Author: admin

ತುಮಕೂರು:  ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜನವರಿ 26ರಂದು ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.   ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜನವರಿ 26ರ ಗಣರಾಜ್ಯೋತ್ಸವದಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಧ್ವಜಾರೋಹಣ ನೆರವೇರಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಗೆ ಸೂಚಿಸಿದರು. ಗಣರಾಜ್ಯೋತ್ಸವವನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳನ್ನೊಳಗೊಂಡ ಸ್ವಾಗತ, ಪೆರೇಡ್, ಕ್ರೀಡಾಂಗಣ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ನಿರ್ದೇಶನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಎನ್‌ ಸಿಸಿ, ಅಗ್ನಿಶಾಮಕ, ಪೊಲೀಸ್ ಇಲಾಖೆ, ಗೃಹರಕ್ಷಕದಳದವರಿಂದ ಆಕರ್ಷಕ ಕವಾಯತು ಏರ್ಪಡಿಸಬೇಕು. ಕವಾಯತಿಗಾಗಿ ಜನವರಿ 22 ರಿಂದ 24ರವರೆಗೆ ತಾಲೀಮು…

Read More

ಗುಬ್ಬಿ: ರೈಲ್ವೆ ಪೊಲೀಸ್‌ ಸೇರಿದಂತೆ ಮತ್ತೊಬ್ಬ ಊರಿನ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿಬರುತ್ತಿದ್ದ ಅಂಬೇಡ್ಕ‌ರ್ ಅವರ ಜೈ ಭೀಮ್ ಹಾಡು ಕೇಳಿ ಆಕ್ರೋಶಗೊಂಡು ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮರ್ಮಾಂಗಕ್ಕೆ ಗಂಭೀರವಾಗಿ ಹೊಡೆದು ಜೊತೆಗೆ ಜಾತಿ ನಿಂದನೆ ಮಾಡಿರುವ ಘಟನೆಯ ಬಗೆಗಿನ ಆರೋಪ ತಾಲೂಕಿನ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ಗೊಲ್ಲ ಸಮುದಾಯದ ರೈಲ್ವೆ ಇಲಾಖೆ ಪೊಲೀಸ್ ಅಧಿಕಾರಿ ಚಂದ್ರಶೇಖ‌ರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎಂಬಾವರು ಜಾತಿ ನಿಂದನೆ ಮಾಡಿ ದಲಿತ ಯುವಕನ ಮರ್ಮಾಂಗಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು, ಹಲ್ಲೆಗೊಳಗಾದ 19 ವರ್ಷದ ದೀಪು ಎಂಬಾತ ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎನ್ನಲಾಗಿದ್ದು, ಈತ ಸೇರಿದಂತೆ ಮತ್ತೊಬ್ಬ ನರಸಿಂಹ ಮೂರ್ತಿ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More

ತುಮಕೂರು:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್‌ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್‌  ಈ ವೇಳೆ ಉಪಸ್ಥಿತರಿದ್ದರು. ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್‌ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಗೌರವಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ…

Read More

ಶಿವನಿಗೆ ಸೋಮವಾರದ ವಿಶೇಷ ಪೂಜೆ ಅರ್ಪಿಸುವುದನ್ನು ನೀವು ಕೇಳಿರುತ್ತೀರಿ. ಆದರೆ, ಸೋಮವಾರವೇ ಯಾಕೆ ಶಿವನಿಗೆ ಪೂಜೆ ಸಲ್ಲಿಸುತ್ತಾರೆ ಅನ್ನೋದು ಸಾಕಷ್ಟು ಜನರಿಗೆ ತಿಳಿದೇ ಇಲ್ಲ. ಎಲ್ಲ ದಿನಗಳೂ ಭಕ್ತಿಗೆ, ಆರಾಧನೆಗೆ ಪವಿತ್ರವಾದುದ್ದೇ ಆದರೂ ಸೋಮವಾರದ ವಿಶೇಷ ಪೂಜೆ ಶಿವನಿಗೆ ಪ್ರಿಯವಾದದ್ದು ಎನ್ನುವುದನ್ನು ತಿಳಿಯೋಣ… ಸೋಮವಾರ ಶಿವನಿಗೆ ವಿಶೇಷ ಯಾಕಂದ್ರೆ, ಶಿವನ ಹೆಸರಿನಲ್ಲೇ ಆ ದಿನದ ಗುಟ್ಟು ಇದೆ. ಸೋಮ ಅಂದ್ರೆ ಚಂದ್ರ ಎಂದು ಅರ್ಥ. ಇನ್ನೊಂದು ಅರ್ಥ ಶಾಂತ ಎನ್ನುವ ಸ್ವಭಾವವನ್ನು ಸಂಕೇತಿಸುತ್ತದೆ. ಶಿವನನನ್ನು ಪಡೆಯಲು ಪಾರ್ವತಿಯು 16 ಸೋಮವಾರಗಳ ಕಠಿಣ ತಪಸ್ಸು ಮಾಡಿದಳಂತೆ. ಇದರಿಂದಾಗಿ ಶಿವನು ಪಾರ್ವತಿಯ ತಪಸ್ಸಿಗೆ ಮೆಚ್ಚಿ, ಆಕೆಯನ್ನು ಪತ್ನಿಯಾಗಿ ಸ್ವೀಕರಿಸಿದ್ದನಂತೆ ಎನ್ನುವುದು ಒಂದು ಕಥೆಯಾಗಿದೆ. ಅಂದಿನಿಂದ ಇಂದಿನ ವರೆಗೂ ಸೋಮವಾರದಂದು  ಉಪವಾಸವನ್ನು ಆಚರಿಸಿದರೆ ಶಿವ ಒಲಿಯುತ್ತಾನೆ ಎನ್ನುವ ನಂಬಿಕೆ ಬೆಳೆದುಕೊಂಡು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಂಗಳೂರು: ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನ ಬಾಗಲೂರು ಯಲಹಂಕ ತಾಲ್ಲೂಕು, ಬೆಂಗಳೂರು ಇಲ್ಲಿ ರೇಣುಕರಾಜ್.ಜಿ.ಹೆಚ್.ರವರಿಗೆ 2024 ನೇ ಸಾಲಿನ  ರಾಜ್ಯ ಮಟ್ಟದ ಹೆಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು(ರಿ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ(ರಿ) ಬೆಂಗಳೂರುರವರ ಸಹಕಾರದ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಹಾಗೂ ವೈಚಾರಿಕ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ 4 ನೇ ವೈಜ್ಞಾನಿಕ ಸಮ್ಮೇಳನದಲ್ಲಿ ವಿಜ್ಞಾನ — ಸಾಹಿತ್ಯ — ಸಂಸ್ಕೃತಿ ಸಮಾಗಮ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡಲಾಗುವಂತೆ,  2024 ನೇ  ಸಾಲಿನ  ರಾಜ್ಯ ಮಟ್ಟದ ಹೆಚ್. ನರಸಿಂಹಯ್ಯ.ಪ್ರಶಸ್ತಿಯನ್ನು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ರೇಣುಕರಾಜ್ ಜಿ.ಹೆಚ್. ರವರಿಗೆ ಶೈಕ್ಷಣಿಕ ಕ್ಷೇತ್ರ ವಿಭಾಗದಿಂದ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ  ಡಾ.ಎ.ಎಸ್.ಕಿರಣ್ ಕುಮಾರ್…

Read More

ಬೆಳಗಾವಿ: ಕ್ಯಾನ್ಸರ್ ರೋಗವು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿ. ಇದಕ್ಕೆ ಹಲವು ಕಾರಣಗಳಿದ್ದು, ನಮ್ಮ ಜೀವನ ಶೈಲಿ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರುತ್ತಿದೆ. ಹಾಗಾಗಿ, ಸದೃಢ ಆರೋಗ್ಯ ಮತ್ತು ಸೂಕ್ತ ಚಿಕಿತ್ಸೆಯ ಬಗ್ಗೆ ಜನರಲ್ಲಿ ಪರಿಣಮಕಾರಿಯಾಗಿ ಅರಿವು ಮೂಡಿಸುವ ತುರ್ತು ಅಗತ್ಯತೆ ಇದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಕೆಎಲ್ ಇ ಡಾ‌‌.ಸಂಪತ್‌ ಕುಮಾರ ಶಿವಣಗಿ ನೂತನ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ವಿಶ್ವದ ಜನಸಂಖ್ಯೆಯಲ್ಲಿ ಪ್ರತಿ ವರ್ಷ 2 ಕೋಟಿ ಜನ ಕ್ಯಾನ್ಸರ್‌ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 97 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಕೂಡ ಕ್ಯಾನ್ಸರ್‌ ಆಘಾತಕಾರಿಯಾಗಿ ಹರಡುತ್ತಿದೆ. ಪ್ರತಿ 1 ಲಕ್ಷ ಜನರಲ್ಲಿ 100 ಜನರಿಗೆ ಕ್ಯಾನ್ಸರ್‌ ಬರುತ್ತಿದೆ. 2025ರಲ್ಲಿ ಕ್ಯಾನ್ಸರ್‌ ರೋಗ ಹರಡುವ ದರವು ಶೇ.13ರಷ್ಟು ಹೆಚ್ಚಲಿದೆ ಎಂದು ಐಸಿಎಂಆರ್‌ ಸಂಶೋಧನೆಯಿಂದ ಗೊತ್ತಾಗಿದೆ” ಎಂದರು. ಕ್ಯಾನ್ಸರ್ ರೋಗಿಗಳ ದೈಹಿಕ ಮತ್ತು ಮಾನಸಿಕ ಅಗತ್ಯಗಳನ್ನು ಪರಿಹರಿಸುವುದು ಮತ್ತು ಸಮಗ್ರ ಆರೈಕೆ…

Read More

ಹಾಸನ: ತಂದೆಯನ್ನು ಹತ್ಯೆ ಮಾಡಿ ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಪುತ್ರನೊಬ್ಬನನ್ನು  ಪೊಲೀಸರು ಬಂಧಿಸಿದ ಘಟನೆ  ಸಕಲೇಶಪುರದ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ದಿನೇಶ್(34) ಬಂಧಿತ ಆರೋಪಿಯಾಗಿದ್ದಾನೆ. ಈತನ ತಂದೆ ಶಶಿಧರ್(58) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ.  ಘಟನೆ ನಡೆದ ದಿನ ದಿನೇಶ್ ಕುಡಿದು ಬಂದು ತಂದೆಯ ಜೊತೆಗೆ ಜಗಳವಾಡಿದ್ದಾನೆ. ಬಳಿಕ ತಂದೆಗೆ ಕಾಲಿನಿಂದ ಒದ್ದಿದ್ದ. ಇದರಿಂದಾಗಿ ಶಶಿಧರ್ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ದಿನೇಶ್ ನ ತಾಯಿ ಹೆದರಿ ಮನೆಯಿಂದ ಸಹೋದರನ ಮನೆಗೆ ತೆರಳಿದ್ದಾರೆ. ಇದೇ ವೇಳೆ ಕುಸಿದು ಬಿದ್ದ ತಂದೆಯನ್ನು ದಿನೇಶ್  ಅರೇಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದು, ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ದ. ಶಶಿಧರ್ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದರು. ಬಳಿಕ ಆರೋಪಿ ದಿನೇಶ್ ಅಂತ್ಯಸಂಸ್ಕಾರಕ್ಕೆ  ತಂದೆಯ ಮೃತದೇಹವನ್ನು ತಂದ ವೇಳೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಇದೇ ವೇಳೆ ದಿನೇಶ್ ವಿರುದ್ಧ ಆತನ ತಾಯಿಯೇ ಅರೇಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಎಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತುಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಈ ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಜ.4ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆ ಇಂದು ಅರ್ಜಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದ 6 ಮಂದಿಯಿದ್ದ ಅಪರಿಚಿತರ ತಂಡ  ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ರೂಪಾಯಿ ದೋಚಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದಲ್ಲಿ ನಡೆದಿದೆ. ಜನವರಿ 3ರ ರಾತ್ರಿ ಈ ಘಟನೆ ನಡೆದಿದೆ. ಕೊಳ್ನಾಡು ನಿವಾಸಿ ಹಾಗೂ ಕೃಷಿಕ, ಬೀಡಿ ಉದ್ಯಮಿ ಮೊಹಮ್ಮದ್ ಇಕ್ಬಾಲ್(27)  ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ತಮಿಳುನಾಡು ನೋಂದಣಿಯ ವಾಹನದಲ್ಲಿ ರಾತ್ರಿ 8:10ರ ಸುಮಾರಿಗೆ  ಬಂದ ದರೋಡೆ ಕೋರರು, ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದು, ಮನೆಯನ್ನು ಶೋಧಿಸಲು ಆದೇಶವಿದೆ ಎಂದು ಹೇಳಿದ್ದಾರೆ. ಮನೆ ಪ್ರವೇಶಿಸಿದ ನಂತರ, ಅವರು ಶೋಧ ನಡೆಸುವ ಮೊದಲು ಕುಟುಂಬ ಸದಸ್ಯರಿಂದ ಐದು ಮೊಬೈಲ್ ಫೋನ್‌ ಗಳನ್ನು ಕಿತ್ತುಕೊಂಡಿದ್ದಾರೆ. ತಪಾಸಣೆ ವೇಳೆ, ವ್ಯವಹಾರದ ಉದ್ದೇಶದಿಂದ ಬೀರುದಲ್ಲಿಟ್ಟಿದ್ದ 25–30 ಲಕ್ಷ ರೂ. ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಮನೆಯಲ್ಲಿ ಇಡಲು ಅನುಮತಿ ಇಲ್ಲ. ಹೀಗಾಗಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ.  ರಾತ್ರಿ 10.30ಕ್ಕೆ, ವಶಪಡಿಸಿಕೊಂಡ…

Read More

ತುಮಕೂರು: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳು, ಶಿಕ್ಷಣ ಭೀಷ್ಮ ಡಾ. ಹೆಚ್.ಎಂ. ಗಂಗಾಧರಯ್ಯ ರವರ ಸ್ಮರಣಾರ್ಥ ಜನವರಿ 11ರಂದು  ಸಿದ್ಧಾರ್ಥ ಗಾನ ಕಲಾ ಸಂಭ್ರಮ—29 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿವರ್ಷದಂತೆ ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಜನಪದಗೀತೆ, ಭಾವಗೀತೆ ಮತ್ತು ಚಿತ್ರಕಲಾಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ತುಮಕೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಲು ಕೋರಲಾಗಿದೆ.  ಸಿದ್ದಾರ್ಥ ಕಾಲೇಜಿನ ಡಾ.ಕೆ.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯ ನಿಯಮಗಳು : * ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಬಹುದು. * ಪ್ರತಿ ಸ್ಪರ್ಧಿಗೆ 4-5 ನಿಮಿಷಗಳ ಕಾಲಾವಧಿಯನ್ನು ನಿಗಧಿ ಮಾಡಲಾಗುವುದು. * ಪ್ರತಿ ಸ್ಪರ್ಧೆಗೆ ಪ್ರಥಮ ಬಹುಮಾನ ರೂ. 1000, ದ್ವಿತೀಯ ಬಹುಮಾನ ರೂ.750, ತೃತೀಯ ಬಹುಮಾನ ರೂ 500. ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. * ಸ್ಪರ್ಧೆಗೆ ಭಾಗವಹಿಸುವವರು ದಿನಾಂಕ. 10-01-2025 ರೊಳಗೆ ಪ್ರವೇಶ ಪತ್ರವನ್ನು ಕಳುಹಿಸಬೇಕು. ಅಥವಾ ಸ್ಥಳದಲ್ಲೇ ನೊಂದಾಯಿಸಲು ಸಹ…

Read More