Author: admin

ತುಮಕೂರು:  ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ. ಈಗಾಗ್ಲೆ ಈ ಬಗ್ಗೆ ಸನ್ಮಾನ್ಯ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಮುಂದೂಡಿದ್ದೇವೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಡಿ.ಕೆ. ಶಿವಕುಮಾರ್ ಬೇಜಾರ್ ಆಗೋಕ್ಕೆ ಅವ್ರ ಆಸ್ತಿನಾ ಏನಾದ್ರೂ ಬರೆಸಿಕೊಂಡಿದ್ದೀರಾ.  ಪ್ರೀ ಯೂನಿರ್ವಸಿಗಳಲ್ಲಿ ಎಸ್ಪಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್, ಸೀಟು ಸಿಗ್ತಿಲ್ಲ.  ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮಿಟಿಂಗ್ ಕರೆದರೆ, ನೀವು ಮಾಡ್ಬೇಡಿ ಅಂದ್ರೆ ಎಂದು ಹೇಳಿದರು. ಇವರೆಲ್ಲಾ ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯೋದಿಲ್ಲ.  ಹಾಸ್ಟೆಲ್ ಸೀಟ್ ಸಿಗಲ್ಲ, ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತಗೊಂಡವನಿಗೆ ಸ್ಕಾಲರ್ಶಿಪ್ ಇಲ್ಲ.  ಇದು ಎಸ್.ಸಿ — ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ.  ಇಂತಹವುಗಳ ಬಗ್ಗ ಚರ್ಚೆ ಮಾಡಲು ಮೀಟಿಂಗ್…

Read More

ಬೆಂಗಳೂರು: 6 ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ವೊಂದಕ್ಕೆ ಕರೆದೊಯ್ದು ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸೋಮಶೇಖರ್ ಬಳಿ 6 ಲಕ್ಷ ಆರ್ಥಿಕ ಸಹಾಯ ಕೇಳಿದ್ದಳು. 2024ರ ಅಕ್ಟೋಬರ್ ನಲ್ಲಿ ಸಂತ್ರಸ್ತೆ ಪಿ.ಜಿ ಬಳಿ ತೆರಳಿದ್ದ ಸೋಮಶೇಖರ್, ಹಣ ಕೊಡುವುದಾಗಿ ಆಕೆಯನ್ನು ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ತಮ್ಮ ಫ್ಲ್ಯಾಟ್ ವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಮೈಸೂರು: ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಇಬ್ಬರು ಕೈದಿಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಕೈದಿ ಅಸ್ವಸ್ಥಗೊಂಡಿದ್ದಾನೆ. ಮೈಸೂರಿನ ಮಾದೇಶ್ ಮತ್ತು ಚಾಮರಾಜನಗರದ ನಾಗರಾಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊಸ ವರ್ಷದ ಮುನ್ನಾದಿನದಂದು ಎಸೆನ್ಸ್ ಸೇವಿಸಿ ಅಸ್ವಸ್ಥರಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ವರ್ಷದ ಹಿನ್ನಲೆ ಕೇಕ್ ತಯಾರಿಸಲು ಸಾಮಗ್ರಿಗಳನ್ನು ತಂದಿರಸಲಾಗಿತ್ತು. ಇದರಲ್ಲಿ ಕೇಕ್ ಗೆ ಬಳಸುವ ಎಸೆನ್ಸ್ ತರಲಾಗಿತ್ತು. ಆದರೆ ಈ ಮೂವರು ಕಿಕ್ ಗಾಗಿ ಯಾರಿಗೂ ಹೇಳದೆ ಈ ಎಸೆನ್ಸ್ ಕುಡಿದಿದ್ದರು. ಈ ಘಟನೆ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ತಾಯಂದಿರ ಮರಣ ತಡೆಗೆ ಸರ್ಕಾರ ಶೀಘ್ರವೇ ಕೇಂದ್ರೀಕೃತ ಅಭಿಯಾನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018–20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022–24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 6,593 ಕೋಟಿ ರೂ.ವೆಚ್ಚ ಮಾಡಲಾಗಿದೆ. ನಿಧಿ ಬಳಕೆಯಲ್ಲಿ ಶೇ.58.96ರಷ್ಟು ಪ್ರಗತಿ ಸಾಧಿಸಲಾಗಿದೆ, ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಹೆರಿಗೆ ಪ್ರಮಾಣ ಕಡಿಮೆ ಇರುವ ಆಸ್ಪತ್ರೆಗಳ ವೈದ್ಯರನ್ನು ಅಗತ್ಯ ಇರುವ ಕಡೆ ನಿಯೋಜಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಖಾತರಿಪಡಿಸಬೇಕು ಎಂದು ಸೂಚಿಸಿದರು. ಹೆಣ್ಣು ಭ್ರೂಣ…

Read More

ರಾಮನಗರ: ರಾಜ್ಯದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಮಂಗಳವಾರ ಬಿಡದಿಯ ವೇಸ್ಟ್ ಟು ಎನರ್ಜಿ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯ ವೇಸ್ಟ್ ಟು ಎನರ್ಜಿ ಘಟಕ ತಿಂಗಳ ಹಿಂದೆ ಪೂರ್ಣಗೊಂಡಿತ್ತು, ಅದನ್ನು ಸ್ವಾಧೀನಪಡಿಸಿಕೊಂಡಿರಲಿಲ್ಲ, ಅದನ್ನ ನೀವೆ ನಡೆಸಿ ಅದರ ಸಮಸ್ಯೆಗಳಿದ್ದರೆ ತಿಳಿಸಿ ಎಂದು ಘಟಕದವರಿಗೆ ಹೇಳಿದ್ದೆವು, ಅಷ್ಟರಲ್ಲಿ ದುರಾದೃಷ್ಟದಿಂದ ಈ ರೀತಿಯ ಅನಾಹುತ ಸಂಭವಿಸಿದೆ. ಕಾರ್ಮಿಕರಿಗೆ ಸುಟ್ಟಗಾಯಗಳಾಗಿವೆ. ಅವಘಡದ ವಿಚಾರಣೆಗಾಗಿ ಸಮಿತಿಯೊಂದನ್ನು ರಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಸದಿಂದ ವಿದ್ಯುತ್ ಉತ್ಪಾದನೆ ಮಾಡುವ ಉಷ್ಣವಿದ್ಯುತ್ ಸ್ಥಾವರದ ಬಾಯ್ಲರ್ ಅನ್ನು ತಾಂತ್ರಿಕ ಪರಿಣತರಿಲ್ಲದೇ ತೆರೆದ ಕಾರಣ ಬೆಂಕಿ ಹಾಗೂ ಬಿಸಿಬೂದಿ ಅಲ್ಲಿದ್ದ ಕಾರ್ಮಿಕರ ಮೇಲೆ ಏಕಾಏಕಿ ಚಿಮ್ಮಿದೆ ಇದರಿಂದಾಗಿ ಇಂತಹ ಅನಾಹುತ ಸಂಭವಿಸಿದೆ ಎಂದರು. ಇದರಿಂದ ಗಾಯಗೊಂಡಿರುವ ಕಾರ್ಮಿಕರಿಗೆ ಹೆಚ್ಚಿನ ಚಿಕಿತ್ಸೆ ನೀಡುವಂತೆ ಈಗಾಗಲೇ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಚಿಕಿತ್ಸೆಗೆ ಸರ್ಕಾರದಿಂದ ಹಣ ಪಾವತಿಸಲಾಗುವುದು. ಪರಿಹಾರ ವಿತರಣೆಗೆ ಹಾಗೂ ಮುಂದೆ ಇಂತಹ ಅನಾಹುತಗಳು…

Read More

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸುತ್ತಿರುವ ಕ್ರೀಡಾ ಶಾಲೆ/ಕ್ರೀಡಾ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಜನವರಿ 13 ರಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ಆಯ್ಕೆ ಪ್ರಕ್ರಿಯೆಯು ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಿಗದಿತ ದಿನಾಂಕದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಜನವರಿ 13ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಜ.15ರಂದು ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣ, ಜ.16ರಂದು ಪಾವಗಡ ತಾಲ್ಲೂಕು ಕ್ರೀಡಾಂಗಣ, ಜ.17ರಂದು ಶಿರಾ ತಾಲ್ಲೂಕು ವಿವೇಕಾನಂದ ಕ್ರೀಡಾಂಗಣ, ಜ.18ರಂದು ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ, ಜ.20ರಂದು ಚಿಕ್ಕನಾಯನಹಳ್ಳಿ ತಾಲ್ಲೂಕು ಕ್ರೀಡಾಂಗಣ, ಜ.21ರಂದು ತಿಪಟೂರು ತಾಲ್ಲೂಕು ಕಲ್ಪತರು ಕ್ರೀಡಾಂಗಣ, ಜ.27ರಂದು ಗುಬ್ಬಿ ಸರ್ಕಾರಿ ಪ್ರೌಢಶಾಲೆ ಮೈದಾನ, ಜ.28ರಂದು ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ, ಜ.29ರಂದು ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ತಾಲ್ಲೂಕು ಮಟ್ಟದಲ್ಲಿ…

Read More

ತುಮಕೂರು: ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ತಂತ್ರಜ್ಞಾನದಲ್ಲಿ ಸಾಧಿಸಿರುವ ಅಸಾಧಾರಣ ಸಾಧನೆಗಳನ್ನು ಇತ್ತೀಚಿನ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(IIMB) ತನ್ನ ವರದಿಯಲ್ಲಿ ಪ್ರಮುಖವಾದ 3 ನವೀನ ವಿಧಾನಗಳ ಅಳವಡಿಕೆ ಕುರಿತು ದಾಖಲಿಸಿದೆ. ಅಭಿವೃದ್ಧಿ ಹೊಂದುತ್ತಿರುವ ನಗರಗಳಲ್ಲಿ ಅಳವಡಿಸಿಕೊಳ್ಳುತ್ತಿರುವ ನೂತನ ಉಪಕ್ರಮಗಳನ್ನು ದಾಖಲಿಸುವ ಮತ್ತು ಅವುಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ 2022ರಲ್ಲಿ ಪ್ರಾರಂಭಿಸಿರುವ ‘SAAR'(Smart Cities &Academic Research) ಸಂಶೋಧನಾ ಅಧ್ಯಯನದಲ್ಲಿ ಈ ಅಂಶಗಳನ್ನು ಗುರುತಿಸಲಾಗಿದೆ. ಮಹಿಳಾ ಸುರಕ್ಷತೆ: ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿನ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್(ICCC) ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ 70 ಆಯಕಟ್ಟಿನ ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಅಅಖಿಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ 24/7 ಮೇಲ್ವಿಚಾರಣೆ ಮತ್ತು ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಗಳೊಂದಿಗೆ 41 ತುರ್ತು ಕರೆ ಬಾಕ್ಸ್ ಗಳ ಸ್ಥಾಪಿಸುವ ಮೂಲಕ ಮಹಿಳಾ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಾಗಿದೆ.…

Read More

ತುಮಕೂರು: ಜಿಲ್ಲೆಯಲ್ಲಿರುವ ಜೇನುತುಪ್ಪ ಉತ್ಪಾದಕರು ಹಾಗೂ ಸಂಗ್ರಾಹಕರು ತೋಟಗಾರಿಕೆ ಇಲಾಖೆಯ ಝೇಂಕಾರ(Jhenkara) ಎಂಬ ಬ್ರ್ಯಾಂಡ್ ಹೆಸರು ಹಾಗೂ ಲೋಗೋ ಬಳಸಿಕೊಂಡು ಜೇನುತುಪ್ಪವನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕಿ ಶಾರದಮ್ಮ ತಿಳಿಸಿದ್ದಾರೆ. ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ‍್ಯಾಂಡ್ ಹೆಸರನ್ನು ಅಭಿವೃದ್ಧಿಪಡಿಸಿ TRADE MARK REGISTRY ಇಂದ ಅಧಿಕೃತವಾಗಿ ಅನುಮೋದನೆ ಪಡೆದಿದೆ. ತೋಟಗಾರಿಕೆ ಇಲಾಖೆಯು ಝೇಂಕಾರ್ ಬ್ರ‍್ಯಾಂಡ್ನ ಮಾಲಿಕತ್ವವನ್ನು ಹೊಂದಿದ್ದು, ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಹಾಗೂ ನಿಬಂಧನೆಗಳೊಂದಿಗೆ ಈ ಬ್ರ್ಯಾಂಡ್ ಹೆಸರು ಮತ್ತು ಲೋಗೋ ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶವಿದೆ. ತೋಟಗಾರಿಕೆ ಇಲಾಖೆಯ ಮಾಲಿಕತ್ವದ ಈ ಜೇನುತುಪ್ಪ ಬ್ರ್ಯಾಂಡ್ ನಡಿ ಜೇನುತುಪ್ಪ ಮಾರಾಟ ಮಾಡಲಿಚ್ಛಿಸುವ ಜೇನುತುಪ್ಪ ಉತ್ಪಾದಕರು/ಸಂಗ್ರಾಹಕರು 2500 ರೂ.ಗಳ ನೋಂದಣಿ ಶುಲ್ಕವನ್ನು ಖಜಾನೆ-2ರ ಲೆಕ್ಕ ಶೀರ್ಷಿಕೆ(0401–00-800–2–01)ಯಡಿ ಪಾವತಿಸಿ ತೋಟಗಾರಿಕೆ ಉಪ ನಿರ್ದೇಶಕರಿಗೆ ಪಾವತಿಸಿದ ಚಲನ್ ನೀಡಿ…

Read More

ತುಮಕೂರು:  ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ:1.1.2025ರನ್ವಯ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ಮಹಾ ನಗರಪಾಲಿಕೆ ಕಚೇರಿಯಲ್ಲಿ ಪ್ರಚುರಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ತುಮಕೂರು ನಗರದ ಅರ್ಹ ಮತದಾರರು ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ನಿಗದಿತ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು ಅಥವಾ ತಾವೇ ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ VHA- Voter Helpline App ಅನ್ನು ಡೌನ್‌ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ-6ರಲ್ಲಿ, ಕೈಬಿಡತಕ್ಕ(Deletion) ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ(Correction) ಅಗತ್ಯವಿದ್ದಲ್ಲಿ ನಮೂನೆ-8ರಲ್ಲಿ ಸಂಬಂಧಿಸಿದ ಬಿಎಲ್‌ ಓಗಳಿಗೆ ಮನವಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ…

Read More