Author: admin

ತುಮಕೂರು: ಫೆ. 15, 16ರಂದು ಮೈಸೂರಿನಲ್ಲಿ ನಡೆಯಲಿರುವ ನನ್ನ ಮದುವೆಗೆ ಬಂದು ಆಶೀರ್ವಾದಿಸುವಂತೆ ಖ್ಯಾತ ನಟ ಡಾಲಿ ಧನಂಜಯ್ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿ ಭಿನ್ನವಿಸಿಕೊಂಡರು,. ಈ ಸಂದರ್ಭದಲ್ಲಿ ಶ್ರೀ ತಿಪ್ಪೇಸ್ವಾಮಿ ವೀರೇಶ್ ಹಾಲನೂರು, ಕಿರುತೆರೆ ನಟ ದಯಾನಂದ ಸಾಗರ್, ಮನು, ಗಂಡಸಿ ಸದಾನಂದ ಸ್ವಾಮಿ, ಶಶಿ ಹುಲಿಕುಂಟೆ ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಹೋದ ಬಳಿಕ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಬಿಗ್ ಬಾಸ್ ಗೆ ಎಂಟ್ರಿ ನೀಡಿದ್ದ ವರ್ತೂರ್ ಸಂತೋಷ್ ಅವರಿಗೆ ವಿವಾಹವಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿತ್ತು. ತುಕಾಲಿ ಸಂತೋಷ್ ಜೊತೆಗೆ ಸ್ನೇಹಕ್ಕೆ ಹೆಸರಾಗಿದ್ದ ವರ್ತೂರ್ ಸಂತೋಷ್ ಬಳಿಕ ತನಿಷಾ ಬೆಂಕಿ ವಿಚಾರದಲ್ಲಿ ಸಾಕಷ್ಟು ಸದ್ದು ಮಾಡಿದ್ದರು. ತನಿಷಾ ಹಾಗೂ ಸಂತೋಷ್ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಆದರೆ ತನಿಷಾ ಮತ್ತು ನಾನು ಒಳ್ಳೆಯ ಸ್ನೇಹಿತರು ಎಂದು ವರ್ತೂರು ಸಂತೋಷ್ ಹೇಳಿದ್ದರು. ಇದೀಗ ವರ್ತೂರು ಸಂತೋಷ್ ಅವರೇ ಒಂದು ಸುದ್ದಿ ನೀಡಿದ್ದು, ಹೊಸ ಜೀವನ ಶುರು ಮಾಡಬೇಕು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದೇನೆ ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ವರ್ತೂರು ಸಂತೋಷ್ ನಾನು ಡಿಪ್ರೇಷನ್ನಲ್ಲಿ ಇದ್ದಾಗ ಕಮ್ಬ್ಯಾಕ್ ಮಾಡೋಕೆ ಅವಳೇ ಕಾರಣ. ನನ್ನ ಜೀವನದ ಏರುಪೇರುಗಳನ್ನ ಅವಳು ನೋಡಿದ್ದಾಳೆ. ಜೊತೆಗಿದ್ದಾಳೆ. ನನ್ನ ಅಮ್ಮನ ನಂತರ ನಾನು ತುಂಬಾ ಪ್ರೀತಿಸೋ ಜೀವ ಅವಳು. ಇಬ್ಬರಿಗೂ ಮದುವೆಗೆ ಒಪ್ಪಿಗೆ…

Read More

ಬೀಜಿಂಗ್ : 5 ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿದ್ದ ಪ್ರಳಯಾಂತಕ ಕೊವಿಡ್ 19 ಚೀನಾದಲ್ಲಿ ಹುಟ್ಟಿಕೊಂಡಿತ್ತು. ಇದೀಗ ಮತ್ತೊಂದು ವೈರಸ್ ಎಚ್ಎಂಪಿವಿ ಅಂದರೆ ಹ್ಯೂಮನ್ ಮೆಟಾನ್ಯುಮೊವೈರಸ್ ಚೈನಾದಲ್ಲಿ ತಾಂಡವವಾಡುತ್ತಿದ್ದು, ವಿಶ್ವಾದ್ಯಂತ ಹರಡುವ ಭೀತಿ ಸೃಷ್ಟಿಯಾಗಿದೆ. ಕೊರೊನಾ ಮಾದರಿಯ ಲಕ್ಷಣಗಳನ್ನೇ ಈ ವೈರಸ್ ಕೂಡಾ ಹೊಂದಿದ್ದು, ಪ್ರಮುಖವಾಗಿ ಮಕ್ಕಳಿಗೆ ಮತ್ತು ರೋಗ ನಿರೋಧಕ ಶಕ್ತಿ ಕಮ್ಮಿ ಇರುವವರಿಗೆ ವೇಗವಾಗಿ ಹರಡುತ್ತದೆ. ಈ ಹೊಸ ವೈರಸ್ ಅನ್ನು ಎದುರಿಸಲು ತೆಗೆದುಕೊಳ್ಳಬೇಕಾದ ವೈದ್ಯಕೀಯ ಕ್ರಮಗಳ ಬಗ್ಗೆ ಚೀನಾ ಸರ್ಕಾರ, ತನ್ನ ಆರೋಗ್ಯ ಇಲಾಖೆಗೆ ಸೂಚಿಸಿದೆ ಎಂದು ವರದಿಯಾಗಿದೆ. ಚೀನಾದಲ್ಲಿ ಈ ಹೊಸ ವೈರಸ್ ಹರಡಲು ಆರಂಭಿಸುತ್ತಿದ್ದಂತೆಯೇ, ಅಕ್ಕಪಕ್ಕದ ಕೆಲವು ರಾಷ್ಟ್ರಗಳು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮತ್ತು ಪ್ರತ್ಯೇಕ ಪ್ರೊಟೋಕಾಲ್ ಘೋಷಿಸಲು ಮುಂದಾಗಿದೆ. ಚೀನಾದ ಉತ್ತರ ಭಾಗದಲ್ಲಿ 15ವರ್ಷಕ್ಕಿಂತ ಕಮ್ಮಿ ವಯಸ್ಸಿನ ಮಕ್ಕಳ ಮೇಲೆ ಈ ವೈರಸಿನ ಅಟ್ಯಾಕ್ ಹೆಚ್ಚಾಗುತ್ತಿದೆ. ಇನ್ನೂ, ವೈರಸ್ ಹಾವಳಿ ಹೆಚ್ಚಾಗುತ್ತಿರುವುದು, ಆಸ್ಪತ್ರೆ ತುಂಬಿ ತುಳುಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ…

Read More

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಹಾಗೂ ನಿಮ್ಹಾನ್ಸ್ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ, ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ ಸಚಿವರು ಹಾಗೂ ನಿಮ್ಹಾನ್ಸ್ ಉಪಾಧ್ಯಕ್ಷರಾದ ಡಾ.ಶರಣ್ ಪ್ರಕಾಶ್.ಆರ್ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಸಿ.ಎನ್ ಮಂಜುನಾಥ್, ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ನಮ್ಮ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಚಿವರು ಟಿಕೆಟ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೈನಂದಿನ ನಿರ್ವಹಣಾ ವೆಚ್ಚ ಮತ್ತು ವೇತನ ಹೆಚ್ಚಾಗಿರುವುದರಿಂದ ದರ ಏರಿಕೆ ಅಗತ್ಯವಾಗಿದೆ. ಪ್ರತಿದಿನ ಡೀಸೆಲ್ ದರ ರೂ. 9 ಕೋಟಿಯಿಂದ ರೂ. 13 ಕೋಟಿಯಾಗುತ್ತದೆ. ಅದೇ ರೀತಿ ವೇತನ ರೂ. 12 ಕೋಟಿಯಿಂದ 18 ಕೋಟಿಯಾಗುತ್ತದೆ. ಪ್ರತಿದಿನ ಸಾರಿಗೆ ನಿಗಮಗಳಿಗೆ ರೂ. 10 ಕೋಟಿಗೂ ಹೆಚ್ಚು ಹೊರೆಯಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ 2020ರಲ್ಲಿ ರೂ. 60 ಇದ್ದ ಡೀಸೆಲ್ ದರವನ್ನು ಈಗ 90 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ದರವನ್ನು ಕಡಿಮೆ ಮಾಡಿ ನಂತರ ಬಿಜೆಪಿಯವರು ಟಿಕೆಟ್ ದರ ಏರಿಕೆ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು…

Read More

ಪಾವಗಡ: ತಾಲೂಕಿನ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 2,352 ಕೋಟಿ ರೂಪಾಯಿ ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದ್ದಾರೆ. ಶುಕ್ರವಾರ ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಪರಿಪೂರ್ಣಗೊಳಿಸಿ ಬಡಜನರಿಗೆ 183 ಎಕರೆ ಜಮೀನನ್ನು ಗುರುತಿಸಿ ನಿವೇಶನ ವಿತರಣೆ ಮಾಡಲಾಗುವುದು ಎಂದರು. ತಾಲೂಕಿನಲ್ಲಿ ಬೈಪಾಸ್ ರಸ್ತೆ, ನಗರ ಅಭಿವೃದ್ಧಿ, ಹಾಗೂ ಐದು ಎಕರೆ ಜಮೀನು ಮಾರ್ಗಸೂಚಿ ಮೂಲಕ 500 ನಿವೇಶನಗಳ ಹಕ್ಕು ಪತ್ರ ವಿತರಣೆ ಕಾರ್ಯವನ್ನು ಮುಖ್ಯಮಂತ್ರಿಗಳ ಹಸ್ತದಿಂದ ನೆರವೇರಿಸಲಾಗುವುದು. ಅಲ್ಲದೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಥಿಲ ಕಟ್ಟಡವನ್ನು ಶೀತಲಗೊಳಿಸಿ ನೂತನ ಸಭಾಂಗಣ ನಿರ್ಮಾಣದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ರಾಮಕೃಷ್ಣಪ್ಪ,…

Read More

 ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಕಲಿತ — ಅವರ ತಂದೆ ಶಾಂತವೀರಯ್ಯ ನವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಸರ್ಕಾರಿ ಶಾಲೆ..  130 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆ — 31 ಲಕ್ಷ ರೂಗಳ ಅನುದಾನ ಬಳಕೆ ಮಾಡುವಲ್ಲಿ ವಾದ — ಪ್ರತಿವಾದ…? ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸರ್ಕಾರಿ ಶಾಲೆ ನೂತನ ಕಟ್ಟಡ ಅನುದಾನ ಬಳಕೆ ವಿಚಾರದಲ್ಲಿ ಕನ್ನಡ ಶಾಲೆ ಹಾಗೂ ಉರ್ದು ಶಾಲೆ ಎಂಬ ವಾದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿ ಜಿಲ್ಲಾಧಿಕಾರಿ, ಡಿಡಿಪಿಐ, ತಹಶೀಲ್ದಾರ್ ಹಾಗೂ ಬಿಇ ಓ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕ ಓಲೈಕೆಗೆ ಮುಂದಾದ ಘಟನೆಯೊಂದು ಕೊರಟಗೆರೆ ತಾಲೂಕಿನಲ್ಲಿ ಜರುಗಿದೆ. ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಒಂದು ರೀತಿ ಗೊಂದಲದ ಗೂಡಾಗಿದ್ದು, ಶಾಲಾ ಕಟ್ಟಡ ನಿರ್ಮಾಣದ ಅನುದಾನ ಬಳಕೆಯಲ್ಲಿ ಕನ್ನಡ ಶಾಲೆ ಹಾಗೂ ಉರ್ದು ಶಾಲೆ ಎಂದು ಸಾರ್ವಜನಿಕರಲ್ಲಿ ವಿಭಿನ್ನ…

Read More

ತುಮಕೂರು: ಮಧುಗಿರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 19 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಧುಗಿರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್ ಲೈನ್ ಮುಖಾಂತರ ಸಹಾಯಕಿಯರ ಹುದ್ದೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 148 ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಮರು ಅರ್ಜಿ ಸಲ್ಲಿಸಲು ಜನವರಿ 5ರವರೆಗೂ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಮರು ಅರ್ಜಿಯನ್ನು ಜಾಲತಾಣ https://karnemakaone.kar.nic.in/abcd/  ಮೂಲಕ ಮತ್ತೊಮ್ಮೆ ಅಪ್ಲೋಡ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಮಧುಗಿರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ತಾಲ್ಲೂಕು ಪಂಚಾಯತಿ ಆವರಣ, ಶಿರಾಗೇಟ್, ಮಧುಗಿರಿ ಅಥವಾ ದೂರವಾಣಿ ಸಂಖ್ಯೆ 08137–200002ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 4ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿನ್ನೇನಹಳ್ಳಿ, ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಜಿ.ಹೆಚ್. ಗೋವಿಂದರಾಯ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಬೃಹತ್ ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರಿನ ಹೊರವಲಯದ ದಾಬಸ್ ಪೇಟೆ ಕೈಗಾರಿಕಾ ಪ್ರದೇಶ ಮತ್ತು ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸುಮಾರು 2000ಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿರುತ್ತವೆ. ಸದರಿ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಯಾವುದೇ ಪದವಿ, ಐಟಿಐ ಮತ್ತು ಡಿಪ್ಲೊಮೋ ಪಾಸಾದ, 18 ರಿಂದ 40 ವರ್ಷದೊಳಗಿನ ಪುರುಷ/ ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗಮೇಳದ ಪ್ರಯೋಜನವನ್ನು ಪಡೆಯಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More