿಯ ಆಟ ಕ್ರೂರವಾಗಿತ್ತು. ಮೂರು ಪರೀಕ್ಷೆಗಳು ಮುಗಿದ ಬೆನ್ನಲ್ಲೇ ಅವರ ತಾಯಿ ಆಕಸ್ಮಿಕವಾಗಿ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದರು. ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದ್ದಾಗ, ದಿಶಾ ಅವರ ಮುಂದೆ ಕಣ್ಣೀರು ಮತ್ತು ಭವಿಷ್ಯದ ಪರೀಕ್ಷೆ ಎರಡೂ ಇತ್ತು. ತಾಯಿಯ ಸಾವಿನ ದುಃಖ ಕಣ್ಣ ಮುಂದೆ ಇದ್ದರೂ, ಧೃತಿಗೆಡದ ದಿಶಾ ಅವರು ತಾಯಿಯ ಆಸೆಯನ್ನು ಪೂರೈಸಲೇಬೇಕೆಂದು ಪಣ ತೊಟ್ಟರು. “ನಾನು ನನ್ನ ಅಮ್ಮನನ್ನು ಕಳೆದುಕೊಂಡೆ, ಆದರೆ ನನ್ನ ಗುರಿಯನ್ನು ಕಳೆದುಕೊಳ್ಳಬಾರದು” ಎಂಬ ದೃಢ ನಿಶ್ಚಯದೊಂದಿಗೆ ಉಳಿದ ಮೂರು ಪರೀಕ್ಷೆಗಳನ್ನು ಬರೆದರು. ಅವರ ಈ ಅದ್ಭುತ ಸಾಧನೆಗೆ ಇಂದು ಇಡೀ ರಾಜ್ಯವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. “ನನ್ನ ತಾಯಿ ಇಂದು…
ತುಮಕೂರು: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ಮುಂದೆ ‘ಫ್ರೂಟ್ ಐಡಿ’ (FID – Farmer Registration and Unified Beneficiary Information System) ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಪಿಒಎಸ್ (POS) ಯಂತ್ರದ ಜೊತೆಗೆ ಕೃಷಿ ಇಲಾಖೆಯ ‘ಕೆ-ಕಿಸಾನ್’ ವೆಬ್ಸೈಟ್ ಮೂಲಕ ರೈತರ ಎಫ್ಐಡಿ ಸಂಖ್ಯೆಯನ್ನು ನೋಂದಾಯಿಸಿಕೊಂಡೇ ಗೊಬ್ಬರ ವಿತರಿಸಬೇಕು. ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಗಟ್ಟುವುದು ಮತ್ತು ರೈತರು ತಮ್ಮ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಮಿತವಾಗಿ ಗೊಬ್ಬರ ಬಳಸುವಂತೆ ನಿಯಂತ್ರಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತರು ತಮ್ಮ ಜಮೀನಿಗೆ ಎಷ್ಟು ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ಎಫ್ಐಡಿ ಆಧಾರದ ಮೇಲೆ ಪಡೆಯಬಹುದು. ಎಫ್ ಐಡಿ ಇಲ್ಲದಿದ್ದರೆ ಏನು ಮಾಡಬೇಕು? ಇದುವರೆಗೆ ಎಫ್ಐಡಿ (FID) ನೋಂದಣಿ ಮಾಡಿಸದ ರೈತರು ಈ ಕೂಡಲೇ ಈ ಕೆಳಗಿನ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ…
ಮಂಡ್ಯ: ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ ಸಿಗಲಿದೆ. ಈ ಮಾರ್ಗದ ರೈಲುಗಳ ವೇಗವನ್ನು ಗಂಟೆಗೆ 130 ಕಿ.ಮೀ.ಗೆ ಹೆಚ್ಚಿಸಲಾಗುತ್ತಿದ್ದು, ಇದರಿಂದ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಬೆಂಗಳೂರು – ಮೈಸೂರು ರೈಲ್ವೆ ಮಾರ್ಗ ಹಾಗೂ ವಿವಿಧ ನಿಲ್ದಾಣಗಳ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಸ್ತುತ ಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ರೈಲುಗಳ ವೇಗವನ್ನು 130 ಕಿ.ಮೀ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 25 ಕೋಟಿ ರೂ. ಅನುದಾನ ನೀಡಿದ್ದಾರೆ. ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸೋಮಣ್ಣ ಗಂಭೀರ…
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ. ದಿಶಾ ರಾಜ್ಯಕ್ಕೆ ಫಸ್ಟ್: ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್ಸೈಟ್: https://karresults.nic.in ಜಾಲತಾಣ ಹಾಗೂ ಕರ್ನಾಟಕ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 9) ಅಧಿಕೃತವಾಗಿ ಪ್ರಕಟಿಸಲಿದೆ. ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಫಲಿತಾಂಶದ ಸಮಯ ಮತ್ತು ವೆಬ್ಸೈಟ್: ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ಸಂಜೆ 5:00 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ವೀಕ್ಷಿಸಲು ಅಧಿಕೃತ ಲಿಂಕ್ ಗಳು: karresults.nic.in kseab.karnataka.gov.in ಅಂಕಪಟ್ಟಿ ಡೌನ್ಲೋಡ್ ಮಾಡುವ ವಿಧಾನ: ಮೊದಲು ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ. ಮುಖಪುಟದಲ್ಲಿ ಕಾಣುವ ‘2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ವಿಷಯದ ಗುಂಪನ್ನು (Science/Arts/Commerce) ಆಯ್ಕೆ ಮಾಡಿ. ‘Submit’ ಬಟನ್ ಒತ್ತಿದಾಗ…
ತುಮಕೂರು: ಹಣದ ವಿಚಾರಕ್ಕಾಗಿ ಸ್ವಂತ ತಂದೆಯನ್ನೇ ಭೀಕರವಾಗಿ ಕೊಲೆ ಮಾಡಿದ್ದ ಮಗನಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದ ರಮೇಶ್ ಎಂಬಾತನೇ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2023ರ ಅಕ್ಟೋಬರ್ 22ರಂದು ತನ್ನ ತಂದೆ ರೇಣುಕಯ್ಯ ಅವರನ್ನು ಹತ್ಯೆ ಮಾಡಿದ್ದನು. ತೋಟದ ಅಡಿಕೆ ಎಲೆಗಳ ಮಾರಾಟದಿಂದ ಬಂದಿದ್ದ ಹಣವನ್ನು ನೀಡುವಂತೆ ತಂದೆ ರೇಣುಕಯ್ಯ ಅವರು ಮಗ ರಮೇಶ್ನನ್ನು ಕೇಳಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ತೀವ್ರ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದಾಗ ರಮೇಶ್ ಕುಡುಗೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದನು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್ಪೆಕ್ಟರ್ ವಿ. ಗೋಪಿನಾಥ್ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ತುಮಕೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ರಮೇಶ್ ಮೇಲಿನ…