Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಪುಣೆ: ಕೇರಳ “ಮಿನಿ–ಪಾಕಿಸ್ತಾನ”. ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಗೆಲುವಿನ ವರ್ಷಾಚರಣೆ ವೇಳೆ ಮಾತನಾಡಿದ ಅವರು, ಕೇರಳ ಮಿನಿ ಪಾಕಿಸ್ತಾನವಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗಿದ್ದಾರೆ ಎಂದು ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತನ್ನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಣೆ, ಕೇರಳ ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಕೇರಳನ್ನು ಪಾಕಿಸ್ತಾನಕ್ಕೆ ಹೋಲಿಸಿದ ಹೇಳಿಕೆಯನ್ನು ಸಮರ್ಥಿಸಲು “ಧಾರ್ಮಿಕ ಮತಾಂತರಗಳು” ಮತ್ತು “ಲವ್ ಜಿಹಾದ್” ನಂತಹ ವಿಷಯಗಳನ್ನು ಉಲ್ಲೇಖಿಸಿದ್ದು, ತಮ್ಮ ಹೇಳಿಕೆ ವಾಸ್ತವಿಕವಾಗಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೋಮ್ಮಲದೇವಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದ ಸರ್ವೆ.ನಂ.99ರ ಅರಣ್ಯ ನಾಶ ಮಾಡಲಾಗುತ್ತಿದ್ದು, ತೋಗರಿಘಟ್ಟ ಗ್ರಾಮದ ಸ.ನಂ.99ರ 2ಎಕರೇ ಪ್ರದೇಶದಲ್ಲಿನ 400ಕ್ಕೂ ಅಧಿಕ ವಿವಿಧ ಜಾತಿಯ ಮರಗಳ ಮಾರಣಹೋಮ ಮಾಡಲಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ವಸತಿ ರಹಿತ ಸಾರ್ವಜನಿಕರಿಗೆ ವಸತಿ ನೀಡುವ ಉದ್ದೇಶಕ್ಕಾಗಿ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಸಾಮಾಜಿಕ ವಲಯ ಅರಣ್ಯಕ್ಕೆ ಸೇರಿದ 400ಕ್ಕೂ ಅಧಿಕ ಮರಗಳ ಮಾರಣಹೋಮ ಮಾಡಲಾಗುತ್ತಿದೆ. ತುಮಕೂರು ನಗರದ ಮೋಹಮ್ಮದ್ ಆಜಾಂಗೆ ತುಮಕೂರು ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ 6ಲಕ್ಷ 25ಸಾವಿರಕ್ಕೆ 390ಮರಗಳಿಗೆ ಇ–ಹರಾಜು ನೀಡಲಾಗಿದೆ. ಕಂದಾಯ ಇಲಾಖೆಯಿಂದ ಆಶ್ರಯ ಯೋಜನೆಗಾಗಿ ತೋಗರಿಘಟ್ಟ ಗ್ರಾಮದ ಸರ್ವೆ.ನಂ.ನಲ್ಲಿ 2ಎಕರೇ ಜಮೀನು ಮಂಜೂರು ಮಾಡಿ ಬೋಮ್ಮಲದೇವಿಪುರ ಗ್ರಾಪಂಗೆ ಹಸ್ತಾಂತರ ಮಾಡಲಾಗಿದ್ದು.. ಸರಕಾರಿ ಗೋಮಾಳದಲ್ಲಿ ಸಾಮಾಜಿ ವಲಯ ಅರಣ್ಯ ಇಲಾಖೆಯಿಂದ ಬೆಳೆಸಿರುವ ವಿವಿಧ ಜಾತಿಯ ಮರಗಳನ್ನು ಮರೇಮಾಚಿ ಬಿ.ಡಿ.ಪುರ ಗ್ರಾಪಂಯಿಂದ ಹರಾಜಿಗೆ ಮಸಲತ್ತು ಮಾಡಲಾಗಿದೆ…
ಬೆಂಗಳೂರು: ಸಣ್ಣ ಸಣ್ಣ ವಿಚಾರಕ್ಕೂ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಚಾಳಿಯಾಗಿದೆ. ಹೊಸ ವರ್ಷಕ್ಕಾದರೂ ಅವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ ಅವರು, ಡೆತ್ ನೋಟ್ನಲ್ಲಿ ಕಾರ್ಪೊರೇಟರ್ ಹೆಸರು ಬರೆದಿದ್ದಾರೆ. ಅನೇಕ ಜನರು ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ತಾರೆ. ಹಾಗಾಂತ ಪ್ರಿಯಾಂಕ್ ಖರ್ಗೆ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಅವರು ಹೇಳಿದರು. ಸಣ್ಣ ವಿಷಯಕ್ಕೂ ರಾಜೀನಾಮೆ ಕೊಡಬೇಕು ಅನ್ನೋದು ಬಿಜೆಪಿಯ ಚಾಳಿ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಜಕಾರಣಿಗಳು ಬೇರೆ ಬೇರೆಯವರ ಜೊತೆ ಇರುತ್ತಾರೆ. ಬಿಜೆಪಿಯವರಿಗೆ ಬೇರೆ ಉದ್ಯೋಗ ಇಲ್ಲ. ಪೊಲೀಸ್ ಠಾಣೆ ಮುಂದೆ ಹೋಗೋದು ಪ್ರತಿಭಟನೆ ಮಾಡೋದು, ಸುಮ್ಮನೆ ಆರೋಪ ಮಾಡೋದು ಅಷ್ಟೇ ಕೆಲಸ. ಪ್ರಿಯಾಂಕ್ ಖರ್ಗೆ ಮೇಲೆ ಏನಾದ್ರೂ ಆರೋಪ ಇದೆಯಾ ಹೇಳಿ? ಎಲ್ಲೋ ನಡೆದಿದ್ದಕ್ಕೆ…
ಬಳ್ಳಾರಿ: ನಮ್ಮದು ಯತ್ನಾಳ್ ಬಣ ಅಲ್ಲ, ಬಿಜೆಪಿ ಬಣ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಣ, ಅದು ಬಿಜೆಪಿ ಬಣ ಎಂದರು. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಮಾಧ್ಯಮಗಳಲ್ಲಿ ಕೆಲವನ್ನ ಬಿಂಬಿಸಲಾಗ್ತಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜ.4 ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡ್ತೇವೆ. ಜ.6 ರಂದು ಕೂಡ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು. ವಕ್ಫ್ ವಿಚಾರದಲ್ಲಿ ಹಿಂದೂ–ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕೆಂದು ನಾವು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿಯೊಬ್ಬರು ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಜ್ಜದ್ ಅವರ ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಅವರು ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಆರ್ ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗ ಹಾಗೂ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ ಅವರು ಸಚಿನ್ ಪಂಚಾಲ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ., ಪೊಲೀಸರು ಪ್ರಕರಣ ದಾಖಲಿಸಿರುವುದರಿಂದ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿದೆ. ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯ ಅವರು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ನಿರತರಾಗಿರುವಾಗ, ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಪರಿಸ್ಥಿತಿ ವಿರುದ್ಧವಾಗಿದೆ. ಮಹಾನ್ ಸಾಂವಿಧಾನಿಕ ತಜ್ಞರಂತೆ ವರ್ತಿಸುವ ಅವರ ಮಗ ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇದೊಂದೇ ಅಲ್ಲ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ಗಳು ಮತ್ತು ಭೂ ಹಗರಣಗಳ ವಿವರಗಳೂ ಒಂದರ ಹಿಂದೆ ಒಂದರಂತೆ ಹೊರಬೀಳುತ್ತಿವೆ ಎಂದು ಟೀಕಿಸಿದ್ದಾರೆ. ಬಹುಕೋಟಿ…
ಮೈಸೂರು: ಪ್ರಿನ್ಸೆಸ್ ರಸ್ತೆ ಅಂತ ದಾಖಲೆ ಇದ್ರೆ ಬದಲಾವಣೆ ಬೇಡ ಎಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ಇಡಲಿ ಎಂದು ನಾನು ಕಾಂಗ್ರೆಸ್ ಶಾಸಕ ಹರೀಶ್ ಗೌಡಗೆ ಮನವಿ ಮಾಡ್ತೀನಿ ಎಂದು ಹೇಳಿದ್ದಾರೆ. ಮೈಸೂರಿನ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನ ವೃತ್ತದಿಂದ ಆರಂಭವಾಗುವ ಮೇಟಗಳ್ಳಿಯ ರಾಯಲ್ ಇನ್ ಜಂಕ್ಷನ್ ವರೆಗಿನ ರಸ್ತೆಗೆ ಸಿದ್ದರಾಮಯ್ಯರ ಹೆಸರು ಇಡಲು ಪಾಲಿಕೆ ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರತಾಪ್ ಸಿಂಹ ಸಿದ್ದರಾಮಯ್ಯರ ಹೆಸರು ಇಟ್ಟರೆ ತಪ್ಪೇನು? ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಂಸದ ಯದುವೀರ್ ಒಡೆಯರ್ ಪ್ರತಾಪ್ ಸಿಂಹಗೆ ಇತಿಹಾಸ ತಿಳಿದಿಲ್ಲ. ಪ್ರಿನ್ಸೆಸ್ ರಸ್ತೆ ಇತಿಹಾಸ ನಾನು ತಿಳಿಸಿದ ಮೇಲೆ ಅವರಿಗೆ ಗೊತ್ತಾಗಲಿದೆ ಎಂದಿದ್ದರು. ಒಡೆಯರ್ ಪ್ರತಿಕ್ರಿಯೆ ಬೆನ್ನಲ್ಲೇ ಮಾತನಾಡಿರುವ ಪ್ರತಾಪ್ ಸಿಂಹ.. ಒಂದೊಮ್ಮೆ ಪ್ರಿನ್ಸೆಸ್ ರಸ್ತೆ ಅಂತ ಕರೆಯೋದಕ್ಕೆ ದಾಖಲೆ ಇದ್ದರೆ ಬದಲಾವಣೆ ಬೇಡ ಎಂದಿದ್ದಾರೆ. ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಂತಲ್ಲ.…
ಒಡಿಶಾ: ತನ್ನದೇ 9 ದಿನಗಳ ಮಗುವನ್ನು ವ್ಯಕ್ತಿಯೊಬ್ಬ ಕೇವಲ 60 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದ ಬಲ್ಸೋರೆದಲ್ಲಿ ನಡೆದಿದೆ. ಶಾಂತಿ ಬೆಹೆರಾ ಎಂಬುವವರು ಪಿಆರ್ಎಂ ಮೆಡಿಕಲ್ ಕಾಲೇಜ್ ಬರೀಪಾದದಲ್ಲಿ ಡಿಸೆಂಬರ್ 9 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದಾದ ಬಳಿಕ ಇಬ್ಬರು ವ್ಯಕ್ತಿಗಳ ಮಧ್ಯಸ್ಥಿಕೆಯಲ್ಲಿ ಮಗುವನ್ನು ಸೇಲ್ ಮಾಡಲು ಆಕೆಯ ಪತಿ ಡೀಲ್ ಕುದುರಿಸಿಕೊಂಡಿದ್ದಾನೆ. ನಂತರ 60 ಸಾವಿರ ರೂಪಾಯಿಗೆ ಮಗುವನ್ನು ಮಾರಾಟ ಮಾಡಿದ್ದಾನೆ. ಡಿಸೆಂಬರ್ 22 ರಂದು ಹೆರಿಗೆ ಬಳಿಕ ಶಾಂತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಳು. ಇದರ ಬೆನ್ನಲ್ಲೇ ಆಕೆಯ ಪತಿ ಮಗುವನ್ನು ಮಾರಾಟ ಮಾಡಿದ ಹಣದಲ್ಲಿ ಬೈಕ್ ಖರೀದಿಸಿ, ಬೈಕ್ ನಲ್ಲಿ ಓಡಾಡುತ್ತಿದ್ದ. ಬಡತನದಲ್ಲಿದ್ದ ಈತನಿಗೆ ಏಕಾಏಕಿ ಬೈಕ್ ಹೇಗೆ ಬಂತು ಎಂದು ಸ್ಥಳೀಯರು ಅನುಮಾನಗೊಂಡಿದ್ದರು. ಜೊತೆಗೆ ಮಗು ಕೂಡ ಇಲ್ಲದಿರುವುದನ್ನು ಕಂಡು ಮಕ್ಕಳ ಕಲ್ಯಾಣ ಇಲಾಖೆಯ ಗಮನಕ್ಕೆ ತಂದಿದ್ದರು. ತನಿಖೆಯನ್ನು ಕೈಗೆತ್ತಿಕೊಂಡ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಸ್ತಾ ಪೊಲೀಸರು ಮಗುವನ್ನು ಖರೀದಿ…
ಹುಕ್ಕೇರಿ: ಮಾನವ ಲೋಕ ಕಲ್ಯಾಣಕ್ಕಾಗಿ ಹಾಗೂ ಮತ್ತೊಬ್ಬರ ಒಳಿತಿಗಾಗಿ ಪರೋಪಕರ ಗುಣ ಬೆಳೆಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದು ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹುಲ್ಲೊಳಿಯಲ್ಲಿ ಅರಿಹಂತ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಜೈನ ಧರ್ಮದಲ್ಲಿನ ಪ್ರತಿಯೊಬ್ಬರೂ ಪರೋಪಕಾರ ಭಾವನೆ ಬೆಳೆಸಿಕೊಳ್ಳಬೇಕು. ಇದರಿಂದ ಧರ್ಮದ ಪ್ರಭಾವನೆ ಸಾಧ್ಯವಾಗಲಿದೆ, ಶಾಂತಿ ,ಅಹಿಂಸೆ , ಸಂಸ್ಕೃತಿ, ಸಂಸ್ಕಾರ ಗಳು ಅತಿ ಅಗತ್ಯ, ಮತ್ತೊಬ್ಬರ ಒಳಿತಿಗಾಗಿ ,ಲೋಕಕಲ್ಯಾಣಕ್ಕಾಗಿ ಜೀವನ ಸಾರ್ಥಕವಾಗಲಿದೆ ಎಂದರು. ಇದೇ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ 10 ಗ್ರಾಂಗಳ ಬೆಳ್ಳಿ ನಾಣ್ಯ ವಿತರಿಸಿದರು. ಮಾಜಿ ಸಂಸದ ರಮೇಶ್ ಕತ್ತಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶ ತರವಲ್ಲ, ಸಮಾಜಮುಖಿ ಕಾರ್ಯದಿಂದ ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಅವರು, ಗ್ರಾಮೀಣ ಭಾಗದ ಬಡ ಜನರ, ಕೂಲಿ ಕಾರ್ಮಿಕರ, ವ್ಯಾಪಾರಸ್ಥರಿಗೆ , ಆರ್ಥಿಕ ನೆರವು ನೀಡುವ…
ತುಮಕೂರು: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕುಚ್ಛಂಗಿ ಗ್ರಾಮದ ಶ್ರೀ ಪಾರ್ಶ್ವನಾಥ ಜಿನಮಂದಿರದ 55ನೇ ವಾರ್ಷಿಕ ಪೂಜಾ ಮಹೋತ್ಸವ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಕುಚ್ಚಂಗಿ ಶ್ರೀ ಪಾರ್ಶ್ವನಾಥ ಚಾರಿಟೇಬಲ್ ಅಂಡ್ ಎಜುಕೇಶನಲ್ ಟ್ರಸ್ಟ್ ತುಮಕೂರು ಇವರ ವತಿಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಅಭಿಷೇಕ, ಆರಾಧನೆಗಳು, 108 ಕಳಸಗಳ ಮಹಾಭಿಷೇಕ ಪೂಜೆಗಳು ನಡೆದವು. ಕಾರ್ಯಕ್ರಮದಲ್ಲಿ ಗೊಮ್ಮಟವಾಣಿ ಜೈನ ಪಾಕ್ಷಿಕ ಪತ್ರಿಕೆ ಮಾಜಿ ಸಂಪಾದಕ ರಾದ ಎಸ್. ಎನ್ .ಅಶೋಕ್ ಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಜಿ.ಪಿ .ಉಮೇಶ್ ಕುಮಾರ್, ಜಿನರಾಜ್ ಜೈನ, ಎಂ. ಜೆ. ಬ್ರಹ್ಮಪ್ಪ, ಸನ್ಮತಿ ಕುಮಾರ್, ಜಿ.ಸಿ ಬ್ರಹ್ಮದೇವ್, ಜೈ ಭಾರತ್ ಟ್ರಾನ್ಸ್ ಪೋರ್ಟ್ ನ ಬಾಹುಬಲಿ, ಬೆಳಗುಲಿ ವಿಜಯ್ ಕುಮಾರ್, ಪದ್ಮರಾಜು, ಬೆಳಗುಲಿ ಕುಬೇರ್, ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವ ನಾಥ ಜಿನಮಂದಿರ ಸಮಿತಿ ಉಪಾಧ್ಯಕ್ಷ ತೋವಿನಕೆರೆ ಶೀತಲ್ , ಕಾಂತರಾಜು, ಶ್ರುತ ಜೈನ್ ಮಹಿಳಾ ಮಿಲನ ಶೀಲಾ , ಪದ್ಮಿನಿ…