Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಜೈನರ ಗುತ್ತಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಎಚ್ಚರ ಜೀವನಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬೆಂಗಳೂರಿನ ಉದ್ಯಮಿ ವಿ.ಜೆ.ಬ್ರಹ್ಮದೇವಯ್ಯ, ತ್ರಿಶಾಲಾ ಬ್ರಹ್ಮದೇವಯ್ಯ ದಂಪತಿಗಳು ಭೂಮಿ ಪೂಜೆ ನೆರವೇರಿಸಿದರು . ಕ್ಷೇತ್ರಪಾಲ ಪೂಜೆ, ವಾಸ್ತು ದೇವತೆ ಪೂಜೆ, ವಾಯು, ಮೇಘ, ಅಗ್ನಿ ಪೂಜೆಗಳೊಂದಿಗೆ ನೆರವೇರಿಸಿ, ಕಳಸ ಸ್ಥಾಪನೆ ,ವಿವಿಧ ದ್ರವ್ಯಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ತೀರ್ಥಂಕರರಿಗೆ ಆರೋಗ್ಯ ಗಳನ್ನು ಸಮರ್ಪಿಸಿ ಶಾಂತಿ ಮಂತ್ರ ಪಠಿಸಲಾಯಿತು . ಮುನಿಶ್ರೀ ವೀರಸಾಗರ ಮಹಾರಾಜರು ಆಶೀರ್ವಚನ ನೀಡಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವತ್ತ ಹೆಜ್ಜೆ ಇಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎ.ಬಿ .ಕಾಂತರಾಜು, ಶಶಿಕುಮಾರ್ ಧವನ್ ಜೈನ, ನಾಗಚಂದ್ರ, ಮನ್ಮಥರಾಜು, ರೇಖಾ ಧವನ್ , ಅಂಜನ, ಶಶಿಕುಮಾರ್ , ನಿಶ್ಚಲ್ , ಮಂಜುಳಾ, ಧನ ಕೀರ್ತಿ, ವಸುಮತಿ , ಪದ್ಮ ಪ್ರಭು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ…
ಶಿರಾ: ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಳೆ ನಡುವೆ ರಸ್ತೆಗೆ ಟಾರು ಹಾಕುವ ಕಾಮಗಾರಿ ನಡೆಸುತ್ತಿದ್ದು ಮಳೆಯಲ್ಲಿ ಟಾರು ರಸ್ತೆಗೆ ಕಚ್ಚುವುದೇ? ಈ ರಸ್ತೆಯ ಗುಣ ಮಟ್ಟ ಹೇಗಿರಬಹುದು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ, ನಾವು ಇನ್ನೂ ಐದು ವರ್ಷ ಮೇಂಟೈನ್ಸ್ ಮಾಡುತ್ತೇವೆ. ಹಾಗಾಗಿ ಏನಾದರೂ ತೊಂದರೆ ಇಲ್ಲ ಎಂದು ರಸ್ತೆ ಕಾಮಗಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಳೆಯ ನಡುವೆಯೂ ರಸ್ತೆಗೆ ಟಾರು ಹಾಕುವುದು ಎಷ್ಟರಮಟ್ಟಿಗೆ ಸರಿ ಹಾಗೂ ಈಗಾಗಲೇ ಟಾರು ಹಾಕಿರುವ ರಸ್ತೆಗಳು ಗುಂಡಿ ಬಿದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಮಳೆಯಲ್ಲಿ ನೆನೆದಿರುವ ರಸ್ತೆಗೆ ಹಾಕುತ್ತಿರುವ ಟಾರು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟು ಮನವಿ ಮಾಡಿಕೊಂಡರು ಸಹ ಅಧಿಕಾರಿಗಳು ದರ್ಪ ತೋರುತ್ತಿದ್ದು ಇವರಿಗೆ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಅವರ ಅಂತ್ಯ ಸಂಸ್ಕಾರವನ್ನು ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಿರ್ಮಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಪ್ರಧಾನಿ ಸಿಂಗ್ ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದಾರೆ. ಅವರ ಸ್ಮಾರಕ ಸ್ಥಾಪಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ ಬಳಿಕ, ಖರ್ಗೆ ಪ್ರಧಾನಿಗೆ ಪತ್ರ ಬರೆದಿದ್ದು, ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಜಬಲ್ಪುರ: ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ಇಲ್ಲೊಬ್ಬ ವ್ಯಕ್ತಿ ರೈಲಿನ ಚಕ್ರಗಳ ನಡುವೆ ಅವಿತು ಬರೋಬ್ಬರಿ 290 ಕಿ.ಮೀ. ದೂರ ಪ್ರಯಾಣಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ದಾನಪುರ ಎಕ್ಸ್ ಪ್ರೆಸ್ ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೈಲು ಟಿಕೆಟ್ ಕೊಳ್ಳಲು ಹಣವಿಲ್ಲದೇ ಈತ ರೈಲಿನ ಕೆಳಗೆ ಅವಿತು ಬರೊಬ್ಬರಿ ಸುಮಾರು 290 ಕಿ.ಮೀ ವರೆಗೂ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಮಧ್ಯಪ್ರದೇಶದ ಇಟಾರ್ಸಿಯಿಂದ ಜಬಲ್ಪುರದವರೆಗೆ ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿದ್ದಾನೆ ಎಂದು ತಿಳಿದು ಬಂದಿದೆ. ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ S4 ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ಪತ್ತೆಯಾಗಿತ್ತು. ಹೀಗಾಗಿ ಈ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯನ್ನು ಹೊರತೆಗೆದ ವೇಳೆ ಆತ ಮದ್ಯ ಪಾನ…
ಬೆಂಗಳೂರು: ಪಿಟ್ ಬುಲ್ ಶ್ವಾನ ದಾಳಿಗೆ ಎರಡು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಐಟಿಸಿ ರಸ್ತೆಯ ಸುಬ್ಬಣ್ಣಪಾಳ್ಯದಲ್ಲಿ ನಡೆದಿದೆ. ಅನುಷ್ಕಾ ಧಮಾಲ್(2) ಎಂಬ ಬಾಲಕಿ ತನ್ನ ತಾಯಿಯ ಜೊತೆಗೆ ಇದ್ದ ವೇಳೆ ಆಕೆಯ ಮೇಲೆ ನೆರೆಹೊರೆಯವರ ನಾಯಿ ಏಕಾಏಕಿ ದಾಳಿ ಮಾಡಿದ್ದು, ಬಾಲಕಿಯ ಭುಜವನ್ನು ಕಚ್ಚಿದೆ. ಈ ವೇಳೆ ತಾಯಿ ಬಾಲಕಿಯನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಬ್ಬಣ್ಣಪಾಳ್ಯದ ವೆಂಕಟೇಶ್ವರ ಲೇಔಟ್ ನಿವಾಸಿಯಾಗಿರುವ ಬಾಲಕಿಯ ತಂದೆ ನಬರಾಜ್ ಧಮಾಲ್ ಅವರು ನಾಯಿಯ ಮಾಲೀಕರ ವಿರುದ್ಧ ಮರುದಿನ ದೂರು ದಾಖಲಿಸಿದ್ದಾರೆ. ನಾಯಿಯ ಮಾಲಿಕರು ಬಾಲಕಿಯ ಚಿಕಿತ್ಸಾ ವೆಚ್ಚ ನೋಡಿಕೊಳ್ಳದ ಹಿನ್ನೆಲೆ ಬಾಲಕಿಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆನ್ನಲಾಗಿದೆ. ಅದೃಷ್ಟವಶಾತ್ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ. ಸದ್ಯ ನಾಯಿಯ ಮಾಲಿಕರನ್ನು ವಿಚಾರಣೆ ನಡೆಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅತ್ಯಂತ ಪ್ರಾಮಾಣಿಕ ರಾಜಕಾರಣಿ, 10 ವರ್ಷ ಪ್ರಧಾನಿಯಾಗಿದ್ದ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷಗಳಾಗಿತ್ತು. ಅವರ ಬದುಕನ್ನು ಪವಾಡದ ರೀತಿ ನೋಡಬಹುದಾಗಿದೆ. ಇವತ್ತಿನ ಪಾಕಿಸ್ತಾನದ ಕುಗ್ರಾಮವೊಂದರಲ್ಲಿ ಜನಿಸಿದ್ದ ಅವರು,ಅಲ್ಲಿಂದ ದೇಶ ಹಾಗೂ ಜಗತ್ತಿನಲ್ಲೇ ಖ್ಯಾತ, ಶ್ರೇಷ್ಠ ಅರ್ಥ ಶಾಸ್ತ್ರಜ್ಞರಾಗಿ ಬೆಳೆದರು ಎಂದರು. ಪಿ.ವಿ.ನರಸಿಂಹರಾವ್ ಪ್ರಧಾನಿಯಾಗಿದ್ದಾಗ ಐದು ವರ್ಷಗಳ ಕಾಲ ದೇಶದ ಆರ್ಥಿಕ ಸಲಹೆಗಾರರಾಗಿದ್ದರು. ಉದಾರೀಕರಣ ಹಾಗೂ ಖಾಸಗೀಕರಣದ ಮೂಲ ಭಾರತದ ಆರ್ಥಿಕತೆಯನ್ನು ಜಾಗತಿಕತೆಗೆ ಮುಕ್ತವಾಗಿಸಿದರು. ಆ ನಿರ್ಧಾರಗಳಿಂದ ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಯಾಯಿತು ಎಂದು ವಿಶ್ಲೇಷಿಸಿದರು. ಅದರ ನಂತರ 2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದಾಗ ಸೋನಿಯಾ ಗಾಂಧಿ ಪ್ರಧಾನಿಯಾಗಲು ನಿರಾಕರಿಸಿದರು. ಆ ವೇಳೆ ಮನಮೋಹನ್ ಸಿಂಗ್ ರನ್ನು ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. 10 ವರ್ಷಗಳ ಕಾಲ ದೇಶದ ಅಧಿಕಾರದ ಚುಕ್ಕಾಣಿ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮನಮೋಹನ್ ಸಿಂಗ್ ಅವರ ದೆಹಲಿಯ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ್ ಪಡೆದುಕೊಂಡರು. ವಿನಮ್ರ ಮೂಲದಿಂದ ಏರಿದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞರಾದರು. ಅವರು ಹಣಕಾಸು ಸಚಿವರಾಗಿಯೂ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು, ವರ್ಷಗಳಲ್ಲಿ ನಮ್ಮ ಆರ್ಥಿಕ ನೀತಿಯ ಮೇಲೆ ಬಲವಾದ ಮುದ್ರೆ ಹಾಕಿದರು. ಸಂಸತ್ತಿನಲ್ಲಿ ಅವರ ಮಧ್ಯಸ್ಥಿಕೆಗಳು ಸಹ ಒಳನೋಟವುಳ್ಳದ್ದಾಗಿದೆ ಎಂದು ಪಿಎಂ ಮೋದಿ ಹೇಳಿದರು. ಡಾ.ಮನಮೋಹನ್ ಸಿಂಗ್ ಜಿ ಅವರು ಪ್ರಧಾನಿಯಾಗಿದ್ದಾಗ ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ನಾವು ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ವ್ಯಾಪಕವಾದ ಚರ್ಚೆಗಳನ್ನು ನಡೆಸುತ್ತೇವೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಗೋಚರಿಸುತ್ತದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಡಾ. ಮನಮೋಹನ್ ಸಿಂಗ್ ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇರುತ್ತದೆ ಎಂದು ಪ್ರಧಾನಿ ನುಡಿದರು.…
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಇದೀಗ ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಆರು ಅಯ್ಯಪ್ಪ ಭಕ್ತರು ಸದ್ಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳಿಗೆ ತಜ್ಞ ವೈದ್ಯರ ತಂಡದಿಂದ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಎಕ್ಸ್ ಪೋಸ್ಟ್ನಲ್ಲಿ ಪರಮೇಶ್ವರ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೀದರ್: ಆನ್ ಲೈನ್ ಗೇಮಿಂಗ್ನಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಡಿ.ಫಾರ್ಮ್ ಪದವೀಧರನಾದ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆನ್ ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಸುಮಾರು 1.5ಲಕ್ಷ ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದ ಯುವಕ ಬುಧವಾರ ಸಂಜೆ ಸಾಯಗಾಂವ ಗ್ರಾಮ ಸಮೀಪದ ಜ್ಯೋತಿ ತಾಂಡಾ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಕೂಡಲೇ ಯುವಕನನ್ನು ಭಾಲ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಅಲ್ಲಿಂದ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚಿನ್ನೇನ ಹಳ್ಳಿ, ತಾಳಗುಂದ , ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾಯ೯ ನಿವಾ೯ಹಕ ಇಂಜಿನಿಯರ್ ಗೋವಿಂದರಾಯ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx