Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ತುಮಕೂರು: ಕೂಸಿನ ಮನೆಗಳು ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕೆಂದು ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಎಸ್.ಎಸ್. ಮಂಜುನಾಥ್ ಕರೆ ನೀಡಿದರು. ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಕೂಸಿನ ಮನೆಯ ಮಕ್ಕಳನ್ನು ಆರೈಕೆ ಮಾಡುವವರಿಗಾಗಿ ಹಮ್ಮಿಕೊಂಡಿದ್ದ 2ನೇ ಹಂತದ ಏಳು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಕೂಸಿನ ಮನೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಮಕ್ಕಳ ಬೌದ್ದಿಕತೆಯನ್ನು ವೃದ್ಧಿಸುವುದರೊಂದಿಗೆ ಆರೋಗ್ಯ ಕಾಪಾಡುವುದು ಆರೈಕೆದಾರರ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕೂಸಿನ ಮನೆ ತರಬೇತಿದಾರರಾದ ರೇಣುಕಾ ಹಾಗೂ ರೇಖಾ, SIRD ಸಂಸ್ಥೆಯ ಸಿಬ್ಬಂದಿ ಆಯೇಷ, ತಾಲ್ಲೂಕು ಪಂಚಾಯತಿ ಐ.ಇ.ಸಿ. ಸಂಯೋಜಕರು, ಮಹಿಳಾ ಕೇರ್ ಟೇಕರ್ಸ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸರಕಾರದಿಂದ ನೀಡುವ ಸೌಲಭ್ಯ ಹಾಗೂ ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಪ.ಜಾತಿ ಮತ್ತು ಪ.ಪಂಗಡದವರಿಗೆ ನೀಡಲಾಗುತ್ತಿರುವ ಸವಲತ್ತುಗಳ ಬಗೆಗಿನ ಮಾಹಿತಿ ಕೊರತೆಯಿಂದ ಅನೇಕರು ಸೌಲಭ್ಯ ವಂಚಿತರಾಗುತ್ತಿದ್ದು, ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಮಿಕ ನೀತಿಗೆ ವಿರೋಧವಾಗಿ ಕೆಲವು ಕೈಗಾರಿಕೆಗಳಲ್ಲಿ ಸಮಯ ಮೀರಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಸಮಿತಿ ಸದಸ್ಯರು ಆರೋಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕೈಗಾರಿಕೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚನೆ ನೀಡಿದರು. ಪ.ಜಾತಿ ಮತ್ತು ಪ.ಪಂಗಡದವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಲಾದ ಕೊಳವೆ ಬಾವಿಗಳಲ್ಲಿ ನೀರು ಸಿಗದೆ ಹೋದರೂ ಪೈಪ್ಗಳು,…
ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮಾರ್ಚ್ ಅಥವಾ ಎಪ್ರಿಲ್ ತಿಂಗಳಿನಲ್ಲಿ ಭೂಮಿಗೆ ಮರಳುವ ನಿರೀಕ್ಷೆಯಿದೆಯಂತೆ. ಸುನೀತಾ ಕಳೆದ ಜುಲೈನಲ್ಲೇ ಮರಳಬೇಕಿತ್ತು. ಆದರೆ, ಅವರ ಸ್ಟಾರ್ಲೈನರ್ ಅಂತರಿಕ್ಷ ನೌಕೆಯಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರು ಮತ್ತು ಸಹ ಗಗನಯಾನಿ ಬುಚ್ ವಿಲ್ಮೋರ್ ಐಎಸ್ಎಸ್ನಲ್ಲೇ ಉಳಿದುಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ಕರೆತರಲು ಬದಲಿ ವ್ಯವಸ್ಥೆ ರೂಪಿಸಲಾಗಿದೆ. ನೂತನ ಯೋಜನೆಯಡಿ ನಾಸಾ ತನ್ನ ಗಗನಯಾನಿಗಳನ್ನು ಭೂಮಿಗೆ ಕರೆತರಲು ಮತ್ತೊಂದು ಖಾಸಗಿ ಬಾಹ್ಯಾಕಾಶ ಸಂಸ್ಥೆ, ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ‘ಸ್ಪೇಸ್ ಎಕ್ಸ್’ ಜತೆ ಒಪ್ಪಂದ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ರನ್ನು ‘ಕ್ರ್ಯೂ ಡ್ರಾಗನ್’ ಅಂತರಿಕ್ಷ ನೌಕೆ ಭೂಮಿಗೆ ಹೊತ್ತು ತರಲಿದೆ. ಈ ನೌಕೆ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್ಎಕ್ಸ್ ಸಂಸ್ಥೆಗೆ ಸೇರಿದೆ. ಗರಿಷ್ಠ 7 ಮಂದಿ ಗಗನಯಾನಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆಯಂತೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಅಮೆರಿಕಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನಟ ಶಿವರಾಜ್ ಕುಮಾರ್ ಅವರು, ಹೊಸ ವರ್ಷದ ಸಂದರ್ಭದಲ್ಲಿ ಅಭಿಮಾನಿಗಳ ಮುಂದೆ ಪ್ರತ್ಯಕ್ಷವಾಗಿದ್ದು, ತಮ್ಮ ಆರೋಗ್ಯ ಹಾಗೂ ಹೊಸ ವರ್ಷದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ವಿಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಮಾತನಾಡಿರುವ ಗೀತಾ ಶಿವರಾಜ್ ಕುಮಾರ್ ಅವರು, ಶಿವರಾಜ್ ಕುಮಾರ್ ಅವರ ಆರೋಗ್ಯ ಚೇತರಿಕೆಯಾಗಿದೆ. ನಿಮ್ಮೆಲ್ಲರ ಪ್ರಾರ್ಥನೆಗೆ ಧನ್ಯವಾದಗಳು, ಶಿವರಾಜ್ ಕುಮಾರ್ ಅವರು ಸಂಪೂರ್ಣವಾಗಿ ಕ್ಯಾನ್ಸರ್ ನಿಂದ ಗುಣಮುಖವಾಗಿದ್ದಾರೆ ಎಂದು ತಿಳಿಸಿದ್ದಾರೆ. ಬಳಿಕ ಮಾತನಾಡಿದ ಶಿವರಾಜ್ ಕುಮಾರ್, ಕ್ಯಾನ್ಸರ್ ಸೆಂಟರ್ ನವರು ಬಹಳ ಚೆನ್ನಾಗಿ ನನ್ನನ್ನು ಆರೈಕೆ ಮಾಡಿದರು. ಅವರಿಗೆ ಧನ್ಯವಾದಗಳು ಇದು ಸಣ್ಣ ಆಪರೇಷನ್ ಅಲ್ಲ, ತಮಾಷೆಯ ಮಾತೇ ಅಲ್ಲ ಯಾಕಂದ್ರೆ ಆಗಿರೋದು ದೊಡ್ಡ ಆಪರೇಷನ್. ಆದರೆ ಯಾರೂ ಆಪರೇಷನ್ ಬಗ್ಗೆ ಗೊಂದಲ ಮಾಡಿಕೊಳ್ಳಬೇಡಿ. ತುಂಬಾ ಸಿಂಪಲ್ ಆಗಿ ಆಪರೇಷನ್ ನಡೆದಿದೆ. ಆಪರೇಷನ್ ಬಗ್ಗೆ ವಿವರವಾಗಿ ಹೇಳಲು ಹೋದರೆ ಎಲ್ಲರೂ ಗಾಬರಿಯಾಗುತ್ತಾರೆ ಎನ್ನುವ ಭಯವಷ್ಟೇ ಎಂದಿದ್ದಾರೆ.…
ಬೆಂಗಳೂರು: ಹೊಸ ವರ್ಷದ ದಿನವೇ ನಟ ದರ್ಶನ್ ತಮ್ಮ ಡೆವಿಲ್ ಸಿನಿಮಾದ ಡಬ್ಬಿಂಗ್ ನಲ್ಲಿ ಪಾಲ್ಗೊಳ್ಳುವ ಮೂಲಕ ಸಿನಿಮಾರಂಗಕ್ಕೆ ಮರು ಎಂಟ್ರಿ ನೀಡಿದ್ದಾರೆ. ಕಳೆದ ವರ್ಷದಲ್ಲಿ ನಡೆದ ಅಹಿತಕರ ಘಟನೆಗಳಿಂದಾಗಿ ಸಿನಿಮಾ ಕೆಲಸಗಳಿಂದ ದೂರವಿದ್ದ ದರ್ಶನ್ ಇದೀಗ ಮರುಪ್ರವೇಶ ಪಡೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ನಟ ದರ್ಶನ್ ಡೆವಿಲ್ ಡಬ್ಬಿಂಗ್ ಕಾರ್ಯ ಆರಂಭ ಮಾಡಿದ್ದಾರೆ. ಸಿನಿಮಾದ ಶೇ.50ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಹೊಸ ವರ್ಷದ ಆರಂಭದಲ್ಲೇ ಡಬ್ಬಿಂಗ್ ನಲ್ಲಿ ಭಾಗಿಯಾಗಿರುವ ದರ್ಶನ್, ಹೊಸ ವರ್ಷಕ್ಕೆ ವೃತ್ತಿ ಜೀವನದ ಮರು ಆರಂಭ ಬರೆದಿದ್ದಾರೆ. ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಫೆ.22ರ ಬಳಿಕ ಡೆವಿಲ್ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಿಲನಾ ಪ್ರಕಾಶ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಂಗಳೂರಿನ ಹುಡುಗಿ ರಚನಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬೆಂಗಳೂರು: ಇತ್ತೀಚಿಗೆ ನಡೆದ ಕರ್ನಾಟಕ ಜೈನ ಅಸೋಸಿಯೇಷನ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಪದಾಧಿಕಾರಿಗಳು ಈ ಕೆಳಕಂಡಂತೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ : ಎಸ್. ಜಿತೇಂದ್ರ ಕುಮಾರ್ ಉಪಾಧ್ಯಕ್ಷರಾಗಿ : 1) (ಕೇಂದ್ರ ಸ್ಥಾನ) ರಾಜಾ ಕೀರ್ತಿ 2)ಕಲಾ ಗೌಡ ಭುಜೇಗೌಪಾಟೀಲ್ (ಶೀತಲ್) ಸಹ ಕಾರ್ಯದರ್ಶಿ ಗಳಾಗಿ: 1 ) ಡಾ.ನೀರಜಾನಾಗೇಂದಕುಮಾರ್ 2) ಪ್ರಶಾಂತ್. ವಿ ಸಹ ಕೋಶಾಧಿಕಾರಿ: ಎ.ಸಿ .ಧರಣಿಂದ್ರಯ್ಯ ಮಹಿಳಾ ಸ್ಥಾನ( ಮೀಸಲು) ಬೆಂಗಳೂರು ವಿಭಾಗ 1)ಬಿ .ಕೋಮಲ ಬ್ರಹ್ಮದೇವಯ್ಯ 2) ಪದ್ಮಶ್ರೀ ನಿರ್ದೇಶಕರುಗಳಾಗಿ: 1).ಶೀತಲ್ ಕುಮಾರ್ 2 ).ಜಿ.ಬಿ. ಸ್ವರೂಪ ಜೈನ್ 3 ).ಪದ್ಮಿನಿ ಪ್ರಶಾಂತ್ 4). ಮಾಳ ಹರ್ಷೇಂದ್ರ ಕುಮಾರ್ 5 ).ಪಿ.ವಿ .ಜಿನೇಂದ್ರ ಕುಮಾರ್ 6).ಜೆ .ಪ್ರಕಾಶ್ 7). ಕೆ.ಬಿ.ಅಶೋಕ್ ಕುಮಾರ್ 8).ವಿ .ಜೆ .ಬ್ರಹ್ಮಯ್ಯ 9).ಎಸ್. ಅನಿಲ್ ಕುಮಾರ್ 10).ಚಿತ್ತ ಜಿನೇಂದ್ರ .ಎಂ 11).ಪಿ .ಸಿ. ರಾಜೇಶ್ ಜಿಲ್ಲಾವಾರು ನಿರ್ದೇಶಕರುಗಳ ಆಯ್ಕೆ ಪಟ್ಟಿ: 1)ಎಂ. ಆರ್. ಸುನಿಲ್ ಕುಮಾರ್ ಮೈಸೂರು ವಿಭಾಗ .…
ಬೆಂಗಳೂರು: ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪೊಲೀಸರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು, ನಾಗರಿಕರು ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಪೊಲೀಸ್ ಇಲಾಖೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು ಮತ್ತು ಯುವ ಪೀಳಿಗೆ ಕೂಡ ಶಾಂತಿಯುತವಾಗಿ ಹೊಸ ವರ್ಷಾಚರಣೆ ಮಾಡಿತು. ಇದಕ್ಕಾಗಿ ಅವರಿಗೆ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅನೇಕ ನಗರಗಳಲ್ಲಿ ಪಟಾಕಿ ಸಿಡಿಸಿ ಜನರು ಸಂಭ್ರಮಿಸಿದರು. ಮುಂಬೈನಲ್ಲಿ ಜುಹು ಬೀಚ್, ಚೌಪಾಟಿ ಬೀಚ್ ಮತ್ತು ವರ್ಸೋವಾ ಬೀಚ್ಗಳಲ್ಲಿ ಜನರು ಜಮಾಯಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ನವದೆಹಲಿ: ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದು, 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಶುಭ ಕೋರಿದ್ದಾರೆ. ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಎಕ್ಸ್ ನಲ್ಲಿ ಪ್ರಧಾನಿ ಮೋದಿ ಶುಭ ಹಾರೈಇಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಶುಭಾಶಯಗಳನ್ನು ಹಂಚಿಕೊಂಡಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ 14 ಕೆ.ಜಿ. 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿದ ಆರೋಪದಲ್ಲಿ ಬಂಧನವಾಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆದರೆ ಜಾಮೀನು ಮಂಜೂರಾದ ಹಿನ್ನೆಲೆ ಆರೋಪಿಗಳನ್ನು ಮಂಗಳವಾರ ರಾತ್ರಿಯೇ ಕಸ್ಟಡಿಯಿಂದ ರಿಲೀಸ್ ಮಾಡಲಾಗಿದೆ. ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಆರೋಪಿ ಐಶ್ವರ್ಯ 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ಹೈಕೋರ್ಟ್ ಜಾಮೀನು ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx