Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚಿನ್ನೇನಹಳ್ಳಿ, ತಾಳಗುಂದ, ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಯ ಜಿ.ಹೆಚ್. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು:ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತರಾಜಕಾರಣದ ಬಿಕ್ಕಟ್ಟನ್ನುಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದುದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರುರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನುತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವಏಕತ್ವವಾಗಿ ಸರ್ವಾಧಿಕಾರ ತಲೆದೂರಿದೆ. ಬಹುತ್ವದ ನಾಯಕತ್ವ ಇಂದಿನ ಅಗತ್ಯವಾಗಿದೆ. ನಾಯಕನಲ್ಲಿ ಬಹುತ್ವಜೀವಿಸಬೇಕು…
ತುಮಕೂರು: ಗಣಿತಶಾಸ್ತ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಲು ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ವಿವಿಯ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ.ಹೇಳಿದರು. ವಿವಿಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿ, ಗಣಿತಶಾಸ್ತ್ರದ ಮಹತ್ವ, ಇತಿಹಾಸ, ಅವಕಾಶಗಳ ಕುರಿತು ತಿಳಿಸಿದರು. ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಸಹ ಪ್ರಾಧ್ಯಾಪಕಿ ಡಾ.ಸಿ.ಶೋಭಾ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕೆ.ಬಿ.ಲಿಂಗೇಗೌಡ ಕರೆ ನೀಡಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್ ನ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಹೇಳಿದರು. ಎಸ್ಎಸ್ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ.…
ತುಮಕೂರು: ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿದ್ದ ಡ್ರೋನ್ ಪ್ರತಾಪ್ ಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಮಂಗಳವಾರ ಜೈಲಿನಿಂದ ರಿಲೀಸ್ ಮಾಡಲಾಯಿತು. ಕಳೆದ 9 ದಿನಗಳ ಸೆರೆವಾಸದಿಂದ ಡ್ರೋನ್ ಪ್ರತಾಪ್ ಮುಕ್ತನಾಗಿದ್ದಾನೆ. ಮಧುಗಿರಿ ಉಪಕಾರಾಗೃಹದಿಂದ ಹೊರಬಂದ ಡ್ರೋನ್ ಪ್ರತಾಪ್ ನೀರಿನಲ್ಲಿ ಸೋಡಿಯಂ ಸ್ಪೋಟಿಸಿ ಜೈಲು ಸೇರಿದ್ದನು. ಮಧುಗಿರಿಯ ಜನಕಲೋಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ಸೋಡಿಯಂ ಸ್ಪೋಟಿಸಿದ್ದನು. ಮೊದಲು 3 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಡ್ರೋನ್ ಪ್ರತಾಪ್, ಬಳಿಕ 9 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದನು. ಜೈಲಿನಿಂದ ಹೊರಬಂದು ಬೆಂಗಳೂರಿನತ್ತ ತೆರಳಿದ್ದಾನೆ. ಜೈಲಿಂದ ಹೊರಬಂದು ನ್ಯಾಯ ಬೇಕು ಎಂದು ಮಾಧ್ಯಮದವರ ಮುಂದೆ ಡ್ರೋನ್ ಪ್ರತಾಪ್ ಅಳಲು ತೋಡಿಕೊಂಡನು. ಮಧುಗಿರಿ ಉಪಕಾರಾಗೃಹದಿಂದ ಡ್ರೋನ್ ಪ್ರತಾಪ್ ಬಿಡುಗಡೆ ನಂತರ, ಒಂದೇ ಒಂದು ಪ್ರಶ್ನೇ ಕೇಳ್ತೀನಿ. ದೇಶಾದ್ಯಂತ ನೂರಾರು ಎಕ್ಸ್ ಪೆರಿಮೆಂಟ್ ಪೋಸ್ಟ್ ಮಾಡಿದ್ದಾರೆ. ಅವ್ರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಿಲ್ಲಾ, ನನ್ನೊಬ್ಬನನ್ನೇ ಏಕೆ ಅರೆಸ್ಟ್ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದು, ಹೊರದೇಶದಲ್ಲಿರಬಹುದು, ನಮ್ಮ ದೇಶದಲ್ಲಿರಬಹುದು.…
ತುಮಕೂರು: ತುಮಕೂರಿನ ವ್ಯಕ್ತಿಯೊಬ್ಬರು ವೀಡಿಯೋ ಕಾನ್ಫರೆನ್ಸ್ ಮೂಲಕವೇ ವಂಚನೆಗೆ ಒಳಗಾಗಿ ಬರೋಬ್ಬರಿ 19 ಲಕ್ಷ ರೂ. ಗಳನ್ನು ವ್ಯವಸ್ಥಿತವಾಗಿ ಕಳೆದುಕೊಂಡಿದ್ದು ವಿಚಿತ್ರವಾಗಿ ಸೈಬರ್ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ತುಮಕೂರು ನಗರದ ಉಪ್ಪಾರಹಳ್ಳಿಯ ಸರ್ಕಾರಿ ನೌಕರ ಬಿ.ಎಸ್.ನಾಗಭೂಷಣ್ ವಂಚನೆಗೆ ಒಳಗಾದವರಾಗಿದ್ದಾರೆ. ಹಣ ಕಳೆದುಕೊಂಡಿರುವ ಅವರು, ತುಮಕೂರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ . ಮುಂಬೈ ಕ್ರೈಂ ಬ್ರಾಂಚ್ ನ ಸಿಬ್ಬಂದಿ ಎಂದು ವಂಚನೆಗೆ ಒಳಗಾಗಿರುವ ನಾಗಭೂಷಣ್ ಗೆ ದೂರವಾಣಿ ಕರೆ ಮಾಡಿದ್ದಾನೆ. ನಿಮ್ಮ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ. ಇದನ್ನು ನಂಬಿದ ನಾಗಭೂಷಣ್, ಅರೋಪಿಗಳ ಬಳಿ ಮತ್ತೊಂದು ಸಿಮ್ ಕಾರ್ಡ್ ಇದ್ದು, ಆ ಸಿಮ್ ಕಾರ್ಡ್ ಅನ್ನು ಜನರಿಗೆ ಕಿರುಕುಳ ನೀಡಲು ಉಪಯೋಗಿಸಲಾಗುತ್ತಿದೆ. ನಿಮ್ಮ ಸಿಮ್ ಕಾರ್ಡ್ ಬಳಸಿ ಎರಡೂ ಪ್ರಕರಣಗಳಲ್ಲಿ ನಿಮ್ಮ ಆಸ್ತಿಯನ್ನು ವಶಪಡಿಸಿಕೊಳ್ಳಬಹುದು ಮತ್ತು ನಿಮ್ಮನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ನಾಗಭೂಷಣ್ ಗೆ ಬೆದರಿಕೆಯೊಡ್ಡಿದ್ದಾನೆ. ಇದ್ರಿಂದ ಭಯಗೊಂಡ ನಾಗಭೂಷಣ್…
ನಾನು ನಿಮ್ಮನ್ನು ಎಂದಿಗೂ ಕೈ ಬಿಡುವುದಿಲ್ಲ; ಎಂದಿಗೂ ತೊರೆಯುವುದಿಲ್ಲ; ನಾನು ಯುಗದ ಸಮಾಪ್ತಿ ಆಗುವವರೆಗೂ, ಎಲ್ಲಾ ಕ್ಷಣಗಳಲ್ಲಿಯೂ ನಾನು ನಿಮ್ಮ ಸಂಗಡ ಇರುತ್ತೇನೆ. ಇದು ನನ್ನ ವಾಗ್ದಾನ. — ಏಸುಕ್ರಿಸ್ತ ಭೂಮಿ ಮೇಲೆ ಯಾವಾಗ ಧರ್ಮ ಕ್ಷೀಣವಾಗುತ್ತದೆ; ಪಾಪ ಹೆಚ್ಚಳವಾಗುತ್ತದೆ; ಆಗೆಲ್ಲಾ, ನೀತಿವಂತರನ್ನು ರಕ್ಷಿಸಲು; ದುಷ್ಟರನ್ನು ನಾಶ ಮಾಡಲು; ಧರ್ಮವನ್ನು ಮರು ಸ್ಥಾಪಿಸಲು; ನಾನು ಜನ್ಮ ತಾಳುತ್ತೇನೆ. – ಪರಮಾತ್ಮ ಶ್ರೀ ಕೃಷ್ಣ 100 ಕೋಟಿಗೂ ಹೆಚ್ಚು ಕ್ರಿಶ್ಚಿಯನ್ನರು ವಿಶ್ವದಲ್ಲಿ ಇಂದು ಏಸುಕ್ರಿಸ್ತನ ಹುಟ್ಟು ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅವರೆಲ್ಲರಿಗೂ ನನ್ನ ಶುಭಾಶಯಗಳು.ಸರ್ವಧರ್ಮಿಯರಿಗಾಗಿ ಯೇಸು ಕ್ರಿಸ್ತನ ಜನನ; ಜೀವನ; ಮರಣ ಮತ್ತು ಪುನರುತ್ಥಾನ ಚರಿತ್ರೆ — ಒಮ್ಮೆ ಓದಿ… ಭೂಮಿ ಮೇಲೆ ಮಾನವ, ಪ್ರಾಣಿ-ಪಕ್ಷಿಗಳ ಲಕ್ಷಾಂತರ ಜೀವರಾಶಿಗಳ ಸಂಕುಲಗಳು ಹುಟ್ಟುವ ಮುನ್ನವೇ – ಭೂಮಿ, ಆಕಾಶ, ಸೂರ್ಯ, ಚಂದ್ರ, ಗಾಳಿ, ಬೆಳಕು, ನೀರು (ಪ್ರಕೃತಿ) ಇವುಗಳು ಸೃಷ್ಟಿಯಾಗಿದ್ದವು. ಪ್ರಕೃತಿ ತರವಾಯವಷ್ಟೇ, ಲಕ್ಷಾಂತರ ಜೀವರಾಶಿ ಸಂಕುಲಗಳು ಜನ್ಮ ತಾಳಿದ್ದು. ಆ…
ಬೆಳಗಾವಿ: ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಸ್ವಾತಂತ್ರ್ಯ ಪೂರ್ವದ ಭಾರತದ ಕಾಂಗ್ರೆಸ್ಗಿಂತ ಇಂದಿನ ಕಾಂಗ್ರೆಸ್ ಬಹಳ ಭಿನ್ನವಾಗಿದೆ. ಮಹಾತ್ಮ ಗಾಂಧಿ ಅವರನ್ನು ಗೌರವಿಸಲು ಉದ್ದೇಶಿಸಲಾಗಿದ್ದ ಈ ಕಾರ್ಯಕ್ರಮವು ಪಕ್ಷದ ಸಾಧನೆಗಳನ್ನು ಪ್ರದರ್ಶಿಸುವ ‘ನಕಲಿ ಗಾಂಧಿ’ಗಳ ಸಭೆಯಾಗಿ ಮಾರ್ಪಾಡಾಗಿದೆ ಎಂದು ಟೀಕಿಸಿದ್ದಾರೆ. ಬಿಜೆಪಿ ಶಾಸಕ ಅಭಯ ಪಾಟೀಲ ಮಾತನಾಡಿ, ಮಹಾತ್ಮಾ ಗಾಂಧಿಯವರ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ 250 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ. 500 ಕೋಟಿಗೆ ಮನವಿ ಸೇರಿದಂತೆ ಶತಮಾನೋತ್ಸವದ ಅಧಿವೇಶನದ ಅದ್ಧೂರಿ ಆಚರಣೆಯನ್ನು ಈ ಹಿಂದೆ ಪ್ರಸ್ತಾಪಿಸಿದ್ದೆ. ಆ ಸಮಯದಲ್ಲಿ ಕಾಂಗ್ರೆಸ್ ಯಾವುದೇ ಆಸಕ್ತಿ ತೋರಿಸಲಿಲ್ಲ, ಈಗ ಸ್ಥಳೀಯ ಶಾಸಕರು ಮತ್ತು ಸಂಸದರನ್ನು ಹೊರಗಿಟ್ಟು ಇದನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು : ನಗರದಲ್ಲಿ ಚಿರತೆಗಳು ಓಡಾಡುತ್ತಿವೆ ಎಂಬ ವಿಡಿಯೋ ಸಮೇತ ಮೇಸೆಜ್ ವಾಟ್ಸಾಪ್ ಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಜನರು ಉದ್ಯಾನವನಗಳಲ್ಲಿ ಓಡಾಡುವುದು ವಿರಳವಾಗುತ್ತಿದೆ. ಇತ್ತೀಚಿಗೆ ಸಿದ್ದಗಂಗಾ ಮಠದ ಆವರಣದಲ್ಲಿ ಮತ್ತು ಸಪ್ತಗಿರಿ ಬಡವಾಣೆಯಲ್ಲಿ ಚಿರತೆಗಳು ಓಡಾಡಿರುವ ಸಿಸಿಟಿವಿ ದೃಶ್ಯ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ಅಕ್ಕ–ಪಕ್ಕದ ಏರಿಯಾದವರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ವಾಟ್ಸಾಪ್ ಮೆಸೆಜ್ ಹರಿದಾಡೋದಕ್ಕೆ ಶುರುವಾಗಿ 20 ದಿನಗಳೇ ಆಗಿದ್ದು, ಗೋಕುಲ ಬಡವಾಣೆ, ಸಿದ್ದರಾಮೇಶವರ ಬಡವಾಣೆ, ಮಂಜುನಾಥನಗರದ ಜನ ಬೆಳಗಿನ ಜಾವ ಹಾಗೇ ಸಂಜೆ ವಾಕ್ ಬರುವುದನ್ನೆ ನಿಲ್ಲಿಸಿಬಿಟ್ಟಿದ್ದಾರೆ. ಇದಲ್ಲದೇ ಮಕ್ಕಳನ್ನ ಸಂಜೆ 6 ಗಂಟೆ ನಂತರ ಹೊರಗೆ ಕಳಿಸದಂತೆ ನಿಗಾವಹಿಸಿದ್ದಾರೆ. ಒಂದು ರೀತಿ ಈ ಏರಿಯಾಗಳಲ್ಲಿ ಬೆಳಗ್ಗೆ ಸಂಜೆ 114 ಸೆಕ್ಷನ್ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಚಿರತೆಗಳು ಒಡಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಷ್ಟು ವೈರಲ್ ಆಗುತ್ತಿದ್ದರು. ಅಧಿಕಾರಿಗಳು ನಮಗೂ ಇದಕ್ಕೂ ಸಂಭಂಧವೇ ಇಲ್ಲ ಎನ್ನುವ ರೀತಿ ಇದ್ದಾರೆ. ಬಡಾವಣೆಯ ಖಾಲಿ ಸೈಟ್…
ಪಾವಗಡ : ತಾಲೂಕಿನ ಗುಜ್ಜನಡು ಮುರಾರ್ಜಿ ಶಾಲೆಯ ಕಾಂಪೌಂಡ್ ಹಾಗೂ ದವಡಬೆಟ್ಟ ಗ್ರಾಮದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಿ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಗುಜ್ಜನಡು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಆಗ್ರಹಿಸಿದ್ದಾರೆ ಸೋಮವಾರ ಈ ವಿಚಾರವಾಗಿ ಪಾದಯಾತ್ರೆಯನ್ನು ಕೈಗೊಂಡ ಜೆಡಿಎಸ್ ನಾಯಕರುಗಳು ಮಧ್ಯಾಹ್ನ 4ಯ ಸಂದರ್ಭದಲ್ಲಿ ತಾಲೂಕಿನ ಗುಂಡಾರಲಹಳ್ಳಿ ಗ್ರಾಮದ ಬಳಿ ಆಗಮಿಸಿ ನಂತರ ಐದು ಗಂಟೆಗೆ ಪಾವಗಡ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ಕೆಲ ಕಾಲ ಪ್ರತಿಭಟನೆ ನಡೆಸಿ ,ತಹಶೀಲ್ದಾರ್ ಡಿ.ಎನ್.ವರದರಾಜು ಅವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ ಆರು ವರ್ಷಗಳಿಂದ ಅಭಿವೃದ್ಧಿ ಶೂನ್ಯವಾಗಿದೆ, ಸಣ್ಣ ಸಣ್ಣ ಕಾಮಗಾರಿಗಳನ್ನು ನಡೆಸಲು ವರ್ಷಾನುಗಟ್ಟಲೆ ಸಮಯಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್.ಸಿ.ಅಂಜನಪ್ಪ ತಾಲೂಕು ಅಧ್ಯಕ್ಷ ಎನ್.ಎ.ಈರಣ್ಣ, ರಾಜ್ಯ ಉಪಾಧ್ಯಕ್ಷ ಎನ್ತಿಮಾರೆಡ್ಡಿ, ರಾಜ್ಯ ಜೆಡಿಎಸ್ ಘಟಕದ ಮಹಿಳಾ ಪ್ರಧಾನ ಕಾರ್ಯದರ್ಶಿ ಸಾಯಿಸುಮನ ಹನುಮಂತರಾಯಪ್ಪ, ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರುಗಳು ಹಾಜರಿದ್ದರು.…