Author: admin

ಹುಬ್ಬಳ್ಳಿ: ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಅಯ್ಯಪ್ಪ ಸ್ವಾಮಿ ಭಕ್ತರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ9 ಮಂದಿಯ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು.  ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಗರ ಪೊಲೀಸರು ವುಮೆನ್ಸ್ ಹೈಲ್ಯಾಂಡ್, ಪಿಕಪ್—ಡ್ರಾಪ್ ಗೆ  ಕ್ಯಾಬ್ ಸೌಲಭ್ಯ, ಚೆನ್ನಮ್ಮ ಪಡೆ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್, ಎಂ.ಜಿ.ರಸ್ತೆಯಲ್ಲಿ ಹೆಚ್ಚಾಗಿ ಹೊಸ ವರ್ಷಾಚರಣೆಗೆ ಜನಸಂದಣಿ ಸೇರುವುದರಿಂದ 15ಕ್ಕೂ ಹೆಚ್ಚು ವುಮೆನ್ಸ್ ಹೈಲ್ಯಾಂಡ್ ಸ್ಥಾಪಿಸಲಾಗಿದೆ.ಅದೇ ರೀತಿ ಇಂದಿರಾನಗರ, ಕೋರಮಂಗಲದಲ್ಲೂ ವುಮೆನ್ಸ್ ಹೈಲ್ಯಾಂಡ್ ತೆರೆಯಲಾಗಿದೆ. ನೈಟ್ ಪಾರ್ಟಿ ನಡೆಯುವ ಪಬ್, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಹೋಟೆಲ್ಗಳಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಹಿಳೆಯರಿಗಾಗಿ ಕ್ಯಾಬ್ ಸೌಲಭ್ಯಗಳನ್ನು ಆಯೋಜಕರೇ ಒದಗಿಸಲಿದ್ದಾರೆ. ಪಾರ್ಟಿಗಳಲ್ಲಿ ಪಾಲ್ಗೊಳ್ಳುವ ಮಹಿಳೆಯರು ಮದ್ಯ ಸೇವಿಸಿ ಅಸ್ವಸ್ಥರಾದರೆ ಅವರನ್ನು ಮನೆಗೆ ಕಳುಹಿಸಲು ಕ್ಯಾಬ್ ಸೌಲಭ್ಯವನ್ನು ಮಾಲೀಕರು ನೀಡಲಿದ್ದಾರೆ. ಅಲ್ಲದೆ ಅಂತಹ ಪರಿಸ್ಥಿತಿಯಲ್ಲಿ ತಮ್ಮ ವಾಹನಗಳನ್ನು ಚಲಾಯಿಸಲು ಸಾಧ್ಯವಾಗದಿದ್ದರೆ ಅವರುಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ಆಯೋಜಕರೇ ವಹಿಸಿಕೊಂಡು ಕ್ಯಾಬ್ ವ್ಯವಸ್ಥೆ ಮಾಡುವಂತೆ ನಗರ ಪೊಲೀಸ್ ಪೊಲೀಸರು ಸೂಚಿಸಿದ್ದಾರೆ. ಅಂದು ಕೇಂದ್ರ ವಿಭಾಗದ ಎಂ.ಜಿ.ರಸ್ತೆ,…

Read More

ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇದು ಡಿ.ಕೆ.ಸಹೋದರರ ಷಡ್ಯಂತ್ರ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಹೇಳಿದೆ. ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್‌ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್ ಸರ್ಕಾರ, ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ.…

Read More

ಬೆಂಗಳೂರು: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ವೇ ಪ್ರೋಟೀನ್‌ ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬದಲಾದ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳ‌ ಜನರು ಹೆಚ್ಚೆಚ್ಚು ಸಿದ್ಧಪಡಿಸಲಾದ ಆಹಾರ ಉತ್ಪನ್ನಗಳ ಮೊರೆ ಹೋಗುತ್ತಿರುವುದನ್ನು ಮನಗಂಡು, ಆರೋಗ್ಯಕರವಾದ ಹಾಗೂ ರುಚಿಕರವಾದ ಇಡ್ಲಿ ಮತ್ತು ದೋಸೆಹಿಟ್ಟನ್ನು ಗ್ರಾಹಕರಿಗೆ ಒದಗಿಸಲು ನಿರ್ಧರಿಸಿ, ಈ ನೂತನ ಉತ್ಪನ್ನವನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ನಂದಿನಿ ಬ್ರ್ಯಾಂಡ್‌ನ ಇಡ್ಲಿ / ದೋಸೆ ಹಿಟ್ಟನ್ನು ಎರಡು ವಿಧದ ಪ್ಯಾಕ್‌ ಗಳಲ್ಲಿ ಅಂದರೆ 450 ಗ್ರಾಂ.ಗೆ ₹40 ಹಾಗೂ 900 ಗ್ರಾಂ.ಗೆ ₹80 ರಂತೆ ಮಾರಾಟ ದರ ನಿಗದಿಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ  ಬಿಜೆಪಿ ನಾಯಕ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ  ಅವರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ನಿಯೋಗ ಪೊಲೀಸ್  ಕಮಿಷನರ್ ಗೆ  ಮನವಿ ಸಲ್ಲಿಸಿತು. ಈ ವೇಳೆ ಪೋಲಿಸ್ ಕಮಿಷನರ್ ಯಡಾ ಮಾರ್ಟಿನ್ ಅವರ ಜೊತೆ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಶೀಘ್ರದಲ್ಲೇ ಬಂಧಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು ಈ ವೇಳೆ ನಗರ ಪೊಲೀಸ್ ಕಮಿಷನರ್ ಯಡಾ  ಮಾರ್ಟಿನ್ ಅವರು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.  ಖಂಡಿತವಾಗಿಯೂ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತರಲು  ಪೊಲೀಸ್‌ ಕಮಿಷನರ್ ಅವರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಡೋಣಿ, ಧನಶ್ರೀ ದೇಸಾಯಿ, ಮಹಾನಗರ…

Read More

ತುಮಕೂರು:  ರೈತರು ಸಾವಯವ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಮೂಲಕ ಸುಸ್ಥಿರ ಜೀವನವನ್ನು ನಡೆಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಎನ್. ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ರಾಷ್ಟ್ರೀಯ ರೈತರ ದಿನಾಚರಣೆಯ ಅಂಗವಾಗಿ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ “ಸಮಗ್ರ ಕೃಷಿ ಪದ್ಧತಿ” ಕುರಿತು ರೈತರು ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಜನ್ಮದಿನದ ಸ್ಮರಣಾರ್ಥವಾಗಿ ಪ್ರತೀ ವರ್ಷ ಡಿಸೆಂಬರ್ 23ರಂದು ಭಾರತದಾದ್ಯಂತ ರಾಷ್ಟ್ರೀಯ ರೈತರ ದಿನಾಚರಣೆಯನ್ನು ಆಚರಿಸಲಾಗುವುದು. ಚೌಧರಿ ಚರಣ್ ಸಿಂಗ್ ಅವರಿಗಿದ್ದ ರೈತಪರ ಕಾಳಜಿ ಹಾಗೂ ರೈತರ ಶ್ರೇಯೋಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದ ಅವರು ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡುವುದು ಎಲ್ಲಾ ರೈತರ ಮೊದಲ ಆದ್ಯತೆಯಾಗಿರಬೇಕು ಎಂಬ ಸಂದೇಶವನ್ನು ನೀಡಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ ಪ್ರಗತಿಪರ…

Read More

ತುಮಕೂರು:  ಜಿಲ್ಲೆಯ 94 ಅಂಗನವಾಡಿ ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್‌ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್‌ಲೈನ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 3,249 ಹಾಗೂ ಸಹಾಯಕಿಯರ ಹುದ್ದೆಗೆ 2003 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1,537 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 963 ಅಂಗನವಾಡಿ ಸಹಾಯಕಿಯರ ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣಗೊಂಡ ಅರ್ಜಿಗಳನ್ನು ಡಿಸೆಂಬರ್ 26 ರಿಂದ 2025ರ ಜನವರಿ 5ರೊಳಗೆ ವೆಬ್‌ ಸೈಟ್ https://karnemakaone.kar.nic.in/abcd/ ನಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಅಪ್‌ ಲೋಡ್ ಮಾಡಬಹುದಾಗಿದೆ. ಅಭ್ಯರ್ಥಿಗಳು ಆನ್‌ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 4 ಹಂತಗಳನ್ನು ಅನುಸರಿಸಬೇಕು. ಮೊದಲ ಹಂತದಲ್ಲಿ ಹುದ್ದೆಯನ್ನು ಆಯ್ಕೆ ಮಾಡಿ ನಿಗಧಿತ ಅರ್ಜಿ ನಮೂನೆ ತುಂಬಿ ಸಲ್ಲಿಸಬೇಕು. ಬಳಿಕ ಅರ್ಜಿಯ ಐಡಿಯನ್ನು ಟಿಪ್ಪಣಿ ಮಾಡಬೇಕು. 2ನೇ ಹಂತದಲ್ಲಿ…

Read More

ತುಮಕೂರು:  ಜಿಲ್ಲಾ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 255 ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಜಿಲ್ಲಾ ಗೃಹರಕ್ಷಕದಳದ ಕಚೇರಿಯಿಂದ ಡಿಸೆಂಬರ್ 27ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು 2025ರ ಜನವರಿ 2ರೊಳಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ. ಗೃಹರಕ್ಷಕ ಹುದ್ದೆಯು ಖಾಯಂ ನೌಕರಿಯಾಗಿರುವುದಿಲ್ಲ. ಯಾವುದೇ ರೀತಿಯ ಮಾಸಿಕ ಸಂಬಳ ಹಾಗೂ ವಿಶೇಷ ಭತ್ಯೆಗಳನ್ನು ನೀಡಲು ಅವಕಾಶವಿರುವುದಿಲ್ಲ. ತುರ್ತು ಸಂದರ್ಭದಲ್ಲಿ ಕರ್ತವ್ಯ ಮತ್ತು ಚುನಾವಣೆ ಕರ್ತವ್ಯ ನಿರ್ವಹಿಸಿದ ದಿನದಂದು ಗೌರವ ಧನ ಸೌಲಭ್ಯವನ್ನು ನೀಡಲಾಗುವುದು. ಗೌರವಧನವನ್ನು ಬ್ಯಾಂಕ್ ಉಳಿತಾಯ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಪ್ರತಿ ಮಾಹೆಯಲ್ಲಿ 4 ಕವಾಯತುಗಳು, ವಾರದಲ್ಲಿ ಒಂದು ದಿನದಂತೆ ನಡೆಸಲಾಗುವುದು. ಅಭ್ಯರ್ಥಿಗಳು 19 ರಿಂದ 40 ವರ್ಷದೊಳಗಿನವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ 10ನೇ ತರಗತಿ ಅಂಕಪಟ್ಟಿ, ಜನ್ಮ ದಿನಾಂಕ ದೃಢೀಕರಣ (ಟಿ.ಸಿ.), ಆಧಾರ್ ಕಾರ್ಡ್ ಮತ್ತು ಪಾನ್…

Read More

ತುಮಕೂರು:  ಬೆಸ್ಕಾಂ ಗ್ರಾಮೀಣ ಉಪವಿಭಾಗ–2ರ ಹೆಬ್ಬೂರು ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 26ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೆಬ್ಬೂರು, ಸಿರಿವರ, ಕಣಕುಪ್ಪೆ ಹಾಗೂ ಬಳ್ಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 30 ದಿನಗಳ ಉಚಿತ ಮೊಬೈಲ್ ರಿಪೇರಿ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 45 ವಯೋಮಿತಿಯೊಳಗಿರುವ ಹಾಗೂ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಜನವರಿ 5ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 0816-2243386, ಮೊ.ಸಂ:  9738351048, 9663680001ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More