Author: admin

ತುಮಕೂರು: : ಬೆಸ್ಕಾಂ ಗುಬ್ಬಿ ಉಪಸ್ಥಾವರದ ಶಕ್ತಿ ಪರಿವರ್ತಕವು ವಿಫಲವಾಗಿರುವುದರಿಂದ ಡಿಸೆಂಬರ್ 24 ರಿಂದ 27ರವರೆಗೆ ಗೋಪಾಲಪುರ, ಜಿ. ಹೊಸಹಳ್ಳಿ, ತಿಪ್ಪೂರು, ಸಿಂಗೋನಹಳ್ಳಿ, ತೊರೆಹಳ್ಳಿ, ಕೊಡಿಗೆಹಳ್ಳಿ, ಕೊಪ್ಪ, ಹೇರೂರು, ಎಂ.ಹೆಚ್ ಪಟ್ಟಣ, ಉದ್ದೇಹೊಸಕೆರೆ, ಹೊನ್ನವಳ್ಳಿ, ಬಿದರೆ, ಅಮ್ಮನಘಟ್ಟ, ಗುಬ್ಬಿ ಪಟ್ಟಣ, ಕೆ.ಎಂ.ಎಫ್, ತೊಂಗನಹಳ್ಳಿ, ದೊಡ್ಡಕಟ್ಟಿಗೆನಹಳ್ಳಿ, ಬೆವಿಕಂ ಉಪವಿಭಾಗ, ಹೊದಲೂರು ಕೆರೆ, ಮಾದಾಪುರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸೀಮಿತ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯೊಂದಿಗೆ ವಿದ್ಯುತ್ ನೀಡಲಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ, ಬೆಳಗುಲಿ ಮತ್ತು ದೇವರಹಳ್ಳಿ ಗ್ರಾಮದ ಸರಹದ್ದಿನಲ್ಲಿ ಹಾದು ಹೋಗಿರುವ ವಿದ್ಯುತ್ ಪ್ರಸರಣಾ ಮಾರ್ಗವನ್ನು ಡಿಸೆಂಬರ್ 24 ಅಥವಾ ತದನಂತರ ವಿದ್ಯುದ್ದೀಕರಣಗೊಳಿಸಲಾಗುವುದು ಎಂದು ವಿದ್ಯುತ್ ಪ್ರಸರಣಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಬೆಳಗುಲಿ ಗ್ರಾಮದಲ್ಲಿ ಉದ್ದೇಶಿತ 110/11 ಕೆವಿ ವಿದ್ಯುತ್ ಉಪಕೇಂದ್ರ ಹಾಗೂ ಹಾಲಿ ಇರುವ 110 ಕೆವಿ (ಕೆಬಿ ಕ್ರಾಸ್-ಹುಳಿಯಾರು) ಏಕಮುಖ ಪ್ರಸರಣ ಮಾರ್ಗದಿಂದ 1.350 ಕಿ.ಮೀ. ಉದ್ದದ 110 ಕೆವಿ ಲಿಲೋ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ವಿದ್ಯುದ್ದೀಕರಣಗೊಳಿಸಲಾಗುವುದು. ಸಾರ್ವಜನಿಕರು ಸದರಿ ಗ್ರಾಮಗಳ ವಿದ್ಯುತ್ ಪ್ರಸರಣಾ ಮಾರ್ಗದಲ್ಲಿರುವ ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲಿ ಮಾಡಬಾರದು. ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ…

Read More

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಖಾಸಗಿ ವ್ಯಕ್ತಿಯೊಬ್ಬರ ತೋಟದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದ್ದ ಡ್ರೋನ್ ಪ್ರತಾಪ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರತಾಪ್‌ ಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಬಿಗ್ ಬಾಸ್ ರಿಯಾಲಿಟಿ ಶೋನ  ಸ್ಪರ್ದಿಯಾಗಿದ್ದ ಪ್ರತಾಪ್‌, ತುಮಕೂರಿನ ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟದ ಪ್ರಯೋಗ ಮಾಡಿದ್ದನು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಸ್ಪೋಟದ ಪ್ರಯೋಗ ಮಾಡಿದ್ದಲ್ಲದೆ, ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದನು. ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಅರೆಸ್ಟ್ ಮಾಡಿದ್ದರು . ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಡ್ರೋನ್ ಪ್ರತಾಪ್‌ ಗೆ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ…

Read More

ಬೆಂಗಳೂರು: ಡಿಜಿಟಲ್​ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 11.8 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯೊಬ್ಬರು ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರೆಂದು ಹೇಳಿಕೊಂಡು ಸೈಬರ್​ ವಂಚಕರು ಸುಭಾಷ್ ಅವರಿಗೆ ಕರೆ ಮಾಡಿದ್ದು, ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್​ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ. ಈಗ ಕೇಸ್​ ಸುಪ್ರೀಂಕೋರ್ಟ್​​ನಲ್ಲಿ ಇದೆ  ಎಂದು ಬೆದರಿಸಿದ್ದರು. ಬಳಿಕ ಸುಭಾಷ್ ಅವರನ್ನು ಒಂದು ತಿಂಗಳುಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಹೀಗಾಗಿ ಅವರು ಯಲಹಂಕದ ಲಾಡ್ಜ್ ವೊಂದರಲ್ಲಿ ಇದ್ದರು.  ಸುಭಾಷ್ ಅವರು ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್​ ಮಾಡಿದ ಸೈಬರ್ ವಂಚಕರು ಟೆಕ್ಕಿಯಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ.  ಬಳಿಕ ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.…

Read More

ಬೀದರ್:  ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿಯ ಅಂಗ ಸಂಸ್ಥೆಯಾದ ರಾಷ್ಟ್ರೀಯ ಜಾನುವಾರು ಅನುವಂಶಿಕ ಸಂಪನ್ಮೂಲಗಳ ಬ್ಯುರೋ (ನ್ಯಾಷನಲ್ ಬ್ಯುರೋ ಆಫ್ ಎನಿಮಲ್ ಜೆನೆಟಿಕ್ ರಿಸೊಸ್ರ್ಸ್), ಕರ್ನಾಲ್, ಹರಿಯಾಣದಲ್ಲಿ 2024ನೇ ಸಾಲಿನ ರಾಷ್ಟ್ರಮಟ್ಟದ ಜಾನುವಾರು ತಿಳಿ ಸಂರಕ್ಷಣೆ ಪ್ರಶಸ್ತಿಯನ್ನು ಬೀದರನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರವು ದೇವಣಿ ತಳಿ ಸಂರಕ್ಷಣೆಗಾಗಿ ಪಡೆದುಕೊಂಡಿದೆ ಎಂದು ಬೀದರನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ.ವೀರಣ್ಣ ತಿಳಿಸಿದರು. 23ನೇ ಡಿಸೆಂಬರ್.2024 ರಂದು ಕರ್ನಾಲ್, ಹರಿಯಾಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ (ರಾಷ್ಟ್ರೀಯ ಕೃಷಿಕರ ದಿನ) ಈ ಪ್ರಶಸ್ತಿಯನ್ನು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಸಂಶೋಧನಾ ನಿರ್ದೇಶಕರಾದ ಡಾ. ಬಿ.ವಿ.ಶಿವಪ್ರಕಾಶ ಹಾಗೂ ಕೇಂದ್ರದ ಮುಖ್ಯಸ್ಥರಾದ ಡಾ. ಪ್ರಕಾಶಕುಮಾರ ರಾಠೋಡ ಅವರು ಸ್ವೀಕರಿಸಿದ್ದಾರೆಂದರು. ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ (ದೇವಣಿ), ಬೀದರವು ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಸಂಶೋಧನೆ ಮತ್ತು ವಿಸ್ತರಣಾ…

Read More

ಬೆಳಗಾವಿ:  1999 ರಲ್ಲಿ  ಶ್ರೀ ರಮೇಶ್ ಕತ್ತಿ ಅವರ ಮಾರ್ಗದರ್ಶನದಲ್ಲಿ ಜೆ ಎಸ್ ಸಪ್ತಸಾಗರ  ಅವರ ಮನೆಯಲ್ಲಿ 300 ಸದಸ್ಯರಿಂದ ಪ್ರಾರಂಭವಾದ ಹುಲ್ಲೋಳಿಯ ಹರಿಹಂತ ಸೌಹಾದ೯ ಸಹಕಾರಿ ನಿ.  ಸಂಸ್ಥೆಯು 17675 ಸದಸ್ಯರ ಸಹಕಾರ ಹಾಗೂಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಇಂದು 25ನೇ ವರ್ಷದ ಬೆಳ್ಳಿ ಮಹೋತ್ಸವಕ್ಕೆ ಕಾಲಿಡುತ್ತಿದ್ದು ಈ ಬೆಳ್ಳಿಮೋತ್ಸವದ ಸಂಭ್ರಮಾಚರಣೆ  ಇದೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಭರಮಪ್ಪಾ ಬಾ ಚೌಗಲಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಸ್ಥೆಯ ಇನ್ನೊಬ್ಬ ಸದಸ್ಯ  ಪಿ.ಆರ್. ಚೌಗಲಾ ಅವರು ಮಾತನಾಡಿ,  ಸಂಸ್ಥೆಯು 25 ವಷ೯ಗಳ ಹಿಂದೆ  2,000 ಜನಸಂಖ್ಯೆ ಇರುವ ಕುಗ್ರಾಮದಲ್ಲಿ ಜನರ ಆರ್ಥಿಕ ಮಟ್ಟ ಸುಧಾರಣೆಗಾಗಿ ಪ್ರಾರಂಭವಾಯಿತು.  ಈ ಸಂಸ್ಥೆಯು ಇಂದು 25ನೇ ವರ್ಷಕ್ಕೆ ಕಾಲಿಡುತ್ತಿದ್ದು ಆದುದರಿಂದ ಬೆಳ್ಳಿ ಮಹೋತ್ಸವವನ್ನು  ಆಚರಿಸುತ್ತಿದೆ.  ಪ್ರಮುಖವಾಗಿ ಈ ಬೆಳ್ಳಿ ಮಹೋತ್ಸವದ ಸವಿನೆನಪಿಗಾಗಿ ಬ್ಯಾಂಕಿನ ಸದಸ್ಯರಿಗೆ 10 ಗ್ರಾಂ ಬೆಳ್ಳಿ ನಾಣ್ಯ ಹಾಗೂ ಕ್ಯಾಶ್ ಬ್ಯಾಗ್ ವಿತರಣೆ ಮಾಡಲಾಗುವುದು . ಒಂದು ಸಾವಿರ ಶೇರುಬಂಡವಾಳ ಹೊಂದಿದ ಸದಸ್ಯರಿಗೆ…

Read More

ಉದ್ಯೋಗ ಖಾತ್ರಿ ಯೋಜನೆ ಕೃಷಿ ಕಾರ್ಮಿಕರು ಹಾಗೂ ರೈತರಿಗೆ ಅನುಕೂಲವಾಗಲಿ ಎಂದೂ ಸರ್ಕಾರ ಜಾರಿಗೆತಂದಿತ್ತು, ಆದರೆ ಕಾರ್ಮಿಕರಿಗೆ ಉದ್ಯೋಗ ನೀಡದೆ ಯಂತ್ರಗಳಿಂದ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಐ.ಡಿ. ಹಳ್ಳಿ ಪಂಚಾಯತಿ ಕೆರೆ ಹೂಳು ಎತ್ತಲು ಕಾರ್ಮಿಕರಿಗೆ ಆದ್ಯತೆ ನೀಡಿದರಿಂದ ಇಲ್ಲಿ ಹೆಚ್ಚು ಮಹಿಳಾ ಕಾರ್ಮಿಕರು ಕಾಳಜಿಯಿಂದ ಮಾಡುತ್ತಿರುವುದು ಕಂಡು ಬಂದಿದೆ, ಎಲ್ಲಾ ಕಡೆ ಕೆರೆ — ಕಟ್ಟೆ ಹೂಳು ಎತ್ತುವ ಕೆಲಸ ನೀಡಿದ್ದರು ಆದರೆ ಕಾರ್ಮಿಕರಿಗೆ ಕೆಲಸ ನೀಡದೆ . ಯಂತ್ರದಿಂದ (ಜೆ.ಸಿ.ಬಿ.) ಮಾಡಿಸುವ ಹಣ ರುಚಿ ನೋಡಿರುವ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ನರೇಗ ಯೋಜನೆ ಹಳ್ಳ ಹಿಡಿಸುತ್ತಿರುವುದು ಯಾರು ಎಂಬುದು ಗಮನಿಸಿದವರಿಗೆ ತಿಳಿಯುತ್ತದೆ. ಇನ್ನು ನರೇಗ. ಯೋಜನೆ ರೈತರಿಗೆ ಆದ್ಯತೆ ನೀಡುವುದರಿಂದ ಕೃಷಿಯಲ್ಲಿ ನಷ್ಟ ಹೊಂದಿದವರು, ಈ ಯೋಜನೆಯಲ್ಲಿ ಸುಧಾರಣೆ ಆಗಲಿ ಎಂದರೆ ಇದರಲೂ ರೈತರಿಗೆ ಆದ್ಯತೆ ನೀಡದೆ, ನರೇಗ ಯೋಜನೆಯಲ್ಲಿ ಹಣ ರುಚಿ ನೋಡಿರುವ ಗುತ್ತಿಗೆದಾರರು  ಕೆಲಸದ ಒತ್ತಡದಿಂದ ಇರುವ ಜಮೀನ್ದಾರರ  ಜಮೀನಿನಲ್ಲಿ,  ನರೇಗ ಯೋಜನೆ ಬಗ್ಗೆ ಅರಿವು ಇಲ್ಲದ ರೈತರ…

Read More

ಹೊಸಪೇಟೆ: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವಾಗಿದ್ದು, ಈ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ 73 ಪ್ರಯಾಣಿಕರನ್ನು ಪೊಲೀಸರು ತಪಾಸಣೆ ನಡೆಸಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಮಹಿಳೆಯೊಬ್ಬರು 90 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿರುವುದಾಗಿ ದೂರು ನೀಡಿದ ನಂತರ ಪೊಲೀಸರು ಬಸ್ಸಿನಲ್ಲಿದ್ದ 73 ಪ್ರಯಾಣಿಕರನ್ನು ತಪಾಸಣೆ ನಡೆಸಿದ್ದಾರೆ. ಮಹಿಳೆ ಹೊಸಪೇಟೆಯಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ಸಿನಲ್ಲಿರುವವರೇ ಯಾರೋ ತನ್ನ ಚಿನ್ನ ಎಗರಿಸಿದ್ದಾರೆ ಎಂದು ಮಹಿಳೆ ಹೇಳಿದ್ದು, ಬಸ್ ನ್ನು ಪೊಲೀಸ್ ಠಾಣೆಗೆ ಚಲಾಯಿಸಿಕೊಂಡು ಹೋಗಲು ಹೇಳಿದ್ದಾರೆ. ಅದರಂತೆ ಬಸ್ ಚಾಲಕ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಬಸ್ ತೆಗೆದುಕೊಂಡು ಹೋಗಿದ್ದು, ಪೊಲೀಸರು ಎಲ್ಲಾ ಪ್ರಯಾಣಿಕರ ಸಾಮಾನುಗಳನ್ನು ಹುಡುಕಿದರೂ ಕದ್ದ ಚಿನ್ನ ಪತ್ತೆಯಾಗಿಲ್ಲ. ಇದರಿಂದಾಗಿ ತೀವ್ರ ತೊಂದರೆಯಾಗಿದೆ ಎಂದು ಪ್ರಯಾಣಿಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಯಾಣಿಕರನ್ನು ಸಮಾಧಾನಪಡಿಸಿ ಅದೇ ಬಸ್ನಲ್ಲಿ ಕೊಪ್ಪಳಕ್ಕೆ ವಾಪಸ್ ಕಳುಹಿಸಿದ್ದಾರೆ. ಪಟ್ಟಣ ಪೊಲೀಸ್…

Read More

ತಿಪಟೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾ ಕಚೇರಿಯಲ್ಲಿ ತಿಪಟೂರು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರಾದ ಪವನ್ ರವರ ಸಮ್ಮುಖದಲ್ಲಿ ತಾಲ್ಲೂಕಿನ ಮಾದರಿ ಕೃಷಿ ರೈತರಿಗೆ ಅನುದಾನ ಮಂಜುರಾತಿ ಪತ್ರದ ವಿತರಣಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೃಷಿ ಸಹಾಯಕ ನಿರ್ದೇಶಕರಾದ ಪವನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ವಿಶೇಷವಾಗಿ ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ರಾಜ್ಯದ ಎಲ್ಲ ರೈತಾಪಿ ವರ್ಗದವರನ್ನು ಮಾದರಿ ಕೃಷಿ ರೈತರನ್ನಾಗಿ ಬದಲಿಸಲು ಅವಿರತ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು. ಇದರೊಟ್ಟಿಗೆ ಕೃಷಿ ಇಲಾಖೆ ವತಿಯಿಂದ ತಾಲ್ಲೂಕಿನ ರೈತರು ಕೃಷಿ ಯಂತ್ರೋಪಕರಣದ ಖರೀದಿಗೆ ಹಾಗೂ ಸಿರಿಧಾನ್ಯ ಬೆಳೆಗಳಿಗೆ ಸಿಗುವ ಅನುದಾನಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಮಾತನಾಡಿ, ಸಂಸ್ಥೆಯು ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಕೃಷಿ ವಿಭಾಗದಲ್ಲಿ ರೈತರನ್ನು ಮಾದರಿ ಕೃಷಿ ರೈತರನ್ನಾಗಿ ಬದಲಿಸಲು ರಾಷ್ಟ್ರೀಕೃತ ಬ್ಯಾಂಕುಗಳ ಮುಖಾಂತರ…

Read More

ತುಮಕೂರು : ಒಂದು ಸತ್ಯ ರೀ, ಸಿ.ಟಿ. ರವಿ ಏನ್ ಮಾಡಿದ್ದಾರೆ. ಏನ್ ಮಾಡಿಲ್ಲ ಅನ್ನೊದನ್ನ ತೀರ್ಮಾನ ಅನ್ನೋರು ವಿಧಾನ ಪರಿಷತ್ತಿನ ಸಭಾಪತಿಗಳು. ವಿಧಾನ ಪರಿಷತ್ ನಲ್ಲಿ ಸಭಾಪತಿಗಳು ಎಷ್ಟು ಕಸ್ಟೋಡಿಯನ್ನೋ ಅದೇ ರೀತಿ ಪಾರ್ಲಿಮೆಂಟ್ ನಲ್ಲಿ ನಮ್ಮ ಸ್ವೀಕರ್ ಅಷ್ಟೇ ಕಸ್ಟೋಡಿಯನ್. ಅವರ ತೀರ್ಮಾನ, ಅವರು ಏನ್ ಕೊಟ್ಟಿದ್ದಾರೋ ಸರಿಯಾಗಿ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿ, ಆದರೆ ಸಿ.ಟಿ.ರವಿ ಏನಾದ್ರು ಆ ರೀತಿಯಾಗಿ ಮಾತನಾಡಿದ್ದಾರೆ ಅನ್ನೋದು ನಿಮ್ಮ ಪತ್ರಿಕೆಗಳಲ್ಲಿ ನೋಡಿದಿನಿ ಎಂದರು. ಅದು ನನಗೆ ಅನ್ನಿಸ್ತದೆ ಆತ ಒಬ್ಬ ಬುದ್ದಿವಂತ ರಾಜಕಾರಣಿ. ಆ ಮಟ್ಟಕ್ಕೆ ಮಾತನಾಡ್ತಾನೆ ಅನ್ನೋದು ನನಗೆ ಗೊತ್ತಿಲ್ಲ ಎಂದರು. ಅದನ್ನ ತೀರ್ಮಾನ ಮಾಡಬೇಕಾದವರು ಸಭಾಪತಿ ಬಸವರಾಜ್ ಹೊರಹಟ್ಟಿ ಮಾಡ್ತಾರೆ. ಅದು ಆದ ಮೇಲೆ ಅವರನ್ನ ಕರೆದುಕೊಂಡು ಹೋಗಿ ಮಾನಸಿಕ ಹಿಂದೆ ಇದೆಯಲ್ಲ. ಅದು ಯಾವುದೇ ನಾಗರಿಕ ಸರ್ಕಾರಕ್ಕೆ ಗೌರವ ತರೋದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ…

Read More