Author: admin

ಪಾವಗಡ:  ಪತ್ರಕರ್ತನ ಮೇಲೆ ಮೂವರು ಮಹಿಳೆಯರು ಸೇರಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಮಾರಕ ದಾಳಿ ನಡೆಸಿರುವ ಘಟನೆ  ನಡೆದಿದ್ದು, ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ಹೃದಯ ಭಾಗದ ಟೋಲ್ ಗೇಟ್ ಬಳಿ ನಾರಾಯಣ ರೆಡ್ಡಿ ಕುಟುಂಬದ ಮಹಿಳಾ ಸದಸ್ಯರು ಮೂರು ಜನ ಸೇರಿ  ಪತ್ರಕರ್ತ ರಾಮಾಂಜಿನಪ್ಪನವರ ಮೇಲೆ ಅಂಬೇಡ್ಕರ್ ವೃತ್ತದಲ್ಲಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪತ್ರಕರ್ತನ ಮೇಲಿನ ದಾಳಿ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಈ ಹಲ್ಲೆಗೆ ಪತ್ರಕರ್ತರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಪತ್ರಕರ್ತರಿಗೆ ರಕ್ಷಣೆ ನೀಡುವಂತೆ ಪತ್ರಕರ್ತರು ಒತ್ತಾಯಿಸಿದ್ದಾರೆ. ಈ ಘಟನೆ ಮಾಧ್ಯಮ ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ.  ಸದ್ಯ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಋತುಸ್ರಾವದ ಸಮಯದಲ್ಲಿಸ್ಯಾನಿಟರಿ ಪ್ಯಾಡ್ ಕೊಳ್ಳಲು ಹಣವಿಲ್ಲದೆ ಹುಲ್ಲು, ಇಟ್ಟಿಗೆ, ಹಳೆಬಟ್ಟೆ, ಬೂದಿ ಹಾಗೂ ಇನ್ನಿತರ ಅನೈರ್ಮಲ್ಯ ವಸ್ತುಗಳನ್ನು ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಬಳಸುತ್ತಿದ್ದಾರೆ. ಇದರಿಂದ ಕ್ಯಾನ್ಸರ್, ಗರ್ಭಕೋಶದ ಸಮಸ್ಯೆಯುಂಟಾಗಿ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ ಎಂದು ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ಆತಂಕ ವ್ಯಕ್ತಪಡಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸಾವಿತ್ರಿಬಾಯಿ ಫುಲೆ ಹಾಗೂ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲೆಕಾರ್ಯಕ್ರಮದಲ್ಲಿ ಮಾತನಾಡಿದರು. ಋತುಚಕ್ರದ ಕುರಿತು ಗ್ರಾಮೀಣ ಭಾಗದ ಹೆಣ್ಣುಮಕ್ಕಳಲ್ಲಿ ಅರಿವಿನ ಕೊರತೆಯಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟರಿ ಪ್ಯಾಡ್ ದೊರಕುವಂತಾಗಬೇಕು. ಮುಟ್ಟಿನ ಕುರಿತು ಅರಿವು ಮೂಡಿಸುವ ಕಾರ್ಯಕೈಗೊಳ್ಳಬೇಕು. ಜಿಡಿಪಿಯ ಶೇ.50 ಪಾಲನ್ನು ಹೊಂದಿರುವ ಸಂಸಾರ ನಿಭಾಯಿಸುವ ಗೃಹಿಣಿಯರಿಗೆ ಸೂಕ್ತ ಸಂಭಾವನೆ ಕೊಡುವ ಮನಸ್ಥಿತಿಯ ಸಮಾಜ ನಿರ್ಮಾಣವಾಗಬೇಕು. ಇದರಿಂದ ಮಹಿಳಾ ಸಬಲೀಕರಣವಾಗಲಿದೆ ಎಂದರು. ಮಿತಿಮೀರಿದ ಸ್ತ್ರೀವಾದದಿಂದ ಅದರ ಸಾಧಕ—ಬಾಧಕಗಳ ಕುರಿತು ಚಿಂತನೆ ನಡೆಸುವ ಕಾಲದಲ್ಲಿದ್ದೇವೆ. ಸಾವಿತ್ರಿಬಾಯಿ ಫುಲೆ ಅವರ ಧೈರ್ಯ ಹಾಗೂ ಕುವೆಂಪು ಅವರ ಸಮಾನತೆ ಸಾರುವ…

Read More

ಬೀದರ್: ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗೀತ್ವದಲ್ಲಿ 15 ಸಾವಿರ ಮನೆಗಳು ಮಂಜೂರಾಗಿದ್ದು, ಯಾರಿಗೆ ಮನೆ ಮತ್ತು ನಿವೇಶನವಿಲ್ಲ ಅಂತಹವರಿಗೆ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ಬೀದರ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದರು. ಇಂದು ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಜನರಿಗೆ 2024–25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿ.ಎಂ.ಎ.ವಾಯ್ (ಜಿ) ಅಡಿಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು. ಸಾಮಾನ್ಯ ಜನರಿಗೆ ಮೊದಲನೆ ಕಂತಿನಲ್ಲಿ 30 ಸಾವಿರ ರೂ, ಎರಡನೇ ಕಂತಿನದಲ್ಲಿ 60 ಸಾವಿರ ರೂ, ಮೂರನೇ ಕಂತಿನಲ್ಲಿ 30 ಸಾವಿರ ರೂ. ಒಟ್ಟು 1,20,000 ರೂ. ಹಣ ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊದಲನೇ ಕಂತಿನಲ್ಲಿ 43,750…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಹೆಚ್.ಎ.ಎಲ್. ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಂ ಆಪರೇಟರ್, ಮೆಕ್ಯಾನಿಕ್ ರೆಫ್ರಿಜಿರೇಷನ್ ಅಂಡ್ ಏರ್ ಕಂಡೀಷನಿಂಗ್ ಟ್ರೇಡ್ ನಲ್ಲಿ ಐ.ಟಿ.ಐ. ಪಾಸಾದ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಭಾವಚಿತ್ರ, ಎಸ್.ಎಸ್ಎಲ್.ಸಿ., ಐ.ಟಿ.ಐ. ಅಂಕ ಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಮೀಸಲಾತಿ ಪ್ರಮಾಣ ಪತ್ರ SC/ST/OBC/PH ಅನ್ನು ಲಗತ್ತಿಸಿ ಜನವರಿ 22ರೊಳಗಾಗಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮುನ್ನ www.apprenticeship.gov.in ನಲ್ಲಿ ಕಡ್ಡಾಯವಾಗಿ ಅಪ್ರೆಂಟಿಸ್ ನೋಂದಣಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ: 0816–2278488ನ್ನು ಸಂಪರ್ಕಿಸಬೇಕೆಂದು…

Read More

ರಾಯಚೂರು: ರಾಯಚೂರ ಜಿಲ್ಲೆಯ ಪ್ರವಾಸದಲ್ಲಿದ್ದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಬೋಸರಾಜು ಅವರು ಜನವರಿ 6ರಂದು ಜಿಲ್ಲಾಧಿಕಾರಿಗಳಾದ ನಿತೀಶ ಕೆ, ಸಹಾಯಕ ಆಯುಕ್ತರಾದ ಗಜಾನನ ಬಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ 700 ವರ್ಷಗಳ ರಾಯಚೂರಿನ ಐತಿಹಾಸಿಕ ಮಾವಿನ ಕೆರೆಯ ಅಭಿವೃದ್ಧಿ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು. ಸಚಿವರು ಇದೆ ವೇಳೆ, ಜಿಲ್ಲಾಧಿಕಾರಿಗಳು ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು. ನಗರದ ನಾಗರಿಕರಿಗೆ ವಾಯುವಿಹಾರ ಜೊತೆಗೆ ಪ್ರೇಕ್ಷಣೀಯ ಸ್ಥಳವಾಗಿ ಈ ಕೆರೆ ಪ್ರದೇಶವು ಮಾರ್ಪಾಡಾಗುತ್ತಿರುವುದು ಸಂತಸದ ಸಂಗತಿ ಎಂದರು. ಸ್ವಚ್ಚ ಮತ್ತು ಸುಂದರ ನಗರ ಹಾಗೂ ಅಂತರ್ಜಲ ವೃದ್ಧಿಗಾಗಿ ರಾಯಚೂರಿನ ಹೃದಯ ಭಾಗದಲ್ಲಿರುವ ಐತಿಹಾಸಿಕ ಮಾವಿನ ಕೆರೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಐತಿಹಾಸಿಕ ಮಾವಿನ ಕೆರೆ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾವಿನ ಕೆರೆ ಸಮಗ್ರ ಅಭಿವೃದ್ಧಿಗೆ ಎಲ್ಲರು ಕೈಜೋಡಿಸಿ ಸಹಕರಿಸಬೇಕು ಎಂದು ಸಚಿವರು ರಾಯಚೂರ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ…

Read More

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ(1 ರಿಂದ 8ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ರಾಜ್ಯ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳು ಜಾಲತಾಣ https://ssp.karnataka.gov.in ಮೂಲಕ ಜನವರಿ 15ರೊಳಗಾಗಿ ಅರ್ಜಿ ಸಲ್ಲಿಸಿ, ನಂತರ ಸಲ್ಲಿಸಿದ ಅರ್ಜಿ ಪ್ರತಿಯನ್ನು ಸಂಬಂಧಿಸಿದ ಶಾಲೆಗಳಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ನಗರದ ಉಪ್ಪಾರ ಹಳ್ಳಿ ಇಂದಿರಾ ಕಾಲೇಜು ಮುಂಭಾಗ ಮೌಲಾನಾ ಆಜಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜನವರಿ 8ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಿದ್ದ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಲಕ್ಷ್ಮೀನಾರಾಯಣ ಎ.ವಿ. ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಹ್ಯೂಮನ್‌ ಮೆಟಾನ್ಯುಮೋ ವೈರಸ್‌ (HMPV) ಬಗ್ಗೆ ಆತಂಕ ಬೇಡ, ಸಹಜ ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ರಾಜಧಾನಿ ಬೆಂಗಳೂರಿನಲ್ಲಿ 2 ಎಚ್‌ ಎಂಪಿವಿ ಕೇಸ್‌ ಪತ್ತೆಯಾಗಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಬಳಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳು, 3 ತಿಂಗಳ ಇಬ್ಬರು ಮಕ್ಕಳಲ್ಲಿ ಕಾಯಿಲೆ ದೃಢಪಟ್ಟಿದೆ. ಸದ್ಯ ಇಬ್ಬರ ಆರೋಗ್ಯ ಸುಧಾರಿಸಿದೆ. ಆತಂಕ ಪಡುವ ಸ್ಥಿತಿ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ. ಎಚ್‌ಎಂಪಿವಿ ಈಗಾಗಲೇ ಹಳೇಯ ವೈರಸ್‌ ಆಗಿದೆ. 2001 ರಲ್ಲೆ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಕೊರೊನಾದಷ್ಟು, ಮಾಧ್ಯಮಗಳಲ್ಲಿ ತೋರಿಸುತ್ತಿರುವಷ್ಟು ಸೀರಿಯಸ್‌ ಅಲ್ಲ. ಸೋಂಕಿತ ಮಕ್ಕಳಿಗೆ ಏನು ಆಗಿಲ್ಲ. ಚೀನಾದಲ್ಲಿ ಹರಡಿರುವ ವೈರಸ್‌ ತಳಿಗೂ, ಬೆಂಗಳೂರಿನಲ್ಲಿ ಹರಡಿರುವ ತಳಿಯೂ ಸಂಬಂಧ ಇಲ್ಲ ಎನಿಸುತ್ತಿದೆ. ಈ ಬಗ್ಗೆ ಪತ್ತೆಗೆ ಅಗತ್ಯ ಕ್ರಮ…

Read More

ಬೆಂಗಳೂರು: ಕಾಂಗ್ರೆಸ್ ನದು ಶೇ.100ರಷ್ಟು ಕಮೀಷನ್ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಅಶ್ವಥ್ ನಾರಾಯಣ ಗಂಭೀರ ಆರೋಪ ಮಾಡಿದ್ದಾರೆ. ಈಗಿನದು 60% ಕಮೀಷನ್ ಸರ್ಕಾರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ಅಶ್ವಥ್ ನಾರಾಯಣ ಈ ಗಂಭೀರ ಆರೋಪ ಮಾಡಿದರು. ಎಚ್.ಡಿ.ಕುಮಾರಸ್ವಾಮಿ ಅವರು ಸುಖಾಸುಮನೆ ಸರ್ಕಾರದ ವಿರುದ್ಧ ಆರೋಪ ಮಾಡಿಲ್ಲ. ಹಿಟ್ ಅಂಡ್ ರನ್ ಮಾಡಿಲ್ಲ. ಎಲ್ಲಾ ಇಲಾಖೆಗಳಲ್ಲೂ ವ್ಯವಸ್ಥಿತವಾಗಿ ಕಮಿಷನ್ ನಡೆಯುತ್ತಲೇ ಇದೆ. ಇದರಲ್ಲಿ ಸುಳ್ಳೇನಿಲ್ಲ. ವಿಧಾನಸೌಧದ ಕಂಬಗಳು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿವೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕಾಗಿದೆ ಎಂದು ಪ್ರಶ್ನಿಸಿದರು. ಈ ಸರ್ಕಾರ ಆರಂಭದಿಂದಲೂ ಹಗರಣಗಳ ಮೇಲೆ ಹಗರಣ ನಡೆಸುತ್ತಿದೆ. ಬರೀ ಭ್ರಷ್ಟಾಚಾರ ಆಪಾದನೆಯಲ್ಲ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ವಾಲೀಕಿ ನಿಗಮದಲ್ಲಿ 100% ಭ್ರಷ್ಟಾಚಾರ ಅವರೇ ಒಪ್ಪಿಕೊಂಡಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆಯಿಂದ ಈ ಪ್ರಕರಣ ಹೊರಗೆ ಬಂತು ಎಂದು ಹೇಳಿದರು. ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಎಸ್ ಐ ಪೋಸ್ಟ್ ಗೆ…

Read More

ಕಳೆದ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದ್ದ ತಮಿಳಿನ ಅಮರನ್ ಸಿನಿಮಾ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಸೂಪರ್ ಹಿಟ್ ಆಗಿತ್ತು. ಬಳಿಕ ಒಟಿಟಿಗೂ ಎಂಟ್ರಿಕೊಟ್ಟು ಅಲ್ಲೂ ಹೆಚ್ಚು ಜನರಿಂದ ವೀಕ್ಷಣೆ ಪಡೆದುಕೊಂಡಿತ್ತು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಇದೀಗ ಕಿರುತೆರೆಗೆ ಬರಲಿದೆ. ಚಿತ್ರಮಂದಿರಗಳಲ್ಲಿ ಹಾಗೂ ಒಟಿಟಿಯಲ್ಲಿ ಸಿನಿಮಾ ವೀಕ್ಷಣೆ ಮಾಡಲು ಸಾಧ್ಯವಾಗದವರು ಇದೀಗ ಮನೆಯಲ್ಲೇ ಟಿವಿಯಲ್ಲಿ ನೋಡಬಹುದಾಗಿದೆ. ಕನ್ನಡದಲ್ಲಿ ಈ ಸಿನಿಮಾದ ಸ್ಯಾಟಲೈಟ್ ಹಕ್ಕನ್ನು ಸ್ಟಾರ್ ಸುವರ್ಣ ಪಡೆದುಕೊಂಡಿದೆ. ಇದೇ ಜನವರಿ 14ರಂದು ಸಂಜೆ 5:30ಕ್ಕೆ ಈ ಸಿನಿಮಾ ಪ್ರದರ್ಶನಗೊಳ್ಳಲಿದೆ. ಈ ಸಿನಿಮಾವನ್ನು ಕಮಲ್ ಹಾಸನ್ ತಮ್ಮ ರಾಜ್ ಕಮಲ್ ಇಂಟರ್ ನ್ಯಾಷನಲ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ನಾಯಕ ನಟರಾಗಿ ಶಿವ ಕಾರ್ತಿಕೇಯನ್, ನಾಯಕಿಯಾಗಿ ಸಾಯಿ ಪಲ್ಲವಿ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More