Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಚಾಣಕ್ಯನ ನೀತಿಗಳು(Chanakyana niti )ಬಹಳ ಖ್ಯಾತಿ ಪಡೆದದ್ದಾಗಿವೆ. ಚಾಣಕ್ಯನ ಕೆಲವೊಂದು ನೀತಿಗಳು ಮಹಿಳೆಯರ ವಿರುದ್ಧ ಇರುವಂತೆ ಕಂಡರೂ ಸಾಕಷ್ಟು ನೀತಿಗಳು ಸಮಾಜದಲ್ಲಿ ಜನಪ್ರಿಯವಾಗಿದೆ. ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ 3 ವ್ಯಕ್ತಿಗಳಿಂದ ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಆ ವ್ಯಕ್ತಿಗಳಿಂದ ದೂರವಿದ್ದರೆ ಸಂಬಂಧ ಉತ್ತಮವಾಗಿರುತ್ತದೆಯಂತೆ. ಸ್ವಾರ್ಥಿ ಬಂಧು, ಸ್ನೇಹಿತರಿಂದ ದೂರವಿರಿ: ನಿಮ್ಮ ಸ್ನೇಹಿತರು, ಸಂಬಂಧಿಕರು ಸ್ವಾರ್ಥಿಗಳಾಗಿದ್ದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾನೆ. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರು ನಿಮಗೆ ಸಲಹೆ ನೀಡುವವರು, ಮಾರ್ಗದರ್ಶನ ನೀಡುವವರಾಗಿರಬೇಕು. ಆದರೆ ಸ್ನೇಹಿತರು, ಸಂಬಂಧಿಕರು ನಿಮ್ಮ ಬೆಳವಣಿಗೆ ಸಹಿಸದವರು, ನಿಮ್ಮನ್ನು ದಾರಿ ತಪ್ಪಿಸಲು ಯತ್ನಿಸುತ್ತಾರೆ ಎಂದಾದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾರೆ. ಜಗಳವಾಡುವ ಪತ್ನಿಯೊಂದಿಗೆ ಹೀಗೆ ಇರಿ: ಜಗಳವಾಡುವ ಹೆಂಡತಿಯಿಂದ ನೀವು ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಚಾಣಕ್ಯನ ಪ್ರಕಾರ ಜಗಳವಾಡುವ ಹೆಂಡತಿ ನಿಮ್ಮನ್ನು ಸಂತೋಷದಿಂದ ಇಡಲಾರಳು. ಆಕೆ ನಿಮ್ಮ ಜೀವನದಲ್ಲಿ ಅಡೆತಡೆ ಮಾತ್ರ ತರಬಹುದು. ಆಕೆಯನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಪುರುಷರಿಗೆ…
ತಿಪಟೂರು: ತಾಲೂಕಿನ ಕರಡಿ ಕೃಷಿ ಪತಿನ ಸಹಕಾರ ಸಂಘದ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಕೆ.ಆರ್. ದೇವರಾಜು ಬಣವು ಅಭೂತಪೂರ್ವವಾಗಿ ಗೆಲುವು ಸಾಧಿಸಿದೆ. ಗೆಲುವಿನ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಕೆ.ಆರ್.ದೇವರಾಜು ತಾಲೂಕು ಮಟ್ಟದ ಹಲವಾರು ರಾಜಕಾರಣಿಗಳು ನಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಕೊಂಡು ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಹೊರಿಸಿದರು. ಕೂಡ ನಮ್ಮ ಭಾಗದ ರೈತರು ನಮ್ಮ ತಂಡದ ಮೇಲೆ ಹಾಗೂ ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ನನಗೆ ಮತ್ತೊಮ್ಮೆ ಆಶೀರ್ವಾದಿಸಿರುವುದಕ್ಕಾಗಿ ನಾನು ನಮ್ಮ ರೈತ ಬಾಂಧವರಿಗೆ ಕೃತಜ್ಞನಾಗಿರುತ್ತೇನೆ ಎಂದು ಹಾಗೂ ಇನ್ನೂ ಉತ್ತಮ ಸೇವೆ ಸಲ್ಲಿಸುವುದಾಗಿ ತಿಳಿಸಿದರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಕೆ.ಆರ್.ದೇವರಾಜು 295, ಉಪ್ಪಿನ ಹಳ್ಳಿ ಜಯಣ್ಣ 246, ದೊಡ್ಡ ಲಿಂಗಯ್ಯ 245, ಶಿವಮೂರ್ತಿ 243, ಶೇಷಣ್ಣ 228, ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮೃತಶ್ರೀ 281, ಭಾರತ 248, ಪರಿಶಿಷ್ಟ ಜಾತಿ ಮೀಸಲಿನಿಂದ ಮಲ್ಲೇಶಯ 263, ಪರಿಶಿಷ್ಟ ಪಂಗಡದಿಂದ ಕೃಷ್ಣೆಯ 267,…
ತುಮಕೂರು: ಬೈಕ್ ಸಮೇತ ಹೇಮಾವತಿ ನಾಲೆಗೆ ಬಿದ್ದ ಸವಾರ ಮೃತಪಟ್ಟಿರುವ ಘಟನೆ ಕುಂದೂರು ಬಳಿ ಹೇಮಾವತಿ ನಾಲೆಯಲ್ಲಿ ನಡೆದಿದೆ. ಅಜೀಬ್ ವುಲ್ಲಾ(33) ಖಾನ್ ಮೃತ ದುರ್ದೈವಿ. ಹೇಮಾವತಿ ನಾಲೆಯಿಂದ 28 ಕಿಲೋಮೀಟರ್ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಂದೂರು ಬಳಿ ಹೇಮಾವತಿ ನಾಲೆಗೆ ಬಿದ್ದ ಅಜೀಬ್ ವುಲ್ಲಾ ಖಾನ್ ತಿಪಟೂರು ತಾಲ್ಲೂಕು ಕೆ.ಬಿ.ಕ್ರಾಸ್ ನಿವಾಸಿಯಾಗಿದ್ದಾರೆ. ಜ.2ನೇ ತಾರೀಕು ಅಜೀಬ್ ವುಲ್ಲಾ ನಾಲೆಗೆ ಬಿದ್ದಿದ್ದಾರೆ. ಕುಂದೂರು ಬಳಿಯ ನಾಲೆಯಲ್ಲೆ ಬೈಕ್ ಪತ್ತೆಯಾಗಿದೆ. ಗುಬ್ಬಿ ತಾಲ್ಲೂಕಿನ ಸೋಮಲಾಪುರದ ಬಳಿ ಪತ್ತೆಯಾದ ಮೃತ ದೇಹ ಪತ್ತೆಯಾಗಿದೆ. ಮೃತ ದೇಹ ನಾಲೆಯಿಂದ ಹೊರ ತೆಗೆಯಲು ನಿನ್ನೆಯಿಂದ ಹರಸಾಹಸ ಪಡುವಂತಾಗಿದೆ. ನಿನ್ನೆಯೇ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಮೃತ ದೇಹವನ್ನು ನಾಲೆಯಿಂದ ತೆಗೆಯಲು ಕುಟುಂಬಸ್ಥರು ಮನವಿ ಮಾಡಿದ್ದಾರೆ. ನಿನ್ನೆ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕೆ.ಬಿ ಕ್ರಾಸ್ ಪೊಲೀಸರು ಭೇಟಿ ನೀಡಿದ್ದರು. ಆದರೆ, ಮೃತ ದೇಹ ಮೇಲೆ ತೆಗೆಯಲು ವಿಫಲವಾಗಿದ್ದಾರೆ. ಸೋಮಲಾಪುರದ ಬಳಿ ಆಳವಾಗಿರುವ ಹೇಮಾವತಿ ನಾಲೆಯಿಂದ ಮೃತದೇಹ ತೆಗೆಯುವುದು…
ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ಕೂಡಿದೆ, ಹೀಗಾಗಿ ಅಧಿಕಾರಿಗಳು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಲಖನ ಲಾಧೇಕರ ಒತ್ತಾಯಿಸಿದ್ದಾರೆ. ಬಾವಿ ತೆಗೆದಿಲ್ಲ, ಟ್ಯಾಂಕರ್ ಕೂಡ ಕಟ್ಟಿಲ್ಲ ಇದಕ್ಕೆ ಸಂಬಂಧಪಟ್ಟ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಾದ A. E. E. ಹಾಗೂ ಗುತ್ತಿಗೆದಾರರು ಕೂಡಿ ಸರಕಾರದ ಖಜಾನೆ ಖಾಲಿ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಆದ ಕಾರಣ ಕಾಮಗಾರಿಯು ಪರಿಶೀಲನೆ ಮಾಡಿದ ನಂತರ ಅನುದಾನ ಬಿಡುಗಡೆ ಮಾಡಬೇಕು ಅಲ್ಲಿಯವರೆಗೆ ತಾವುಗಳು ಅನುದಾನವನ್ನು ತಡೆಹಿಡಿಯಬೇಕು ಎಂದು ದ್ವಿತೀಯ ದರ್ಜೆ ಸಹಾಯಕ ಸಾಯಿಕಿರಣ್ ಅವರಿಗೆ ಮನವಿ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ಷ್ಮವಾಗಿ ತನಿಖೆ ನಡೆಸಿ ಅವರ ಮೇಲೆ ಸೂಕ್ಷ್ಮವಾಗಿ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ — ವಿಭಾಗ ಔರಾದ್ (ಬಾ ) ಕಛೇರಿ ಮುಂದುಗಡೆ ಹೋರಾಟ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.…
ತುಮಕೂರು: ಜಿಲ್ಲೆ ತಿಪಟೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ರಾಷ್ಟ್ರೀಯ ಹೆದ್ದಾರಿ 206 ರ ಚತುಷ್ಪತ ರಸ್ತೆಗೆ ಸಂಪರ್ಕಿಸುವ 2 ಕಿಲೋ ಮೀಟರ್ ಚತುಷ್ಪಥ ನಗರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ತಿಪಟೂರು ಶಾಸಕ ಕೆ.ಷಡಕ್ಷರಿ ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಕೆ.ಷಡಕ್ಷರಿ ಸರ್ಕಾರ ಎಸ್ ಎಸ್ ಟಿಪಿ ಯೋಜನೆ ಅಡಿ 20 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು,ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹಾಲ್ಕುರಿಕೆ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 8 ಕೋಟಿ ವೆಚ್ಚದ ನಗರ ಸಂಪರ್ಕ ಚತುಷ್ಪಥ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು. ಹಾಲ್ಕುರಿಕೆ ರಸ್ತೆ ರಾಜ್ಯ ಹೆದ್ದಾರಿಯಾಗಿರುವ ಕಾರಣ ರಾಜ್ಯಹೆದ್ದಾರಿ ನಿಯಮಗಳಂತೆ ಕಾಮಗಾರಿ ನಡೆಸಲಾಗುತ್ತದೆ. ಹಾಲ್ಕುರಿಕೆ ರಸ್ತೆ ನಗರದಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯಾಗಿರುವ ಕಾರಣ, ಅಪಘಾತಗಳು, ಹೆಚ್ಚಾದ ಹಿನ್ನೆಲೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.…
ಬೆಂಗಳೂರಿನಲ್ಲಿ ಕಳೆದೊಂದು ವಾರಗಳಿಂದ ಚಳಿಗೆ ಜನ ಗಡಗಡ ನಡುಗಿದ್ದಾರೆ. ಚಳಿಯ ಜೊತೆಗೆ ಇಬ್ಬನಿಯ ಪ್ರಮಾಣ ಕೂಡ ಹೆಚ್ಚಾಗಿದ್ದು, ಹೀಗಾಗಿ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ. ಉತ್ತರ ಭಾರತದಿಮದ ಶೀತಗಾಳಿ ಬೀಸುತ್ತಿರುವ ಪರಿಣಾಮ ನಗರದಲ್ಲಿ ತಾಪಮಾನ ಮತ್ತಷ್ಟು ತಗ್ಗುವ ಮುನ್ಸೂಚನೆ ಇದೆ. ಜನವರಿ ತಿಂಗಳಲ್ಲಿ ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮುಂದಿನ ವಾರ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗುವ ಮುನ್ಸೂಚನೆ ಕೂಡ ಇರುವುದರಿಂದ ಬೆಂಗಳೂರಿನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚಿರಲಿದ್ದು, ಮಳೆ ಜಾಸ್ತಿ ಬಿದ್ದ ಕಾರಣ ಕೆರೆ, ನದಿ, ಅಣೆಕಟ್ಟುಗಳು ತುಂಬಿರುವುದು ಕೂಡ ವಾತಾವರಣದ ಚಳಿ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ವೈರಸ್ ಹ್ಯೂಮನ್ ಮೆಟಾನ್ಯೂಮೊ ವೈರಸ್( HMPV) ಬೆಂಗಳೂರಿನಲ್ಲಿ ಮಗುವಿನಲ್ಲಿ ಪತ್ತೆಯಾಗಿದೆ. ನಗರದ ಖಾಸಗಿ ಆಸ್ಪತ್ರೆಗೆ 8 ತಿಂಗಳ ಮಗುವನ್ನು ಜ್ವರದ ಹಿನ್ನೆಲೆ ದಾಖಲಿಸಲಾಗಿತ್ತು. ಪರೀಕ್ಷೆ ಮಾಡಿಸಿದ ವೇಳೆ HMPV ಪತ್ತೆಯಾಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ ಎಂದು ಅವರು ತಿಳಿಸಿದ್ದಾರೆ. ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ. ಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯ ಕೆನ್ನೆಯಂತೆ ನಯವಾದ ರಸ್ತೆಗಳನ್ನು ಮಾಡುತ್ತೇವೆ ಎಂದು ರಮೇಶ್ ಬಿಧುರಿ ಹೇಳಿಕೆ ನೀಡಿದ್ದು, ಇದರ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದ್ಯ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಭಾರೀ ಚರ್ಚೆಗೀಡಾಗಿದೆ. ಬಿಧುರಿ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್, ಇದು ನಾಚಿಕೆಗೇಡು” ಮತ್ತು ಬಿಜೆಪಿ ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪ್ ಸಂಸದ ಸಂಜಯ್ ಸಿಂಗ್ ಕೂಡ ರಮೇಶ್ ಬಿಧುರಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಕ್ಸ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಯ ನಾಯಕತ್ವದಲ್ಲಿ ದೆಹಲಿಯ ಮಹಿಳೆಯರು ಸುರಕ್ಷಿತವಾಗಿರಬಹುದೇ ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿ ಅಭಿಲೇಖಾಲಯದಲ್ಲಿರುವ ಹಳೆಯ ದಾಖಲೆಗಳನ್ನು ಸೂಕ್ಷ್ಮವಾಗಿ ಗಣಕೀಕರಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂಪ್ಯೂಟರ್ ಆಪರೇಟರ್ ಗಳಿಗೆ ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯು ಭೂಸುರಕ್ಷಾ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದಡಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿರುವ ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸುವ ಉದ್ದೇಶದಿಂದ ಕಂಪ್ಯೂಟರ್ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ನೀಡಿದ ಸಲಹೆ ಸೂಚನೆಗಳನ್ವಯ ಆಪರೇಟರ್ಗಳು ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸಬೇಕು. ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಂತ್ರಾಂಶಕ್ಕೆ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು. ಮೊದಲಿಗೆ ಎ ವರ್ಗದ ಕಡತ/ ವಹಿಗಳ ಗಣಕೀಕರಣ ಮಾಡಬೇಕು. ನಂತರದಲ್ಲಿ ಬಿ ವರ್ಗದ ಕಡತ/ವಹಿಗಳನ್ನು ಗಣಕೀಕರಣ ಮಾಡಬೇಕು. ಅಭಿಲೇಖಾಲಯದಲ್ಲಿ ಸುಮಾರು 150 ವರ್ಷಕ್ಕೂ ಹಳೆಯದಾದ ದಾಖಲೆಗಳಿರುತ್ತವೆ. ಇಂತಹ ದಾಖಲೆಗಳನ್ನು ಸಂರಕ್ಷಿಸಲು ಈ ಗಣಕೀಕರಣ ಕಾರ್ಯ ಕೈಗೊಳ್ಳಲಾಗಿದೆ. ಕಂಪ್ಯೂಟರ್ ಆಪರೇಟರ್ ಗಳು ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ ದಾಖಲೆಗಳು ಹಾಳಾಗದಂತೆ ಬಹುಸೂಕ್ಷ್ಮತೆಯಿಂದ…
ಶಿವಮೊಗ್ಗ: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx