Author: admin

ಇತ್ತೀಚೆಗೆ ರಾಜ್ಯದಲ್ಲಿ ನಡೆದಂತಹ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ನೌಕರರು ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಕೆಲವು ದಿನ ಹೋರಾಟ ಮಾಡಿದ್ದು ಕೇಳಿ ಬಂತು, ಸರ್ಕಾರ ಸಹಾ ಇವರ ಹೋರಾಟಕ್ಕೆ ಸ್ಪಂದನೆ ನೀಡಿತ್ತು. ಅದೇ ಜನ ಸಾಮಾನ್ಯರು ರೈತರು ಹೋರಾಟ ಮಾಡುವ ಸಂದರ್ಭದಲ್ಲಿ ಎಷ್ಟೊ ಅಡ್ಡಿ ಆತಂಕಗಳನ್ನು ಎದುರಿಸಬೇಕಾಗುತ್ತದೆ. ಸರ್ಕಾರಿ ನೌಕರರಲ್ಲಿ ಸಂಘಟನೆಗಳು ಬಲಾಢ್ಯ ಆಗಿರುತ್ತದೆ. ಆದರೆ ಜನಸಾಮಾನ್ಯರು ರೈತರ ಸಂಘಟನೆಗಳ ಕೊರತೆ ಇದೆ, ಬಲಿಷ್ಟವಾಗಿ ಇಲ್ಲ ಈ ಕಾರಣದಿಂದ ಯಶಸ್ಸು ಕಾಣುವುದಿಲ್ಲ. ಚುನಾವಣೆಗಳ ಸಂದರ್ಭದಲ್ಲಿ ರೈತರು ಜನ ಸಾಮಾನ್ಯರ ಸಮಸ್ಯೆಗಳ ಬಗ್ಗೆ ರಾಜಕಾರಣಿಗಳು ಮೊಸಳೆ ಕಣ್ಣಿರು ಸುರಿಸುವುದು ಇದೆ. ಅದೇ ಸರ್ಕಾರಿ ನೌಕರರು ಸಂಘಟನೆಗಳ ಹೋರಾಟ ಮಾಡಿದರೆ ಬೆಂಬಲಕ್ಕೆ ರಾಜಕಾರಣಿಗಳು ಅಥವಾ ಜನಪ್ರತಿನಿಧಿಗಳು ನೇರವಾಗಿ ಬೆಂಬಲ ನೀಡುತ್ತಾರೆ. ಈ ಸಂಘಟನೆಯಲ್ಲಿ ಪ್ರಸ್ತಾಪ ಒಂದು ಕೇಳಿ ಬಂತು. ವರ್ಗಾವಣೆ ವಿಷಯದಲ್ಲಿ ಬಡ್ತಿ ಮೂಲಕ ಬೇರೆ ತಾಲ್ಲೂಕ್ ಗಳಿಗೆ ವರ್ಗಾವಣೆ ಮಾಡಬಾರದು ಎಂದೂ ಗ್ರಾಮ ಪಂಚಾಯತಿ ಅಧಿಕಾರಿಗಳು ಮನವಿಯಲ್ಲಿ ಇತ್ತು, ಆದರೆ ಇಲ್ಲಿ ವಿಷಯ…

Read More

ಜೆ.ರಂಗನಾಥ,  ತುಮಕೂರು ಅಕ್ಕಿರಾಂಪುರ ಐತಿಹಾಸಿಕ ತಾಣ, ಜಯಮಂಗಲಿ, ಸುವರ್ಣಮುಖಿ  ಹಾಗೂ ರೌಪ್ಯ ಮುಖಿ ನದಿಗಳ ತ್ರಿವೇಣಿ ಸಂಗಮದ ತಾಣ. ಸುವರ್ಣಮುಖಿ ನದಿಯ  ಬಲ ದಂಡೆಯ ಜೈನ ಕ್ಷೇತ್ರ ಶ್ರೀ  ಅನಂತನಾಥ ತೀರ್ಥಂಕರ ಸನ್ನಿಧಿ. ಶ್ರೀ ಆನಂತ ನಾಥ ತೀರ್ಥಂಕರರು ಜೈನ ಧರ್ಮದ 14ನೇ ತೀರ್ಥಂಕರರಾಗಿದ್ದು, ಯಕ್ಷ ಪಾತಾಳ ,ಯಕ್ಷಿ ಅನಂತಮತಿಯರಾಗಿದ್ದು, ಇವರ ಲಾಂಛನ ಕರಡಿಯಾಗಿದೆ. ಈ ಬಸದಿ ಗರ್ಭಗುಡಿ , ಸುಖನಾಸಿ, ನವರಂಗ, ಮುಖ ಮಂಟಪ, ಪ್ರದಕ್ಷಿಣ ಪಥ ಹೊಂದಿದ್ದು ಉತ್ತರ ಅಭಿಮುಖವಾಗಿದೆ  ಬಸದಿಯೊಳಗೆ ಕಂಬ  ಶಿಲ್ಪಗಳು, ಹೆಚ್ಚಾಗಿ ಕಮಲ ದಳಗಳಿಂದ ಕೂಡಿರುವುದು ವಿಶೇಷವಾಗಿದೆ. ಅಲ್ಲದೆ ನವರಂಗದ ಪ್ರವೇಶ ದ್ವಾರ ಹಾಗೂ   ಸುಖನಾಸಿ ಪ್ರವೇಶ ದ್ವಾರದಲ್ಲಿ ಜಯ –ವಿಜಯರು , ಲಲಾಟದಲ್ಲಿ ತೀರ್ಥಂಕರರು ಹಾಗೂ ಉತ್ತಮ ಬಾಗಿಲು ವಾರ್ಡಗಳನ್ನು ಹೊಂದಿದ್ದು, ಗರ್ಭಗುಡಿ ಪ್ರವೇಶ ದ್ವಾರದಲ್ಲಿ ಬಳ್ಳಿ ವರಸೆ ಚಿತ್ರಗಳನ್ನು ಹೊಂದಿದ್ದು, ಲಲಾಟದಲ್ಲಿ ಗಜಲಕ್ಷ್ಮಿ ಇರುವುದು ವಿಶೇಷ. ಗರ್ಭಗುಡಿಯಲ್ಲಿ ಮೂರು ಅಡಿಗಳ ಎತ್ತರದ ಶ್ರೀ ಅನಂತನಾಥ ತೀರ್ಥಂಕರರ ಖಡ್ಗಾಸನ ಮೂರ್ತಿ ಇದೆ. ಈ…

Read More

ಅರಸೀಕೆರೆ:  ಇಲ್ಲಿನ ಸಹಸ್ರಕೂಟ ಜಿನಾಲಯ ದೇಶದಲ್ಲಿ ವಿಶಿಷ್ಟವಾಗಿದ್ದು , ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದವರು ಶ್ರೀ ಕ್ಷೇತ್ರ ಶ್ರವಣಬೆಳಗೊಳ ಸಂದರ್ಶಿಸಲು ಅರಸೀಕೆರೆ ಹೆಬ್ಬಾಗಿಲಾಗಿದ್ದು ,ಈ ಮೂಲಕ ಭಟ್ಟರಕರು, ಮುನಿಗಳು ,ಯಾತ್ರಾತ್ರಿಗಳು, ಮಾತಾಜಿ ಗಳು, ಕಾಲ್ನಡಿಗೆ ಯಲ್ಲಿ ಸಂಚರಿಸಬೇಕಿದೆ ,ಈ ಜಿನಾಲಯವನ್ನು ಅಭಿವೃದ್ಧಿಪಡಿಸಿ ತ್ಯಾಗಿ ಭವನ, ಆಹಾರ ತಯಾರಿಕ ಭವನಗಳೊಂದಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟರಕ ಪಟ್ಟಾಚಾರ್ಯ ಶ್ರೀಗಳು ತಿಳಿಸಿದರು. ಅವರು ಶ್ರವಣಬೆಳಗೊಳ ದಿಂದ ಬೆಳಗಾವಿಗೆ ತೆರಳುವ ಮಾರ್ಗ ಮಧ್ಯೆ ನಗರದ   ಸಹಸ್ರಕೂಟ ಜಿನಾ ಲಯಕ್ಕೆಭೇಟಿ ನೀಡಿ ,ಬಸದಿ ದರ್ಶನ ಪಡೆದು ಭಕ್ತರನ್ನು ಆಶೀರ್ವದಿಸಿ ಮಾತನಾಡಿದರು. ಈ ಬಸದಿಗೆ ಶ್ರವಣಬೆಳಗೊಳ ಮಠವು ಎಲ್ಲಾ ರೀತಿಯ ಜವಾಬ್ದಾರಿ ತೆಗೆದುಕೊಂಡು ಒಂದು ಶ್ರದ್ಧಾ ಕೇಂದ್ರವನ್ನಾಗಿ ಮಾಡಲಾಗುವುದು ಎಂದ ಭಟ್ಟರಕ್ಕ ಶ್ರೀಗಳು , ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಸಂತಸ ತಂದಿದೆ, ಜಿಲ್ಲೆಯಲ್ಲಿರುವ ವಿವಿಧ ಜಿನಮಂದಿರಗಳೊಂದಿಗೆ ಒಂದು ಸಾವಿರ ವರ್ಷಗಳಿಗೂ ಹೆಚ್ಚು ವರ್ಷಗಳ ಇತಿಹಾಸವಿರುವ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ:  ಸಿರಿ ಸಂಸ್ಥೆ ವತಿಯಿಂದ  2025ನೇ ವರ್ಷದ ನೂತನ ಕ್ಯಾಲೆಂಡರ್ ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡು ಕಚೇರಿಯಲ್ಲಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರು ,ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ,ಪದ್ಮಶ್ರೀ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಡೆ   ಹಾಗೂ ಸಿರಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಹೇಮಾವತಿ ವಿ .ಹೆಗಡೆ ದಂಪತಿಗಳು 2025 ನೇ ಸಾಲಿನ ನೂತನ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್  ಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಸೇವೆಯನ್ನು ಸ್ಮರಿಸಿದರು . ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ಧನ್ ಸ್ವಾಗತಿಸಿ,  ಪ್ರಾಸ್ತಾವಿಕ ನುಡಿಗಳನ್ನಡಿದರು. ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಮಾರುಕಟ್ಟೆ ವಿಭಾಗದ ಅಧಿಕಾರಿಗಳು ,ವಲಯ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

 ಜೆ.ರಂಗನಾಥ,  ತುಮಕೂರು ಸುತ್ತಲೂ ಆಚ್ಚ ಹಸಿರು, ತೆಂಗು –ಕಂಗು ಗಳ ನಡುವೆ ನವಿಲುಗಳ ನರ್ತನ ,ಈ ನಡುವೆ ಕಂಗೊಳಿಸುವ ಐತಿಹಾಸಿಕ ತಾಣವೇ ಕುಚ್ಚಂಗಿ. ಸುಮಾರು 900 ವರ್ಷಗಳ ಇತಿಹಾಸ ವಿರುವ ಈ ಜೈನ  ಬಸದಿ ಕ್ರಿಸ್ತಶಕ. 1180.  ರಲ್ಲಿ ಬಮ್ಮಸೆಟ್ಟಿ ಕುಟುಂಬಸ್ಥರು ನಿರ್ಮಿಸಿದ್ದಾರೆ. ಮೂಲ ಸಂಘದ ದೇಸಿ ಗಣಿಯ ಹನಸೋಗೆ ಶಾಖೆಯ ನಯಸೇನಾ ಸಿದ್ಧಾಂತ ಶ್ರೀಗಳವರ ಶಿಷ್ಯರಾದ ಆಧ್ಯಾತ್ಮ ಬಾಲಚಂದ್ರ ದೇವರ ಪ್ರಭಾವದಿಂದ ನಿರ್ಮಿಸಿದೆ. ಈ ಬಸದಿಗೆ, ಬಮ್ಮ ಶೆಟ್ಟಿ  ವಂಶಸ್ಥರು ಅಡಿಕೆ ವ್ಯಾಪಾರದಲ್ಲಿ ಹೆಚ್ಚು ಪ್ರವೃತ್ತರಾಗಿ ಹೆಸರು ಮಾಡಿದ್ದರಿಂದ ಈ ವಂಶಸ್ಥರಿಗೆ ಈಗಲೂ ” ಗೊಟಡಿಕೆ” ವಂಶಸ್ಥರು ಎಂಬ ಹೆಸರಿದೆ. ಬಮ್ಮಾ ಶೆಟ್ಟಿ ಪುತ್ರ ಕೇಸರಿ ಶೆಟ್ಟಿ ಶ್ರೀ ಪಾರ್ಶ್ವನಾಥ ಬಸದಿಯನ್ನು ನಿರ್ಮಿಸಿ ದತ್ತಿ ನೀಡಿದ್ದರು. ಈ ಗೋಟಡಿಕೆ ವಂಶಸ್ಥರು  ಬೆಳ್ಳಾವಿ ,ಧಾರವಾಡ ,ಹುಬ್ಬಳ್ಳಿ, ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ವಿವಿಧೇಡಿಗಳಲ್ಲಿ ನೆಲೆಸಿದ್ದಾರೆ. ಬೊಮ್ಮಾ ಶೆಟ್ಟಿಯು  ತನ್ನ ಪುತ್ರ ಕೇಸರಿ ಶೆಟ್ಟಿಯೊಡನೆ ಕುಚ್ಚಂಗಿಗೆ ಬರುವ ಮೊದಲು ಹುಬ್ಬಳ್ಳಿಗೆ 30 ಕಿ.ಮೀ.…

Read More

ಬೆಂಗಳೂರು: ನಾನು ವಯಸ್ಸಿನಲ್ಲಿ ಕಿರಿಯನಾದರೂ, ನನ್ನನ್ನು ಸ್ವಾಗತಿಸಲು ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಎದ್ದು ನಿಂತರು. ಅವರ ಸರಳ ನಡೆಯಿಂದ ನಾನು ಆಶ್ಚರ್ಯ ಚಕಿತನಾಗಿದ್ದೆ ಎಂದು 1991 ರ ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ಕೇಡರ್ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್)ಯಾಗಿರುವ ಎಲ್‌ಕೆ ಅತೀಕ್ ಹೇಳಿದ್ದಾರೆ. ಮಾಜಿ ಪಿಎಂ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡ ಎಲ್.ಕೆ.ಅತೀಕ್,  ಪ್ರೋಟೋಕಾಲ್‌ ನ ಭಾಗವಾಗಿ, ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲು ನನ್ನನ್ನು ಅಂದಿನ ಪ್ರಧಾನಿಯವರ ಅಧಿಕೃತ ನಿವಾಸ 7, ರೇಸ್ ಕೋರ್ಸ್ ರಸ್ತೆಗೆ ಕರೆದೊಯ್ಯಲಾಯಿತು. ಅವರು ತಮ್ಮ ಬರವಣಿಗೆಯ ಮೇಜಿನ ಬಳಿ ಕುಳಿತಿದ್ದರು, ನಾನು ಹೋದ ಕೂಡಲೇ ಅವರು ಎದ್ದು ನನ್ನನ್ನು ಸ್ವಾಗತಿಸಿದರು ಮತ್ತು ನನ್ನ ಹಿನ್ನೆಲೆಯ ಬಗ್ಗೆ ಕೇಳಿದರು ಹಾಗೂ ನನ್ನ ಕುಟುಂಬದ ಬಗ್ಗೆ ವಿಚಾರಿಸಿದರು. ಅವರ ಅಸಾಧಾರಣ ಸರಳ ನಡವಳಿಕೆಯ ಸಂಸ್ಕೃತಿಯಿಂದ ನಾನು ಅಶ್ಚರ್ಯಚಕಿತನಾದೆ ಎಂದು ಅವರು ಹೇಳಿದ್ದಾರೆ. ಅಧಿಕಾರಶಾಹಿಗಳಾದ…

Read More

ಬೆಂಗಳೂರು:  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ  ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ಶುಕ್ರವಾರ ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ನವದೆಹಲಿ: ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಶನಿವಾರ ದೆಹಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಗುರುವಾರ ರಾತ್ರಿಯೇ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ.  ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರ್ಕಾರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ರಜೆ ಘೋಷಣೆ : ಬೆಂಗಳೂರು ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಗೌರವಾರ್ಥ  ಇಂದು ಶುಕ್ರವಾರ  ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತು  ಸರ್ಕಾರಿ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ತಮ್ಮ 92ನೇ ವಯಸ್ಸಿನಲ್ಲಿ ಮನಮೋಹನ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಇಂದು ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್‌ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು. ಸರ್ಕಾರಿ ರಜೆ ಘೋಷಣೆ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ…

Read More

ಪಾವಗಡ: ಹರಿಹರಪುರ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗುಡಿಸಲು ಸುಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ಅಧಿಕಾರಿಗಳ ಗಮನ ಸೆಳೆದು  ಸಂತ್ರಸ್ತರಿಗೆ ಅಧಿಕಾರಿಗಳಿಂದ ತಕ್ಷಣದಲ್ಲಿ ಸ್ಪಂದನೆ ಸಿಗುವ ಕಾರ್ಯ ಮಾಡಿದೆ. ಹರಿಹರಪುರ ಗ್ರಾಮದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಬಡ ಕುಟುಂಬಗಳು ಬೀದಿಪಾಲಾಗಿರುವ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ ಪೌಂಡೇಶನ್ (ರಿ), ತುಮಕೂರು ಸಂಘಟನೆಗಳು ತಹಶೀಲ್ದಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಸಂತ್ರಸ್ತರ ಸಮಸ್ಯೆಯ ತೀವ್ರತೆಯನ್ನ ಮನವರಿಕೆ ಮಾಡಿದ್ದಾರೆ. ಈ ವೇಳೆ ತಕ್ಷಣದಲ್ಲೇ ಸ್ಪಂದಿಸಿದ ತಹಶೀಲ್ದಾರ್ ಅವರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ನೈಜ್ಯ ಹೋರಾಟಗಾರ ವೇದಿಕೆ ಮತ್ತು ಕಾಳಜಿ ಪೌಂಡೇಶನ್‌ ತಂಡದ ಸಮಯ ಪ್ರಜ್ಞೆಯಿಂದ ಸಂತ್ರಸ್ತರಿಗೆ ನೆರವಿನ ಭರವಸೆ ದೊರೆಯಿತು. ಜನರು ಹಾಗೂ…

Read More