Author: admin

ಬೆಂಗಳೂರು: ಬೀದಿ ನಾಯಿಗಳು—ಜಾನುವಾರುಗಳು ಸರ್ಕಾರಿ ಆಸ್ಪತ್ರೆ ಆವರಣದ ಒಳಗೆ ಹಾಗೂ ಹೊರಗೆ ಪ್ರವೇಶ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ. ಆರೋಗ್ಯ ಸಂಸ್ಥೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಉಂಟಾಗಬಹುದಾದ ಸಂಭವನೀಯ ಅಪಾಯ ತಡೆಗಟ್ಟಲು ಜಾನುವಾರು ಮತ್ತು ಬೀದಿ ನಾಯಿಗಳಿಗೆ ಪ್ರವೇಶ ನಿರ್ಬಂಧಿಸುವ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ. ಆಸ್ಪತ್ರೆಗಳಲ್ಲಿ ವೈದ್ಯಕೀಯ ತ್ಯಾಜ್ಯ ಮತ್ತು ಆಹಾರ ಪದಾರ್ಥಗಳ ತ್ಯಾಜ್ಯವನ್ನು ಸೂಕ್ತವಾಗಿ ನಿರ್ವಹಿಸದೆ ಇರುವುದೇ ಬೀದಿ ನಾಯಿಗಳು ಆಸ್ಪತ್ರೆಗಳ ಆವರಣ ಪ್ರವೇಶಿಸುವುದಕ್ಕೆ ಪ್ರಮುಖ ಕಾರಣವಾಗಿದೆ. ಈ ಬಗ್ಗೆ ಆರೋಗ್ಯ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಅಗತ್ಯ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಚ್ಚರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಲಕ್ನೋ: ವ್ಯಕ್ತಿಯೊಬ್ಬ ಹೊಸ ವರ್ಷದಂದೇ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಹತ್ಯೆ ಮಾಡಿರುವ ಘಟನೆ ಲಕ್ನೋದ ಹೊಟೇಲ್ ವೊಂದರಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಗ್ರಾ ಮೂಲದ ಅರ್ಷದ್ (24) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಮೃತರನ್ನು ಅರ್ಷದ್ನ ಸಹೋದರಿಯರಾದ ಅಲಿಯಾ (9), ಅಲ್ಶಿಯಾ (19), ಅಕ್ಸಾ (16) ಮತ್ತು ರಹಮೀನ್ (18) ಎಂದು ಗುರುತಿಸಲಾಗಿದೆ. ಆರೋಪಿಯ ತಾಯಿ ಅಸ್ಮಾ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ನಾಕಾ ಪ್ರದೇಶದ ಹೋಟೆಲ್ ಶರಣಜಿತ್ ನಲ್ಲಿ ಈ ಘಟನೆ ನಡೆದಿದೆ. ಸದ್ಯದ ಮಾಹಿತಿಗಳ ಪ್ರಕಾರ ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ. ಪೊಲೀಸರು ಘಟನೆ ಸಂಬಂಧ ವಿವರವಾಗಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಫೋರೆನ್ಸಿಕ್ ತಂಡಗಳನ್ನು ಅಪರಾಧ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಡಿಸಿಪಿ ತ್ಯಾಗಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: 2025ನೇ ಇಸವಿಯನ್ನು ದೇಶಾದ್ಯಂತ ಜನರು ಬೆಳಗ್ಗೆಯಿಂದಲೇ ದೇವಸ್ಥಾನಗಳಿಗೆ ಹೋಗಿ ಪೂಜೆ–ಪುನಸ್ಕಾರಗಳ ಮೂಲಕ ಬರಮಾಡಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಕಳೆಗಟ್ಟಿದೆ. ಅಯೋಧ್ಯೆ ಸೇರಿ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ವೈಭವ ನಡೆಯುತ್ತಿದೆ. ಇಂದು ಬೆಳ್ಳಂಬೆಳಗ್ಗೆಯೇ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತಿದ್ದಾರೆ. ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಭಕ್ತರು ಗಂಗಾ ಮಾತೆ ಮತ್ತು ಸೂರ್ಯನಿಗೆ ದೀಪ ಬೆಳಗುವುದು ಕಂಡುಬಂತು. ಅದೇ ರೀತಿ ಪಂಜಾಬ್‌ ನಲ್ಲಿರುವ ಅಮೃತ್‌ ಸರ್‌ ಸ್ವರ್ಣಮಂದಿರದಲ್ಲೂ ಭಕ್ತರ ದಂಡು ಕಂಡುಬಂದಿತು. ಬೆಳಗ್ಗೆ ಕುಟುಂಬ ಸಮೇತ ಮಂದಿರಕ್ಕೆ ಆಗಮಿಸಿದ ಭಕ್ತರು, ಹೊಸ ವರ್ಷವನ್ನು ಸ್ವಾಗತಿಸಿದರು. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೊಸ ವರ್ಷ 2025ನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಸ್ಥಳಗಳಲ್ಲಿ ಯುವಜನರು ಸೇರಿದಂತೆ ಅಪಾರ ಜನಸಮೂಹ ಕೇಕ್ ಕತ್ತರಿಸಿ, ಪಟಾಕಿ ಸಿಡಿಸುವುದರ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು:  ಹೊಸ ವರ್ಷಾಚರಣೆ ಸಂಭ್ರಮದಲ್ಲಿ  ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಕಳೆದ ಕೆಲವು ವರ್ಷಗಳಿಂದ ಹೊಸ ವರ್ಷ ಆಚರಣೆಗೆ ಸಾಕಷ್ಟು ನಿರ್ಬಂಧ ಹಾಕಲಾಗಿತ್ತು. ಈ ಬಾರಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿಲ್ಲದ ಕಾರಣ, ರಾತ್ರಿ 1ರಿಂದ 2 ಗಂಟೆಗಳ ವರೆಗೆ ಹೊಸ ವರ್ಷಾಚರಣೆ ಸುಸೂತ್ರವಾಗಿ, ಸಂಭ್ರಮದಿಂದ ಆಚರಿಸಲ್ಪಟ್ಟಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತುಈ ಬಾರಿ  ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲರು ಸೇರಿದ್ರೆನೇ ಕನ್ನಡ ಚಿತ್ರರಂಗ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಮ್ಯಾಕ್ಸ್ ಸಿನಿಮಾ ಸಕ್ಸಸ್ ಮೀಟ್ ನಲ್ಲಿ ಮಾತನಾಡಿದ ಅವರು, ಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರು ಎಂಬ ಕೇಕ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದರು. ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ. ಇದೆ ದರ್ಶನ್ ಫ್ಯಾನ್ಸ್ ಬಗ್ಗೆ ಹೇಳ್ದಾಗ ನಾನು ಫ್ಯಾನ್ಸ್‌ಗೆ ಬೈಬೇಡಿ ಅಂದಿದ್ದೆ. ಅವರು ನೋವಿನಲ್ಲಿದ್ದಾರೆ ಏನ್‌ ಮಾತಾಡಬೇಕು ಅಂತ ಗೊತ್ತಾಗ್ತಿಲ್ಲ ಅಂತ ಹೇಳಿದೆ. ನಾವ್ಯಾಕೆ ಟಾಂಟ್‌ ಕೊಡಬೇಕು? ಯಶ್, ಶಿವಣ್ಣ, ಧ್ರುವ ಉಪ್ಪಿಗೆ ಬಾಸ್ ಅಂತ ಕರಿಯೋದಿಲ್ವಾ? ನನಗೂ ದರ್ಶನ್‌ ಗೂ ಏನು ಇಲ್ಲ ಸರ್…  ದರ್ಶನ್ ನಾನು ಇಬ್ರು ಕಷ್ಟ ಪಟ್ಟು ಮೇಲೆ ಬಂದಿದ್ದೀವಿ. ನನ್ನ ಫ್ಯಾನ್ಸ್ ಎಲ್ಲಾ ಹೀರೋಗಳ ಸಿನಿಮಾ ನೋಡ್ತಾರೆ. ಕೆಟ್ಟ ಅಹಂಕಾರ ನಮ್ಮಲಿ ಇದೆ ಅಂದು ಕೊಂಡಿರೋದೇ ತಪ್ಪು…

Read More

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9  ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕಾಶ ಬಾರಕೇರ (42) ಮೃತಪಟ್ಟವರಾಗಿದ್ದಾರೆ. ಈವರೆಗೆ  ಅಯ್ಯಪ್ಪ ಮಾಲಾಧಾರಿಗಳಾದ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಮೃತಪಟ್ಟಿದ್ದರು. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಉಳಿದ 8 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / ದೂರುಗಳನ್ನು ʼಮಕ್ಕಳ ದನಿ ಪೆಟ್ಟಿಗೆʼಯ ಮೂಲಕ ಸ್ವೀಕರಿಸಿ, ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ತಮ್ಮ ವಿರುದ್ಧದ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿದೆ ಎಂದು ಪ್ರಿಯಾಂಕ್ ಖರ್ಗೆ ನೇರವಾಗಿ ಆರೋಪ ಮಾಡಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ–ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪೆರ್ನಾಜೆ: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ  “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ ಮಾಡಿದರು. ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು ವಾಗ್ಮಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣವನ್ನು ನೀಡಿದರು ಗೌರವಾಧ್ಯಕ್ಷರು  ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರು, ಅಧ್ಯಕ್ಷರಾದ ಅಖಿಲ ಹವ್ಯಕ ಮಹಾಸಭಾದ ಗಿರಿಧರಕಜೆ ವೇ ಮೂ ಶೇಷಗಿರಿ ಪ್ರಧಾನ ಅರ್ಚಕರು ಸಿಗಂದೂರು, ವೆ ಮೂ ಹರಿ ನಾರಾಯಣ  ಆಸ್ರಣ್ಣ  ಆಡಳಿತ ಮೊಕ್ತೇಸರರು  ಕಟೀಲು, ಮುಖ್ಯಸ್ಥರು ಸಂಚಾಲಕರಾದ ಗಣೇಶ್ ಚಂದ್ರ  ಮುಂತಾದ ಗಣ್ಯರ ಸಮ್ಮುಖದಲ್ಲಿ. ಸೌಮ್ಯ ಪೆರ್ನಾಜೆಯವರನ್ನು ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು. “ನಾನು ಜೇನು ಸಾಕಾಣೆ ಜೇನು ಗಡ್ಡ ವಿಶ್ವದಲ್ಲೇ ಪ್ರಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ  ಜೇನು  ಕೃಷಿ…

Read More

ತುಮಕೂರು:  ದನಗಳನ್ನು ಖರೀದಿ ಮಾಡುವ ವೇಳೆ ಅದರ ಮಾಲೀಕನೊಂದಿಗೆ ಖರೀದಿದಾರನು ತೆಗೆದುಕೊಂಡಿದ್ದ ಪೋಟೋದಿಂದ ದನಗಳ್ಳತನದ ಆರೋಪಿ ಪತ್ತೆಯಾಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ಕಂಪ್ಲಾಪುರದಲ್ಲಿ ನಡೆದಿದೆ. ದನಗಳ್ಳತನದ ಆರೋಪಿಯೆಂದು ತಿಳಿಯದೆ,  ಮಾಲೀಕ ಎಂದು ತಿಳಿದು ದನಗಳನ್ನು ಬಾಷಾ ಎಂಬುವರು ಕೆ.ಜಿ. ಟೆಂಪಲ್ ನಲ್ಲಿ ಖರೀದಿ ಮಾಡಿದ್ದರು. ಅಲ್ಲದೆ ಈ ವೇಳೆ ದನಗಳನ್ನು ಮಾರಾಟ ಮಾಡಿದ್ದ ಪುಟ್ಟರಾಜು ಎಂಬ ವ್ಯಕ್ತಿ ಜೊತೆ ಪೋಟೋ ತೆಗೆದುಕೊಂಡಿದ್ದರು. ಆದ್ರೆ ಅದು ಕಳ್ಳತನ ಮಾಡಿರುವ ದನಗಳೆಂದು ತಿಳಿದಿರಲಿಲ್ಲ. ಕುಣಿಗಲ್ ತಾಲೂಕಿನ ಕಂಪ್ಲಾಪುರ ಗ್ರಾಮದ ಚನ್ನೆಗೌಡ ಎಂಬುವವರಿಗೆ ಸೇರಿದ ಸುಮಾರು 70 ಸಾವಿರ ಬೆಲೆ ಬಾಳುವ ದನಗಳನ್ನು , ರಾತ್ರಿ ವೇಳೆ ಪಕ್ಕದ ಮನೆಯ ವಾಸಿ ಪುಟ್ಟರಾಜು ಕಳ್ಳತನ ಮಾಡಿದ್ದನು. ಅಲ್ಲದೆ ರಾತ್ರೋ ರಾತ್ರಿ ಅದನ್ನು ಗುಬ್ಬಿ ತಾಲ್ಲೂಕಿನ ಕೆ.ಜಿ.ಟೆಂಪಲ್ ಬಳಿ ದನಗಳ ಸಂತೆಗೆ ಸಾಗಿಸಿದ್ದನು. ಸಂತೆಯಲ್ಲಿ ಅದನ್ನು ಬಾಷಾ ಎಂಬುವರಿಗೆ 43 ಸಾವಿರ ರೂ. ಗೆ ಮಾರಾಟ ಮಾಡಿದ್ದನು. ದನಗಳು ಕಳ್ಳತನವಾಗಿರುವ ವಿಚಾರ…

Read More