Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ತುಮಕೂರು: ಈಗಾಗಲೇ ಬೆಂಗಳೂರು ಹಾಗೂ ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ವೇಳೆ ಆದಂತಹ ತೊಂದರೆಗಳನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಬಳಿ ಹೇಳಿದ್ದೆ. ಈ ಕುರಿತು ಸವಿಸ್ತಾರವಾಗಿ ಪತ್ರವನ್ನು ಸಹ ಬರೆದಿದ್ದೆ. ಎಷ್ಟು ಕಾಮಗಾರಿ ಆಗಿದೆ ಎಂಬ ಬಗ್ಗೆ ಎಲ್ಲವನ್ನು ಹೇಳಿದ್ದೆ. ನವೆಂಬರ್ 20ರಂದು ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಹೆದ್ದಾರಿಯ ಬಗ್ಗೆ ಸಂಪೂರ್ಣ ಎಂಟು ಹತ್ತು ಪೇಜ್ ವರದಿಯನ್ನು ನಮ್ಮ ಅಧಿಕಾರಿಗಳು ನೀಡಿದ್ದರು. ಮೂರು ವರ್ಷದಲ್ಲಿ 256 ಜನ ಸಾವನಪ್ಪಿದ್ದರು. ಎಲ್ಲಿ ಅಪಘಾತಗಳು ಆಗುತ್ತಿದ್ದವು ಅದೇ ಸ್ಥಳದಲ್ಲಿ ಪದೇ ಪದೇ ಆಗುತ್ತಿವೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಎರಡು ದಿನಗಳ ಹಿಂದೆ ನೆಲಮಂಗಲ ಕಾರಿನ ಮೇಲೆ ಟ್ರಕ್ ಉರುಳಿ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟ ಪ್ರಕರಣದ ಹಿನ್ನೆಲೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನವರಿ ಎರಡರಿಂದ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು. ಯುದ್ಧೋಪಾದಿಯಲ್ಲಿ ಕಾಮಗಾರಿಯನ್ನು ನಡೆಸಿ, ಮುಂದಿನ ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಒತ್ತಡ…
ಪಾವಗಡ: ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯೇ ಚರಂಡಿಯಾಗಿ ಮಾರ್ಪಟ್ಟು, ರಸ್ತೆ ತುಂಬಾ ಕೊಳಚೆ ನೀರು ಹರಿದಾಡುತ್ತಿರುವ ಘಟನೆ ಪಾವಗಡ ತಾಲ್ಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಚರಂಡಿ ವ್ಯವಸ್ಥೆ ಇಲ್ಲದ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದೆ ಇದರಿಂದ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ರಸ್ತೆಯಲ್ಲೇ ಚರಂಡಿಯ ಕೊಳಚೆ ನೀರು ಹರಿದಾಡುತ್ತಿರುವುದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ತಕ್ಷಣವೇ ಸರಿಯಾದ ಚರಂಡಿ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪುಣೆ: ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ವೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ವಘೋಲಿ ಪ್ರದೇಶದ ಫುಟ್ಪಾತ್ನಲ್ಲಿ ಮಧ್ಯರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಶ್ನಂದ್ ಫಾಟಾ ಪ್ರದೇಶದ ಬಳಿಯ ಫುಟ್ ಪಾತ್ ನಲ್ಲಿ ಹಲವರು ಮಲಗಿದ್ದರು, ಬಹುತೇಕ ಮಂದಿ ದಿನಗೂಲಿ ಕಾರ್ಮಿಕರಾಗಿದ್ದಾರೆಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬಹುಸಂಸ್ಕೃತಿಯ ನಮ್ಮ ದೇಶದ ಸಂವಿಧಾನ ಜನಜೀವನ ವಿಧಾನದ ರಕ್ಷಣೆ ಮತ್ತು ಅದರ ಬೆಳವಣಿಗೆ ಆಧಾರದಲ್ಲಿ ರೂಪಿತಗೊಂಡಿದೆ. ಕಾಲದ ಅಗತ್ಯಾನುಸಾರ ಕೆಲ ಪ್ರಗತಿ ಪರ ಮತ್ತು ಜೀವಪರ ಹೊಸತು ಅಂಶಗಳನ್ನು ತನ್ನೊಳಕ್ಕೆ ಸೇರಿಸಿಕೊಳ್ಳುವ ಶಕ್ತಿ ಕೂಡ ಅದಕ್ಕಿದೆ. ಹೀಗಾಗಿ ಹಲವು ಪ್ರಮುಖ ಸಂದರ್ಭದಲ್ಲಿ ಕಾಲದ ಅಗತ್ಯಾನುಸಾರ ತಿದ್ದುಪಡಿ ಕೂಡ ಸಾಧ್ಯವಾಗಿದೆ. ಎಲ್ಲದಕ್ಕೂ ಮುಖ್ಯವಾಗಿ ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಮತ್ತು ವಿಚಾರ ಸ್ವಾತಂತ್ರ್ಯ ಸಂವಿಧಾನದ ಮೂಲ ಧರ್ಮ. ಹೀಗಾಗಿ ಸಂವಿಧಾನ ನಮ್ಮ ದೇಶದ ರಾಜಧರ್ಮವೇ ಆಗಿದೆ. ಇದರ ಮೇಲೆ ದುರಾಕ್ರಮಣದ ನೀತಿಯನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನ ಬದಲಾವಣೆ ಮಾಡುವ ಮಾತುಗಳ ಹುನ್ನಾರದ ಹಿಂದಿರುವ ಮೂಲ ಪ್ರೇರಣಾ ಶಕ್ತಿ ನಿರಂಕುಶ ಪ್ರಭುತ್ವದ ಪ್ರತಿಷ್ಠಾನ ಮಾಡುವ ಸಂಕಲ್ಪ ತೊಟ್ಟ ಸಂಘ ಪರಿವಾರದ್ದು. ಅದರ ರಾಜಕೀಯ ಘಟಕ ಭಾಜಪ ಇದನ್ನು ಕಾರ್ಯರೂಪಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಸಂವಿಧಾನ ಕರಡು ಸಮಿತಿ ಅಧ್ಯಕ್ಷ, ಸಂವಿಧಾನ ಶಿಲ್ಪಿ ಎಂದೇ ಹೆಸರಾದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು…
ಸಾಕಷ್ಟು ಜನರು ರಾತ್ರಿ ತಡವಾಗಿ ನಿದ್ರಿಸುತ್ತಾರೆ. ರಾತ್ರಿ 1 ಹಾಗೂ 2 ಗಂಟೆಗಳ ನಂತರ ಮಲಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದು ಆರೋಗ್ಯದ ಮೇಲೆ ಯಾವ ರೀತಿಯಲ್ಲಿ ಪ್ರಭಾವ ಬೀರಬಹುದು ಎನ್ನುವುದನ್ನು ವೈದ್ಯರು ಹೇಳಿದ್ದಾರೆ. ರಾತ್ರಿ ತಡವಾಗಿ ಮಲಗುವ ಅಭ್ಯಾಸ ಒಳ್ಳೆಯದಲ್ಲ ಎಂದು ವೈದ್ಯರು ಹೇಳುತ್ತಾರೆ. ತಡವಾಗಿ ಮಲಗುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಪ್ರತಿ ದಿನವೂ ತಡವಾಗಿ ಮಲಗುವವರು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕು. ತಡವಾಗಿ ಮಲಗುವುದರಿಂದ ದೇಹದ ನೈಸರ್ಗಿಕ ಚಕ್ರ ಹಾಳಾಗುತ್ತದೆ. ಇದು ಹಲವು ರೀತಿಯ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ. ಜೀರ್ಣಕ್ರಿಯೆ ಸಮಸ್ಯೆ, ಟೆನ್ಷನ್, ಖಿನ್ನತೆ, ಒತ್ತಡ, ಮಾನಸಿಕ ಆರೋಗ್ಯ ಸಮಸ್ಯೆಗಳು ಬರುತ್ತವೆ. ಪ್ರತಿದಿನ ತಡವಾಗಿ ಮಲಗುವುದರಿಂದ ದೇಹವು ಹಲವು ಸಮಸ್ಯೆಗಳಿಗೆ ಒಳಗಾಗುತ್ತದೆ. ನಿಧಾನವಾಗಿ ದೇಹ ಹಾಳಾಗಲು ಪ್ರಾರಂಭವಾಗುತ್ತದೆ. ಇದರಿಂದ ದೇಹದ ಹಾರ್ಮೋನ್ ವ್ಯವಸ್ಥೆ ಹಾಳಾಗುತ್ತದೆ. ಜೀರ್ಣಕ್ರಿಯೆಯೂ ಕ್ಷೀಣಿಸುತ್ತದೆ. ಜ್ಞಾಪಕಶಕ್ತಿ, ಮಾನಸಿಕ ಚುರುಕುತನ ಕೂಡ ಕಡಿಮೆಯಾಗುತ್ತದೆ. ಮಾನಸಿಕ ಸಮಸ್ಯೆಗಳು ಬರಬಹುದು. ಜೊತೆಗೆ ಚಯಾಪಚಯ ಕಡಿಮೆಯಾಗುತ್ತದೆ, ಇದರಿಂದ ದೇಹದ ತೂಕ ಹೆಚ್ಚಾಗಲು ಪ್ರಾರಂಭವಾಗುತ್ತದೆ. ನಿದ್ರೆ…
ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ಹೋಗಿದ್ದರು. ಇದೀಗ ಅವರು ದೊಡ್ಮನೆಗೆ ಹೋಗಲು ಕಿಚ್ಚ ಸುದೀಪ್ ಅವರ ಬಳಿ ಮತ್ತೊಮ್ಮೆ ಅವಕಾಶ ಕೇಳಿದ್ದಾರೆ. ಮನೆ ಒಳಗೆ ಹೋಗಬೇಕಾಗುವಾಗ ನನ್ನ ಸಂಸ್ಥೆ ಯಾರು ನೋಡಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಇತ್ತು. ನನ್ನ ಪತ್ನಿ ಹಾಗೂ ತಂಡದವರನ್ನು ನಂಬಿ ನನ್ನ ಕಂಪನಿ ಕೊಟ್ಟು ಹೋದೆ. ಗೆಳೆಯರು ಇದನ್ನು ತುಂಬಾ ಮಿಸ್ಯೂಸ್ ಮಾಡಿಕೊಂಡರು. ಯಾವಾಗ ಕಷ್ಟ ಆಗುತ್ತದೆ ಎಂದಾಗ ನನ್ನನ್ನು ಕರೆಯಿರಿ ಎಂದು ಹೇಳಿದ್ದೆ. ಅವರಿಗೆ ಆಗದ್ದೇ ಇದ್ದಾಗ ನನ್ನನ್ನು ಕರೆದರು. ನಾನು ಬಂದು ನನ್ನ ಕಂಟ್ರೋಲ್ ಗೆ ತೆಗೆದುಕೊಂಡೆ ಎಂದು ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ಕಾರಣ ಏನು ಅನ್ನೋದನ್ನ ವಿವರಿಸಿದ್ದಾರೆ. ಮತ್ತೊಮ್ಮೆ ಬಿಗ್ ಬಾಸ್ ಮನೆಗೆ ಹೋಗಲು ಕಿಚ್ಚ ಸುದೀಪ್ ಅವರ ಬಳಿ ಗೋಲ್ಡ್ ಸುರೇಶ್ ಕೇಳಿದ್ದಾರೆ. ಆದರೆ ಕಿಚ್ಚ ಸುದೀಪ್ ನೋ ಎಂದು ಹೇಳಿದ್ದು, ಚೈತ್ರಾನ ಒಂದು ದಿನ ಹೊರ ಬಿಟ್ಟು ಅವರನ್ನ ಕಂಟ್ರೋಲ್ ಮಾಡಕ್ಕೆ…
ಹೈದರಾಬಾದ್ : ಅಲ್ಲು ಅರ್ಜುನ್ ಅವರ ಹೈದರಾಬಾದ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಘಟನೆಯ ಬಳಿಕ ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಮನೆ ಬಿಟ್ಟು ತೆರಳಿದ್ದಾರೆ ಎಂದು ಹೇಳಲಾಗಿದೆ. ಅಲ್ಲು ಅರ್ಜುನ್ ನಿವಾಸಕ್ಕೆ ಇಸ್ಮಾನಿಯಾ ಯೂನಿವರ್ಸಿಟಿ ಜಾಯಿಂಟ್ ಆ್ಯಕ್ಷನ್ ಕಮಿಟಿಯವರು ಈ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ದಾಳಿ ಬಳಿಕ ಅಲ್ಲು ಅರ್ಜುನ್ ಭಯಗೊಂಡಿದ್ದಾರೆ. ಅಲ್ಲು ಅರ್ಜುನ್ ಮಕ್ಕಳಾದ ಅಲ್ಲು ಅರ್ಹಾ, ಅಲ್ಲು ಅಯಾನ್ ಕಾರು ಹತ್ತಿ ವೇಗವಾಗಿ ಹೊರಟಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ಈ ವರ್ಷ ‘ಪುಷ್ಪ 2’ ಚಿತ್ರದ ಮೂಲಕ ದೊಡ್ಡ ಯಶಸ್ಸು ಸಿಕ್ಕಿತ್ತು. ಆದರೆ, ಚಿತ್ರ ಪ್ರದರ್ಶನ್ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅವರ ತಲೆಗೆ ಸುತ್ತಿದೆ. ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಆದರೂ ಅವರು ಜೈಲು ಸೇರುವ ಭೀತಿಯಲ್ಲಿದ್ದಾರೆ. ಹೀಗಾಗಿ ಅಲ್ಲು ಅರ್ಜುನ್ ಸಾಕಷ್ಟು ಎಚ್ಚರಿಕೆಯಿಂದ ಹೆಜ್ಜೆಯಿಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮೆಕ್ಸಿಕೊ: ಡಬ್ಲ್ಯೂ ಡಬ್ಲ್ಯೂಇ ಸೂಪರ್ ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ (66) ನಿಧನರಾಗಿದ್ದಾರೆ. ಡಿಸೆಂಬರ್ 20ರಂದು ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದ್ದರು. ವರ್ಲ್ಡ್ ವ್ರೆಸ್ಲಿಂಗ್ ಅಸೋಸಿಯೇಷನ್ ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ ಪ್ರಮುಖ ಸಂಸ್ಥೆಗಳೊಂದಿಗೆ ಚಾಂಪಿಯನ್ ಶಿಪ್ ಪ್ರಶಸ್ತಿಗಳನ್ನು ಗಳಿಸಿದರು. ಇದನ್ನು ಸಾಮಾನ್ಯವಾಗಿ ಮೆಕ್ಸಿಕೋದ ಡಬ್ಲ್ಯೂ ಡಬ್ಲ್ಯೂಇ ಸಮಾನವೆಂದು ಪರಿಗಣಿಸಲಾಗುತ್ತದೆ. ರೇ ಮಿಸ್ಟೀರಿಯೊ ಸೀನಿಯರ್ ಅವರು 1990 ರಲ್ಲಿ ವಿಶ್ವ ಚಾಂಪಿಯನ್ ಶಿಪ್ ವ್ರೆಸ್ಲಿಂಗ್ ನ ಸ್ಟಾರ್ ಕೇಡ್ನಂತಹ ಈವೆಂಟ್ ಗಳನ್ನು ಒಳಗೊಂಡಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬ್ರೆಜಿಲ್: 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಬ್ರೆಜಿಲ್ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ ನಡೆದಿದೆ. ಘಟನೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿಯೂ ಸಾವನ್ನಪ್ಪಿದ್ದಾರೆ. ವಿಮಾನ ಪತನಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಈ ಬೆಂಕಿಯಿಂದ ಅನೇಕರು ಗಾಯಗೊಂಡಿದ್ದಾರೆ. ನಿಯಂತ್ರಣ ಕಳೆದುಕೊಂಡ ವಿಮಾನ ಹಲವು ಕಟ್ಟಡಗಳಿಗೆ ತಾಗಿಕೊಂಡು ಬಂದು ಅಂಗಡಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಟ್ಟು 12 ಜನರು ಗಾಯಗೊಂಡಿದ್ದಾರೆ. ಬೆಂಕಿ ಹಾಗೂ ಹೊಗೆಯಿಂದಾಗಿ ಈ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರು ಉಸಿರಾಟದ ಸಮಸ್ಯೆ ಎದುರಿಸಬೇಕಾಯಿತು. ವಿಮಾನವು ಸ್ಥಳೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ಸಿವಿಲ್ ಡಿಫೆನ್ಸ್ ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: ಭಾರತೀಯ ಜೈನ್ ಮಿಲನ್ ನ ಮೈಸೂರು ಜೈನ್ ಮಿಲನ್ ಜಿನ ಭಜನೆಗೆ ಹೊಸ ರೂಪ ನೀಡಿದ್ದು, ಇದು ಶ್ರವಣಬೆಳಗೊಳದ ಕರ್ಮ ಯೋಗಿ ಚಾರು ಕೀರ್ತಿ ಭಟ್ಟಾರಕ ಶ್ರೀಗಳವರ ಕೊಡುಗೆ ಇದಾಗಿದೆ ಎಂದು ಭಾರತೀಯ ಜೈನ ಮಿಲನ್ ನ ರಾಶಿಯ ಉಪಾಧ್ಯಕ್ಷರು ಹಾಗೂ ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು. ಅವರಿಂದು ಭಾರತೀಯ ಜೈನ್ ಮಿಲನ್ ವಲಯ — 8 ರ ಮೈಸೂರು ವಿಭಾಗ ಮಟ್ಟದ ಜಿನ ಭಜನ ಸ್ಪರ್ಧೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ನಮ್ಮ ಜಿನಭಜನೆಗಳು,ಜೈನ ಸಂಸ್ಕಾರ ,ಸಂಸ್ಕೃತಿಯನ್ನು ಉಳಿಸುವಂತಹ ಕೆಲಸ ಮೈಸೂರು ಜೈನ ಮಿಲನ್ ಮಾಡುತ್ತಿದೆ, ಇದಕ್ಕೆ ಶ್ರವಣಬೆಳಗೊಳದ ಕರ್ಮ ಯೋಗಿ ಚಾರು ಕೀರ್ತಿ ಭಟ್ಟಾರಕ ಶ್ರೀ ಗಳವರ ಕೊಡುಗೆ ಅವಿಸ್ಮರಣೆಯ, ಕಳೆದು ಬಾರಿ ಎಲ್ಲಾ ಜೈನ ಮಠಗಳಲ್ಲಿ ಜಿನಭಜನೆಗಳು ನಡೆದಿದ್ದು, ಎಲ್ಲಾ ಭಟ್ಟಾರಕರು ಸಹಕಾರ ನೀಡಿದ್ದಾರೆ. ಇದರಿಂದ ಜನ ಖುಷಿ ಪಡುತ್ತಿದ್ದಾರೆ ಎಂದರು. ಬಹುಮಾನಕ್ಕಾಗಿ ಹಾಡುವುದು ಬೇಡ, ಸ್ಪರ್ಧೆಗಾಗಿ ಹಾಡಿ…