Author: admin

ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರಿಗೆ ನವದೆಹಲಿಯ ಅವರ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು. ವಿತ್ತ ಮಂತ್ರಿ, ಪ್ರಧಾನಮಂತ್ರಿ ಸೇರಿ ಅನೇಕ ಉನ್ನತ ಸ್ಥಾನಗಳನ್ನು ಅಲಂಕರಿಸಿ ಸರಳತೆ, ಸೌಮ್ಯತೆ, ಪ್ರಾಮಾಣಿಕತೆ ಮೂಲಕ ಅನೇಕ ಸಾಧನೆಗಳ ಅಚ್ಚಳಿಯದ ಛಾಪು ಮೂಡಿಸಿ ರಾಷ್ಟ್ರಕ್ಕೆ ಎಣೆ ಇಲ್ಲದ ಕೊಡುಗೆ ನೀಡಿದ ಅವರು ಚಿರಸ್ಮರಣೀಯರು ಎಂದು ಕುಮಾರಸ್ವಾಮಿ ತಿಳಿಸಿದರು. ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿದ ಅವರು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ನಗರದ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣಕ್ಕೆ ಪಾಲಿಕೆ ಮುಂದಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದರು, ಇದೀಗ ಶಾಸಕ ಜಿಟಿ ದೇವೇಗೌಡ ಕೂಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಅಂತ ನಾಮಕರಣ ಮಾಡಿಲ್ಲ ಅನ್ನುವುದಾದರೆ, ಸಿದ್ದರಾಮಯ್ಯ ಅವರ ಹೆಸರನ್ನ ಇಟ್ಟರೇನು ತಪ್ಪಿಲ್ಲ. ಈಗಾಗಲೇ ಸಾಕಷ್ಟು ಚರ್ಚೆಗಳ ನಡೆಯುತ್ತಿವೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಸಂಸದ ಯದುವೀರ್ ಅವರು ಹೇಳುವಂತೆ ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎನ್ನುತ್ತಾರೆ. ಒಂದು ವೇಳೆ ಹೆಸರಿಟ್ಟಲ್ಲದಿದ್ದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪಿಲ್ಲ ಎಂದು ಹೇಳುವ ಮೂಲಕ ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಅಯೋಧ್ಯೆ: ರಾಮಮಂದಿರದ ಪುರೋಹಿತರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಸ್ತ್ರ ಸಂಹಿತೆ ಜಾರಿ ಮಾಡಿದೆ ಮಾಡಿದ್ದು, ಅರ್ಚಕರಿಗೆ ವಿಶಿಷ್ಟ ಗುರುತು ನೀಡಲು ವಿಶಿಷ್ಟ ಬಟ್ಟೆಗಳನ್ನು ಧರಿಸುವ ನಿಯಮ ಜಾರಿಯಾಗಿದೆ. ಎಲ್ಲ ಪುರೋಹಿತರಿಗೆ ಎರಡು ಸೆಟ್ ಹಳದಿ ನಿಲುವಂಗಿ, ಬಿಳಿ ಧೋತಿಗಳನ್ನು ನೀಡಲಾಗಿದೆ. ಇನ್ಮುಂದೆ ದೇವಾಲಯದಲ್ಲಿ ಇದೇ ಬಟ್ಟೆಗಳನ್ನು ಧರಿಸಲಿದ್ದಾರೆ. ಪುರೋಹಿತರು, ಬಾಲರಾಮನ ಪೂಜೆ ಮಾಡಬೇಕು. ಇದರ ಜೊತೆಗೆ ಗರ್ಭಗುಡಿಯೊಳಗೆ ಫೋನ್ ಗಳ ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೇರಿದಂತೆ ಒಟ್ಟು 14 ಅರ್ಚಕರು ರಾಮಮಂದಿರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಅರ್ಚಕರಿಗೆ ಡ್ರೆಸ್ ಕೋಡ್ ಎನ್ನುವುದು ಇರಲಿಲ್ಲ. ಈಗ ಎಲ್ಲ ಅರ್ಚಕರಿಗೂ ವಸ್ತ್ರ ಸಂಹಿತೆ ಜಾರಿ ಮಾಡಿ ಬಟ್ಟೆಗಳನ್ನು ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ತಂದೆಯನ್ನು ಹತ್ಯೆ ಮಾಡಿದ ಮಗನೊಬ್ಬ ಅಪಘಾತದ ಕಥೆ ಕಟ್ಟಿ ಸಿಕ್ಕಿಬಿದ್ದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದ್ದು, ಘಟನೆಯ ಸತ್ಯಾಂಶ ಬಯಲಾದ ಬೆನ್ನಲ್ಲೇ ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ಎಂಬವರು ಹತ್ಯೆಗೀಡಾದವರಾಗಿದ್ದು, ಇವರ ಪುತ್ರ ಪಿರಿಯಾಪಟ್ಟಣದ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯ ಪಾಂಡು ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಪಿರಿಯಾಪಟ್ಟಣದ ಬೈಲುಕುಪ್ಪೆ ಬಳಿ ಬುಧವಾರ ಈ ಘಟನೆ ನಡೆದಿದೆ. ಅಣ್ಣಪ್ಪನ ಹೆಸರಲ್ಲಿ ವಿಮೆ ಮಾಡಿಸಿದ ಮಗ ಪಾಂಡು, ಆ ಹಣದ ಆಸೆಗೆ ಕೃತ್ಯ ಎಸಗಿದ್ದಾನೆ. ನಿಮಗೆ ಟಿಬೇಟಿಯನ್ ಮೊದಲನೇ ಕ್ಯಾಂಪಿನಲ್ಲಿ ಕೆಲಸ ಇದೆ ಎಂದು ತಂದೆಯನ್ನು ಕಳುಹಿಸಿದ್ದ ಆರೋಪಿ ಮಗ ಬಳಿಕ ಹಿಂಬದಿಯಿಂದ ಹೋಗಿ ತಲೆಗೆ ದೊಣ್ಣೆಯಿಂದ ಹೊಡೆದು ಕೊಂಡಿದ್ದಾನೆ. ಬಳಿಕ ತಂದೆಯ ಮೃತದೇಹವನ್ನು ಬಿ.ಎಂ. ರಸ್ತೆಯ ಮಂಚ ದೇವನಹಳ್ಳಿ ಸಮೀಪ ಎಸೆದಿದ್ದಾನೆ. ನಂತರ ತಂದೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಪಾಂಡುವಿನ ದೂರಿನ ಮೇಲೆ ಅನುಮಾನ ಬಂದು ಸಬ್ ಇನ್ಸ್ ಪೆಕ್ಟರ್ ಅಜಯ್ ಕುಮಾರ್…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ — ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ — ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತಂತೆ ಸಂಶಯವಿದ್ದಲ್ಲಿ ಇ — ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಶಿಲ್ಲಾಂಗ್: ಚರ್ಚ್ನೊಳಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕಾಶ್ ಸಾಗರ್ ಎಂಬಾತ ಚರ್ಚ್ ಗೆ ನುಗ್ಗಿದ ವ್ಯಕ್ತಿಯಾಗಿದ್ದು, ಅಕ್ರಮವಾಗಿ ಚರ್ಚ್ ಗೆ ನುಗ್ಗಿದ ಈತ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಲ್ಲದೇ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಾವಿನ್ನಾಂಗ್ ಗ್ರಾಮದ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ನವದೆಹಲಿ: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಇದೀಗ ಕಾಂಗ್ರೆಸ್ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಿದೆ. ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕನ್ನಡ ಹಾಗೂ ತೆಲುಗಿನ ಅನೇಕ ಧಾರವಾಹಿಗಳಲ್ಲಿ ನಟಿಸಿರುವ ಚರಿತ್ ಅವರು ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಕೇಳಿಬಂದಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆ. ತಾನು ವಾಸ ಮಾಡುತ್ತಿದ್ದ ಮನೆಗೆ ಚರಿತ್ ಸಹಚರರ ಜೊತೆ ನುಗ್ಗಿ ಕಿರುಕುಳ ನೀಡಿದ್ದಾರೆ. ಜೊತೆಗೆ ತನ್ನ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ವಿಚ್ಛೇದನದ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿರುವ ಆರೋಪವಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಶುಕ್ರವಾರ ಲಾಹೋರ್ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ರಹಮಾನ್ ಮಕ್ಕಿಗೆ ಕಳೆದ ಕೆಲವು ದಿನಗಳಿಂದ ಮಧುಮೇಹ ಹೆಚ್ಚಿತ್ತು. ನಂತರ ಆತನನ್ನ ಲಾಹೋರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ನ ಸೋದರ ಮಾವನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ. ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಬ್ಯಾಂಕ್ ನೌಕರರು ಎಂದು ತಿಳಿದು ಬಂದಿದೆ. ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದರು. ಈ ವೇಳೆ ಅಪರಿಚಿತ ವಾಹನ ಅವರ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪರಿಚಿತ ವಾಹನದ ಪತ್ತೆಗಾಗಿ ಬಲೆ ಬೀಸಿದ್ದಾರೆ. ಅಲ್ಲದೇ ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮರಗಳ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx…

Read More