Author: admin

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್ ನಲ್ಲಿ ‘ಬೃಹತ್ ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ತುಮಕೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ, ಉದ್ಯೋಗ ಮೇಳದ ಪ್ರಯೋಜನವನ್ನು ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2278488 / 2255652, ಮೊ.ಸಂ. 9071021143, 9513136642, 9035549147, 9900412819, 9972131971, 9448989874, 8123503008ನ್ನು ಸಂಪರ್ಕಿಸಬಹುದಾಗಿದೆ. ಮೇಳದಲ್ಲಿ ಎಂ.ಎಸ್ಸಿ ಕೆಮಿಸ್ಟ್ರಿ–4 ಹುದ್ದೆ; ಎಂ.ಕಾಂ. ಮತ್ತು ಎಂ.ಬಿ.ಎ-200; ಎಂ.ಫಾರ್ಮ–55; ಎಂ.ಎ.ಬಿಎಡ್./ ಎಂ.ಎಸ್.ಸಿ.ಬಿಎಡ್–15; ಬಿ.ಇ.(ಮೆಕ್ಯಾನಿಕಲ್, ಇಇಇ, ಸಿವಿಲ್, ಇಸಿಇ, ಸಿಎಸ್)-154; ಬಿ.ಎ., ಬಿ.ಕಾಂ. ಬಿ.ಎಸ್ಸಿ, ಬಿ.ಸಿ.ಎ., ಬಿ.ಬಿ.ಎಂ., ಬಿ.ಫಾರ್ಮ್–1140; ಡಿಪ್ಲೋಮಾ(ಮೆಕ್ಯಾನಿಕಲ್, ಇಇಇ, ಇಸಿಇ, ಸಿಎಸ್, ಟೂಲ್ ಅಂಡ್ ಡೈ ಮೇಕಿಂಗ್, ಐಟಿಐ(ಯಾವುದೇ ಟ್ರೇಡ್))–657; ಎಸ್.ಎಸ್.ಎಲ್.ಸಿ./ಪಿಯುಸಿ–1010 ಹುದ್ದೆ ಸೇರಿದಂತೆ ಸುಮಾರು 3535 ಹುದ್ದೆಗಳ ಭರ್ತಿ ಹಾಗೂ ದೈಹಿಕ ವಿಕಲಚೇತನರಿಗೆ…

Read More

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್–ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 20 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಅಥವಾ ಇಲಾಖಾ ವೆಬ್ ಸೈಟ್ https://bcwd.karnataka.gov.in ಅಥವಾ ದೂ.ವಾ.ಸಂ. 080–8050770004/ 0816–2955528ನ್ನು ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ನವದೆಹಲಿ: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ಹ್ಯೂಮನ್‌ ಮೆಟಾನ್ಯೂಮೊವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ ತಿಳಿಸಿದೆ. ಹ್ಯೂಮನ್‌ ಮೆಟಾನ್ಯೂಮೊವೈರಸ್  ಇತರೆ ವೈರಸ್‌ ಗಳಂತೆ ಜನರಿಂದ ಜನರಿಗೆ ಹರಡಲಿದೆ. ಸಾಮಾನ್ಯವಾಗಿ ಶೀತ ಉಂಟು ಮಾಡಲಿದೆ. ಸಣ್ಣಮಟ್ಟದ ಉಸಿರಾಟದ ಸಮಸ್ಯೆ ತರಬಹುದು ಅಷ್ಟೆ. ಜೀವ ಹಾನಿ ಮಾಡುವಷ್ಟು ಅಪಾಯಕಾರಿಯಲ್ಲ. ಸದ್ಯಕ್ಕೆ ಭಾರತದಲ್ಲಿ ಎಚ್‌ಎಂಪಿವಿ ವೈರಸ್‌ ಸೋಂಕಿನ ಪ್ರಕರಣಗಳು ಕಂಡು ಬಂದಿಲ್ಲ. ಭಯಪಡುವ ಅಗತ್ಯವಿಲ್ಲ ಎಂದು ನಿರ್ದೇಶನಾಲಯದ ಮುಖ್ಯಸ್ಥ ಡಾ.ಅತುಲ್‌ ಗೋಯಲ್‌ ಹೇಳಿದ್ದಾರೆ. ಚೀನಾದಲ್ಲಿ ಪತ್ತೆಯಾಗಿರುವ ವೈರಸ್‌, ಭಾರತದ ಮಟ್ಟಿಗೆ ತೀರ ಗಂಭೀರವಾದ ಪರಿಣಾಮ ಬೀರಲ್ಲ. ಸಾಮಾನ್ಯ ವೈರಸ್‌ ಗಳಂತೆ ಜ್ವರದಂತಹ ರೋಗ ಲಕ್ಷಣ ಉಂಟು ಮಾಡಬಹುದಾಗಿದೆ. ವಯೋವೃದ್ಧರು ಹಾಗೂ ಒಂದು ವರ್ಷದೊಳಗಿನ ಮಕ್ಕಳಲ್ಲಿಹೆಚ್ಚು ಕಂಡು ಬರುವ ಸಾಧ್ಯತೆಗಳಿವೆ ಎಂದು ಗೋಯಲ್‌ ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಗೆ  ಹಲವಾರು ಜಾಗತಿಕ ನಾಯಕರು ಉಡುಗೊರೆ ನೀಡಿದ್ದಾರೆ. ಈ ಪೈಕಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ  ಉಡುಗೊರೆ ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರೂಪಾಯಿ ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದರು. ಇದರ ಬೆಲೆ ಇದೀಗ ಬಹಿರಂಗಗೊಂಡಿದೆ. ಅಮೆರಿಕದ ಕಾನೂನಿನ ಪ್ರಕಾರ, 41 ಸಾವಿರ ರೂಪಾಯಿಗಿಂತ ಹೆಚ್ಚಿನ ಉಡುಗೊರೆ ಪಡೆದರೆ ಅದರ ಮೌಲ್ಯವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿದೆ, ಹೀಗಾಗಿ ಇದೀಗ ಪ್ರಧಾನಿ ನೀಡಿದ ಉಡುಗೊರೆಯ ಬೆಲೆ ತಿಳಿದು ಬಂದಿದೆ. ಅಮೆರಿಕದ ಅಧ್ಯಕ್ಷ  ಹಾಗೂ ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಸಂಗ್ರಹಾಲಯಗಳಲ್ಲಿ ಇಡಲಾಗುತ್ತದೆ. ಪ್ರಧಾನಿ ಮೋದಿ ನೀಡಿದ್ದ 7.5 ಕ್ಯಾರೆಟ್ ನ ವಜ್ರವನ್ನು ವೈಟ್ ಹೌಸ್ ನ ಈಸ್ಟ್ ವಿಂಗ್ ನಲ್ಲಿ ಉಳಿಸಿಕೊಳ್ಳಲಾಗಿದೆಯಂತೆ. ಈ ದುಬಾರಿ ಉಡುಗೊರೆಗಳನ್ನು ರಾಷ್ಟ್ರೀಯ ಸಂಗ್ರಹಾಗಾರದಲ್ಲಿ ಇಡಲಾಗುತ್ತದೆ. ಅಥವಾ ಪ್ರದರ್ಶನಕ್ಕಿಡಲಾಗುತ್ತದೆ. ಒಂದು ವೇಳೆ ಉಡುಗೊರೆ ಪಡೆದವರು…

Read More

ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‌ ಬಿಐ ಮತ್ತು ಇತರೆ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು ನೀಡಲಾಗುವುದು. ಆಸಕ್ತರು ಜನವರಿ 8ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821–2515944ನ್ನು ಸಂಪರ್ಕಿಸಬೇಕೆಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ರಾಮಚಂದ್ರಪ್ಪ‌ ನನ್ನು ನಿನ್ನೆ ರಾತ್ರಿ ಬಂಧಿಸಿದ ಮಧುಗಿರಿ ಪೊಲೀಸರು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದರು. ರಾಮಚಂದ್ರಪ್ಪ ನನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಮಧುಗಿರಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು. ಮಧುಗಿರಿ ಪೊಲೀಸ್ ಠಾಣೆಯಲ್ಲಿಯೇ ರಾತ್ರಿಯಿಡಿ ಕುಳಿತಿದ್ದ ರಾಮಚಂದ್ರಪ್ಪ. ಸಂತ್ರಸ್ತ ಮಹಿಳೆಯಿಂದ ದೂರು ಪಡೆದ ಮಧುಗಿರಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲಸಮಯ  ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಈ ಘಟನೆಯಲ್ಲಿ ಶಿಕ್ಷಣ ಇಲಾಖೆ…

Read More

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಕ್ಕೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು–572102 ಅಥವಾ ದೂ.ವಾ. ಸಂಖ್ಯೆ: 0816–2273724ನ್ನು ಸಂಪರ್ಕಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು : ತೋಟಗಾರಿಕೆ ಇಲಾಖೆಯು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ ಕಟರ್, ಟಿಲ್ಲರ್, ಪವರ್ ವೀಡರ್, ಸ್ಪ್ರೇಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು (ಗರಿಷ್ಟ 1.25 ಲಕ್ಷ ರೂ. ಅಥವಾ 5 ಯಂತ್ರೋಪಕರಣಗಳಿಗೆ ಮಾತ್ರ) ಖರೀದಿಸಲು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣಪತ್ರ (ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಸೇರಿದಂತೆ ಮತ್ತಿತರೆ ದಾಖಲಾತಿಗಳನ್ನು ಲಗತ್ತಿಸಿ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತುಮಕೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ– 9686503500, ಗುಬ್ಬಿ–9535781963, ಶಿರಾ–9844042356, ಕುಣಿಗಲ್–9606570210,…

Read More

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಿದರು. ಸಚಿವರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿ ಸಲಕರಣೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More