Author: admin

ಔರಾದ್: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ.ಬಿ. ಆರ್ ಅಂಬೇಡ್ಕರ್ ಹೋರಾಟ ಸಮಿತಿ ವತಿಯಿಂದ ಔರಾದ್ ಬಂದ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಪದಾಧಿಕಾರಿಗಳು ಔರಾದ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಬಳಿಯಿಂದ ಎಪಿಎಂಸಿ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿದ್ದರು ಬಳಿಕ ಟೈರ್ ಬೆಂಕಿ ಹಚ್ಚಿ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಎ ಪಿ ಎಂ ಸಿ ಕ್ರಾಸ್ ನಿಂದ  ಮೆರವಣಿಗೆ ಮೂಲಕ ಬಸ್ ನಿಲ್ದಾಣದ ವರೆಗೆ ಅಮಿತ್ ಶಾ ಪ್ರತಿಕೃತಿಗೆ  ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು  ಔರಾದ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ   ಮೂಲಕ ಮನವಿ ಸಲ್ಲಿಸಿದ್ದರು. ಈ ಸಮಯದಲ್ಲಿ ಹೋರಾಟರಾರರಾದ ಧನರಾಜ್ ಮುಸ್ತಾಪುರೆ, ಗೌತಮ್ ಮೇತ್ರೆ, ಸುಭಾಷ್ ಲಾಧಾ, ರಾಹುಲ್ ಖಂಡಾರೆ, ರತ್ನಾದೀಪ ಕಸ್ತುರೆ,  ರಾಮಣ್ಣ ವಡೆಯರ,  ದಲಿತ ಹಿರಿಯರ ಮುಖಂಡರು ಸುಧಾಕರ್ ಕೊಳ್ಳುರ್, ಎಮ್.ಡಿ.ನಯೂಮ,  ಪರಮೇಶ್ವರ್ ಮೇತ್ರೆ, ಕರಬಸಪ್ಪಾ ಸೊರಾಳೆ,…

Read More

ತುಮಕೂರು:  ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರುವ ತೆಂಗಿನ ಸಸಿಗಳನ್ನು ಮಾರಾಟ ಮಾಡಲು ಉದ್ದೇಶಿಸಲಾಗಿದ್ದು, ರೈತರು ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಬೇಕೆಂದು ತುಮಕೂರಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮನವಿ ಮಾಡಿದ್ದಾರೆ. ತುಮಕೂರು ತಾಲ್ಲೂಕಿನ ನಿಡುವಳಲು ತೋಟಗಾರಿಕೆ ಕ್ಷೇತ್ರದಲ್ಲಿ 24,972 ತೆಂಗಿನ ಸಸಿ, ಜಿಲ್ಲಾ ನರ್ಸರಿಯಲ್ಲಿ 1264, ಕೊರಟಗೆರೆ ತಾಲ್ಲೂಕು ದೊಡ್ಡಸಾಗ್ಗೆರೆ ಡಾ.ಎಂ.ಹೆಚ್.ಮರಿಗೌಡ ತೋಟಗಾರಿಕೆ ಕ್ಷೇತ್ರ–4933, ಕುಣಿಗಲ್ ತಾಲ್ಲೂಕು ಮಂಗಳ ತೋಟಗಾರಿಕೆ ಕ್ಷೇತ್ರ–13606 ಹಾಗೂ ರಂಗಸ್ವಾಮಿಗುಡ್ಡ ತೋಟಗಾರಿಕೆ ಕ್ಷೇತ್ರ–18957, ಮಧುಗಿರಿ ತಾಲ್ಲೂಕು ಇಂದಿರಾ ತೋಟಗಾರಿಕೆ ಕ್ಷೇತ್ರ–3277, ತುರುವೇಕೆರೆ ತಾಲ್ಲೂಕು ಮಾದಿಹಳ್ಳಿ ತೋಟಗಾರಿಕೆ ಕ್ಷೇತ್ರ–1249, ಗುಬ್ಬಿ ತಾಲ್ಲೂಕು ಹೇರೂರು ತೋಟಗಾರಿಕೆ ಕ್ಷೇತ್ರ– 1957, ತಿಪಟೂರು ತಾಲ್ಲೂಕು ಗೊರಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ 2878 ತೆಂಗಿನ ಸಸಿಗಳು ಮಾರಾಟಕ್ಕೆ ಲಭ್ಯವಿದೆ. ತೆಂಗಿನ ಸಸಿಗಳನ್ನು ಖರೀದಿಸುವವರು ಹೆಚ್ಚಿನ ಮಾಹಿತಿಗಾಗಿ ಎಂ.ಎನ್ ರೇಖಾ(ನಿಡುವಳಲು–8147636329); ಜ್ಞಾನೇಂದ್ರ ಎಂ.ಎನ್.(ಜಿಲ್ಲಾ ನರ್ಸರಿ–9591655665); ಕೆಂಪೇಗೌಡ ಬಿ.ಆರ್.(ದೊಡ್ಡಸಾಗ್ಗೆರೆ–9986456750); ಗಿರೀಶ್‌ಬಾಬು ವಿ.ಎಸ್.(ಮಂಗಳ ತೋಟಗಾರಿಕೆ ಕ್ಷೇತ್ರ–7892643025), ಶ್ವೇತಾ ಎ.ಸಿ.(ರಂಗಸ್ವಾಮಿಗುಡ್ಡ–9481121653), ಅಭಿಲಾಷ್ ಎಲ್.(ಇಂದಿರಾ–7975509668), ಪ್ರವೀಣ್ ಹೆಚ್.ಜೆ.(ಮಾದಿಹಳ್ಳಿ–8971167552), ತಿಮ್ಮರಾಜಮ್ಮ(ಹೇರೂರು-7338140275) ಹಾಗೂ ಶ್ರೀನಿವಾಸ ಗೌಡ(ಗೊರಗೊಂಡನಹಳ್ಳಿ–8310780633)…

Read More

ತುಮಕೂರು:  ಜಿಲ್ಲೆಯ ಗೊನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ಮನವಿ ಮಾಡಿದ್ದಾರೆ. ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯು ” Friends of Coconut Tree” ಕಾರ್ಯಕ್ರಮದಡಿ ಈ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ಜಿಲ್ಲೆಯಲ್ಲಿ ಸುಮಾರು 2,24,507 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಕಾಯಿ ಅಥವಾ ಎಳನೀರು ಕೊಯ್ಲು ಮಾಡುವ ಗೊನೆಗಾರರ ಸುರಕ್ಷತಾ ದೃಷ್ಟಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗೊನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ವಿವಿಧ ಸೌಲಭ್ಯ ಒದಗಿಸಲಾಗುವುದು. ತೆಂಗಿನ ಮರ ಹತ್ತುವವರು/ತೆಂಗಿನಕಾಯಿ ಕೀಳುವವರು/ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದ್ದಲ್ಲಿ ಅಥವಾ ಅಂಗವಿಕಲರಾದಲ್ಲಿ ದುರ್ಘಟನೆ/ ಅಪಘಾತವಾದ 7 ದಿನಗಳೊಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ನೀಡಬೇಕು. ಮರಣ ಹೊಂದಿದಲ್ಲಿ 7 ಲಕ್ಷ ರೂ., ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ 3.50 ಲಕ್ಷ ರೂ., ಆಸ್ಪತ್ರೆ ವೆಚ್ಚ(24 Hours IP) 2…

Read More

ತುಮಕೂರು:  ತಿಪಟೂರು ನಗರಸಭೆಯ 2025–26ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸಲು ಡಿಸೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರಸಭಾ ಸಭಾಂಗಣದಲ್ಲಿ 2ನೇ ಸುತ್ತಿನ ಸಾರ್ವಜನಿಕ ಸಮಾಲೋಚನಾ ಪೂರ್ವಭಾವಿ ಸಭೆ ನಡೆಯಲಿದೆ. ನಗರಸಭೆ ಅಧ್ಯಕ್ಷೆ ಯಮುನಾ ಎ.ಎಸ್. ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಭೆಗೆ ತಿಪಟೂರು ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೊಟೇಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ನರ್ಸಿಂಗ್ ಹೋಮ್ಸ್ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ & ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆಗಳನ್ನು ನೀಡಲು ಕೋರಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅನುದಾನವನ್ನು ಸದ್ಬಳಕೆ ಮಾಡಿಕೊಂಡು ತುಮಕೂರು ನಗರವನ್ನು ಮಾದರಿ ನಗರವನ್ನಾಗಿ ನಿರ್ಮಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, 2024–25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರ್ಕಾರದಿಂದ ತುಮಕೂರು ಸೇರಿ ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತಲಾ 200 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬಿಡುಗಡೆಯಾಗುವ ಹಣವನ್ನು ಕಾಮಗಾರಿಗಳಿಗೆ ಸದ್ವಿನಿಯೋಗಿಸಿ 2026–27ನೇ ಸಾಲಿನೊಳಗಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಯೋಜನೆಯಡಿ ಒದಗಿಸಲಾಗುವ 200…

Read More

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಿಲುಕುರಿಕೆ ಗ್ರಾಮದ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯು ಶನಿವಾರ ಜರುಗಿತು.. ಹಾಲು ಉತ್ಪಾದಕರ ಸಹಕಾರ ಸಂಘ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ಶೈಲ ರಂಗನಾಥ್ ಎನ್.ಸಿ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀರಂಗಯ್ಯ ಎನ್.ಆರ್. ರವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಆಯ್ಕೆಯಾದ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ಮತ್ತು ಎಲ್ಲ ನಿರ್ದೇಶಕರುಗಳಿಗೆ ಶುಭ ಕೋರಿ ಅಭಿನಂದಿಸಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘ ನವಿಲುಕುರಿಕೆ ಗ್ರಾಮ ನೂತನ ನಿರ್ದೇಶಕರುಗಳಾಗಿ ನರಸಿಂಹಮೂರ್ತಿ ಎನ್.ಡಿ., ಅಂಜನಾಚಾರ್, ಕೃಷ್ಣಮೂರ್ತಿ, ಜೈ ದೀಪ, ಮಲ್ಲಿಕಾರ್ಜುನಯ್ಯ, ರಂಗಯ್ಯ ಡಿ., ಚೇತನ ಮೋಹನ್ ಕುಮಾರ್, ಸಂಧ್ಯಾ ಅನಿಲ್ ಕುಮಾರ್, ಜಯರಾಮಯ್ಯ, ಚಿಕ್ಕ ರಂಗಯ್ಯ, ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೈಲ ರಂಗನಾಥ ಮಾತನಾಡಿ, ಸಹಕಾರ ಸಂಘದ ಸಮಗ್ರ ಅಭಿವೃದ್ಧಿಗಾಗಿ…

Read More

ತುಮಕೂರು:  ಜಿಲ್ಲೆಯ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಬೂತಮ್ಮ ಎಂಬವರು ಗುಡಿಸಲಿನಲ್ಲಿ ವಾಸವಿದ್ದು, ಇವರ ಗುಡಿಸಲಿಗೆ  ಬೆಂಕಿ ಬಿದ್ದ ಪರಿಣಾಮ ಮಕ್ಕಳ ವಿದ್ಯಾಭ್ಯಾಸದ ದಾಖಲೆಗಳು ಮತ್ತು ದಿನ ಬಳಕೆ ವಸ್ತುಗಳು ಸುಟ್ಟು ಕರಕಲಾಗಿದೆ. ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ನವರು ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ, ಸರ್ಕಾರದಿಂದ ಪರಿಹಾರ ಬರುವಂತೆ ಕ್ರಮ ವಹಿಸಿ ನಷ್ಟವಾದ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ, ಬೂತಮ್ಮನವರಿಗೆ ಆರ್ಥಿಕ ಸಹಾಯ ಮಾಡಿದರು. ವರದಿ: ನಂದೀಶ್ ನಾಯ್ಕ ಪಿ., ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ:  ಪಟ್ಟಣದ ಬಾಪೂಜಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 28 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತ ಹೊಂದಿದ ಮುದ್ದಯ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ವೃತ್ತಿ ಜೀವನದಲ್ಲಿ ಸಹಕರಿಸಿದಂತಹ ಪ್ರತಿಯೊಬ್ಬರಿಗೂ ಋಣಿಯಾಗಿರುತ್ತೇನೆ, ಅದೇ ರೀತಿ ಪಾಶ್ಚಿಮಾತ್ಯ ಸಂಸ್ಕೃತಿಗಳನ್ನ ಅಳವಡಿಸಿಕೊಳ್ಳದೆ, ಭಾರತೀಯ ಪರಂಪರೆಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಕರೆ ನೀಡಿದರು ಮಾಜಿ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಗ್ರ ನರಸಿಂಹಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಾಪೂಜಿ ಕಾಲೇಜನ್ನ ಬೆಳೆಸುವುದರಲ್ಲಿ ಮುದ್ದಯ್ಯ ಅವರ ಕಾರ್ಯ ಶ್ಲಾಘನೀಯವಾದದ್ದು. ಸಂಸ್ಥೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನ ನೀಡುತ್ತಾ ಬಂದಿದ್ದು, ಮುಂದೆಯೂ ಶಿಕ್ಷಣ ಪರ್ವ ಮುಂದುವರೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ತುಮಕೂರಿನ ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ ಲೋಕೇಶ್, ಶಿವಣ್ಣ, ಸೇರಿದಂತೆ ಬಾಪೂಜಿ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ತಿಪ್ಪಯ್ಯನದುರ್ಗ ಗ್ರಾಮದ ದಲಿತರ ಕಾಲೋನಿ ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತವಾಗಿದೆ. ಈ ಗ್ರಾಮದಲ್ಲಿ ಮೂರು ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದು,  ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಗಳು ನಡೆಯುತ್ತಿಲ್ಲ ಹಾಗೂ ರಾತ್ರಿ ವೇಳೆ ಸರಿಯಾದ ರೀತಿಯಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದೆ, ಜನ ವಿಧಿ ಇಲ್ಲದೆ ಕತ್ತಲೆ ಹಾಗೂ ಕೊಳಚೆಯಂತೆ ಇರುವ ಪ್ರದೇಶದಲ್ಲಿ ವಾಸ ಮಾಡುತ್ತಿದ್ದಾರೆ. ಈ ವಿಷಯ ಇಲ್ಲಿನ ಜನಪ್ರತಿನಿಧಿಗಳು ಕಣ್ಣಾರೆ ನೋಡಿಯೂ ನೋಡದಂತೆ ಹೋಗುತ್ತಿದ್ದಾರೆ. ಇಲ್ಲಿನ ನಿವಾಸಿಗಳು ಎಷ್ಟೋ ಬಾರಿ ಈ ವಿಷಯದ ಬಗ್ಗೆ ಪಿಡಿಒ ಬಳಿ ಮನವಿ ಮಾಡಿದರೂ ಸರಿಪಡಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಆರು ತಿಂಗಳಾದರೂ ಯಾವುದೇ ಕೆಲಸ ನಡೆಯುವುದಿಲ್ಲ. ಎಲ್ಲೆಂದರಲ್ಲಿ ನಿಂತ ಕೊಳಚೆ ನೀರಿನಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳ ಭಯದಿಂದ ಜೀವನ ಸಾಗಿಸುವಂತಾಗಿದೆ ಎಂದು ಇಲ್ಲಿನ ವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇನ್ನಾದರೂ  ಸಂಬಂಧ ಪಟ್ಟ ಅಧಿಕಾರಿಗಳು,  ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾಮಕ್ಕೆ…

Read More

ಕಲಬುರಗಿ: ಅಫಜಲಪುರ ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಸಂದರ್ಭದಲ್ಲಿ ಸೊಸೆ ತನ್ನ ಅತ್ತೆಯ ವಿರುದ್ಧ ದೇವರಿಗೆ ಹರಕೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು”ಎಂದು ಸೊಸೆ ನೋಟಿನ ಮೇಲೆ ಬರೆದು ದೇವಿಗೆ ಹರಕೆ ಅರ್ಪಿಸಿದ್ದಾಳೆ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಅತ್ತೆಯ ಸಾವು ಬಯಸಿ ಸೊಸೆ ದೇವರಿಗೆ ಹರಕೆ ಹೇಳಿದ್ದು, ಸಾಕಷ್ಟು ಜನರು ಇದನ್ನ ವ್ಯಂಗ್ಯವಾಗಿ ತೆಗೆದುಕೊಂಡಿದ್ದರೆ, ಅತ್ತೆಯಂದಿರು ಆತಂಕದಿಂದ ನೋಡುವಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More