Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಬೆಂಗಳೂರು: ಮೆಟ್ರೋ ರೈಲಿನೊಳಗೆ ಮಹಿಳಾ ಟೆಕ್ಕಿಯೊಬ್ಬರ ಫೋಟೋ ತೆಗೆದು ಆಯುರ್ವೇದ ವೈದ್ಯನೊಬ್ಬ ಸಿಕ್ಕಿಬಿದ್ದ ಘಟನೆ ನಡೆದಿದೆ. ಡಿ.25ರಂದು ಮಹಿಳಾ ಟೆಕ್ಕಿಯೊಬ್ಬರು ಮೆಜೆಸ್ಟಿಕ್ ನಿಂದ ಜೆ.ಪಿ.ನಗರಕ್ಕೆ ಹೋಗಲು ಮೆಟ್ರೋ ಹತ್ತಿದ್ದಾರೆ. ಇವರ ಕಂಪಾರ್ಟ್ ಮೆಂಟ್ ನಲ್ಲಿದ್ದ ಆಯುರ್ವೇದ ವೈದ್ಯನೊಬ್ಬ ತನ್ನ ಮೊಬೈನಲ್ಲಿ ಟೆಕ್ಕಿಯ ಪೋಟೋ ಸೆರೆ ಹಿಡಿದಿದ್ದಾನೆ. ಇದು ಟೆಕ್ಕಿಯ ಗಮನಕ್ಕೆ ಬಂದಿದೆ. ಮೆಟ್ರೋ ರೈಲು ಜಯನಗರ ಮೆಟ್ರೋ ನಿಲ್ದಾಣಕ್ಕೆ ಬಂದಾಗ ಈ ವಿಷಯವನ್ನು ಸೆಕ್ಯೂರಿಟಿಗೆ ಹೇಳಿದ್ದಾರೆ. ಸೆಕ್ಯೂರಿಟಿ ಗಾರ್ಡ್ ತಕ್ಷಣ ಆ ವ್ಯಕ್ತಿಯನ್ನು ಹಿಡಿದುಕೊಂಡು ವಿಚಾರಿಸಿದಾಗ, ಆತ ಆಯುರ್ವೇದ ವೈದ್ಯ ಎಂಬುದು ಗೊತ್ತಾಗಿದೆ. ಅನುಮತಿ ಇಲ್ಲದೆ ಪೋಟೋ ತೆಗೆದಿದ್ದಾನೆಂದು ಮಹಿಳಾ ಟೆಕ್ಕಿ ಅವಲತ್ತುಕೊಂಡಿದ್ದಾರೆ. ಸುದ್ದಿ ತಿಳಿದು ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಆಯುರ್ವೇದ ವೈದ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ಟೆಕ್ಕಿಯ ಫೋಟೋ ಡಿಲೀಟ್ ಮಾಡಿಸಿ, ಎನ್ಸಿಆರ್ ದಾಖಲಿಸಿಕೊಂಡು, ಬುದ್ಧಿವಾದ ಹೇಳಿ ನಂತರ ಆತನನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ…
ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸೌಧದ ಕ್ಯಾಬಿನೆಟ್ ಹಾಲ್ ಮುಂಭಾಗ ಕಳೆದ ವರ್ಷ ಯುನೆಸ್ಕೋ ಪಟ್ಟಿಗೆ ಸೇರಿದ ಚೆನ್ನಕೇಶವ ದೇವಾಲಯ, ಸೋಮನಾಥಪುರ ಹಾಗೂ ವಿಷ್ಣುಮೂರ್ತಿ, ಗುಹಾಂತರ ದೇವಾಲಯ ಬಾದಾಮಿಯ ಛಾಯಾಚಿತ್ರಗಳನ್ನು ಗುರುವಾರ ಅನಾವರಣಗೊಳಿಸಿದರು. ವಿಧಾನಸೌಧದಲ್ಲಿ ವಿಜಯಪುರದ ಗೋಲಗುಮ್ಮಟ, ವೀರನಾರಾಯಣ ದೇವಾಲಯ, ಗದಗ, ಪಟ್ಟದಕಲ್ಲು, ಹಂಪಿ, ಮೈಸೂರು ದಸರಾ, ಮೈಸೂರು ಅರಮನೆಯ ದರ್ಬಾರ್ ಹಾಲ್, ಜೋಗಜಲಪಾತ, ಕಬಿನಿ,ಯಕ್ಷಗಾನ, ಕಂಬಳ ಮತ್ತು ಕರ್ನಾಟಕ ರಾಜ್ಯದ Geographical Indication (G I) ಉತ್ಪನ್ನಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ. ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ನಮ್ಮ ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖಾ ವತಿಯಿಂದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು. ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ ಪ್ರವಾಸಿ ತಾಣಗಳ…
ಧಾರವಾಡ: ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆ ನೀತಿ ಆಯೋಗವು ಸದಸ್ಯರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಸಂಘ, ಸಂಸ್ಥೆಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳು, ಅಧ್ಯಕ್ಷರು, ನಿರ್ದೇಶಕರು ಮತ್ತು ವಿಷಯ ತಜ್ಞರನ್ನು ಒಳಗೊಂಡ ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತು ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಿದೆ. ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರಾದ ಡಾ. ರಾಜೇಂದ್ರ ಪೋದ್ದಾರ ಅವರನ್ನು ನೇಮಿಸಲಾಗಿದೆ. ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಯ ಅವಧಿ ಎರಡು ವರ್ಷಗಳದ್ದಾಗಿದೆ. ಸಮಿತಿಯು ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಸಂಬಂಧಿಸಿದಂತೆ ವರದಿಯನ್ನು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಟಾಸ್ಕ್ ಫೋರ್ಸ್ ಸಮಿತಿಯ ಮುಖ್ಯ ಜವಾಬ್ದಾರಿ ದೇಶದ ನದಿ, ಕೊಳ್ಳಗಳ ಜಲ ಸಂಪನ್ಮೂಲ ಲಭ್ಯತೆ ಹಾಗೂ ಬಳಕೆಯನ್ನು ಅಧ್ಯಯನ, ಸಮಗ್ರ ಜಲ ಸಂಪನ್ಮೂಲ ನಿರ್ವಹಣೆಗಾಗಿ ನೀಲ ನಕ್ಷೆ ಸಿದ್ಧಪಡಿಸುವುದು, ಸಮರ್ಪಕ ಜಲ ನಿರ್ವಹಣೆಗೆ ನೀತಿ ನಿರೂಪಣೆ, ಜಲ…
ಬೆಳಗಾವಿ: ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ತಂದೆಯನ್ನು ಆತನ ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿ ತುಂಡಾಗಿ ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಶ್ರೀಮಂತ ಇಟ್ನಾಳೆ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಹತ್ಯೆಯ ನಂತರ ಪೊಲೀಸರಿಗೆ ಹೆದರಿದ ಪತ್ನಿ ಸಾವಿತ್ರಿ ಶವವನ್ನು ಕತ್ತರಿಸಿ ಚಿಕ್ಕ ಡ್ರಮ್ ನಲ್ಲಿ ತುಂಬಿ ಸಾಗಿಸಿ ಪಕ್ಕದ ಗದ್ದೆಗೆ ಎಸೆದಿದ್ದಳು. ಕೊಲೆ ಮಾಡಲು ಬಳಸಿದ್ದ ವಸ್ತು ತೊಳೆದು ತಗಡಿನ ಶೆಡ್ಡಿನಲ್ಲಿ ಬಿಸಾಡಿ ನಂತರ ಗಂಡನ ಮೊಬೈಲ್ ಫೋನನ್ನು ಕೂಡ ಸ್ವಿಚ್ ಆಫ್ ಮಾಡಿ,ಮಗಳಿಗೆ ನಡೆದ ವಿಚಾರವನ್ನು ಯಾರ ಬಳಿಯೂ ಹೇಳದಂತೆ ತಿಳಿಸಿದ್ದಾರೆ. ಮೃತ ಶ್ರೀಮಂತ ಇಟ್ನಾಳೆ ಪರ ಪುರುಷರ ಜೊತೆಗೆ ಮಲಗುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಈ ವಿಚಾರಕ್ಕೆ ಸದಾ ಜಗಳ ನಡೆಯುತ್ತಿತ್ತು. ಹಣ ಕೊಡು, ಬೈಕ್ ಕೊಡಿಸು ಎಂದು ಪೀಡಿಸುತ್ತಿದ್ದನಂತೆ. ಇದೆಲ್ಲವನ್ನೂ ಸಹಿಸಿದ್ದ ಪತ್ನಿ, ತನ್ನ ಮಗಳ ಮೇಲೆಯೇ ಬಲಾತ್ಕಾರಕ್ಕೆ ಯತ್ನಿಸಿದಾಗ ಸಹಿಸದೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ನಮ್ಮತುಮಕೂರಿನ ಕ್ಷಣ…
ಸಾಕಷ್ಟು ಜನರು ಚಳಿಗಾಲದಲ್ಲಿ ಸ್ನಾನ ಮಾಡುವುದನ್ನು ಕಡಿಮೆ ಮಾಡುತ್ತಾರೆ. ಚಳಿಗಾಲದಲ್ಲಿ ಹೆಚ್ಚು ಬೆವರುವುದಿಲ್ಲ. ಹಾಗಾಗಿ ಸ್ನಾನ ಮಾಡದೇ ಇರುವವರ ಸಂಖ್ಯೆ ಹೆಚ್ಚು. ಆದರೆ ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೆ? ಎನ್ನುವುದನ್ನು ತಿಳಿಯೋಣ ಬನ್ನಿ… ತಜ್ಞರ ಪ್ರಕಾರ ಚಳಿಗಾಲದಲ್ಲಿ ನಿಯಮಿತವಾಗಿ ಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಲ್ಲಿ ಒಳ್ಳೆಯದಂತೆ. ನಮ್ಮ ದೇಹದ ವೈಯಕ್ತಿಕ ನೈರ್ಮಲ್ಯ ಕಾಪಾಡಲು ನಿಯಮಿತ ಸ್ನಾನ ಅತ್ಯಗತ್ಯವಾಗಿದೆ. ಚಳಿಗಾಲದಲ್ಲಿ ಬೆವರು ಬಿಡುವುದು ಕಡಿಮೆಯಾದರೂ ನಿಮ್ಮ ದೇಹವು ತೈಲವನ್ನು ಉತ್ಪಾದಿಸುತ್ತದೆ. ಸತ್ತ ಚರ್ಮದ ಕೋಶಗಳನ್ನು ಹೊರ ಹಾಕುತ್ತದೆ ಮತ್ತು ಬ್ಯಾಕ್ಟೀರಿಯಾವನ್ನು ಸಂಗ್ರಿಹಿಸುತಂತೆ. ನಿಯಮಿಯ ಸ್ನಾನವು ಕಶ್ಮಲಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದರಿಂದ ಸೋಂಕು, ದೇಹದ ವಾಸನೆ, ನೈರ್ಮಲ್ಯ ಸಂಬಂಧಿಕ ಸಮಸ್ಯೆಗಳಿಂದ ನೀವು ಪಾರಾಗಬಹುದು. ಚಳಿಗಾಲದಲ್ಲಿ ಬೆಚ್ಚಗಿನ ನೀರಿನ ಸ್ನಾನ ಮಹತ್ವದ್ದಾಗಿದೆ. ಇದು ದೇಹದ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ದೇಹವು ಶೀತಗಳು ಮತ್ತು ಜ್ವರದಂತಹ ಸಾಮಾನ್ಯ ಚಳಿಗಾಲದ ಕಾಯಿಲೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ. ಬೆಚ್ಚಗಿನ…
ಬೆಂಗಳೂರು: ವಕ್ಫ್ ಕಾನೂನು ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಕ್ಫ್ ವಿರುದ್ಧ ನಿರಂತರ ಹೋರಾಟ ನಡೆಯಲಿದೆ. 2ನೇ ಹಂತದ ಹೋರಾಟದ ಬಗ್ಗೆ ನಾಳೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ನಮ್ಮ ಹೋರಾಟಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇವೆ. ನಮ್ಮದು ಜನಪರ ಆಂದೋಲನ ಎಂದು ಇದೇ ವೇಳೆ ಅವರು ಹೇಳಿದರು. ವಕ್ಫ್ ಆಸ್ತಿ ಎಂದು ಅವರು 3 ಪಾಕಿಸ್ತಾನ ಮಾಡುವ ಅಷ್ಟು ಜಾಗವನ್ನು ಕ್ರೈಮ್ ಮಾಡುತ್ತಿದ್ದಾರೆ. ನಮ್ಮ ಹೋರಾಟದಿಂದಲೇ ವಕ್ಫ್ ಆಂದೋಲನ ಇಡೀ ದೇಶದಲ್ಲಿ ಆಗ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಪ್ರೌಢಶಾಲೆಯಲ್ಲಿ ನಡೆದಿದೆ. ಇನ್ನೂ ಅಡುಗೆ ಸಹಾಯಕಿ ಉಮಾದೇವಿ (52) ಗೆ ಗಂಭೀರ ಗಾಯವಾಗಿದ್ದು ಜಯಮ್ಮ (55) ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸವರ್ಷದ ಹಿನ್ನೆಲೆ ಮಕ್ಕಳಿಗೆ ಪಲಾವ್ ಮತ್ತು ಪಾಯಸ ಮಾಡಲು ಹೋಗಿ ನಿನ್ನೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 30% ದೇಹಕ್ಕೆ ಗಾಯವಾಗಿದ್ದು, ಗುಣಮಟ್ಟದ ಕುಕ್ಕರ್ ಕೊಡದೆ ಇರುವುದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ನ್ಯೂ ಓರ್ಲಿಯನ್ಸ್: ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ 15 ಮಂದಿಯನ್ನು ಕೊಂದು ಹಾಕಿರುವ ಘಟನೆ ನಗರದ ಪ್ರಸಿದ್ಧ ಫ್ರೆಂಚ್ ಕ್ವಾರ್ಟರ್ನಲ್ಲಿ ಮುಂಜಾನೆ ನಡೆದಿದೆ. ಇಸ್ಲಾಮಿಕ್ ಸ್ಟೇಟ್ ಗುಂಪಿನ ಧ್ವಜವನ್ನು ಹೊಂದಿದ್ದ ಟ್ರಕ್ನಲ್ಲಿ ಬಂದವನು ಈ ಕೃತ್ಯ ಎಸಗಿದ್ದಾನೆ. ಈ ದಾಳಿಯನ್ನು ಭಯೋತ್ಪಾದಕ ಕೃತ್ಯವೆಂದು, ಇದು ಏಕಾಂಗಿ ದಾಳಿಯಲ್ಲ ಇದರ ಜೊತೆ ಇನ್ನು ಹಲವರು ಇದ್ದಾರೆ ಎಂದು ಎಫ್ ಬಿಐ ಹೇಳಿದೆ. ದೃಶ್ಯದಲ್ಲಿ ಮೂರು ಪುರುಷರು ಮತ್ತು ಮಹಿಳೆಯೊಬ್ಬರು ಸಾಧನಗಳನ್ನು ಇರಿಸುತ್ತಿರುವುದನ್ನು ತೋರಿಸಿದೆ. ಆದರೆ ಫೆಡರಲ್ ಅಧಿಕಾರಿಗಳು ತಕ್ಷಣ ಆ ವಿವರವನ್ನು ದೃಢಪಡಿಸಲಿಲ್ಲ ಮತ್ತು ವೀಡಿಯೊದಲ್ಲಿರುವವರು ಯಾರು ಎಂಬುದು ಸ್ಪಷ್ಟವಾಗಿಲ್ಲ ಎಂದಿದೆ. ಬೌರ್ಬನ್ ಸ್ಟ್ರೀಟ್ನಲ್ಲಿ ನಡೆದ ಈ ಭೀಕರ ಹತ್ಯಾಕಾಂಡದಲ್ಲಿ 15 ಜನರು ಮೃತಪಟ್ಟಿದ್ದು ಜೊತೆಗೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೀವ ಉಳಿಸಿಕೊಲ್ಲಲು ನೈಟ್ ಕ್ಲಬ್ಗಳು ಮತ್ತು ರೆಸ್ಟೋರೆಂಟ್ ಗಳ ಒಳಗೆ ಜನರು ಓಡಿಹೋದರು. ಕೆಲವೇ ಕ್ಷಣದಲ್ಲಿ ಸಂಭ್ರಮದ ವಾತಾವರಣ ಅಲೋಲ ಕಲ್ಲೂಲ…
ಧಾರವಾಡ: 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದಿಲ್ಲಾ. ಇಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ ನಿಯಾಮಾನುಸಾರ ಇದ್ದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪರಿಗಣಿಸಲಾಗುವುದು. https://dpuepragathi.karnataka.gov.in/newcollege2025 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಎದುರು, ಕಾಲೇಜು ರಸ್ತೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು ಶಾಲಾ…
ಹಾಸನ: ಹೇಮಾವತಿ ನಾಲೆಗೆ ಹಾರಿ ಇಂಜಿನಿಯರ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ ಗೊರೂರುಶೆಟ್ಟಿಹಳ್ಳಿ ಬಳಿಯ ಹೇಮಾವತಿ ನಾಲೆಯಲ್ಲಿ ನಡೆದಿದೆ. ಪ್ರಮೋದ್ (35) ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಆಗಿದ್ದು, ಇವರು ಮೂಲತಃ ನಗರದ ಇಂದಿರಾನಗರದ ನಿವಾಸಿಯಾಗಿದ್ದಾರೆ. ಕಳೆದ ಡಿ.29 ರ ಸಂಜೆ ಮನೆಯಲ್ಲಿಯೇ ಫೋನ್ ಬಿಟ್ಟು ಹೊರಗಡೆ ತೆರಳಿದ್ದು, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಅದರಿಂದ ಆತಂಕಗೊಂಡ ಪೋಷಕರು ಸ್ನೇಹಿತರ ಹಾಗೂ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಕೂಡ ಆತ ಪತ್ತೆಯಾಗದ ಕಾರಣ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೇಮಾವತಿ ನದಿಯ ಸೇತುವೆಯ ಬಳಿ ಟಿವಿಎಸ್ ಜ್ಯುಪಿಟರ್ ನಿಂತಿದ್ದು, ಅದರಲ್ಲಿ ಬ್ಯಾಂಕಿನ ಪಾಸ್ ಬುಕ್ ಗಳು ಪತ್ತೆಯಾಗಿವೆ. ಸ್ಥಳೀಯರು ಪಾಸ್ ಬುಕ್ ನಲ್ಲಿ ವಿಳಾಸ ಮತ್ತು ಫೋನ್ ನಂಬರನ್ನು ಪರಿಶೀಲಿಸಿ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಡುಕಾಟ ನಡೆಸಿದ್ದು, ಸೋಮವಾರ ಬೆಳಿಗ್ಗೆ…