Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಶಾಲಾ–ಕಾಲೇಜ್ ನಲ್ಲಿ ಮಕ್ಕಳಿಂದ ಸಿನಿಮಾ ಹಾಡು ಗಳಿಗೆ ಹೆಜ್ಜೆ ಹಾಕಿಸುವುದನ್ನು ನಿಷೇಧ ಮಾಡಿದರೂ ಸಹಾ, ಶಾಲಾ–ಕಾಲೇಜ್ ಗಳು ಸ್ಪರ್ಧೆಗೆ ಇಳಿದಂತೆ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ನಡೆಸುವುದು ಒಳ್ಳೆಯ ಬೆಳವಣಿಗೆ. ಆದರೆ ಸಿನಿಮಾ ಹಾಡುಗಳು ಬೆಳೆಯುವ ಮನಸ್ಸುಗಳಿಗೆ ಯಾವ ರೀತಿಯ ಪ್ರೇರಣೆ ನೀಡಬಹುದು ಎನ್ನುವುದನ್ನು ಶಿಕ್ಷಕರು – ಉಪನ್ಯಾಸಕರು ಚಿಂತಿಸದಿರುವುದು ದುರಂತ. ಶಾಲಾ-ಕಾಲೇಜುಗಳಲ್ಲಿ ಯುವ ಸಮುದಾಯವನ್ನು ಮೆಚ್ಚಿಸಲು, ಪೋಷಕರನ್ನು ಮೆಚ್ಚಿಸಲು ಸಿನಿಮಾ ಹಾಡುಗಳನ್ನು ಕಾರ್ಯಕ್ರಮಗಳಲ್ಲಿ ಬಳಸುವುದು ಎಷ್ಟು ಸರಿ? ಎನ್ನುವುದನ್ನು ಚಿಂತಿಸಬೇಕಿದೆ. ಸಿನಿಮಾ ಹಾಡುಗಳನ್ನು ಬಳಕೆ ಮಾಡುವುದಕ್ಕಿಂತ ಶಾಲಾ–ಕಾಲೇಜ್ ಗಳಲ್ಲಿ ಸಮಾಜದಲ್ಲಿ ಇರುವ ಅನಿಷ್ಟ ಪದ್ಧತಿಗಳನ್ನು, ಮೂಢನಂಬಿಕೆಗಳನ್ನು ನಿವಾರಣೆ ಮಾಡುವಂತಹ ಕಿರುನಾಟಕಗಳನ್ನು ಹಾಗೂ ದೇಶ ಅಭಿಮಾನ ನಾಡ ಅಭಿಮಾನ ಬೆಳೆಸುವಂತಹ ಕಿರುನಾಟಕಗಳ ಹಾಡುಗಳನ್ನು ಬಳಕೆ ಮಾಡಿಕೊಳ್ಳುವುದು ಅಗತ್ಯ ಇದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಚಿಂತಿಸಬೇಕಾದ ಅಗತ್ಯವಿದೆ. ಸಿನಿಮಾ ಹಾಡುಗಳ ಸಂಸ್ಕೃತಿಗೆ ಶಾಲಾ ಕಾಲೇಜುಗಳಲ್ಲಿ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಯುವ ಸಮೂದಾಯ ಸೆಲ್ಫಿ ಹಾಗೂ ರೀಲ್ಸ್ ಗಳನ್ನು ಹೆಚ್ಚು…
ಬಾಗಲಕೋಟೆ: ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಮದುವೆ ಮಾಡಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದ್ದು, ಮದುವೆ ಬಳಿಕ ಬ್ರೋಕರ್ ಹಾಗೂ ವಿವಾಹವಾದ ಹೆಣ್ಣು ಇಬ್ಬರೂ ಪರಾರಿಯಾಗಿದ್ದಾರೆ. ಮುಧೋಳದ ಸೋಮಶೇಖರ್ ಎಂಬವರು ಮೋಸ ಹೋದವರಾಗಿದ್ದಾರೆ. ಸೋಮಶೇಖರ್ ಹೆಣ್ಣು ಸಿಗದೇ ಹೆಣ್ಣಿಗಾಗಿ ಅಲೆದಾಡುತ್ತಿರುವ ವಿಚಾರ ತಿಳಿದು ಹೆಣ್ಣು ಕೊಡಿಸ್ತೀವಿ ಎಂದು ಹೇಳಿ 4 ಲಕ್ಷ ಹಣಕ್ಕೆ ಬ್ರೋಕರ್ ಟೀಂ ಡಿಮ್ಯಾಂಡ್ ಮಾಡಿದ್ದರು. ಹೆಣ್ಣು ಸಿಗದ ಕೊರಗಿನಲ್ಲಿದ್ದ ಸೋಮಶೇಖರ್ ಇದಕ್ಕೆ ಒಪ್ಪಿಕೊಂಡಿದ್ದರು. ಶಿವಮೊಗ್ಗದ ಮಹಿಳೆ ಮಂಜುಳಾ ಎಂಬವರನ್ನು ಕರೆತಂದು ಬಾಗಲಕೋಟೆ ಮುಧೋಳದ ಕಾಳಿಕಾದೇವಿ ದೇಗುಲದಲ್ಲಿ ವರ್ಷದ ಹಿಂದೆ ಮದುವೆ ನಡೆದಿತ್ತು. ಮದುವೆ ದಿನವೇ ಬ್ರೋಕರ್ ತಂಡವು ಪೂರ್ಣ 4 ಲಕ್ಷ ಹಣ ಪಡೆದಿತ್ತು. ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಮಂಜುಳಾ ಎಸ್ಕೇಪ್ ಆಗಿದ್ದಳು. ಪತ್ನಿ ಬಗ್ಗೆ ವಿಚಾರಿಸಲು ಹೋದ ವೇಳೆ ಈಗಾಗಲೇ ಆಕೆಗೆ ಎರಡು ಮದುವೆಯಾದ ಬಗ್ಗೆ ಸುಳಿವು ಸಿಕ್ಕಿದೆ. ಹಣ ಹೊಡೆಯಲು ಮದುವೆಯಾದ ಮಹಿಳೆಯನ್ನೇ ಶಿವಮೊಗ್ಗದಿಂದ ಮುಧೋಳಕ್ಕೆ ಬ್ರೋಕರ್…
ತುಮಕೂರು: ರಾಸಲೀಲೆ ವಿಡಿಯೋ ವೈರಲ್ ಪ್ರಕರಣದಲ್ಲಿ ಬಂಧಿತ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಿದ ಬಳಿಕ ನೇರವಾಗಿ ನ್ಯಾಯಾಧೀಶರ ಮುಂದೆ ಮಧುಗಿರಿ ಪೊಲೀಸರು ಹಾಜರುಪಡಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿ JMFC ಕೋರ್ಟ್ನ ಪ್ರಧಾನ ಹಿರಿಯ ನ್ಯಾಯಾಧೀಶೆ ಪ್ರೇಮಿಳಾ ಅವರು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಡಿವೈಎಸ್ಪಿ ರಾಮಚಂದ್ರಪ್ಪ ಪರವಾಗಿ ಹಿರಿಯ ವಕೀಲ ರಘುನಾಥ್ ರೆಡ್ಡಿ ವಾದ ಮಂಡಿಸಿದರು. ಸಂತ್ರಸ್ತೆ ಪರವಾಗಿ ತಕಾರಾರು ಮಂಡಿಸಲು ಜನವರಿ 7 ವರೆಗೆ ಗಡುವು ನೀಡಲಾಗಿದೆ. ಡಿವೈಎಸ್ಪಿ ರಾಮಚಂದ್ರಪ್ಪಗೆ ಪೊಲೀಸರ ವಿಚಾರಣೆ ಬಿಸಿ ತಟ್ಟಿದೆ. ಇಂದು ಸಂಜೆ 4 ಗಂಟೆಗೆ ರಾಮಚಂದ್ರಪ್ಪರವರನ್ನು ಮಧುಗಿರಿ ಕೊರ್ಟ್ ಗೆ ಮಧುಗಿರಿ ಪೊಲೀಸರು ಹಾಜರುಪಡಿಸಿದ್ದರು. ಜನವರಿ 17 ರವರೆಗೆ ರಾಮಚಂದ್ರಪ್ಪಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಾಸಲೀಲೆ ಪ್ರಕರಣದಲ್ಲಿ ಮಧುಗಿರಿ ಡಿವೈಎಸ್ಪಿಗೆ ಸಂಕಷ್ಟಕ್ಕೆ ಸಿಲುಕಿದ್ದು ಸದ್ಯ ಜೈಲುಪಾಲಾಗಿದ್ದಾರೆ. ನಮ್ಮತುಮಕೂರಿನ ಕ್ಷಣ…
ತಮಿಳುನಾಡು: ಪಟಾಕಿ ಘಟಕದಲ್ಲಿ ನಡೆದ ಭೀಕರ ಸ್ಫೋಟದ ಪರಿಣಾಮ 6 ಮಂದಿ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ವಿರುದುನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯ ವೇಳೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರಗೆ ನಾಲ್ಕು ಕೊಠಡಿಗಳು ನೆಲಸಮವಾಗಿವೆ. 6 ಕಾರ್ಮಿಕರು ಸಾವನ್ನಪ್ಪಿದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಾತಿನ ಸಮರ ಮುಂದುವರಿದಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಕಾರಣಕ್ಕೆ ಬಿ.ವೈ.ವಿಜಯೇಂದ್ರ ಅವರಿಗೆ ಗೌರವ ನೀಡಲಾಗುತ್ತದೆ. ಬಾಯಿಗೆ ಬಂದಂತೆ ಮಾತನಾಡಿದರೆ ಸಹಿಸಲಾಗುವುದಿಲ್ಲ. ನಾವು ಬೀದಿಗಿಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ ಎಚ್ಚರಿಕೆ ನೀಡಿದ್ದಾರೆ. ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸುಪಾರಿ ನೀಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ತಿರುಗೇಟು ನೀಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಾಳ್ ಕುಟುಂಬದ ಸದಸ್ಯರ ಮೇಲೆ ಬಿಜೆಪಿಯವರು ಒತ್ತಡ ಹೇರುತ್ತಿದ್ದಾರೆ. ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಾಗುತ್ತಿದೆ. ಸ್ಥಳ ಮಹಜರು ನಡೆದಿದೆ. ಪಾರದರ್ಶಕ ತನಿಖೆ ನಡೆಯಲಿದೆ ಎಂದು ತಾವು ಸಚಿನ್ ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದೇನೆ ಎಂದರು. ಹೆಚ್ಚುವರಿ ಪ್ರಕರಣಗಳನ್ನು ನಮ್ಮ ತನಿಖೆಗೆ ವಹಿಸಬೇಡಿ ಎಂದು ಸಿಬಿಐ ರಾಜ್ಯಗಳಿಗೆ ಪತ್ರ ಬರೆದು…
ತುಮಕೂರು: ಜಿಲ್ಲೆಯ ಬುಗುಡನಹಳ್ಳಿ ಮತ್ತು ಹೆಬ್ಬಾಕ ಕೆರೆಗಳಿಗೆ ತ್ಯಾಜ್ಯ ಸುರಿಯುವ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಕುರಿತಾಗಿ ಕಾನೂನು ಕ್ರಮಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಡಮರುಗ ಉಮೇಶ್ ಮಾಲಿನ್ಯ ನಿಯಂತ್ರಣ ಮಂಡಳಿ, ಮಹಾನಗರ ಪಾಲಿಕೆ, ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜನವರಿ 3ರ ಶುಕ್ರವಾರ, ಮಧ್ಯಾಹ್ನ ವಾಹನವೊಂದರಲ್ಲಿ ತ್ಯಾಜ್ಯ ತಂದು ಕೆರೆಗೆ ಸುರಿಯುತ್ತಿರುವ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋ ಸಾಕ್ಷಿಯೊಂದಿಗೆ, ತಕ್ಷಣದ ಕ್ರಮ ಕೈಗೊಳ್ಳುವಂತೆ ಉಮೇಶ್ ಮನವಿ ಮಾಡಿದ್ದಾರೆ. ತ್ಯಾಜ್ಯ ಸುರಿಯುವ ಪ್ರಕರಣಗಳು ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತಿದ್ದು, ಕುಡಿಯುವ ನೀರನ್ನು ಮಾಲಿನ್ಯಗೊಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ.100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅವರಿಗೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿದ್ದ ಭೂಮಿಯನ್ನು ವಶಕ್ಕೆ ಪಡೆದು ಕೆ ಐ ಡಿ ಬಿ ಅವರು ಒದಗಿಸಬೇಕು. ನಾಗನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಭೂಮಿ ಪಡೆಯುವ ಕಾರ್ಯವನ್ನು ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲ ಜೀವನ್ ಮಿಷನ್ ಯೋಜನೆಯು ಪ್ರತಿ ಮನೆಗೂ ಮೂಲಕ…
ಬಿಜಾಪುರ್: ಗುತ್ತಿಗೆದಾರನೊಬ್ಬನ ಭ್ರಷ್ಟಾಚಾರ ಬಯಲಿಗೆಳೆದಿದ್ದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್ನಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್ಗಡದಲ್ಲಿ ನಡೆದಿದೆ. ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್(28) ಹತ್ಯೆಗೀಡಾಗಿರುವ ಪತ್ರಕರ್ತನಾಗಿದ್ದಾನೆ. ಇವರ ಮೃತದೇಹ ಶುಕ್ರವಾರ ಸಂಜೆ ಬಿಜಾಪುರ್ ಜಿಲ್ಲೆಯ ಚಟ್ಟನಪರ ಬಸ್ತಿ ಎಂಬಲ್ಲಿ ಪತ್ತೆಯಾಗಿದೆ. ಗುತ್ತಿಗೆದಾರ ಸುರೇಶ್ ಚಂದ್ರಕಾರ್ ಎಂಬಾತನ ಅಕ್ರಮಗಳ ವಿರುದ್ಧ ತನಿಖಾ ವರದಿಗಳನ್ನು ಪ್ರಕಟಿಸಿದ್ದ ಮುಕೇಶ್, ಬಸ್ತಾರ್ ನಲ್ಲಿನ 120 ಕೋಟಿ ರೂ ಮೊತ್ತದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿರುವುದನ್ನು ಬಯಲಿಗೆಳೆದಿದ್ದರು. ಈ ವರದಿ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ತನಿಖೆಗೆ ಸರ್ಕಾರದ ಮೇಲೆ ಒತ್ತಡ ಬಂದಿತ್ತು. ಇದರ ಬೆನ್ನಲ್ಲೇ ಜನವರಿ 1ರಂದು ಪತ್ರಕರ್ತ ಮುಖೇಶ್ ನಾಪತ್ತೆಯಾಗಿದ್ದರು. ಹೀಗಾಗಿ ಮುಕೇಶ್ ಅವರ ಅಣ್ಣ ಯುಕೇಶ್ ಚಂದ್ರಕಾರ್ ಅವರು ಪೊಲೀಸರಿಗೆ ಕಾಣೆ ದೂರು ಸಲ್ಲಿಸಿದ್ದರು. ಮಾತುಕತೆಗಾಗಿ ಚಟ್ಟನಪರದಲ್ಲಿನ ಸುರೇಶ್ನ ಸ್ಥಳಕ್ಕೆ ತೆರಳಿದ್ದ ಮುಕೇಶ್, ಅದೇ ಜಾಗದಲ್ಲಿನ ನೀರಿನ ಟ್ಯಾಂಕ್ ನಲ್ಲಿ ಜನವರಿ 3ರಂದು ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಕಾರ್ಯಾಚರಣೆ…
ಬೆಂಗಳೂರು: ಭಾರತೀಯ ಜೈನ್ ಮಿಲನ್ ವಲಯ–8 ರ ಜಿನ ಭಜನಾ ಕಾರ್ಯಕ್ರಮದ ಸೆಮಿ ಫೈನಲ್ ಗೆ ಇಂದು ಸ್ವಯಂ ಭೂ ಸ್ತೋತ್ರದ ನಾಟಕ ಪ್ರದರ್ಶನದ ಮೂಲಕ ಚಾಲನೆ ನೀಡಲಾಯಿತು. ಭಾರತೀಯ ಜೈನ್ ಮಿಲನ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಹಾಗೂ ಭಾರತೀಯ ಜೈನ್ ಮಿಲನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಹಾಗೂ ಶ್ರದ್ಧಾ ಅಮಿತ್ ರವರ ನೇತೃತ್ವದಲ್ಲಿ ಸೆಮಿ ಫೈನಲ್ ಗೆ ಚಾಲನೆ ನೀಡಲಾಯಿತು. ಜೀವಿಯ ಪರಿಪೂರ್ಣತೆ ಮತ್ತು ಶುದ್ದಿ ,ಕಾಂಚಿಪುರಂ ಜಿನ ಕಂಚಿ ಯಾದ ಬಗ್ಗೆ ಈ ಪ್ರದರ್ಶನದಲ್ಲಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಅನಂತಕುಮಾರಿ ಅವರು ಬರೆದ 51 ಜಿನ ಭಜನೆಗಳಿರುವ ಪುಸ್ತಕವನ್ನು ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ಅವರು ಪುಸ್ತಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಡಾ. ಪ್ರೇಮಕುಮಾರಿ ತಿಮ್ಮಪ್ಪ, ಭಾರತೀಯ ಜೈನ್ ಮಿಲನ್ ನ…
ಬೀದರ್: ಬೀದರ್ ಜಿಲ್ಲೆಯ 4 ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ 5 ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಜೂಜಾಟ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಟ್ಕಾ ಜೂಜಾಟದಲ್ಲಿ ತೊಡಗಿದವರ ಮೇಲೆ ದಾಳಿ ಮಾಡಿ ಮೊತ್ತ 4,480 ರೂಪಾಯಿಗಳನ್ನು ವಶ ಪಡಿಸಿಕೊಂಡು 6 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx