Author: admin

ಕನ್ನಡ ಫಿಲಂ ಚೇಂಬರ್ ಟೈಗರ್ ನಾಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಚಲನ ಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡು  ಸಾಮಾಜಿಕ ಸೇವೆ ಹಾಗೂ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ   ಬುಧವಾರ  ಬೆಂಗಳೂರಿನ   ರವಿಂದ್ರ ಕಲಾಕ್ಷೇತ್ರ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಟೈಗರ್ ನಾಗ್ ಇವರು ಸಾಮಾಜಿಕ ಹೋರಾಟಗಾರ ಪ್ರಗತಿಪರ ಚಿಂತಕರ ನಿರ್ದೇಶಕ ನಿರ್ಮಾಪಕ ಅನೇಕ ಪ್ರಗತಿ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ, ಗ್ರಾಮ ಪಂಚಾಯಿತಿ ಪಿಡಿಓ ಇಂದ ಐಎಎಸ್ ಅಧಿಕಾರಿಗಳ ವರೆಗೆ ನೂರಾರು ಹೋರಾಟ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಕಳಿಸಲು ಕಾರಣರಾಗಿ ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನರಾಗಿದ್ದಾರೆ. ಸಾಮಾಜಿಕ ಅನಿಷ್ಟ ಅವ್ಯವಸ್ಥೆಗಳ ವಿರುದ್ಧ ಧ್ವನಿಯೆತ್ತಿ ಅವುಗಳನ್ನು ಪ್ರಶ್ನಿಸುವ ಎದೆಗಾರಿಕೆ ತೋರುತ್ತಾ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದರು ಸಂವಿಧಾನ ಜಾಗೃತಿ ಮೂಡಿಸುವ ಆದಿವಾಸಿಗಳ ಕಥೆ ಇರುವ ಚಿತ್ರಕ್ಕೆ ಇವರೇ ನಿರ್ದೇಶನ ನಿರ್ಮಾಣ ಮಾಡಿದ್ದ ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದು ಡಾ.ಬಿ.ಆರ್. ಅಂಬೇಡ್ಕರ್ ಬುದ್ಧ…

Read More

ಬೆಳಗಾವಿ:  “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ,  ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ…

Read More

ಸೋಷಿಯಲ್ ಮೀಡಿಯಾದಲ್ಲಿ ರೇಶ್ಮಾ ಆಂಟಿ ಅಂತಲೇ ಫೇಮಸ್ ಆಗಿರುವ ರೇಶ್ಮಾ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದೆ. ವಿಡಿಯೋ ಆರಂಭಕ್ಕೂ ಮೊದಲ ಹಾಯ್ ಫ್ರೆಂಡ್ಸ್ ಅಂತ ಹೇಳುವ ರೇಶ್ಮಾ ಅವರ ಡೈಲಾಗ್ ಕೂಡ ಫೇಮಸ್ ಆಗಿದೆ. ಗಿಚ್ಚಿ ಗಿಲಿಗಿಲಿ ರೀ–ಲೋಡೆಡ್ಡ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ನಂತರ ಭಾರೀ ಅಭಿಮಾನಿಗಳನ್ನ ರೀಚ್ ಆಗುತ್ತಿರುವ ರೇಶ್ಮಾ ಅವರು ವಿಧಾನ ಸೌಧದ ಬಳಿ ಕಿರುಚಾಡಿ ವಿಡಿಯೋ ಮಾಡಿದ್ದಾರೆ. ರಾತ್ರಿ ವೇಳೆ ವಿಧಾನಸೌಧ ಮುಂದೆ ಹೋದ ರೇಶ್ಮಾ ಅವರು ಜೋರಾಗಿ ಕಿರುಚಾಡಿ ವಿಡಿಯೋ ಮಾಡಿದ್ದಾರೆ. ಹಾಯ್ ಫ್ರೆಂಡ್ಸ್ ನಾವು ಎಲ್ಲಿ ಬಂದಿದ್ದೀವಿ ಗೊತ್ತಾ? ಅಂತ ಪ್ರಶ್ನಿಸಿ ವಿಧಾನ ಸೌಧ ತೋರಿಸಿದ್ದಾರೆ. ಬಳಿಕ ‘ಅಯ್ಯೋ ಗೇಟ್ ತೆಗೆಯಪ್ಪೋ…ಯಾರು ಇಲ್ವಾ ಯಾರೂ ಇಲ್ಲ. ನಾನು ಒಳಗಡೆ ಹೋಗಬೇಕು ಎಲ್ಲರನ್ನು ನೋಡಬೇಕು. ಚಿಕ್ಕ ಹುಡುಗಿಯಿಂದ ನನಗೆ ಈ ಆಸೆ ಇದೆ. 1ನೇ ಕ್ಲಾಸ್ನಿಂದ 10ನೇ ಕ್ಲಾಸ್ವರೆಗೂ ಬುಕ್ನಲ್ಲಿ ಹಾಕಿರುತ್ತಾರೆ ಅದೇ ವಿಧಾನಸೌಧ ಇದು. ಸಿದ್ದರಾಮಯ್ಯ ಸರ್ ನನ್ನ ಒಳಗೆ ಕರ್ಕೊಳ್ಳಿ…ಅವ್ರು ಒಳಗಡೆ ಕೂತಿರಬಹುದು.…

Read More

ಮೈಸೂರು: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಜನವರಿ ಎರಡನೇ ವಾರದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದು ಬಂದಿದೆ. ಚಾಮರಾಜನಗರ ಜಿಲ್ಲೆಯ ಆದಿವಾಸಿಗಳು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು 2002 ರಲ್ಲಿ ಬಿಳಿಗಿರಿರಂಗ ಬೆಟ್ಟದಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, ಸಂಪುಟ ಸಭೆ ನಡೆಸಿದ್ದರು. ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಶಿಲ್ಪಾ ನಾಗ್ ಅವರು ಹನೂರಿನಲ್ಲಿ ಸಭೆ ನಡೆಸಿ, ಸ್ಥಳೀಯ ಅಧಿಕಾರಿಗಳ ಪ್ರತಿಕ್ರಿಯೆ, ಪ್ರದೇಶದ ಸಮಸ್ಯೆಗಳನ್ನು ಪಟ್ಟಿ ಮಾಡಲಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ಮೈಸೂರಿನ ಕೆ.ಆರ್.ಎಸ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಕೂಡ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಕೆಆರ್ಸ್ ಗೆ ತೆರಳುವ ಮಾರ್ಗದ ಪ್ರಿನ್ಸೆಸ್ ರಸ್ತೆಯನ್ನು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಮರುನಾಮಕರಣ ಮಾಡದೇ ಪರಂಪರೆಯನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ. ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಸಹ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ (ಡಿ.26) ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ…

Read More

ಹುಬ್ಬಳ್ಳಿ,: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಭಕ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗುರುವಾರ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು. ಇತರ 7 ಮಂದಿ ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಒಬ್ಬ ಬಾಲಕ ಚೇತರಿಸಿಕೊಂಡಿದ್ದಾನೆ. ಕುಟುಂಬದವರ ಜೊತೆಗೆ ಚರ್ಚಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹರಿಹರಪುರ: ಗುಡಿಸಲೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಎರಡು ಕುಟುಂಬ ಬೀದಿಗೆ ಬಿದ್ದ ಘಟನೆ ಪಾವಗಡ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಸಂಭವಿಸಿದೆ. ಘಟನೆಯಿಂದ ಎರಡು ಕುಟುಂಬಗಳು ತಮ್ಮ ವಾಸ ಸ್ಥಳವನ್ನು ಕಳೆದುಕೊಂಡಿವೆ. ದೊಡ್ಡಣ್ಣ (S/O ಸಣ್ಣ ಹನುಮಂತಪ್ಪ) ಎಂಬವರ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಕ್ರಿಸ್ಮಸ್ ರಜಾ ದಿನವಾಗಿರುವ ಹಿನ್ನೆಲೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸ್ಪಂದಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಇದೀಗ ಇಡೀ ಗುಡಿಸಲು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ. ಗುಡಿಸಲಿನೊಂದಿಗೆ ತಮ್ಮ ಅಗತ್ಯ ಸಾಮಗ್ರಿಗಳು ಕೂಡ ಸುಟ್ಟು ಭಸ್ಮವಾಗಿದೆ. ಇದೀಗ ನೊಂದ ಕುಟುಂಬಗಳು ಆಶ್ರಯಕ್ಕಾಗಿ ಪರದಾಡುತ್ತಿದೆ. ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ. ನೊಂದ ಕುಟುಂಬಕ್ಕೆ ಸರಿಯಾದ ಆಹಾರ, ತಾತ್ಕಾಲಿಕ…

Read More

ಬೆಂಗಳೂರು: ಬೆಂಗಳೂರು ನಗರದಲ್ಲಿ ನವೆಂಬರ್ ತಿಂಗಳವರೆಗೆ ಪ್ರತಿದಿನವೆಂಬಂತೆ ಸರಾಸರಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಈ ಅಪಘಾತಗಳಲ್ಲಿ ಸುಮಾರು ಶೇಕಡಾ 70ರಷ್ಟು ಅಪಘಾತಗಳು ರಾತ್ರಿ ಹೊತ್ತಿನಲ್ಲಿ ಸಂಭವಿಸಿದೆ ಎಂದು ತಜ್ಞರು ಹೇಳಿದ್ದಾರೆ. ರಾತ್ರಿ ವೇಳೆ ಅಪಘಾತ ಹೆಚ್ಚಾಗಲು ಕಾರಣ ಅತಿಯಾದ ವೇಗ, ರಸ್ತೆ ಸ್ಪಷ್ಟವಾಗಿ ಗೋಚರವಾಗದಿರುವುದು, ಚಾಲನಾ ಕೌಶಲ್ಯದ ಕೊರತೆ ಮತ್ತು ಅಸಮರ್ಪಕ ಮೂಲಸೌಕರ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನವೆಂಬರ್ ಅಂತ್ಯದವರೆಗೆ 780 ಮಾರಣಾಂತಿಕ ಅಪಘಾತಗಳು ವರದಿಯಾಗಿದ್ದು, 802 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 3,571 ಮಾರಣಾಂತಿಕವಲ್ಲದ ಅಪಘಾತಗಳಲ್ಲಿ 3,685 ಜನರು ಗಾಯಗೊಂಡಿದ್ದಾರೆ. ಈ ವರ್ಷ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸಿದೆ. 224 ಅಪಘಾತಗಳು ದಾಖಲಾಗಿವೆ. ಇದರ ಪರಿಣಾಮವಾಗಿ 53 ಸಾವುಗಳು ಮತ್ತು 230 ಗಾಯಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ. ನಂತರ ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು 222 ಪ್ರಕರಣ…

Read More

ಕೋಯಿಕ್ಕೋಡ್: ಮಲಯಾಳಂನ ಸಾಹಿತಿ, ಗೀತರಚನೆಕಾರ ಎಂಟಿ ವಾಸುದೇವನ್ ನಾಯರ್ ನಿಧನರಾಗಿದ್ದು, ಅವರಿಗೆ 91 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ  ಇಂದು ಬೆಳಗ್ಗೆ  ಕೋಯಿಕ್ಕೋಡ್ ನಲ್ಲಿ ನಿಧನರಾದರು. ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆದುಹಾಕಿದ್ದರಿಂದ ಮಂಗಳವಾರ ಅವರ ಸ್ಥಿತಿ ಸುಧಾರಣೆಯ ಲಕ್ಷಣಗಳನ್ನು ತೋರಿಸಿತ್ತು. ಆದರೆ ಬುಧವಾರ ರಾತ್ರಿ ವೇಳೆಗೆ ಅದು ಅಷ್ಟೇ ವೇಗವಾಗಿ ಹದಗೆಟ್ಟಿತು. ಎಂಟಿ ಎಂದೇ ಖ್ಯಾತರಾಗಿದ್ದ ಎಂಟಿ ವಾಸುದೇವನ್ ನಾಯರ್ ಕಾದಂಬರಿಗಳು, ಸಣ್ಣ ಕಥೆಗಳು, ಚಿತ್ರಕಥೆಗಳು, ಮಕ್ಕಳ ಸಾಹಿತ್ಯ, ಪ್ರವಾಸ ಬರವಣಿಗೆ ಮತ್ತು ಪ್ರಬಂಧಗಳನ್ನು ವ್ಯಾಪಿಸಿರುವ ಕೊಡುಗೆಗಳೊಂದಿಗೆ ಮಲಯಾಳಂ ಸಾಹಿತ್ಯ ಮತ್ತು ಸಿನಿಮಾದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರು ಎರಡು ಸಾಕ್ಷ್ಯಚಿತ್ರಗಳೊಂದಿಗೆ ಮಲಯಾಳಂ ಚಿತ್ರರಂಗದಲ್ಲಿ ಶ್ರೇಷ್ಠವಾದ ನಿರ್ಮಾಲ್ಯಂ (1973) ಸೇರಿದಂತೆ ಆರು ಚಲನಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ. ಅವರು ಚಲನಚಿತ್ರೋದ್ಯಮಕ್ಕೆ ಪ್ರವೇಶಿಸಿದ ಸ್ವಂತ ಕಥೆಯಾದ Snehathinte Mukhangal ಮುರಪ್ಪೆನ್ನು (1965) ಚಿತ್ರವಾಗಿ ರೂಪುಗೊಂಡಿತ್ತು. ಈ ಬಳಿಕ ಅವರು 44 ಇತರ ಚಿತ್ರಕಥೆಗಳನ್ನು…

Read More