Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಪಾವಗಡ: ಪಾವಗಡ ಪಟ್ಟಣದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಧ್ಯಾಹ್ನ ಹಳೆ ಸಂತೆ ಮೈದಾನದವನು ಪರಿಶೀಲನೆ ನಡೆಸಲಾಯಿತು. ಈ ವೇಳೆ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪ, ಚಿತ್ರದುರ್ಗ ಜಿಲ್ಲಾ ನಿಯಂತ್ರಕ ಶ್ರೀನಿವಾಸ್, ತುಮಕೂರು ಜಿಲ್ಲಾ ಕೆಎಸ್ಆರ್ಟಿಸಿ ನಿಯಂತ್ರಕ ಚಂದ್ರಶೇಖರ್, ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದರು. ಪರಿಶೀಲನೆ ನಂತರ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ, ಹಲವಾರು ವರ್ಷಗಳಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಸೂಕ್ತ ಜಾಗವನ್ನು ಹುಡುಕಲಾಗುತ್ತಿತ್ತು. ಆದರೆ ಸ್ಥಳದ ಅಭಾವದಿಂದ ಪಾವಗಡ ಪಟ್ಟಣದ ಸಮೀಪದಲ್ಲಿ ಎಲ್ಲೂ ಜಾಗ ಸಿಕ್ಕಿರಲಿಲ್ಲ ಶಿರಾ ರಸ್ತೆಯ ಮಾರ್ಗದ ಹಳೆ ಸಂತೆ ಮೈದಾನವು ಈಗ ವ್ಯರ್ಥವಾಗಿದೆ ,ಈ ಸ್ಥಳವನ್ನು ಬಸ್ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದು, ಅತ್ಯುತ್ತಮ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಲಭ ಪ್ರಯಾಣದ…
ಭಾರತೀಯ ಜೈನ್ ಮಿಲನ್ ವಲಯ –8 ರ ಜಿನ ಭಜನಾ ಮಾಲಿಕೆ ಬೆಂಗಳೂರಿನಲ್ಲಿ ವೈಭವಯುತವಾಗಿ ನಡೆಯುವುದರ ಮೂಲಕ ಸಂಪನ್ನಗೊಂಡಿತು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಧರ್ಮಸ್ಥಳ ಸುರೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ ಈ ಜೈನ ಭಜನೆ , ಎರಡು ದಿನಗಳ ಕಾಲ ಸೆಮಿ ಫೈನಲ್ ಹಾಗೂ ಫೈನಲ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು . ಕಾರ್ಯಕ್ರಮದಲ್ಲಿ ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಕಾರ್ಯ ಅಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಮಾತನಾಡಿ, ಜಿನ ಭಜನೆ ಭಾರತೀಯ ಸಂಸ್ಕೃತಿ– ಸಂಸ್ಕಾರದ ಮೂಲಬೇರಾಗಿದ್ದು, ಇದನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ ಇದು ಸಾಹಸಮಯ ಕೆಲಸವಾಗಿದ್ದು, ಇದಕ್ಕೆ ಭರದ ಸಿದ್ಧತೆ ನಡೆಸುವುದು, ತೀರ್ಪು ನೀಡುವುದು ಕಷ್ಟದ ಕೆಲಸವೇ ಆಗಿದೆ ಎಂದರು. ಭಾರತೀಯ ಜೈ ನ್ ಮಿಲನ್ ವಲಯ –8 ರ ರಾಷ್ಟ್ರೀಯ ಉಪಾಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಮಾತನಾಡಿ,…
ತುಮಕೂರು: ತುಮಕೂರು ತಾಲ್ಲೂಕು ಕೋರ ಗ್ರಾಮದ ಬಳಿಯಿರುವ ನಿರಾಶ್ರಿತರ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 75 ವರ್ಷದ ಮಂಜಣ್ಣ ಬಿನ್ ಶಿವಣ್ಣ ಎಂಬ ವಯೋವೃದ್ಧನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜನವರಿ 2ರಂದು ಬೆಳಿಗ್ಗೆ 6:30 ಗಂಟೆಗೆ ಮೃತಪಟ್ಟಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತ ವ್ಯಕ್ತಿಯು 165 ಸೆಂ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಶರೀರ ಹೊಂದಿದ್ದು, ಮೃತನ ಮೈಮೇಲೆ ನೀಲಿ–ಹಳದಿ ಮಿಶ್ರಿತ ಅರ್ಧ ತೋಳಿನ ಅಂಗಿ ಹಾಗೂ ಬಲ ಮೊಣಕೈಯಲ್ಲಿ ಹಾವಿನ ಚಿತ್ರವಿರುವ ಹಚ್ಚೆ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816–2278000/2272340/ 2275301/ 2242006, ಮೊ.ಸಂ.9480802900–20—31–49ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು : ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಜನವರಿ 8ರಂದು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಕ್ಕಳಲ್ಲಿರುವ ಪ್ರತಿಭೆಗಳು ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದ್ದು, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ಆರ್.ಜಿ. ಪವಿತ್ರ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಬಾಲಭವನ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ “ಅಂತರ್ ಶಾಲಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಿದ್ದ ಜನಪದ ನೃತ್ಯ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಲ್ಲೂಕು ಮಟ್ಟದಲ್ಲಿ ಕಿರಿಯ/ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಿ ಪ್ರಥಮ ಬಹುಮಾನ ಗಳಿಸಿದ ಮಕ್ಕಳಿಗಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರಲ್ಲದೆ, ಮಕ್ಕಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಬೇಕು. ಕನ್ನಡ ನಾಡಿನ ಜನಪದ ಕಲೆಗಳನ್ನು ಉಳಿಸಬೇಕು. ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳಾ…
ತುಮಕೂರು: ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರು ನಗರಿ ತುಮಕೂರಿನ ಎಸ್ ಎಸ್ ಐ ಟಿ ಗ್ರೀನ್ ಕ್ಯಾಂಪಸ್ ಆವರಣದಲ್ಲಿ ಮೊದಲನೆ ಬಾರಿಗೆ 39ನೇಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಇದೇ ತಿಂಗಳ 18 ಮತ್ತು 19ರಂದು ಅದ್ದೂರಿಯಾಗಿ ನಡೆಸಲು ನಿಶ್ಚಯಗೊಳಿಸಿದ್ದು, ರಾಜ್ಯದಿಂದ ಬರುವ ಪತ್ರಕರ್ತರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಊಟ, ವಸತಿ, ಸಾರಿಗೆ, ಇತರೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಸ್ವಯಂ ಸೇವಾ ಸಮಿತಿಯು ನಗರದ ಪತ್ರಿಕಾ ಭವನದಲ್ಲಿ ಸಭೆ ನಡೆಸಿತು. ಸಮಿತಿಯ ಅಧ್ಯಕ್ಷರಾದ ಜಯನುಡಿ ಜಯಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಗೆ ಕಾ.ನಿ.ಪ. ಪ್ರಧಾನ ಕಾರ್ಯದರ್ಶಿ, ಟಿ ಇ ರಘುರಾಮ್ ಅವರು ಭಾಗಿಯಾಗಿ ಸಮ್ಮೇಳನ ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿಯ ಜವಾಬ್ದಾರಿಗಳ ಕುರಿತಾಗಿ ಸಲಹೆ ನೀಡಿದರು. ಸ್ವಯಂ ಸೇವಾ ಸಮಿತಿಯ ಅಧ್ಯಕ್ಷ ಜಯನುಡಿ ಜಯಣ್ಣ ಅವರು ಮಾತನಾಡಿ, ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸ್ವಯಂ ಸೇವಾ ಸಮಿತಿ ಬದ್ಧವಾಗಿದೆ. ಸುಮಾರು…
ಕೊರಟಗೆರೆ: ಸ್ಮಶಾನಕ್ಕೆ ಹೋಗುವ ದಾರಿ ಮತ್ತು ಸರ್ಕಾರಿ ಹಳ್ಳ ಒತ್ತುವರಿ ಶೀಘ್ರವೇ ತೆರವು ಕಾರ್ಯಾಚರಣೆ ಕೈಗೊಳ್ಳಬೇಕೆಂದು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬಡ ಮುದ್ದಯ್ಯನಪಾಳ್ಯ ಮಜರೇ ಬೋರಯ್ಯನ ಹಟ್ಟಿ ಗ್ರಾಮದ ಗ್ರಾಮಸ್ಥರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮ ದಾಸರವೇ ನಂಬರ್ 19ರಲ್ಲಿ 20 ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಿದ್ದು, ಸ್ಮಶಾನ ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿ ಆಗಿದ್ದು ಹಾಗೂ ಸರ್ಕಾರಿ ಹಳ್ಳದ ಜಾಗ ಒತ್ತುವರಿ ಆಗಿದ್ದು ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದು ಮನವಿ ಮಾಡಿದ್ದಾರೆ. ಗ್ರಾಮದ ಬಲಾಢ್ಯರು ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಮುಳ್ಳು ತಂತಿ ಹಾಕಿ ರೈತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದರು. ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಮನವಿ ಸ್ವೀಕರಿಸಿ ತಕ್ಷಣವೇ ಕ್ರಮವಹಿಸುತ್ತೇನೆ ಎಂದು ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಹಾಡುಹಗಲೇ ಪತ್ರಿಕಾ ಸಂಪಾದಕ ರಾಮಾಂಜಿನಪ್ಪ ಅವರ ಮೇಲಿನ ದಾಳಿ ಖಂಡಿಸಿ, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಜಿ.ಕರುಣಾಕರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಜಿಲ್ಲೆಯ ಪಾವಗಡದಲ್ಲಿ ನಡೆದಂತಹ ಘಟನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ಪಾವಗಡ ಪಟ್ಟಣದಲ್ಲಿ ಸೋಮವಾರ ರಾಮಾಂಜಿನಪ್ಪ ಅವರ ಮೇಲೆ ಹಲ್ಲೆ ಮಾಡಿದವರನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.…
ಪಾವಗಡ: ಪತ್ರಕರ್ತ ರಾಮಾಂಜಿನಪ್ಪ ನವರ ಹಲ್ಲೆಯನ್ನು ಖಂಡಿಸಿ ಪಾವಗಡ ತಾಲೂಕಿನ ಪತ್ರಕರ್ತರ ಸಂಘಟನೆಗಳು, ದಲಿತಪರ ಸಂಘಟನೆಗಳು, ಶ್ರೀರಾಮಸೇನೆ, ತಾಲೂಕು ಕುರುಬ ಸಮಾಜ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಣದ ಐ.ಬಿ.ಯಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಪಟ್ಟಣದ ಶನಿಮಹಾತ್ಮ ದೇವಾಲದಬಳಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗುತ್ತ ಪಟ್ಟಣದ ಪೊಲೀಸ್ ಠಾಣೆ ಬಳಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು. ತಾಲೂಕು ಕಚೇರಿ ಮುಂದೆ ರಸ್ತೆ ತಡೆ ನಡೆಸಿದರು. ನಂತರ ಪಾವಗಡ ಪಟ್ಟಣ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿದ ಕುರುಬ ಸಮುದಾಯದ ಮುಖಂಡರು ಹಾಗೂ ಸದಸ್ಯರು ಆರೋಪಿ ನಾರಾಯಣ ರೆಡ್ಡಿ ಕುಟುಂಬವನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.…
ತುಮಕೂರು: ಪಾವಗಡದಲ್ಲಿ ಪತ್ರಕರ್ತ ರಾಮಾಂಜೀನಪ್ಪ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ನಾರಾಯಣರೆಡ್ಡಿ, ರೂಪ, ಲಕ್ಷ್ಮೀದೇವಿ, ಆದಿಲಕ್ಷ್ಮಿ ಬಂಧಿತರಾಗಿದ್ದಾರೆ. ಆರೋಪಿತರನ್ನು ಪಾವಗಡ ಪಿ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿ. ಮರಿಯಪ್ಪ, ಹಾಗೂ ಅಬ್ದುಲ್ ಖಾದರ್ ಮತ್ತು ಶೇಖರ್, ಡಿ.ವೈ.ಎಸ್.ಪಿ ಮಧುಗಿರಿ(ಪ್ರಭಾರ) ಇವರುಗಳ ಮಾರ್ಗದರ್ಶನದಲ್ಲಿ ಸುರೇಶ ಎಂ.ಆ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಗುರುನಾಥ್ ಪಿ.ಎಸ್.ಐ-2, ಸಿಬ್ಬಂದಿರವರುಗಳನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐ.ಪಿ.ಎಸ್ ರವರು ಶ್ಲಾಘಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx