Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ನಂಜನಗೂಡು: ತಾಲೂಕಿನ ಇತಿಹಾಸ ಪ್ರಸಿದ್ಧ ಏಚಿಗಾನಹಳ್ಳಿ ಶ್ರೀನಿವಾಸ ತೀರ್ಥಂಕರರ 108 ಕಲಸಗಳ ಮಹಾಭಿಷೇಕ ಪೂಜೆ ,ಶ್ರೀ ಕುದುರೆ ಬ್ರಹ್ಮ ಯಕ್ಷರ ಮತ್ತು ಶ್ರೀ ಕುಶ್ಮಾಂಡೀನಿ ದೇವಿಗೆ ಶೋಡಶೋಪಚಾರ ಪೂಜೆ ಇಲ್ಲಿನ ಶ್ರೀ ನೇಮಿನಾಥ ಧಾರ್ಮಿಕ ಸಭಾ ಮಂಟಪದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠದ ಸ್ವಸ್ತಿ ಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಹಾಸನದ ಸುದೀಪ್ ಮತ್ತು ಭವ್ಯ ದಂಪತಿಗಳು ಶ್ರೀ ಕುದುರೆ ಬ್ರಹ್ಮ ದೇವರಿಗೆ ಅರ್ಧ ಕೆ.ಜಿ. ತೂಕದ ಬೆಳ್ಳಿಯ ಖಡ್ಗವನ್ನು ದೇಣಿಗೆಯಾಗಿ ನೀಡಿದರು. ಮಾಜಿ ಮಂಡಲ್ ಪ್ರಧಾನರು ಹಾಗೂ ಎಚಿಗನಹಳ್ಳಿ ಶ್ರೀ ಕುದುರೆ ಬ್ರಹ್ಮದೇವರ ಸೇವಾ ಸಮಿತಿಯ ಅಧ್ಯಕ್ಷ ಕೆ. ಆದಿ ರಾಜಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರೋಹಿತ ರತ್ನ ನಾಗ ಕುಮಾರ್ ಪಂಡಿತ್, ಸ್ಥಳೀಯ ಪುರೋಹಿತರು, ಶ್ರೀ ಕುದುರೆ ಬ್ರಹ್ಮದೇವರ ಸೇವಾ ಸಮಿತಿಯ ಪದಾಧಿಕಾರಿಗಳು, ಕಡಕೋಳ –ಏಚಿಗನಹಳ್ಳಿ ಜೈನ ಯುವ ಸಂಘಗಳು, ಮಹಿಳಾ ಸಂಘಗಳು ಪದಾಧಿಕಾರಿಗಳು,…
ಪಾವಗಡ: ಭಾರತೀಯ ಪರಿವರ್ತನ ಸಂಘ–BPS, ಪಾವಗಡ ತಾಲ್ಲೂಕು ವತಿಯಿಂದ ಹೈಕೋರ್ಟ್ ವಕೀಲರು ಹಾಗೂ ರಾಜ್ಯಧ್ಯಕ್ಷ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ ಹರಿಹರಪುರ ಗ್ರಾಮಕ್ಕೆ ಭೇಟಿ ನೀಡಿ ಬೆಂಕಿ ಅವಘಡದಿಂದ ಗುಡಿಸಲು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಾಯಿತು. ನಿಡಗಲ್ಲು ಹೋಬಳಿ ಹರಿಹರಪುರ ಗ್ರಾಮದಲ್ಲಿ ಭೂತಮ್ಮ ಕೋಂ ದೊಡ್ಡಣ್ಣ ಎಂಬ 2 ಕುಟುಂಬಗಳ ಗುಡಿಸಲು ಮನೆ ಸುಟ್ಟು ಹೋಗಿತ್ತು. ಈ ಹಿನ್ನೆಲೆಯಲ್ಲಿ ಪ್ರೊ.ಹರಿರಾಮ್ ನೇತೃತ್ವದಲ್ಲಿ BPS ಮುಖಂಡರು ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಸರ್ಕಾರಿ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಮಾಡಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು. ವಿಶೇಷವಾಗಿ ಪದವಿ ಓದುತ್ತಿರುವ ವಿದ್ಯಾರ್ಥಿನಿಯನ್ನು ನೀನು ಚೆನ್ನಾಗಿ ಓದು KAS ತರಬೇತಿ ಕೊಡಿಸುತ್ತೇನೆ ಎಂದು ಹರಿರಾಮ್ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಪಿಎಸ್ ತುಮಕೂರು ಜಿಲ್ಲಾಧ್ಯಕ್ಷ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಿಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಮುಖಂಡರಾದ ಹನುಮಂತರಾಯಪ್ಪ, ಕಲಾವಿದರಾದ ನಾಗರಾಜು,…
ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ನಿವೃತ್ತ ಇಂಜಿನಿಯರ್ ಹೆಚ್.ಆರ್ ಶ್ರೀನಿವಾಸ ಮೂರ್ತಿ(89) ಅನಾರೋಗ್ಯದಿಂದ ಭಾನುವಾರ ಮುಂಜಾನೆ 2:40ರ ಸಮಯದಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ ತಮ್ಮ ಪುತ್ರನ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ, ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತಿಪಟೂರು: ಹೈದರಾಬಾದ್ ಅಕ್ಷಯ ಪ್ರಾರ್ಥನಾ ಫೌಂಡೇಶನ್ ವತಿಯಿಂದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡೆ, ಕಲಾ,ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಕೊಡಮಾಡುವ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ –2024 ರ ಪ್ರಶಸ್ತಿಗೆ ತಿಪಟೂರಿನ ಕಲ್ಪತರು ವಿದ್ಯಾಸಂಸ್ಥೆಯ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಶ್ರೀನಿವಾಸ ಬಿ. ರವರು ಭಾಜನರಾಗಿದ್ದಾರೆ. ಶ್ರೀನಿವಾಸ್ ರವರು ಈಗಾಗಲೇ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಹಲವು ಪದಕಗಳನ್ನು ಪಡೆದಿದ್ದು, 2023 ನೇ ಸಾಲಿನಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 03 ಚಿನ್ನದ ಪದಕಗಳನ್ನು ಹಾಗೂ 2024ನೇ ಸಾಲಿನಲ್ಲಿ ಥಾಯ್ಲೆಂಡಿನ ಸಖೋನ್ ನಖೊನ್ ನಗರದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 03 ಚಿನ್ನ, 01 ಬೆಳ್ಳಿ ಹಾಗೂ 01 ಕಂಚಿನ ಪದಕಗಳನ್ನು ಪಡೆದು ನಾಡಿಗೆ ಹಾಗೂ ದೇಶಕ್ಕೆ ಕೀರ್ತಿಯನ್ನು ತಂದಿದ್ದು, ಇವರು ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ. ಇವರ ಮಾರ್ಗದರ್ಶನದಲ್ಲಿ…
ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ, ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ. ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು…
ತುಮಕೂರು: ಜಗದ್ಗುರು ಶ್ರೀ ರೇಣುಕಾಚಾರ್ಯರು ನಡೆಸಿಕೊಂಡು ಬಂದ ವೀರಶೈವ ಪರಂಪರೆಯಲ್ಲಿ ವೀರಶೈವ ಧಮದ ಮೂಲ ಸಿದ್ದಾಂತವನ್ನು ಬಹಳಷ್ಟು ಜನ ತಿಳಿದುಕೊಂಡಿಲ್ಲ. ಅಲ್ಲದೆ ತಿಳಿದುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಧರ್ಮದಲ್ಲಿ ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಕಾಣುವಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ತುಮಕೂರು ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇರುವಂತಹ ಸತ್ಯವನ್ನು ಗ್ರಂಥಗಳಿಂದ ತಿಳಿದುಕೊಳ್ಳಲು ಸಾಧ್ಯವಿದೆ. ಆದ್ರೆ ಬಹಳಷ್ಟು ಜನ ಅವುಗಳನ್ನು ತಿಳಿದುಕೊಂಡು ದಾರಿಯಲ್ಲಿ ನಡೆದುಕೊಂಡರೆ ಸನ್ಮಾರ್ಗ ಲಭಿಸಲಿದೆ, ಆದ್ರೆ ಕೆಲವರು ಅದನ್ನು ತಿಳಿದುಕೊಳ್ಳದೆ ಇರುವುದರಿಂದ ಕೆಲವೊಂದು ಅವಾಂತರಗಳು ಮತ್ತು ಆತಂಕಗಳಿಗೆ ಕಾರಣವಾಗಿದೆ ಎಂದ್ರೆ ತಪ್ಪಾಗಲಾರದು ಎಂದು ತಿಳಿಸಿದರು. ವೀರಶೈವ ಧರ್ಮದ ಇತಿಹಾಸ ಮತ್ತು ಬೆಳೆದುಬಂದ ಪರಂಪರೆ ಅತ್ಯಂತ ಪ್ರಾಚೀನ ಎನ್ನುವುದರಲ್ಲಿ ಎರಡು ಮಾತು ಇಲ್ಲವೇ ಇಲ್ಲ. ಪರಮಾಚಾರ್ಯರು ಹಾಕಿದ ಧರ್ಮ…
ಬೆಂಗಳೂರು: ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಹಿರಿಯ ಸಾಮಾಜಿಕ ಹೋರಾಟಗಾರ, ನೈಜಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಮನವಿ ಮಾಡಿದ್ದಾರೆ. ಪ್ರಪಂಚದಲ್ಲಿಯೇ ಅತ್ಯಂತ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲ್ಪಡುವ ಭಾರತ ದೇಶದ ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ ಸತತವಾಗಿ ಆಡಳಿತ ನಡೆಸಿದ ನಮ್ಮ ನೆಚ್ಚಿನ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ ಸಿಂಗ್ ಈಗ ನಮ್ಮನ್ನು ಅಗಲಿದ್ದಾರೆ. ಅವರು ಈ ದೇಶಕ್ಕೆ ನೀಡಿದ ಕೊಡುಗೆ ಮತ್ತು ಶಾಸನಗಳು/ಯೋಜನೆಗಳು ಹತ್ತು ಹಲವು ಇದರಲ್ಲಿ ಬಹಳ ಮುಖ್ಯವಾಗಿ ಗುರುತಿಸಲ್ಪಡುವ ಶಾಸನ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಅವರು ಮಾಹಿತಿಯ ಹಕ್ಕು ಅದಿನಿಯಮ 2005 ಜಾರಿಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದು ಪ್ರತಿಯೊಬ್ಬ ನಾಗರೀಕರು ಆಡಳಿತದಲ್ಲಿನ ಪಾಲುದಾರರಾಗುವಂತೆ ಮತ್ತು ಆಡಳಿತದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆಯುವಂಥ ಆಯಿತು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿತ್ತು, ಈ ಮಾಹಿತಿ ಹಕ್ಕು ಕಾಯ್ದೆ2005 ಉಳಿಸಿ ಇನ್ನಷ್ಟು ಬಲಪಡಿಸುವ ಗುರುತರ…
ವಿಜಯಪುರ: ತುಮಕೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದು 6 ಜನ ಸಾವಿಗೀಡಾಗಿದ್ದರು. ಈ ಅಪಘಾತದಲ್ಲಿ ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡಿದ್ದ ಈರಗೊಂಡ ಏಗಪ್ಪಗೊಳ ಕೂಡ ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದ ಪರಿಣಾಮ IAST ಸಾಫ್ಟ್ವೇರ್ ಸಲ್ಯೂಷನ್ ಮುಖ್ಯಸ್ಥ ಚಂದ್ರಮ್ ಯಾಗಪ್ಪಗೋಳ್( 48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಎಂಬುವವರು ಮೃತಪಟ್ಟಿದ್ದರು. ಮಗ ಚಂದ್ರಮ್ ಯಾಗಪ್ಪಗೋಳ್, ಸೊಸೆ, ಮೊಮ್ಮಕ್ಕಳ ಸಾವಿನಿಂದ ಈರಗೊಂಡ ಏಗಪ್ಪಗೊಳ ಆಘಾತಗೊಂಡಿದ್ದರು. ಈರಗೊಂಡ ಏಗಪ್ಪಗೊಳ ಅವರು ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಕುಟುಂಬಸ್ಥರ ಸಾವಿನಿಂದ ನೊಂದಿದ್ದ ಅವರು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮದಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಬೈಕ್ ಕದಿಯಲು ಬಂದಿದ್ದ ಕಳ್ಳನನ್ನು ಸಾರ್ವಜನಿಕರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೆ.ಪಿ.ನಗರ ಒಂದನೇ ಹಂತದ 34ನೇ ಮುಖ್ಯರಸ್ತೆಯ ಅಪಾರ್ಮೇಂಟ್ ಬಳಿ ನಡೆದಿದೆ. ರಾತ್ರಿ ಸುಮಾರು 12:30ರ ಸಮಯದಲ್ಲಿ ಜೆ.ಪಿ.ನಗರದ ಒಂದನೇ ಹಂತದ 34ನೇ ಮುಖ್ಯರಸ್ತೆಯ ಅಪಾರ್ಮೇಂಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ನ ಹ್ಯಾಂಡ್ ಲಾಕ್ ಮುರಿದ ಕಳ್ಳ, ಬೈಕ್ ನ್ನು ತಳ್ಳಿಕೊಂಡು ಹೋಗುತ್ತಿದ್ದ. ಈ ವೇಳೆ ಮಾಲಿಕ ಶಬ್ದ ಕೇಳಿ ಮನೆಯಿಂದ ಹೊರ ಬಂದಾಗ ಕಳ್ಳ ಬೈಕ್ ತಳ್ಳಿಕೊಂಡು ಓಡಿ ಹೋಗುತ್ತಿರುವುದು ಕಂಡು ಬಂದಿದೆ. ಈ ವೇಳೆ ಅಕ್ಕಪಕ್ಕದ ನಿವಾಸಿಗಳನ್ನು ಕರೆದುಕೊಂಡು 1 ಕಿ.ಮೀ. ದೂರ ಬೆನ್ನಟ್ಟಿ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ. ಸಾರ್ವಜನಿಕರ ಒಗ್ಗಟ್ಟಿನ ನಡವಳಿಕೆಯಿಂದಾಗಿ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಶನಿವಾರ ರಾತ್ರಿ 8:30 ರ ಸಂದರ್ಭದಲ್ಲಿ ಪಾವಗಡ ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದೊಳಗಡೆ ಕರಡಿಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ. ಪಾವಗಡ ಪಟ್ಟಣದ ಬಳ್ಳಾರಿ ರಸ್ತೆ ಮಾರ್ಗದ ಎಪಿಎಂಸಿ ಸಮೀಪದಲ್ಲಿ ಅಗ್ನಿಶಾಮಕ ಠಾಣೆ ಇದ್ದು ಈ ಠಾಣೆಗೆ ಒಂದು ಕಡೆ ಕಾಂಪೌಂಡ್ ಇದೆ. ಇನ್ನೊಂದು ಕಡೆಯಲ್ಲಿ ಕಾಂಪೌಂಡ್ ಇಲ್ಲ. ಹೀಗಾಗಿ 24 ಗಂಟೆ ಕರ್ತವ್ಯ ನಿರ್ವಹಿಸುವಂತಹ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಜೀವ ಕೈಯಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತಹ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಶಾಸಕರು ಠಾಣೆಯ ಒಂದು ಭಾಗಕ್ಕೆ ಕಾಂಪೌಂಡನ್ನು ನಿರ್ಮಿಸಲು ಕ್ರಮ ವಹಿಸಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ . ಬೆಟ್ಟ ಸಮೀಪದಲ್ಲಿಯೇ ಇರುವುದರಿಂದ ಸಂಜೆಯಾದರೆ ಕರಡಿಗಳು ಬೆಟ್ಟದಿಂದ ಇಳಿದು ಊರಿನ ಮಧ್ಯಕ್ಕೆ ಬರುತ್ತಿರುವುದು ಇತ್ತೀಚೆಗೆ ಸಹಜವಾಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx