Author: admin

ಶ್ರವಣಬೆಳಗೊಳ: ಸಾವಿರಾರು ವರ್ಷಗಳ ಹಿಂದೆ ಸಾಮ್ರಾಟ್ ಚಂದ್ರಗುಪ್ತ ಮೌರ್ಯ ಮತ್ತು ಆಚಾರ್ಯ ಭದ್ರಬಾಹು ಮುನಿಗಳ ಆಗಮನದಿಂದಾಗಿ ಶ್ರವಣಬೆಳಗೊಳದ ಚಂದ್ರಗಿರಿ ವಿಂಧ್ಯಗಿರಿ ಬೆಟ್ಟಗಳ ಪ್ರಶಾಂತ ಪ್ರದೇಶವು ತ್ಯಾಗಿಗಳ ಶ್ರಾವಕರ ಸಲ್ಲೇಖನ ಸಮಾಧಿ ಮರಣಕ್ಕೆ ಪ್ರಸಿದ್ಧಿಯಾಗಿತ್ತು ಎಂದು ಜೈನ ಮಠದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬುಧವಾರ ಹೇಳಿದರು. ಹೋಬಳಿಯ ಸುಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಣೇನಹಳ್ಳಿಯಲ್ಲಿ ರಾಜ್ಯ ಪುರಾತತ್ವ ಇಲಾಖೆ ಮತ್ತು ಕ್ಷೇತ್ರದ ಎಸ್ ಡಿ ಜೆ ಎಂ ಐ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ನೂತನ ವೃಷಭನಾಥ ಜಿನ ಬಸದಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಉತ್ತರದಿಂದ ಶ್ರವಣಬೆಳಗೊಳಕ್ಕೆ 12 ಸಾವಿರ ಮುನಿಗಳು ಆಗಮಿಸಿದ್ದಾಗ ಸಾಣೇನಹಳ್ಳಿ ಜಿನನಾಥಪುರ ಮತ್ತು ಹಳೇ ಬೆಳಗೊಳದ ಗ್ರಾಮಗಳು ತ್ಯಾಗಿಗಳ ಆಹಾರಕ್ಕಾಗಿ ಜೈನ ಶ್ರಾವಕರೊಂದಿಗೆ ಸಮೃದ್ಧಗೊಂಡಿದ್ದವು ಎಂದು ಹೇಳಿದರು. ಈ ಪ್ರಾಚೀನ ಜಿನ ಬಸದಿಯನ್ನು ಹೊಯ್ಸಳರ ಸೇನಾಧಿಪತಿ ಗಂಗರಾಜರ ಅತ್ತಿಗೆ ಜಕ್ಕವ್ವೆಯು ಆಚಾರ್ಯ ಶುಭಚಂದ್ರರ ಮಾರ್ಗದರ್ಶನದಲ್ಲಿ ಕ್ರಿ.ಶ.1120 ನೇ ಇಸವಿಯಲ್ಲಿ ನಿರ್ಮಾಣ…

Read More

ತುಮಕೂರು: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಕೋರಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ(ಸಂಪರ್ಕ ಸಂಖ್ಯೆ: 080–22107705), ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ, ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ)ನಲ್ಲಿಯೂ ಕೂಡ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ,…

Read More

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 6ರವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಹಾಗೂ ಕಲಿಕಾ ಮತ್ತು ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಎಜುಕೇಷನ್ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ/ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಕೋರ್ಸಿಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿದ್ದು, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಪೋಷಕರ ವಾರ್ಷಿಕ ಗರಿಷ್ಟ ವರಮಾನ 6 ಲಕ್ಷ ರೂ.ಗಳಿಗೆ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ…

Read More

ತುಮಕೂರು : ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು 11 ವರ್ಷದ ಬಾಲಕಿ ಒಬ್ಬಳು ನೆರವೇರಿಸಿರುವ ಘಟನೆ ತುಮಕೂರು ತಾಲ್ಲೂಕು ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 6ನೇ ತರಗತಿ ಓದುತ್ತಿರುವ 11ನೇ ವರ್ಷದ ಮೋನಿಷ ಎಂಬ ಹೆಣ್ಣು ಮಗುವೊಂದು ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಮಾದರಿಯಾಗಿದ್ದಾಳೆ. ಕಳೆದ ಎರಡು ದಿನಗಳ ಹಿಂದೆ ತನ್ನ ತಂದೆಯಯಾದ ಕೆಂಪರಾಜು (48 ವರ್ಷ) ಕ್ಯಾನ್ಸರ್ ಖಾಯಿಲೆಯಿಂದ  ಸಾವನ್ನಪ್ಪಿದ್ದರು. ಮೂಲತಃ ಆಟೋಚಾಲಕರಾಗಿದ್ದ ತನ್ನ ತಂದೆ ಬಡತನದಿಂದಲೇ ಜೀವನ ನಡೆಸುತ್ತಿದ್ದರು, ಆತನಿಗೆ ಇಬ್ಬರೂ ಸಹ ಹೆಣ್ಣು ಮಕ್ಕಳಿದ್ದು ಹಿರಿಯ ಮಗಳಾದ ಮೋನಿಷ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಿ ಗ್ರಾಮಸ್ಥರ ಹುಬ್ಬೇರಿಸುವಂತೆ ಮಾಡಿದ್ದಾಳೆ. ಈಕೆಯ ಕಾರ್ಯಕ್ಕೆ ಗ್ರಾಮಸ್ಥರು ಸಹ ಬೆಂಬಲಿಸಿದ್ದು, ಹಲವಾರು ಜನರಿಗೆ ಮಾದರಿಯಾಗಿದ್ದಾಳೆ. ಇನ್ನು ಈ ಕುಟುಂಬದ ಪೋಷಣೆಯನ್ನು ಮಗುವಿನ ಸಂಬಂಧಿಕರು ನೋಡಿಕೊಳ್ಳಲು ಮುಂದಾಗಿದ್ದಾರೆ. ಹೆಣ್ಣು ಬರೀ ಆರತಿಗೆ ಮಾತ್ರವೇ ಸೀಮಿತವಾಗಿರದೇ ಕೀರ್ತಿಯನ್ನು ತಂದುಕೊಡಲು ಸಹ ಯಾವುದೇ ಕಾರಣಕ್ಕೂ ಹಿಂದೆ ಬೀಳುವುದಿಲ್ಲ ಎನ್ನುವುದಕ್ಕೆ ಮೋನಿಷ ಸಾಕ್ಷಿಯಾಗಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕಲಬುರಗಿ/ಬೀದರ್: ಸಚಿನ್ ಪಾಂಚಾಳ ಪ್ರಕರಣದ ತನಿಖೆ ವಿಳಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಸಹೋದರಿ ಸುರೇಖಾ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಐಡಿ, ಸಿಬಿಐ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ. ನಮ್ಮ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ನನ್ನ ಸಹೋದರ ಸಾವಿನಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನನ್ನ ಸಹೋದರ ಮರಣ ಪತ್ರದಲ್ಲಿ ಯಾರ್ ಯಾರ ಹೆಸರುಗಳನ್ನು ಬರೆದಿದ್ದಾನೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ತೋರಿದ ಪೊಲೀಸ್ ಮೇಲಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆ ಎಂದರು. ನನ್ನ ಕುಟುಂಬ ದುಃಖದಲ್ಲಿದೆ, ಆದರೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ಈ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ…

Read More

ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದ ವಿವಾದ ಮುಂದುವರಿದಿದ್ದು,  ಇದೀಗ ಮೈಸೂರು ಮಹಾನಗರ ಪಾಲಿಕೆಯ (ಎಂಸಿಸಿ) ದಾಖಲೆಗಳಲ್ಲಿ ಕೆಆರ್‌ಎಸ್ ರಸ್ತೆಯನ್ನು ಪ್ರಿನ್ಸೆಸ್ ರೋಡ್ ಎಂದು ಹೆಸರಿಸಿಲ್ಲ ಎಂದು ಕಾಂಗ್ರೆಸ್ ನಿಯೋಗ ಹೇಳಿಕೊಂಡ ಬೆನ್ನಲ್ಲೇ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಕ್ಷಿ ಬಿಡುಗಡೆ ಮಾಡಿದ್ದಾರೆ. ಪ್ರಿನ್ಸೆಸ್‌ ರೋಡ್‌ ಇರುವ ಮ್ಯಾಪ್‌ ಹಾಗೂ ದಾಖಲೆಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ಬಿಡುಗಡೆ ಮಾಡಿದ್ದಾರೆ. ಕೆಆರ್‌ಎಸ್‌ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖವಾಗಲಿ, ದಾಖಲೆಯಾಗಲಿ ಇಲ್ಲ ಎಂದು ನಗರಪಾಲಿಕೆ ಆಯುಕ್ತ ಅಸಾದ್‌ ಉರ್‌ ರೆಹಮಾನ್‌ ಶರೀಫ್‌ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಸಂಸದ ಯದುವೀರ್‌ ನಗರಪಾಲಿಕೆ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಪ್ರಿನ್ಸೆಸ್‌ ರಸ್ತೆಗೆ ಸಂಬಂಧಿಸಿದ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಹೆಸರಿಡುವ ವಿಚಾರವನ್ನು ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು:  ಗೃಹ ಸಚಿವರ ಜಿಲ್ಲೆಯಲ್ಲೇ ಚಪಲಚನ್ನಿಗ ಡಿವೈಎಸ್ ಪಿಯೊಬ್ಬ  ದೂರು ಕೊಡಲು ಬಂದಿದ್ದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿರುವ ವಿಡಿಯೋವೊಂದು  ಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದು,  ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಡಿವೈಎಸ್ ಪಿ ರಾಸಲೀಲೆ ನಡೆಸಿರುವ ಘಟನೆ ನಡೆದಿದೆ. ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು, ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ರು.  ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ನಡೆಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೆ ತಲೆಮರೆಸಿಕೊಂಡ ಡಿವೈಎಸ್ ಪಿ ರಾಮಚಂದ್ರಪ್ಪ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆ‌ಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ಸೋಮಣ್ಣ ಇಂದು ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿ ಮತ್ತು ಕಂದಿಕೆರೆ ಹೋಬಳಿಗಳಲ್ಲಿ 10 ಪಂಚಾಯಿತಿಗಳ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬಡವನಹಳ್ಳಿ ಪಂಚಾಯಿತಿ ಆವರಣದಲ್ಲಿ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿದರು. ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯಕ್ಕೆ ಮೀನು ಬಿಡುಗಡೆ ಕಾರ್ಯಕ್ರಮ ಹಾಗೂ ಕಂದಿಕೆರೆ ಪ್ರಾಥಮಿಕ ಆರೋಗ್ಯ ಘಟಕದ ಸಿಬ್ಬಂದಿಗಳ ವಸತಿ ಗೃಹ ಉದ್ಘಾಟನೆ ಮತ್ತು ಕಂದಿಕೆರೆ – ಚಿಕ್ಕಬಿದರೆ ರಸ್ತೆಗೆ ಕಸವೇಹಟ್ಟಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಸುರೇಶ್ ಬಾಬು ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬೆಂಗಳೂರು: KSRTC ಮತ್ತು BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಚಿವ ಸಂಪುಟ ನಿರ್ಧರಿಸಿದ್ದು, ಜನವರಿ 5ರಿಂದ ಪರಿಷ್ಕೃತ ಟಿಕೆಟ್ ದರ ಅನ್ವಯವಾಗಲಿದೆ ಎಂದರು. ನಾಲ್ಕು ಸಾರಿಗೆ ನಿಗಮಗಳ ಟಿಕೆಟ್ ದರ ಪರಿಷ್ಕರಿಸಿದ್ದೇವೆ. ಟಿಕೆಟ್ ದರ ಶೇ.15ರಷ್ಟು ಹೆಚ್ಚಿಸಲು ಅನುಮೋದಿಸಲಾಗಿದೆ. ದರ ಹೆಚ್ಚಳದಿಂದ ನಿತ್ಯ 7.84 ಕೋಟಿ ರೂ. ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಯುರೋಪಿಯನ್ ದೇಶ ಸ್ವಿಟ್ಜರ್ಲೆಂಡ್ ನಲ್ಲಿ ಹೊಸ ವರ್ಷಕ್ಕೆ ಹೊಸ ಕಾನೂನು ಜಾರಿಯಾಗಿದ್ದು, ಈ ಕಾನೂನು ಇದೀಗ ವಿವಾದಕ್ಕೀಡಾಗಿದೆ. ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಮಾಡಲಾಗಿದ್ದು, ಒಂದು ವೇಳೆ ಬುರ್ಖಾ ಧರಿಸಿ ಸಿಕ್ಕಿಬಿದ್ದರೆ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಈ ಕಾನೂನಿಗೆ ಮುಸ್ಲಿಮ್ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. 2021ರ ಮಾರ್ಚ್ ನಲ್ಲಿ ಸ್ವಿಸ್ ಸರ್ಕಾರವು ಬುರ್ಖಾವನ್ನು ಧರಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಮತದಾನವನ್ನು ನಡೆಸಿತು. ಇದರಲ್ಲಿ 52ರಷ್ಟು ಜನರು ಬುರ್ಖಾ ನಿಷೇಧ ಕಾನೂನಿನ ಪರವಾಗಿ ಮತ ಚಲಾಯಿಸಿದ್ದಾರೆ. 48ರಷ್ಟು ಜನರು ಕಾನೂನಿನ ವಿರುದ್ಧ ಮತ ಚಲಾಯಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಡೆದ ಮತದಾನ ಈಗ ಜಾರಿಯಾಗಿದೆ. ಸರ್ಕಾರ ಹೊರಡಿಸಿದ ಕಾನೂನಿನ ಅಡಿಯಲ್ಲಿ, ಬುರ್ಖಾ ನಿಷೇಧವು ವಿಮಾನಗಳಲ್ಲಿ ಅಥವಾ ರಾಜತಾಂತ್ರಿಕ ಮತ್ತು ಕಾನ್ಸುಲರ್ ಆವರಣದಲ್ಲಿ ಅನ್ವಯವಾಗುವುದಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ. ಜನರು ಸ್ವಿಟ್ಜರ್ಲೆಂಡ್ನ ಪೂಜಾ ಸ್ಥಳಗಳಲ್ಲಿ ಅಥವಾ ಯಾವುದೇ ರೀತಿಯ ಜಾತ್ಯತೀತ ಸ್ಥಳಗಳಲ್ಲಿ ತಮ್ಮ ಮುಖಗಳನ್ನು ಮುಚ್ಚಿಕೊಳ್ಳಬಹುದು. ಈ…

Read More