Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಹೈದರಾಬಾದ್: ಐಪಿಎಸ್ ಅಧಿಕಾರಿಯಾಗುವ ಕನಸು ನನಸಾಗಿಸಲು, ಕ್ರಿಕೆಟ್ ಆಟಗಾರ ಕಾರ್ತಿಕ್ ಮಧಿರಾ ತನ್ನ ವೃತ್ತಿಯನ್ನೇ ತೊರೆದ ಘಟನೆ ಇದೀಗ ಯುವ ಜನತೆಗೆ ಸ್ಪೂರ್ತಿಯಾಗಿದೆ. ಮೂಲತಃ ತೆಲಂಗಾಣದ ಹೈದರಾಬಾದ್ ನ ಕಾರ್ತಿಕ್ ಮಧಿರಾ, ಅಂಡರ್–13, ಅಂಡರ್–15, ಅಂಡರ್–17, ಮತ್ತು ಅಂಡರ್–19 ಹಂತಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರಿಕೆಟ್ ಆಟಗಾರರಾಗಿದ್ದರು. ಅವರು ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಗಳಿಸುತ್ತಾರೆ. ಕಾರ್ತಿಕ್ ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ಹಾಗೂ ಗಾಯದಿಂದಾಗಿ ತಮ್ಮ ಕ್ರಿಕೆಟ್ ಅನ್ನು ತೊರೆಯುತ್ತಾರೆ. ಯುಪಿಎಸ್ ಸಿ ಬರೆದು ಐಪಿಎಸ್ ಅಧಿಕಾರಿಯಾಗುವ ಆಕಾಂಕ್ಷೆಯನ್ನು ಹೊಂದಿದ್ದ ಅವರು ಈ ವೇಳೆ ಅವರು ಡೆಲಾಯ್ಟ್ನಲ್ಲಿ 6 ತಿಂಗಳ ಕಾಲ ಕೆಲಸ ಮಾಡುತ್ತಾರೆ. ನಂತರ ತಮ್ಮ ವೃತ್ತಿಯನ್ನು ತೊರೆದು ಯುಪಿಎಸ್ ಸಿ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಾರೆ. ಇದೀಗ ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಅವರು ತಮ್ಮ ಕನಸ್ಸನ್ನು ನನಸು ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ನವದೆಹಲಿ: ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಕಡಿವಾಣ ಹಾಕಲು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹದ ಬಗ್ಗೆ ಅವರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಸಿದ್ದಾರೆ. ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಯತ್ನಾಳ್ ತಂಡದ 2ನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದರು. ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಜೊತೆಗೆ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ, ಬಾಣಂತಿಯರ…
ಬೆಂಗಳೂರು: ಪಬ್ ಗೆ ಹೋಗಿದ್ದ ಮಹಿಳೆಯೊಬ್ಬರಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಅನುಚಿತವಾಗಿ ವರ್ತಿಸಿದ ಯುವಕನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಮಹಿಳೆ ಮಾರತ್ತಹಳ್ಳಿಯ ಪಬ್ ಗೆ ತೆರಳಿದ್ದರು. ಈ ವೇಳೆ ಪಾನಮತ್ತನಾಗಿದ್ದ ಯುವಕ, ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಂಗಳವಾರ ರಾತ್ರಿ ಮಹಿಳೆ ಗೆಳೆಯನೊಂದಿಗೆ ಪಬ್ ಗೆ ಭೇಟಿ ನೀಡಿದ್ದರು. ಯುವಕ ಅನುಚಿತವಾಗಿ ವರ್ತಿಸಿದ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳಕ್ಕೆ ಬಂದ ಬೌನ್ಸರ್ ಗಳು ಯುವಕನನ್ನು ಪಬ್ ನಿಂದ ಹೊರ ಕಳುಹಿಸಿದ್ದಾರೆ. ಆದರೆ ಪಬ್ ನಿಂದ ಆತನನ್ನು ಹೊರಗೆ ಕಳುಹಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಪಬ್ನಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದು, ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು:ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತುಅಧ್ಯಾತ್ಮದ ಮೊರೆ ಹೋದಾಗ ‘ನಮಗೂ–ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದುಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕುವೆಂಪು ಅಧ್ಯಯನ ಪೀಠ ಬುಧವಾರ ಆಯೋಜಿಸಿದ್ದ ಕುವೆಂಪು: ಮಾತು ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಆತ್ಮಶ್ರೀಗಾಗಿ ವಿಜ್ಞಾನ ಮತಿಗಳಾಗಿ’ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆರೋಗ್ಯದ, ಭಾವನೆಗಳ, ಬುದ್ಧಿಯ ಬೆಸುಗೆಯಲ್ಲಿ ‘ತಾನು ಯಾರು?’ ಎಂಬುದನ್ನುಅರಿತು ಆತ್ಮದ ಅರಿವು–ಆತ್ಮಶ್ರೀ ಸಾಧಿಸಬೇಕು. ಉತ್ತಮ ಆಲೋಚನೆಗಳನ್ನು, ಭಾವನೆಗಳನ್ನು ಅನುಭವಿಸಬೇಕು. ಅಧ್ಯಯನಶೀಲತೆ, ಏಕಾಗ್ರತೆ, ಸಂಯಮದ ಆತ್ಮಾನುಸಂಧಾನದಲ್ಲಿ ತಪಸ್ವಿಗಳಾಗಬೇಕು ಎಂದು ತಿಳಿಸಿದರು. ಆತ್ಮದಸಾರ್ವಭೌಮತ್ವವನ್ನು ಸಾಧಿಸಿದರೆ ಬದುಕು ಗಟ್ಟಿಗೊಳ್ಳುತ್ತದೆ. ಇದರಿಂದ ಆತ್ಮಹತ್ಯೆಗಳ, ಮನಸ್ತಾಪಗಳ ಸಂಖ್ಯೆಕ್ಷೀಣಿಸಲಿದೆ. ‘ನಾನು ಯಾರು?’ಎಂಬ ಆತ್ಮಾವಲೋಕನವಾದರೆ ಪ್ರತ್ಯೇಕತೆಯ ಭಾವ ಕಳಚಿ ಏಕತೆಯ ಬೆಸುಗೆ ಚಿಗುರಿ ಸಮಾನತೆ ಸ್ಪುಟಿಸಲಿದೆ. ವೇದೋಪನಿಷತ್ತುಗಳ ಆಂತರಿಕ ಮಿತಿತೊರೆದು ವೈಜ್ಞಾನಿಕ ಮನೋಭಾವದಿಂದ ಎಲ್ಲವನ್ನೂ ಸ್ವೀಕರಿಸಿದರೆ ಪಕ್ಷಪಾತವಿರದ, ವಸ್ತುನಿಷ್ಠತೆಯ ಪ್ರಾಯೋಗಿಕ ಪುರಾವೆಗೆ ಸಾಕ್ಷಿಯಾಗುತ್ತೇವೆ ಎಂದರು. ನಮ್ಮ ಶಕ್ತಿ ದೌರ್ಬಲ್ಯಗಳನ್ನು ತಿಳಿಯಲು, ತಿಳುವಳಿಕೆಯನ್ನು ಪರಿಷ್ಕರಿಸಲು ವಿಜ್ಞಾನದ ನಿರಂತರ ಕಲಿಕೆ ಅಗತ್ಯವಾಗಿದೆ.…
ತುಮಕೂರು: ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ನಾಡೋಜ ಡಾ. ಗೊ.ರು. ಚನ್ನಬಸಪ್ಪನವರಿಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಹೆಚ್. ಶಿವರುದ್ರಯ್ಯ ತಿಳಿಸಿದ್ದಾರೆ. ಶ್ರೀ ಸಿದ್ಧಗಂಗಾಮಠದಲ್ಲಿ ಜ.21ರಂದು ನಡೆಯಲಿರುವ ಡಾ.ಶ್ರೀಶಿವಕುಮಾರ ಮಹಾಸ್ವಾಮೀಜಿಗಳ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಸ್ಥಾಪಿಸಿದ್ದು 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. 2017ರಿಂದ 2023ರವರೆಗಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ:…
ತುಮಕೂರು: ವಿಶ್ವವಿದ್ಯಾನಿಲಯವು ಆಂಧ್ರ ಪ್ರದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ‘ವಿಜ್ಞಾನ್ ವಿಶ್ವವಿದ್ಯಾನಿಲಯ’ದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದೆ. ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್ ಜಮ್ ಹಾಗೂ ವಿಜ್ಞಾನ್ ವಿವಿಯ ಕುಲಸಚಿವ ಪ್ರೊ.ನಾಗಭೂಷಣ್ ಈ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದ್ದು, ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ್ ವಿವಿಯ ಡೀನ್ ಪ್ರೊ.ರಾಮಾರಾವ್, ಕೈಗಾರಿಕೋದ್ಯಮಿ ಡಾ.ಎಚ್.ಜಿ. ಚಂದ್ರಶೇಖರ್ ಉಪಸ್ಥಿತರಿದ್ದರು. ಈ ಒಡಂಬಡಿಕೆಯ ಪ್ರಕಾರ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಪರಸ್ಪರ ಸಹಯೋಗದಲ್ಲಿ ನಡೆಸುವ ಉದ್ದೇಶ ಹೊಂದಲಾಗಿದೆ. ಬಹುಶಿಸ್ತಿನ ಶಿಕ್ಷಣ, ಸಂಶೋಧನೆ, ಪಠ್ಯಕ್ರಮ ವಿನ್ಯಾಸ ಮತ್ತು ಪರಿಷ್ಕರಣೆ, ಮೂಲ ಸೌಕರ್ಯಗಳನ್ನು ಒದಗಿಸುವುದು, ಜಂಟಿ ಪ್ರಕಟಣೆಗಳು, ಪೇಟೆಂಟ್ ಗಳು, ಯೋಜನೆಗಳನ್ನು ರೂಪಿಸಿವುದು, ಎರಡೂ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ಒದಗಿಸುವುದು, ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಮತ್ತು ಇಂಟರ್ನ್ಶಿಪ್ಗೆ ಮಾರ್ಗದರ್ಶನ ಹಾಗೂ ಸಹಕಾರ, ಸಂಶೋಧನಾಕಾರ್ಯಕ್ಕಾಗಿ ಪ್ರಯೋಗಾಲಯ ಸೌಲಭ್ಯ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಒಡಂಬಡಿಕೆಯ ಭಾಗವಾಗಿದೆ. ಹಾಗೆಯೇ, ರಾಷ್ಟ್ರೀಯ,…
ತುಮಕೂರು: 2025–26 ರಿಂದ 2029–30ನೇ ಸಾಲಿಗೆ ನಡೆದ ತಾಲ್ಲೂಕು ಕೃಷಿ ಸಮಾಜ ಮತ್ತು ಜಿಲ್ಲಾ ಕೃಷಿ ಸಮಾಜದ ಚುನಾವಣೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹನುಮಂತರಾಜು ಹಾಗೂ ಸಹಾಯಕ ಚುನಾವಣಾಧಿಕಾರಿ ದೇವರಾಜು ತಿಳಿಸಿದ್ದಾರೆ. ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ನಂದಿಹಳ್ಳಿಯ ಎನ್.ಬಿ. ರಾಜಶೇಖರ್, ಉಪಾಧ್ಯಕ್ಷರಾಗಿ ಚಿಕ್ಕಕೊರಟಗೆರೆಯ ಕೆಂಪಹನುಮಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಜಿ. ಲಕ್ಷ್ಮೀನರಸೇಗೌಡ ಉರುಪ್ ಜಿ. ರಮೇಶ್, ಖಜಾಂಚಿಯಾಗಿ ಹೊಸೂರಿನ ಲಿಂಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರತಿನಿಧಿಯಾಗಿ ಚಿಕ್ಕಣ್ಣದೇವರಹಟ್ಟಿಯ ಸಿ. ಪಾಪಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೊಳಲುಕುಂಟೆಯ ರಾಜಶೇಖರಯ್ಯ ಕೆ.ವಿ., ಊರ್ಡಿಗೆರೆ ಹೋಬಳಿ ಚಿಕ್ಕಹಳ್ಳಿಯ ವೀರಭದ್ರಯ್ಯ, ವಿದ್ಯಾನಗರದ ರಂಗಪ್ಪ ಕೆ., ಸೋರೆಕುಂಟೆಯ ಎಸ್.ಹೆಚ್. ರಮೇಶ್, ಐನಾಪುರದ ಎಸ್. ಬಸವರಾಜು, ಗಂಗಾ ನರ್ಸಿಂಗ್ ಹೋಂನ ಡಾ. ಹೆಚ್.ಬಿ.ಎಂ. ಹಿರೇಮಠ್, ಚೋಳೇನಹಳ್ಳಿಯ ನಾರಾಯಣಪ್ಪ,…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ–2025ನ್ನು ಆಯೋಜಿಸಲಾಗುತ್ತಿದ್ದು, ಮೇಳದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜನವರಿ 4ರಂದು ಬೆಳಿಗ್ಗೆ 6:30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿMದ ಬಿ.ಹೆಚ್.ರಸ್ತೆ ಮೂಲಕ ಎಸ್.ಐ.ಟಿ, ಗಂಗೋತ್ರಿನಗರ ಹಾಗೂ ಎಸ್.ಎಸ್.ಪುರಂ ಮಾರ್ಗವಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೆ ವಾಕಥಾನ್(ಕಾಲ್ನಡಿಗೆ) ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ: ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಹಾನಗರ ಪಾಲಿಕೆ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ಮತ್ತು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 5ರವರೆಗೆ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯ ವರದಿಯನುಸಾರ ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx