Author: admin

ಕರ್ನಾಟಕ ರಾಜ್ಯದಲ್ಲಿ ಹೂಮನ್ ಮೆಟಾನ್ಯೂಮೊವೈರಸ್ (HMPV) ಇತರ ಉಸಿರಾಟದ ವೈರಸ್‌ ಗಳಂತಯೇ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಿಗೆ ಈ ರೋಗ ಲಕ್ಷಣಗಳು ಕಂಡುಬರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಎರಡು HMPV ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದ್ದು, ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು, ಎರಡು ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಸಾಮಾನ್ಯ ಶೀತ ILI ಮತ್ತು SARI ನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಶಿಸಿದೆ, ಡಿಸೆಂಬರ್ 2024 ರಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಗಮರ್ನಾಹ ಏರಿಕೆ ಕಂಡುಬಂದಿರುವುದಿಲ್ಲ. ರೋಗಲಕ್ಷಣಗಳು : HMPV ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟುಮಾಡುತ್ತದೆ, ಹೆಚ್ಚು…

Read More

ಬೆಂಗಳೂರು: 2025ರ ಮಾರ್ಚ್‌ 1 ರಿಂದ 8ರ ವರೆಗೆ ₹9 ಕೋಟಿ ವೆಚ್ಚದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಥೀಮ್‌ನಡಿ ಆಯೋಜಿಸಲಾಗುತ್ತಿದೆ. ಈ ಬಾರಿ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು, 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್‌ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ. ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು, ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ವಿಮಾನದ ಇಂಜಿನ್ ಸ್ಥಗಿತಗೊಂಡ ಕಾರಣ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ 2820 ವಿಮಾನವು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.ಬೆಂಗಳೂರಿನ ಸುತ್ತ ಸುತ್ತಿದ ನಂತರ ಒಂದು ಗಂಟೆಯ ನಂತರ ಹಿಂತಿರುಗಿತು ಎಂದು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ಹೆಚ್ಚನ ತಾಂತ್ರಿಕ ವಿವರಗಳಿಲ್ಲ ಆದರೆ ವಿಮಾನವು ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ಮುಂದುವರೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಗ್ವಾಲಿಯರ್: 25 ವರ್ಷದ ವೈದ್ಯೆಯೊಬ್ಬಳ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಪರೀಕ್ಷೆಗೆ ಹಾಜರಾಗಬೇಕಿತ್ತು ಹಾಗಾಗಿ ವೈದ್ಯಕೀಯ ಕಾಲೇಜಿನ ಬಾಲಕಿಯರ ಹಾಸ್ಟೆಲ್ ನಲ್ಲಿ ತಂಗಿದ್ದರು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಜಾಡೋನ್ ತಿಳಿಸಿದ್ದಾರೆ. ಆರೋಪಿ, ಸಂತ್ರಸ್ತೆಯೊಂದಿಗೆ ಅಧ್ಯಯನ ಮಾಡಿದ ವೈದ್ಯನಾಗಿದ್ದು,ಬಾಲಕರ ಹಳೆಯ ಹಾಸ್ಟೆಲ್ಗೆ ಭೇಟಿಯಾಗಲು ಅವಳನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ ನಂತರ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆ ಕಂಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ 60 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಯಾವ ದಾಖಲೆ ಕೊಟ್ಟಿದ್ದೀರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 60% ಕಮೀಶನ್! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದಿದ್ದಾರೆ. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ. ಕಮೀಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು…

Read More

ಕಠ್ಮಂಡು: ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್ ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್ವರ್ಕ್ ಸೆಂಟರ್ (ಸಿಇಎನ್ಸಿ) ಪ್ರಕಾರ, ನೇಪಾಳದ ಗಡಿಯ ಸಮೀಪ 7.1 ರ ತೀವ್ರತೆಯೊಂದಿಗೆ ಡಿಂಗ್ರಿ ಕೌಂಟಿಯಲ್ಲಿ ಬೆಳಿಗ್ಗೆ 6:35 ಕ್ಕೆ ಭೂಕಂಪ ಸಂಭವಿಸಿದೆ. ಬಿಹಾರದಲ್ಲಿಯೂ ಭೂಮಿ ಕಂಪಿಸಿದ ಅನುಭವ ಜನತೆಗೆ ಆಗಿದೆ. ಜನರು ತಮ್ಮ ಮನೆಗಳು ಮತ್ತು ಅಪಾರ್ಟ್ಮೆಂಟ್ಗಳ ಹೊರಗೆ ಓಡುತ್ತಿರುವ ದೃಶ್ಯ ಕಂಡುಬಂತು. ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತಿಪಟೂರು: ಕಲ್ಪತರು ವಿದ್ಯಾ ಸಂಸ್ಥೆ ವತಿಯಿಂದ ಜನವರಿ 9ರಂದು ಗುರುವಾರ ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.,ಜಿ.ಸುಧಾಕರ್ ತಿಳಿಸಿದರು. ಕಲ್ಪತ ಕಲ್ಪತರು ತಾಂತ್ರಿಕ ಕಾಲೇಜ್ ಕಲ್ಪತರು ಪಿಯು ಕಾಲೇಜ್ ವತಿಯಿಂದ ಸುಮಾರು ಹೆಸರಾಂತ 75 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ತಿಪಟೂರ್ ತಾಲೂಕುಹುಳಿಯಾರು ಅರಸೀಕೆರೆ ತುರುವೇಕೆರೆ ತಾಲೂಕಿಗೆ ಸೇರಿದ ನಿರುದ್ಯೋಗಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ಈ ಉದ್ಯೋಗ ಮೇಳದಲ್ಲಿ 3,000 ಜನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಕೆಲವಾರು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುತ್ತಾರೆ. ಸಂದರ್ಶನಕ್ಕೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ನಿರುದ್ಯೋದ್ಯೋಗಿಗಳಿಗೆ ಈ ಉದ್ಯೋಗವು ಮೇಳವು ನೆರವಾಗಲಿದೆ ಎಂದು ತಿಳಿಸಿದರು. ಈ ಉದ್ಯೋಗ ಮೇಳವನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸುವರು, ಸಂಸ್ಥೆಯ ಅಧ್ಯಕ್ಷ ಕೆ.ಪಿ. ತಿಪ್ಪೆರುದ್ರಪ್ಪನವರು ಅಧ್ಯಕ್ಷತೆ ವಹಿಸುವರು, ಬದರಗಡ್ಡೆ ಉಪಸ್ಥಿತರಿರುವರು, ಸಂಸ್ಥೆಯ ಉಪಾಧ್ಯಕ್ಷರು ಬಾಗೇಪಲ್ಲಿ ನಟರಾಜ್, ಕಾರ್ಯದರ್ಶಿ ಸಂಗಮೇಶ್, ಪ್ರಾಂಶುಪಾಲ ಚಿತ್ತರಂಜನ್, ಪ್ಲೇಸ್ಮೆಂಟ್ ಅಧಿಕಾರಿ ಕಿರಣ್ ಇದ್ದರು.…

Read More

ತುಮಕೂರು:  ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ  ಗುಡ್ಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮೂವರು  ಮೃತಪಟ್ಟವರನ್ನು ಮಹಮದ್ ಆಸೀಫ್ (12), ಮಮ್ತಾಝ್  (38), ಶಾಖೀರ್ ಹುಸೇನ್ (48) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತಿದ್ದ ಮೂವರಿಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ, ಇದರ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ಮಧುಗಿರಿ ತಾಲೂಕಿನ ಕೊರಟಗೆರೆ ರಸ್ತೆ ಓಬಳಾಪುರ ಗೇಟ್ ಬಳಿ ಘಟನೆ ಸಂಭವಿಸಿದೆ. ಮೃತಪಟ್ಟ ಮೂವರು ಕೂಡ ಮಧುಗಿರಿ ತಾಲೂಕಿನವರೆಂದು ಈಗಾಗಲೇ ಪತ್ತೆ ಹೆಚ್ಚಲಾಗಿದೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು:  ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿರುವ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ. ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನ ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಿಪಟೂರು ತಾಲ್ಲೋಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬುವವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 4ರಿಂದ 5 ವರ್ಷ ಪ್ರಾಯದ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆ ಬಲೆಬೀಸಿತ್ತು.  ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನ ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆ ಬಲೆಗೆ ಕೆಡವಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.  ತುಮಕೂರು ಉಪ ಅರಣ್ಯಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್…

Read More