Author: admin

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಅಧಿವೇಶನಕ್ಕೀಗ ಶತಮಾನೋತ್ಸವ ಸಂಭ್ರಮ. ಈ ಸುಸಂದರ್ಭವನ್ನು ಐತಿಹಾಸಿಕವನ್ನಾಗಿಸಲು ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಇನ್ನೇನು ಅವಿಸ್ಮರಣೀಯಕ್ಕೆ ಕ್ಷಣಗಣನೆ ಶುರುವಾಗಿದೆ. ಆ ಹಿನ್ನೆಲೆಯಲ್ಲಿ ಕುಂದಾನಗರಿ ಬೆಳಗಾವಿಯ ಪ್ರಮುಖ ಬೀದಿಗಳು ವಿದ್ಯುತ್‌ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ. ಮಹನೀಯರ ವಿದ್ಯುತ್ ದೀಪಗಳ ಪ್ರತಿಕೃತಿಗಳು ಆಕರ್ಷಣೀಯವಾಗಿವೆ. ಮೈಸೂರು ದಸರಾ ದೃಶ್ಯ ವೈಭವ ನೆನಪಿಸುತ್ತಿದೆ.  ನಗರದ ಪ್ರಮುಖ ಸರ್ಕಲ್​ಗಳಲ್ಲಿ ಕಣ್ಮನ ಸೆಳೆಯುತ್ತಿರುವ ಲೈಟಿಂಗ್: ಕೇಂದ್ರ ಬಸ್ ನಿಲ್ದಾಣದಿಂದ‌, ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತ, ಅಂಬೇಡ್ಕರ್ ರಸ್ತೆ, ಶ್ರೀಕೃಷ್ಣದೇವರಾಯ ವೃತ್ತ, ಕೆಎಲ್ ಇ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿವರೆಗೂ ಹಾಗೂ ಚನ್ನಮ್ಮ ವೃತ್ತದಿಂದ ಲಿಂಗರಾಜ ಕಾಲೇಜು ರಸ್ತೆ, ಸಂಭಾಜಿ ವೃತ್ತ, ಬಸವೇಶ್ವರ ವೃತ್ತ, ಕಾಂಗ್ರೆಸ್ ರಸ್ತೆ, ಉದ್ಯಮಬಾಗ್ ರಸ್ತೆಯಿಂದ ವಿಟಿಯುವರೆಗೆ, ಹಳೆ ಪಿ.ಬಿ.ರಸ್ತೆಯಿಂದ ಯಡಿಯೂರಪ್ಪ ಮಾರ್ಗ ಸೇರಿದಂತೆ ಪ್ರಮುಖ ರಸ್ತೆಗಳು, ಒಳ ರಸ್ತೆಗಳು ಸಂಜೆ ಆಗುತ್ತಿದ್ದಂತೆ ನೋಡುಗರನ್ನು ಕಣ್ಮನ ಸೆಳೆಯುತ್ತಿವೆ. ವಿದ್ಯುತ್ ದೀಪಗಳ ಅಲಂಕಾರದಲ್ಲಿ ಮಹಾಪುರುಷರು, ದೇವಾನುದೇವತೆಗಳು, ಐತಿಹಾಸಿಕ…

Read More

ಹುಬ್ಬಳ್ಳಿ: ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ ಪೊಲೀಸರು ತನಿಖೆ ಮಾಡಬೇಕು ಎಂದರು. ಹಳೆ ಹುಬ್ಬಳ್ಳಿ ಠಾಣೆ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೂಚಿಸಿದರು. ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದರು. ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು. ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರದ ಪೊಲೀಸ್ ಅಧಿಕಾರಿ…

Read More

ತುಮಕೂರು: ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು. “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸ್ಮರಣಾರ್ಥ ಕೇಂದ್ರ ಸರ್ಕಾರವು ಪ್ರತೀ ವರ್ಷ ಡಿಸೆಂಬರ್ ಮಾಹೆಯಲ್ಲಿ “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ದೇಶದ ನಾಗರಿಕರಿಗೆ ಸರ್ಕಾರದ ಯೋಜನೆಗಳು, ಸವಲತ್ತುಗಳು ಸೇರಿದಂತೆ ವಿವಿಧ ಸೇವೆಗಳ ಮಾಹಿತಿಯನ್ನು ನೀಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಡಳಿತ ವ್ಯವಸ್ಥೆಯಲ್ಲಿ ಕಳೆದ 10 ವರ್ಷಗಳಲ್ಲಿ ಹಲವಾರು ಬದಲಾವಣೆಗಳು ಬಂದಿವೆ. ಸಾರ್ವಜನಿಕರಿಗೆ ಸಕಾಲದೊಳಗೆ ಸೇವೆಗಳನ್ನು ಒದಗಿಸುವ ಮೂಲಕ ಜನಸ್ನೇಹಿ ಆಡಳಿತವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ನಿವೃತ್ತ ಅಪರ ಜಿಲ್ಲಾಧಿಕಾರಿ ದೊಡ್ಡಪ್ಪ ಮಾತನಾಡಿ, ಪಾರದರ್ಶಕತೆಯಿಂದ ಆಡಳಿತ ನಡೆಸುವುದು, ಸಮರ್ಪಕ ರೀತಿಯಲ್ಲಿ ಕಡತಗಳ ನಿರ್ವಹಣೆ ಮಾಡುವುದು,…

Read More

ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ತಾಂಡಾಗಳ ನಿರುದ್ಯೋಗಿ ಬಂಜಾರ ಸಮುದಾಯದ ಯುವಕ/ಯುವತಿಯರಿಗಾಗಿ ಬಂಜಾರ ಸಂಸ್ಕೃತಿ, ಸಂವಿಧಾನ ಹಾಗೂ ವೃತ್ತಿ ತರಬೇತಿ ಕುರಿತು ಅರಿವು ಮೂಡಿಸಲು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ತರಬೇತಿ ಪಡೆಯಲಿಚ್ಛಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿ/ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯು 2 ದಿನಗಳ ಕಾಲ ನಡೆಯಲಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಮದ ಜಾಲತಾಣ https://banjarathanda.karnataka.gov ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ತುಮಕೂರು ವಲಯ, ಸರಸ್ವತಿ ಪುರಂ, 2ನೇ ಹಂತ, ತುಮಕೂರು-572102 ಅಥವಾ ದೂ.ವಾ.ಸಂ.0816-2956063 ಅಥವಾ ಇ-ಮೇಲ್: tumkurktdcl@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ…

Read More

ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ನೀಡುವ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕಾಗಿ ಆಯ್ಕೆ ಸಮಿತಿ ಮೂಲಕ ಆಯ್ಕೆಯಾದ ಫಲಾಪೇಕ್ಷಿಗಳು ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ. ಸೌಲಭ್ಯಕ್ಕೆ ಸಂಬಂಧಿಸಿದಂತೆ ಫಲಾಪೇಕ್ಷಿಗಳು ಮಧ್ಯವರ್ತಿಗಳಿಂದ ಮೋಸ ಹೋದಲ್ಲಿ ನಿಗಮ ಜವಾಬ್ದಾರಿಯಾಗುವುದಿಲ್ಲ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಖುದ್ದಾಗಿ ಕಚೇರಿಯ ಅಧಿಕಾರಿ/ಸಿಬ್ಬಂದಿಗಳನ್ನು ಭೇಟಿ ಮಾಡಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿದ್ದ 73 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3ರ ಅನುಪಾತದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈಗಾಗಲೇ ತುಮಕೂರು ಜಿಲ್ಲಾ ವೆಬ್ ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಬಹು ಉಪಯೋಗಿ ಸಭಾಂಗಣದಲ್ಲಿ 2025 ಜನವರಿ 6ರಂದು ಬೆಳಿಗ್ಗೆ 10ಗಂಟೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗುವುದು. ತಾತ್ಕಾಲಿಕ ಪಟ್ಟಿಯನ್ವಯ ಆಯ್ಕೆಯಾಗಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಎಸ್.ಎಸ್.ಎಲ್.ಸಿ/ಪಿಯುಸಿ ಅಂಕಪಟ್ಟಿ, ಸಿಂಧುತ್ವ ಪ್ರಮಾಣ ಪತ್ರ, ಪೊಲೀಸ್ ವರದಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆ ನಡೆಯುವ ಸ್ಥಳದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ದೂ.ವಾ.ಸಂ: 0816–2278718ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಲೆಮಾರಿ ಮತ್ತು ಸುಡುಗಾಡು ಸಿದ್ದ ಜನಾಂಗಕ್ಕೆ ಸೇರಿದ 30ಕ್ಕೂ ಹೆಚ್ಚು ಕುಟುಂಬಗಳು ಸುಮಾರು 50 ವರ್ಷಗಳಿಂದ ವಾಸವಿದ್ದಾರೆ ಇದೀಗ ಇವರ ಬಹುಕಾಲದ ಬೇಡಿಕೆಯನ್ನ ಈಡೇರಿಸುವುದಾಗಿ ಶಾಸಕ ಸುರೇಶ್ ಬಾಬು ಭರವಸೆ ನೀಡಿದ್ದಾರೆ ಚಿಕ್ಕನಾಯಕನಹಳ್ಳಿಯ ದಬ್ಬೇಘಟ್ಟದ ಗುಂಡದೋಪಿನಲ್ಲಿ ವಾಸವಿದ್ದ ಈ ಅಲೆಮಾರಿ ಬುಡಕಟ್ಟು ಜನಾಂಗದ ಜನರಿಗೆ ಶಾಸಕ ಸುರೇಶ್ ಬಾಬು ನಿವೇಶನ ದೊರಕಿಸಿಕೊಡುವ ಭರವಸೆಯನ್ನ ಈಡೇರಿಸಿದ್ದಾರೆ. ಅಲೆಮಾರಿಗಳಿಗೆ ಒಂದೇ ಜಾಗದಲ್ಲಿ ಸ್ಥಿರವಾಗಿ ಉಳಿಯುವ ಕಾಯಕಲ್ಪ ನಮ್ಮಿಂದ ಆಗಿದೆ ಎಂದು ಇದೇ ವೇಳೆ ಶಾಸಕ ಸುರೇಶ್ ಬಾಬು ಹೇಳಿದ್ದಾರೆ. ನಿಮ್ಮ ಋಣದಲ್ಲಿ ಇರುತ್ತೇವೆ: ತಮ್ಮ ಬೇಡಿಕೆಯನ್ನು ಈಡೇರಿಸಿದ ಶಾಸಕ ಶಾಸಕ ಸುರೇಶ್ ಬಾಬು ಅವರ ಕಾರ್ಯಕ್ಕೆ ಅಲೆಮಾರಿ ಬುಡಕಟ್ಟು ಜನಾಂಗ ಪ್ರತಿಕ್ರಿಯಿಸಿ, ಇದು ಅಲೆಮಾರಿಗಳ 30 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ,   ನಾವು ಸತ್ತರೂ, ನಮ್ಮ ಮಕ್ಕಳಿಗೆ ಹೇಳಿ ಸಾಯ್ತೀವಿ…! ನೀವು ನೀಡಿದ ಭರವಸೆಯನ್ನ ಈಡೇರಿಸಿದ್ದೀರಿ ಎಂದು.  ನಾವು ಸಾಯುವವರೆಗೂ ನಿಮ್ಮ ಋಣದಲ್ಲಿ ಇರುತ್ತೇವೆ ಎಂದು ಹೇಳಿದರು.…

Read More

ತುಮಕೂರು: ಚಿಕ್ಕವಯಸ್ಸಿನಲ್ಲಿಯೇ ಗಣಿತಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿ ವಿಶ್ವದಾದ್ಯಂತಗಣಿತ ಪ್ರಿಯರ ಹೃದಯಗೆದ್ದ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಬದುಕು ಎಲ್ಲರಿಗೂ ಮಾದರಿ ಎಂದು ಕುವೆಂಪು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ ಬಿ.ಜೆ.ಗಿರೀಶ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನದ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತ ಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿದರು. ಶ್ರೀನಿವಾಸ ರಾಮಾನುಜನ್‌ ಅವರಜೀವನ, ಕೃತಿಗಳು ಮತ್ತುಗಣಿತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದರು. ಬದುಕಿದರೆ ಸಾವಿರಾರು ವರ್ಷಗಳು ಬದುಕುವಂತಹ ಸಾಧನೆ ಮಾಡಬೇಕೆಂದುಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ಚಂದ್ರಾಲಿ ಬೈಷ್ಯ ವಹಿಸಿದ್ದರು. ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ., ಸಹಾಯಕ ಪ್ರಾಧ್ಯಾಪಕರಾದ ಡಾ.ಬೋರೆಗೌಡ ಎಚ್.ಎಸ್., ಡಾ.ನರಹರಿ ಎನ್. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು:  ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 24ರ ಬೆಳಿಗ್ಗೆ 11:30 ಗಂಟೆಗೆ ಶಿರಾ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ–2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿ.ಟಿ. ವಿಜಯಲಕ್ಷ್ಮೀ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಶಿರಾ ತಾಲೂಕಿನ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯ ನಿವೇದಿತಾ ರವೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ. ಚಂದ್ರಶೇಖರಪ್ಪ ಭಾಗವಹಿಸಲಿದ್ದಾರೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ತಿಳಿಸಿದ್ದಾರೆ. ನಮ್ಮತುಮಕೂರಿನ…

Read More